AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದಕ್ಷಿಣೆ ಆರೋಪ ಹೊರಿಸಿ ಮತ್ತೆ ಗಂಡನ ಜತೆ ಒಂದಾದ ನವಾಜುದ್ದೀನ್​ ಸಿದ್ದಿಖಿ ಪತ್ನಿ ಆಲಿಯಾ

‘3ನೇ ವ್ಯಕ್ತಿಗಳಿಂದಾಗಿ ನಮ್ಮ ಸಂಬಂಧದಲ್ಲಿ ಯಾವಾಗಲೂ ನಾವು ಸಮಸ್ಯೆ ಅನುಭವಿಸಿದ್ದೆವು. ಈಗ ನಮ್ಮ ಜೀವನದಲ್ಲಿ ತಪ್ಪು ತಿಳಿವಳಿಕೆ ಇಲ್ಲ. ಮಕ್ಕಳ ಸಲುವಾಗಿ ನಾವು ಸಂಪೂರ್ಣ ಶರಣಾಗಿದ್ದೇವೆ. ನಾವಿಬ್ಬರು ಈಗ ಬೇರಾಗುವ ಆಯ್ಕೆಯೇ ಇಲ್ಲ. ಯಾಕೆಂದರೆ ಮಕ್ಕಳು ದೊಡ್ಡವರಾಗಿದ್ದಾರೆ’ ಎಂದು ನವಾಜುದ್ದೀನ್​ ಸಿದ್ದಿಖಿ ಪತ್ನಿ ಆಲಿಯಾ ಸಿದ್ದಿಖಿ ಹೇಳಿದ್ದಾರೆ.

ವರದಕ್ಷಿಣೆ ಆರೋಪ ಹೊರಿಸಿ ಮತ್ತೆ ಗಂಡನ ಜತೆ ಒಂದಾದ ನವಾಜುದ್ದೀನ್​ ಸಿದ್ದಿಖಿ ಪತ್ನಿ ಆಲಿಯಾ
ನವಾಜುದ್ದೀನ್​ ಸಿದ್ದಿಖಿ ಕುಟುಂಬ
ಮದನ್​ ಕುಮಾರ್​
|

Updated on: Mar 28, 2024 | 6:07 PM

Share

ಬಾಲಿವುಡ್​ ನಟ ನವಾಜುದ್ದೀನ್​ ಸಿದ್ದಿಖಿ (Nawazuddin Siddiqui) ಅವರ ಸಂಸಾರದಲ್ಲಿ ಬಿರುಗಾಳಿ ಎದ್ದಿತ್ತು. ಅವರ ವಿರುದ್ಧ ಪತ್ನಿ ಆಲಿಯಾ ಸಿದ್ದಿಖಿ ಹತ್ತಾರು ಆರೋಪ ಹೊರಿಸಿದ್ದರು. ವರದಕ್ಷಿಣೆ ಕಿರುಕುಳ ನೀಡಲಾಗಿತ್ತು ಎಂದು ಕೂಡ ಆಲಿಯಾ ಹೇಳಿದ್ದರು. ಆದರೆ ಈಗ ಅವರು ಮತ್ತೆ ಗಂಡನ ಜೊತೆ ಒಂದಾಗಿದ್ದಾರೆ. ತಮ್ಮ ನಡುವೆ ಇದ್ದ ಎಲ್ಲ ಕಿರಿಕ್​ ಮರೆತು ಒಟ್ಟಾಗಿ ವೆಡ್ಡಿಂಗ್​ ಆ್ಯನಿವರ್ಸರಿ ಆಚರಿಸಿದ್ದಾರೆ. ಅವರ ಈ ನಡೆ ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಅಷ್ಟಕ್ಕೂ ಆಲಿಯಾ ಸಿದ್ದಿಖಿ (Aaliya Siddiqui) ಈ ರೀತಿ ಮನಸ್ಸು ಬದಲಾಯಿಸಲು ಕಾರಣ ಏನು? ಮಕ್ಕಳು! ಹೌದು, ಮಕ್ಕಳ ಸಲುವಾಗಿ ಅವರು ಮತ್ತೆ ನವಾಜುದ್ದೀನ್​ ಸಿದ್ದಿಖಿ ಜೊತೆ ಸಂಸಾರ ಮಾಡಲು ಒಪ್ಪಿಕೊಂಡಿದ್ದಾರೆ.

