AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮಿರ್ ಖಾನ್-ಅಕ್ಷಯ್ ಕುಮಾರ್ ಒಟ್ಟಾಗಿ ತೆರೆ ಹಂಚಿಕೊಳ್ಳದಿರಲು ಈ ಘಟನೆಯೇ ಕಾರಣ..

ಅಕ್ಷಯ್ ಕುಮಾರ್ ಹಾಗೂ ಆಮಿರ್ ಖಾನ್ ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಆದರೆ, ಇವರು ಒಟ್ಟಾಗಿ ನಟಿಸೋಕೆ ಸಾಧ್ಯವಾಗಿಲ್ಲ. ಆಫರ್ ಬಂದರೂ ಅಕ್ಷಯ್ ಕುಮಾರ್ ಇದನ್ನು ಒಪ್ಪಿಕೊಳ್ಳುವುದಿಲ್ಲ. ಇದಕ್ಕೆ ಕಾರಣವಾಗಿರೋದು ಹಳೆಯ ಘಟನೆ ಎನ್ನಲಾಗುತ್ತಿದೆ. ಆ ಬಗ್ಗೆ ಇಲ್ಲಿದೆ ಸಂಪೂರ್ಣ ವಿವರ.

ಆಮಿರ್ ಖಾನ್-ಅಕ್ಷಯ್ ಕುಮಾರ್ ಒಟ್ಟಾಗಿ ತೆರೆ ಹಂಚಿಕೊಳ್ಳದಿರಲು ಈ ಘಟನೆಯೇ ಕಾರಣ..
ಆಮಿರ್​-ಅಕ್ಷಯ್
ರಾಜೇಶ್ ದುಗ್ಗುಮನೆ
|

Updated on: Sep 05, 2023 | 1:03 PM

Share

ಅಕ್ಷಯ್ ಕುಮಾರ್ ಹಾಗೂ ಆಮಿರ್ ಖಾನ್ (Aamir Khan) ಬಾಲಿವುಡ್​ನ ಸ್ಟಾರ್ ಹೀರೋಗಳು. ಇಬ್ಬರೂ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ನಟನೆ ಮೂಲಕ ಜನಮನ ಗೆದ್ದಿದ್ದಾರೆ. ಸಿನಿಮಾ ಆಯ್ಕೆ ವಿಚಾರದಲ್ಲಿ ಇಬ್ಬರ ಮಧ್ಯೆ ಸಾಕಷ್ಟು ವ್ಯತ್ಯಾಸ ಇದೆ. ಅಕ್ಷಯ್ ಕುಮಾರ್ (Akshay Kumar) ಅವರು ಸಾಲು ಸಾಲು ಸಿನಿಮಾ ಒಪ್ಪಿಕೊಂಡರೆ ಆಮಿರ್ ಖಾನ್ ಅಲ್ಲೊಂದು ಇಲ್ಲೊಂದು ಸಿನಿಮಾ ಒಪ್ಪಿಕೊಂಡು ನಟಿಸುತ್ತಾರೆ. ಒಂದು ಸಿನಿಮಾ ಮುಗಿದ ಬಳಿಕವೇ ಅವರು ಮತ್ತೊಂದು ಚಿತ್ರವನ್ನು ಕೈಗೆತ್ತಿಕೊಳ್ಳುತ್ತಾರೆ. ಇವರು ಎಂದಿಗೂ ಒಟ್ಟಾಗಿ ತೆರೆ ಹಂಚಿಕೊಂಡಿಲ್ಲ.

ಅಕ್ಷಯ್ ಕುಮಾರ್ ಹಾಗೂ ಆಮಿರ್ ಖಾನ್ ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಆದರೆ, ಇವರು ಒಟ್ಟಾಗಿ ನಟಿಸೋಕೆ ಸಾಧ್ಯವಾಗಿಲ್ಲ. ಆಫರ್ ಬಂದರೂ ಅಕ್ಷಯ್ ಕುಮಾರ್ ಇದನ್ನು ಒಪ್ಪಿಕೊಳ್ಳುವುದಿಲ್ಲ. ಇದಕ್ಕೆ ಕಾರಣವಾಗಿರೋದು ಹಳೆಯ ಘಟನೆ ಎನ್ನಲಾಗುತ್ತಿದೆ. ಆ ಬಗ್ಗೆ ಇಲ್ಲಿದೆ ಸಂಪೂರ್ಣ ವಿವರ.

