AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಒಂದಾದ ಆಮಿರ್​ ಖಾನ್-ಕಿರಣ್​ ರಾವ್​; ಅಚ್ಚರಿ ತಂದ ಮಾಜಿ ದಂಪತಿಯ ನಿರ್ಧಾರ

ದಶಕಗಳ ಹಿಂದೆ ‘ಧೋಬಿ ಘಾಟ್​’ ಹೆಸರಿನ ಸಿನಿಮಾ ನಿರ್ದೇಶನ ಮಾಡಿದ್ದರು ಕಿರಣ್​ ರಾವ್​. ಈ ಚಿತ್ರದ ಬಳಿಕ ಮತ್ತೆ ನಿರ್ದೇಶನ ಮಾಡುವ ಕೆಲಸಕ್ಕೆ ಅವರು ಮುಂದಾಗಿಲ್ಲ. ಬದಲಿಗೆ ನಿರ್ಮಾಣದಲ್ಲಿ ಬ್ಯುಸಿ ಆದರು. ಈಗ ಅವರು ಮತ್ತೆ ನಿರ್ದೇಶನಕ್ಕೆ ಮರಳಿದ್ದಾರೆ.

ಮತ್ತೆ ಒಂದಾದ ಆಮಿರ್​ ಖಾನ್-ಕಿರಣ್​ ರಾವ್​; ಅಚ್ಚರಿ ತಂದ ಮಾಜಿ ದಂಪತಿಯ ನಿರ್ಧಾರ
ಆಮಿರ್​-ಕಿರಣ್​
TV9 Web
| Edited By: |

Updated on: Jan 15, 2022 | 3:27 PM

Share

ಸೆಲೆಬ್ರಿಟಿ ವಲಯದಲ್ಲಿ ವಿಚ್ಛೇದನ (Divorce) ಎಂಬುದನ್ನು ಒಂದು ಸಾಮಾನ್ಯ ಸಂಗತಿಯಾಗಿ ನೋಡುತ್ತಾರೆ. ಡಿವೋರ್ಸ್​ ಪಡೆದ ನಂತರ ಗೆಳೆಯರಾಗಿ ನಾವು ಮುಂದುವರಿಯುತ್ತಿದ್ದೇವೆ ಎಂದು ಹೇಳಿಕೊಳ್ಳುವ ಸೆಲೆಬ್ರಿಟಿಗಳೇ ಜಾಸ್ತಿ. ಅಚ್ಚರಿಯ ವಿಚಾರ ಎಂದರೆ, ಗಂಡ-ಹೆಂಡತಿಯಾಗಿ ಜೀವನ ನಡೆಸುತ್ತಿದ್ದ ಸೆಲೆಬ್ರಿಟಿಗಳು ವಿಚ್ಛೇದನದ ನಂತರ ಗೆಳೆಯರಾಗಿಯೇ ಮುಂದುವರಿಯುತ್ತಾರೆ. ಇದಕ್ಕೆ ಹೊಸ ಉದಾಹರಣೆ ಬಾಲಿವುಡ್​ ನಟ ಆಮಿರ್​ ಖಾನ್​ (Aamir Kjan) ಹಾಗೂ ಅವರ ಮಾಜಿ ಪತ್ನಿ ಕಿರಣ್​ ರಾವ್ (Kiran Rao)​. ಕಳೆದ ವರ್ಷ ಈ ದಂಪತಿ ವಿಚ್ಛೇದನ ಘೋಷಣೆ ಮಾಡಿದ್ದರು. ಮೂರನೇ ಮದುವೆ ಆಗುವ ಉದ್ದೇಶದಿಂದ ಆಮಿರ್​ ಅವರು ಈ ವಿಚ್ಛೇದನ ಪಡೆದಿದ್ದಾರೆ ಎನ್ನುವ ಸುದ್ದಿ ಜೋರಾಗಿತ್ತು. ಇದಕ್ಕೆ ಆಮಿರ್​ ತಲೆಕೆಡಿಸಿಕೊಂಡಿಲ್ಲ. ಈಗ ಸಿನಿಮಾ ಒಂದಕ್ಕಾಗಿ ಈ ದಂಪತಿ ಮತ್ತೆ ಒಂದಾಗಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಅಕ್ಷರಶಃ ಅಚ್ಚರಿ ಹೊರಹಾಕಿದ್ದಾರೆ.