ಕೆಲವೇ ದಿನಗಳ ಹಿಂದೆ ಆಲಿಯಾ ಸಿದ್ದಿಖಿ ಮತ್ತು ನವಾಜುದ್ದೀನ್​ ಸಿದ್ದಿಖಿ ಅವರು ಜೊತೆಯಾಗಿ ಕಾಣಿಸಿಕೊಂಡ ಫೋಟೋ ವೈರಲ್​ ಆಗಿತ್ತು. ಇಷ್ಟು ದಿನ ಪರಸ್ಪರ ಕಿತ್ತಾಡಿಕೊಂಡು, ತಮ್ಮ ಸಂಸಾರದ ಜಗಳವನ್ನು ಬೀದಿಗೆ ತಂದಿದ್ದ ಅವರು ಈಗ ಮತ್ತೆ ಒಂದಾಗಿದ್ದಾರೆ ಎಂಬುದಕ್ಕೆ ಆ ಫೋಟೋ ಸಾಕ್ಷಿ ಆಗಿತ್ತು. ಆ ಕುರಿತು ಮಾಧ್ಯಮವೊಂದಕ್ಕೆ ಆಲಿಯಾ ಸಿದ್ದಿಖಿ ಅವರು ಈಗ ಪ್ರತಿಕ್ರಿಯೆ ನೀಡಿದ್ದಾರೆ.

‘ಮೂರನೇ ವ್ಯಕ್ತಿಯಿಂದಾಗಿ ನಾವು ಯಾವಾಗಲೂ ಸಮಸ್ಯೆ ಅನುಭವಿಸಿದೆವು ಅನಿಸುತ್ತದೆ. ಈಗ ನಮ್ಮ ಬದುಕಿನಲ್ಲಿ ತಪ್ಪು ತಿಳಿವಳಿಕೆ ಇಲ್ಲ. ನಮ್ಮ ಮಕ್ಕಳ ಸಲುವಾಗಿ ನಾವು ಸಂಪೂರ್ಣ ಶರಣಾಗಿದ್ದೇವೆ. ಬದುಕಿನಲ್ಲಿ ಈಗ ಬೇರಾಗುವ ಮಾತೇ ಇಲ್ಲ. ಯಾಕೆಂದರೆ ಮಕ್ಕಳು ಈಗ ದೊಡ್ಡವರಾಗಿದ್ದಾರೆ. ಮಗಳು ಶೋರಾಗೆ ನವಾಜ್​ ತುಂಬಾ ಹತ್ತಿರವಾಗಿದ್ದಾರೆ. ನಮ್ಮ ನಡುವೆ ಜಗಳ ಆದಾಗ ಆಕೆ ತುಂಬ ಡಿಸ್ಟರ್ಬ್​ ಆಗಿದ್ದಳು. ಅದನ್ನೆಲ್ಲ ಅವಳಿಕೆ ಸಹಿಸಿಕೊಳ್ಳಲು ಆಗಲಿಲ್ಲ. ಹಾಗಾಗಿ ಇನ್ಮೇಲೆ ಜಗಳ ಮಾಡೋದ ಬೇಡ. ಒಟ್ಟಾಗಿ, ಶಾಂತಿಯಿಂದ ಜೀವನ ಮಾಡೋಣ ಅಂತ ನಿರ್ಧರಿಸಿದೆವು’ ಎಂದು ಆಲಿಯಾ ಸಿದ್ದಿಖಿ ಹೇಳಿದ್ದಾರೆ.

ಇದನ್ನೂ ಓದಿ: ಮಗಳ ವಯಸ್ಸಿನ ಹುಡುಗಿ ಜೊತೆ ನವಾಜುದ್ದೀನ್ ಸಿದ್ಧಿಕಿ ಲಿಪ್ ಲಾಕ್​; ವೈರಲ್ ವಿಡಿಯೋ ಬಗ್ಗೆ ಟೀಕೆ

ಬಾಲಿವುಡ್​ನಲ್ಲಿ ನಟ ನವಾಜುದ್ದೀನ್​ ಸಿದ್ದಿಖಿ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಪತ್ನಿ ಮಾಡಿದ ಆರೋಪಗಳಿಂದ ಅವರ ಹೆಸರಿಗೆ ಕಳಂಕ ಬಂದಿತ್ತು. ‘ನಮ್ಮನ್ನು ಮನೆಯಿಂದ ಹೊರಗೆ ಹಾಕಿದ್ದಾರೆ’ ಎಂದು ಕೂಡ ಆಲಿಯಾ ಆರೋಪಿಸಿದ್ದರು. ವಿಚ್ಛೇದನ ಪಡೆಯುವ ಮಟ್ಟಕ್ಕೆ ಅವರ ಜಗಳ ತಲುಪಿತ್ತು. ಆದರೆ ಈಗ ಅವರಿಬ್ಬರು ಒಂದಾಗಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ. ಆಲಿಯಾ ಮತ್ತು ನವಾಜುದ್ದೀನ್​ ಮದುವೆ ಆಗಿ 14 ವರ್ಷಗಳು ಕಳೆದಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