AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹಾಯ ಮಾಡುವುದಾಗಿ ಭರವಸೆ ನೀಡಿದ ಶಾರುಖ್ ಮೊಬೈಲ್ ಈಗ ಸ್ವಿಚ್ ಆಫ್

Shah Rukh Khan: ಶಾರುಖ್ ಖಾನ್ ಗೆಳೆಯ ಆದೇಶ್ ಶ್ರೀವಾಸ್ತವ್ ಪತ್ನಿ, ತನ್ನ ಮಗನಿಗೆ ಸಹಾಯ ಮಾಡುವಂತೆ ಶಾರುಖ್ ಖಾನ್ ಅನ್ನು ಮನವಿ ಮಾಡಿಕೊಂಡಿದ್ದಾರೆ. ಸಹಾಯ ಮಾಡುವುದಾಗಿ ಹೇಳಿ ಶಾರುಖ್ ಖಾನ್ ಕೊಟ್ಟಿದ್ದ ಮೊಬೈಲ್ ನಂಬರ್ ಸ್ವಿಚ್ ಆಫ್ ಆಗಿದೆ ಎಂದಿದ್ದಾರೆ.

ಸಹಾಯ ಮಾಡುವುದಾಗಿ ಭರವಸೆ ನೀಡಿದ ಶಾರುಖ್ ಮೊಬೈಲ್ ಈಗ ಸ್ವಿಚ್ ಆಫ್
ಶಾರುಖ್ ಖಾನ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Sep 21, 2024 | 10:35 PM

Share

ಗಾಯಕ ಆದೇಶ್ ಶ್ರೀವಾಸ್ತವ 2015ರಲ್ಲಿ ಕ್ಯಾನ್ಸರ್​ನಿಂದ ನಿಧನರಾದರು. ತಂದೆಯ ಮರಣದ ನಂತರ, ಅವರ ಮಗ ಅವಿತೇಶ್ ಇಂಡಸ್ಟ್ರಿಯಲ್ಲಿ ನೆಲೆ ಕಂಡುಕೊಳ್ಳಲು ಹೆಣಗಾಡುತ್ತಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಆದೇಶ್ ಪತ್ನಿ ಹಾಗೂ ನಟಿ ವಿಜಯತಾ ಪಂಡಿತ್ ತಮ್ಮ ಮಗನಿಗೆ ಸಹಾಯ ಮಾಡುವಂತೆ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರಿಗೆ ಮನವಿ ಮಾಡಿದ್ದಾರೆ. ಆದೇಶ್ ಜೀವನದ ಕೊನೆಯ ದಿನಗಳಲ್ಲಿ ಶಾರುಖ್ ಅವರಿಂದ ಒಂದು ಪ್ರಾಮಿಸ್ ಮಾಡಿದ್ದರು ಎಂದು ವಿಜಯತಾ ಸಂದರ್ಶನದಲ್ಲಿ ಬಹಿರಂಗಪಡಿಸಿದ್ದಾರೆ.

ಇತ್ತೀಚೆಗೆ ನೀಡಿದ ಈ ಸಂದರ್ಶನದಲ್ಲಿ ವಿಜಯತಾ ಈ ಬಗ್ಗೆ ಮಾತನಾಡಿದ್ದಾರೆ. ‘ಆದೇಶ ಆಸ್ಪತ್ರೆಯಲ್ಲಿದ್ದಾಗ, ಶಾರುಖ್ ಖಾನ್ ನಮ್ಮನ್ನು ಭೇಟಿ ಮಾಡಲು ಬರುತ್ತಿದ್ದರು. ಅವರು ಕೊನೆಯುಸಿರೆಳೆಯುವ ಒಂದು ದಿನದ ಮೊದಲು, ಆದೇಶ್, ಶಾರುಖ್ ಅವರ ಕೈಯನ್ನು ಹಿಡಿದು ತಮ್ಮ ಮಗ ಅವಿತೇಶ್ ಕಡೆಗೆ ತೋರಿಸಿದರು. ಆ ಸಮಯದಲ್ಲಿ ಅವರು ಮಾತನಾಡಲು ಸಾಧ್ಯವಾಗಲಿಲ್ಲ. ಆದರೆ ಮಗನನ್ನು ನೋಡಿಕೊಳ್ಳುವಂತೆ ಶಾರುಖ್​ಗೆ ಸೂಚಿಸಿದರು. ಆದೇಶ್ ಸಾವಿನ ನಂತರ ಶಾರುಖ್ ಕುಟುಂಬದೊಂದಿಗೆ ಯಾವುದೇ ಸಂಪರ್ಕವನ್ನು ಇಟ್ಟುಕೊಂಡಿಲ್ಲ’ ಎಂದು ವಿಜಯತಾ ಹೇಳಿದ್ದಾರೆ.

ಇದನ್ನೂ ಓದಿ:ಜಪಾನ್​ನಲ್ಲಿ ಸದ್ದು ಮಾಡೋಕೆ ರೆಡಿ ಆದ ಶಾರುಖ್ ಖಾನ್ ಸಿನಿಮಾ

‘ಶಾರುಖ್ ಖಾನ್ ನಮಗೆ ನೀಡಿದ ಮೊಬೈಲ್ ಸಂಖ್ಯೆ ಈಗ ಸ್ವಿಚ್ ಆಫ್ ಆಗಿದೆ. ಶಾರುಖ್ ಅವರು ಆದೇಶ್ ಶ್ರೀವಾಸ್ತವ್ ಅವರ ಉತ್ತಮ ಸ್ನೇಹಿತರು. ಶಾರುಖ್ ಇದು ಸರಿಯಾದ ಸಮಯ. ನಮಗೆ ನೀವು ಬೇಕು, ನನ್ನ ಮಗನಿಗೆ ಸಹಾಯ ಮಾಡಿ. ಇದಕ್ಕೆ ಸ್ವಲ್ಪ ಬೆಂಬಲ ಬೇಕು. ರೆಡ್ ಚಿಲ್ಲೀಸ್ ಬ್ಯಾನರ್‌ನಲ್ಲಿ ಅವಿತೇಶ್ ಜೊತೆ ಸಿನಿಮಾ ಮಾಡಿ. ಅವರು ತುಂಬಾ ಒಳ್ಳೆಯ ನಟ” ಎಂದು ವಿಜಯತಾ ಮನವಿ ಮಾಡಿದರು. ಆದೇಶ್ ಅವರ ಪುತ್ರ ಅವಿತೇಶ್ ಅವರು ತಮ್ಮ ಮೊದಲ ಚಿತ್ರ ‘ಸಿರ್ಫ್ ಏಕ್ ಫ್ರೈಡೇ’ ಚಿತ್ರೀಕರಣದಲ್ಲಿದ್ದಾರೆ. ಈ ಸಂದರ್ಶನದಲ್ಲಿ, ಶಾರುಖ್ ಅವರ ವೃತ್ತಿಜೀವನದ ಆರಂಭದಲ್ಲಿ ತನ್ನ ಒಡಹುಟ್ಟಿದವರು ಹೇಗೆ ಸಹಾಯ ಮಾಡಿದರು ಎಂಬುದನ್ನು ಅವರು ನೆನಪಿಸಿಕೊಂಡರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:14 pm, Sat, 21 September 24

Follow Us
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