ಅದು 90ರ ದಶಕದ ಘಟನೆ. ಆಮಿರ್ ಖಾನ್ ಅವರು ‘ಜೋ ಜೀತಾ ವಹೀ ಸಿಖಂದರ್’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದರು. ಈ ಚಿತ್ರವನ್ನು ಮನ್ಸೂರ್ ಖಾನ್ ನಿರ್ದೇಶನ ಮಾಡಿದ್ದರು. ಈ ಚಿತ್ರಕ್ಕೆ ಎರಡನೇ ಹೀರೋ ಅವಶ್ಯಕತೆ ಇತ್ತು. ಈ ಪಾತ್ರಕ್ಕಾಗಿ ಆಡಿಷನ್ ಕರೆಯಲಾಯಿತು. ಅಕ್ಷಯ್ ಕುಮಾರ್ ಕೂಡ ಈ ಪಾತ್ರಕ್ಕೆ ಆಡಿಷನ್ ನೀಡಿದರು. ಆದರೆ, ಕೊನೆಯಲ್ಲಿ ಆಯ್ಕೆ ಆಗಿದ್ದು ದೀಪಕ್ ತಿಜೋರಿ ಅವರು. ಇದು ಅಕ್ಷಯ್ ಕುಮಾರ್ ಅವರಿಗೆ ಬೇಸರ ತಂದಿತು.

ಅಕ್ಷಯ್ ಕುಮಾರ್​ಗೆ ಈ ಘಟನೆಯಿಂದ ಸಿಟ್ಟು ಬಂತು. ಆಮಿರ್ ಖಾನ್ ಹಾಗೂ ದೀಪಕ್ ಒಳ್ಳೆಯ ಗೆಳೆಯರಾಗಿದ್ದರು. ಈ ಕಾರಣದಿಂದಲೇ ಅಕ್ಷಯ್ ಕುಮಾರ್ ಅವರನ್ನು ಸೈಡ್​ಲೈನ್ ಮಾಡಲಾಯಿತು ಎನ್ನಲಾಗಿದೆ. ಈ ಘಟನೆ ಬಳಿಕ ಅವರು ಆಮಿರ್ ಖಾನ್ ಅವರ ಜೊತೆ ನಟಿಸದಿರಲು ನಿರ್ಧರಿಸಿದರು. ಅದನ್ನು ಈಗಲೂ ಅವರು ಪಾಲಿಸಿಕೊಂಡು ಬರುತ್ತಿದ್ದಾರೆ. ಅಕ್ಷಯ್ ಕುಮಾರ್ ಈಗ ಸ್ಟಾರ್ ಹೀರೋ ಆಗಿರಬಹುದು. ಆದರೆ, ಆ ಸಂದರ್ಭದಲ್ಲಿ ಅವರು ಕೆಲವೇ ಕೆಲವು ಸಿನಿಮಾಗಳಲ್ಲಿ ನಟಿಸಿದ್ದರು. ಜೊತೆಗೆ ದೊಡ್ಡ ಯಶಸ್ಸಿನ ನಿರೀಕ್ಷೆಯಲ್ಲಿದ್ದರು. ಹೀಗಾಗಿ. ‘ಜೋ ಜೀತಾ ವಹೀ ಸಿಖಂದರ್’ ಸಿನಿಮಾ ಅವರಿಗೆ ತುಂಬಾನೇ ಮುಖ್ಯವಾಗಿತ್ತು.

ಇದನ್ನೂ ಓದಿ: ‘ರಸ್ತೆ ಯಾರಪ್ಪನದ್ದಲ್ಲ’; ಮತ್ತೆ ಮುನ್ನೆಲೆಗೆ ಬಂತು ಅಕ್ಷಯ್ ಕುಮಾರ್ ಹಳೆಯ ಜಾಹೀರಾತು

ಇನ್ನು ಪ್ರಶಸ್ತಿ ಸಮಾರಂಭದಲ್ಲಿ ಅಕ್ಷಯ್-ಆಮಿರ್ ಎದುರಾಗಲೇ ಇಲ್ಲ. ಇದಕ್ಕೆ ಕಾರಣವೂ ಇದೆ. ಆಮಿರ್ ಖಾನ್ ಅವರು ಎಂದಿಗೂ ಪ್ರಶಸ್ತಿ ಸಮಾರಂಭಕ್ಕೆ ಬರುವುದಿಲ್ಲ. ಹೀಗಾಗಿ, ಇವರು ಮುಖಾಮುಖಿ ಆಗುವ ಸಂದರ್ಭ ಎದುರಾಗಲೇ ಇಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು