ಸಹಾಯ ಮಾಡುವುದಾಗಿ ಭರವಸೆ ನೀಡಿದ ಶಾರುಖ್ ಮೊಬೈಲ್ ಈಗ ಫೋನ್ ಸ್ವಿಚ್ ಆಫ್

Shah Rukh Khan: ಶಾರುಖ್ ಖಾನ್ ಗೆಳೆಯ ಆದೇಶ್ ಶ್ರೀವಾಸ್ತವ್ ಪತ್ನಿ, ತನ್ನ ಮಗನಿಗೆ ಸಹಾಯ ಮಾಡುವಂತೆ ಶಾರುಖ್ ಖಾನ್ ಅನ್ನು ಮನವಿ ಮಾಡಿಕೊಂಡಿದ್ದಾರೆ. ಸಹಾಯ ಮಾಡುವುದಾಗಿ ಹೇಳಿ ಶಾರುಖ್ ಖಾನ್ ಕೊಟ್ಟಿದ್ದ ಮೊಬೈಲ್ ನಂಬರ್ ಸ್ವಿಚ್ ಆಫ್ ಆಗಿದೆ ಎಂದಿದ್ದಾರೆ.

ಸಹಾಯ ಮಾಡುವುದಾಗಿ ಭರವಸೆ ನೀಡಿದ ಶಾರುಖ್ ಮೊಬೈಲ್ ಈಗ ಫೋನ್ ಸ್ವಿಚ್ ಆಫ್
ಶಾರುಖ್ ಖಾನ್
Follow us
| Updated By: ಮಂಜುನಾಥ ಸಿ.

Updated on: Sep 21, 2024 | 10:14 PM

ಗಾಯಕ ಆದೇಶ್ ಶ್ರೀವಾಸ್ತವ 2015ರಲ್ಲಿ ಕ್ಯಾನ್ಸರ್​ನಿಂದ ನಿಧನರಾದರು. ತಂದೆಯ ಮರಣದ ನಂತರ, ಅವರ ಮಗ ಅವಿತೇಶ್ ಇಂಡಸ್ಟ್ರಿಯಲ್ಲಿ ನೆಲೆ ಕಂಡುಕೊಳ್ಳಲು ಹೆಣಗಾಡುತ್ತಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಆದೇಶ್ ಪತ್ನಿ ಹಾಗೂ ನಟಿ ವಿಜಯತಾ ಪಂಡಿತ್ ತಮ್ಮ ಮಗನಿಗೆ ಸಹಾಯ ಮಾಡುವಂತೆ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರಿಗೆ ಮನವಿ ಮಾಡಿದ್ದಾರೆ. ಆದೇಶ್ ಜೀವನದ ಕೊನೆಯ ದಿನಗಳಲ್ಲಿ ಶಾರುಖ್ ಅವರಿಂದ ಒಂದು ಪ್ರಾಮಿಸ್ ಮಾಡಿದ್ದರು ಎಂದು ವಿಜಯತಾ ಸಂದರ್ಶನದಲ್ಲಿ ಬಹಿರಂಗಪಡಿಸಿದ್ದಾರೆ.

ಇತ್ತೀಚೆಗೆ ನೀಡಿದ ಈ ಸಂದರ್ಶನದಲ್ಲಿ ವಿಜಯತಾ ಈ ಬಗ್ಗೆ ಮಾತನಾಡಿದ್ದಾರೆ. ‘ಆದೇಶ ಆಸ್ಪತ್ರೆಯಲ್ಲಿದ್ದಾಗ, ಶಾರುಖ್ ಖಾನ್ ನಮ್ಮನ್ನು ಭೇಟಿ ಮಾಡಲು ಬರುತ್ತಿದ್ದರು. ಅವರು ಕೊನೆಯುಸಿರೆಳೆಯುವ ಒಂದು ದಿನದ ಮೊದಲು, ಆದೇಶ್, ಶಾರುಖ್ ಅವರ ಕೈಯನ್ನು ಹಿಡಿದು ತಮ್ಮ ಮಗ ಅವಿತೇಶ್ ಕಡೆಗೆ ತೋರಿಸಿದರು. ಆ ಸಮಯದಲ್ಲಿ ಅವರು ಮಾತನಾಡಲು ಸಾಧ್ಯವಾಗಲಿಲ್ಲ. ಆದರೆ ಮಗನನ್ನು ನೋಡಿಕೊಳ್ಳುವಂತೆ ಶಾರುಖ್​ಗೆ ಸೂಚಿಸಿದರು. ಆದೇಶ್ ಸಾವಿನ ನಂತರ ಶಾರುಖ್ ಕುಟುಂಬದೊಂದಿಗೆ ಯಾವುದೇ ಸಂಪರ್ಕವನ್ನು ಇಟ್ಟುಕೊಂಡಿಲ್ಲ’ ಎಂದು ವಿಜಯತಾ ಹೇಳಿದ್ದಾರೆ.

ಇದನ್ನೂ ಓದಿ:ಜಪಾನ್​ನಲ್ಲಿ ಸದ್ದು ಮಾಡೋಕೆ ರೆಡಿ ಆದ ಶಾರುಖ್ ಖಾನ್ ಸಿನಿಮಾ

‘ಶಾರುಖ್ ಖಾನ್ ನಮಗೆ ನೀಡಿದ ಮೊಬೈಲ್ ಸಂಖ್ಯೆ ಈಗ ಸ್ವಿಚ್ ಆಫ್ ಆಗಿದೆ. ಶಾರುಖ್ ಅವರು ಆದೇಶ್ ಶ್ರೀವಾಸ್ತವ್ ಅವರ ಉತ್ತಮ ಸ್ನೇಹಿತರು. ಶಾರುಖ್ ಇದು ಸರಿಯಾದ ಸಮಯ. ನಮಗೆ ನೀವು ಬೇಕು, ನನ್ನ ಮಗನಿಗೆ ಸಹಾಯ ಮಾಡಿ. ಇದಕ್ಕೆ ಸ್ವಲ್ಪ ಬೆಂಬಲ ಬೇಕು. ರೆಡ್ ಚಿಲ್ಲೀಸ್ ಬ್ಯಾನರ್‌ನಲ್ಲಿ ಅವಿತೇಶ್ ಜೊತೆ ಸಿನಿಮಾ ಮಾಡಿ. ಅವರು ತುಂಬಾ ಒಳ್ಳೆಯ ನಟ” ಎಂದು ವಿಜಯತಾ ಮನವಿ ಮಾಡಿದರು. ಆದೇಶ್ ಅವರ ಪುತ್ರ ಅವಿತೇಶ್ ಅವರು ತಮ್ಮ ಮೊದಲ ಚಿತ್ರ ‘ಸಿರ್ಫ್ ಏಕ್ ಫ್ರೈಡೇ’ ಚಿತ್ರೀಕರಣದಲ್ಲಿದ್ದಾರೆ. ಈ ಸಂದರ್ಶನದಲ್ಲಿ, ಶಾರುಖ್ ಅವರ ವೃತ್ತಿಜೀವನದ ಆರಂಭದಲ್ಲಿ ತನ್ನ ಒಡಹುಟ್ಟಿದವರು ಹೇಗೆ ಸಹಾಯ ಮಾಡಿದರು ಎಂಬುದನ್ನು ಅವರು ನೆನಪಿಸಿಕೊಂಡರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್