ದಶಕಗಳ ಹಿಂದೆ ‘ಧೋಬಿ ಘಾಟ್​’ ಹೆಸರಿನ ಸಿನಿಮಾ ನಿರ್ದೇಶನ ಮಾಡಿದ್ದರು ಕಿರಣ್​ ರಾವ್​. ಈ ಚಿತ್ರದ ಬಳಿಕ ಮತ್ತೆ ನಿರ್ದೇಶನ ಮಾಡುವ ಕೆಲಸಕ್ಕೆ ಅವರು ಮುಂದಾಗಿಲ್ಲ. ಬದಲಿಗೆ ನಿರ್ಮಾಣದಲ್ಲಿ ಬ್ಯುಸಿ ಆದರು. ಈಗ ಅವರು ಮತ್ತೆ ನಿರ್ದೇಶನಕ್ಕೆ ಮರಳಿದ್ದಾರೆ. ಬಾಲಿವುಡ್​ ಹಂಗಾಮ ವರದಿ ಮಾಡಿದ ಪ್ರಕಾರ ಕಳೆದ ವಾರ ಈ ಸಿನಿಮಾದ ಶೂಟಿಂಗ್ ಪುಣೆಯಲ್ಲಿ ಆರಂಭಗೊಂಡಿದೆ.

ಹಾಗಾದರೆ, ಈ ಚಿತ್ರಕ್ಕೆ ಆಮಿರ್​ ಖಾನ್​ ಹೀರೋನಾ? ಅಲ್ಲ, ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕಾಮಿಡಿ ಕಥಾ ಹಂದರ ಹೊಂದಿರುವ ಈ ಚಿತ್ರದ ಸಂಪೂರ್ಣ ನಿರ್ಮಾಣ ಜವಾಬ್ದಾರಿಯನ್ನು ಆಮಿರ್​ ಖಾನ್​ ಹೊತ್ತುಕೊಂಡಿದ್ದಾರಂತೆ. ಈ ವಿಚಾರ ಕೇಳಿ ಅಭಿಮಾನಿಗಳಿಗೆ ಅಚ್ಚರಿ ಆಗಿದೆ.

ಜನವರಿ 20ರವರೆಗೆ ಪುಣೆಯ ಸಮೀಪ ಶೂಟಿಂಗ್​ ನಡೆಯಲಿದೆ. ಆ ಬಳಿಕ ಮಹಾರಾಷ್ಟ್ರದ ನಾನಾ ಕಡೆಗಳಲ್ಲಿ ಚಿತ್ರೀಕರಣ​ ನಡೆಸಲು ಚಿತ್ರತಂಡ ನಿರ್ಧರಿಸಿದೆ. ಏಪ್ರಿಲ್​ ವೇಳೆಗೆ ಚಿತ್ರದ ಶೂಟಿಂಗ್​ ಪೂರ್ಣಗೊಳಿಸುವ ನಿರ್ಧಾರವನ್ನು ಸಿನಿಮಾ ತಂಡ ಹೊಂದಿದೆ.

ಆಮಿರ್ ಖಾನ್​ ನಟನೆಯ ‘ಲಾಲ್​ ಸಿಂಗ್ ಛಡ್ಡಾ’ ಚಿತ್ರವನ್ನು ಆಮಿರ್​ ಖಾನ್​ ಹಾಗೂ ಕಿರಣ್​ ರಾವ್​ ಒಟ್ಟಾಗಿ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರ ಏಪ್ರಿಲ್​ 14ರಂದು ‘ಕೆಜಿಎಫ್​ ಚಾಪ್ಟರ್​ 2’ ಎದುರು ತೆರೆಗೆ ಬರುತ್ತಿದೆ. ಕೊವಿಡ್​ ಪರಿಸ್ಥಿತಿ ನಿಯಂತ್ರಣಕ್ಕೆ ಬರದಿದ್ದರೆ ಮತ್ತೆ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಡುತ್ತದೆ.

ಇದನ್ನೂ ಓದಿ: ಮಗಳ ಪಾತ್ರ ಮಾಡಿದ್ದ ನಟಿ ಜತೆ ಆಮಿರ್​ ಖಾನ್​ ಶಾದಿ? ವೈರಲ್​ ಫೋಟೋದ ಅಸಲಿಯತ್ತು ಇಲ್ಲಿದೆ

Aamir Khan: ಆಮಿರ್​​ ಖಾನ್​-ಕಿರಣ್​ ರಾವ್​ ವಿಚ್ಛೇದನ; 15 ವರ್ಷದ ದಾಂಪತ್ಯ ಜೀವನ ಅಂತ್ಯ

ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು