AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಒಂದಾದ ಆಮಿರ್​ ಖಾನ್-ಕಿರಣ್​ ರಾವ್​; ಅಚ್ಚರಿ ತಂದ ಮಾಜಿ ದಂಪತಿಯ ನಿರ್ಧಾರ

ದಶಕಗಳ ಹಿಂದೆ ‘ಧೋಬಿ ಘಾಟ್​’ ಹೆಸರಿನ ಸಿನಿಮಾ ನಿರ್ದೇಶನ ಮಾಡಿದ್ದರು ಕಿರಣ್​ ರಾವ್​. ಈ ಚಿತ್ರದ ಬಳಿಕ ಮತ್ತೆ ನಿರ್ದೇಶನ ಮಾಡುವ ಕೆಲಸಕ್ಕೆ ಅವರು ಮುಂದಾಗಿಲ್ಲ. ಬದಲಿಗೆ ನಿರ್ಮಾಣದಲ್ಲಿ ಬ್ಯುಸಿ ಆದರು. ಈಗ ಅವರು ಮತ್ತೆ ನಿರ್ದೇಶನಕ್ಕೆ ಮರಳಿದ್ದಾರೆ.

ಮತ್ತೆ ಒಂದಾದ ಆಮಿರ್​ ಖಾನ್-ಕಿರಣ್​ ರಾವ್​; ಅಚ್ಚರಿ ತಂದ ಮಾಜಿ ದಂಪತಿಯ ನಿರ್ಧಾರ
ಆಮಿರ್​-ಕಿರಣ್​
TV9 Web
| Edited By: |

Updated on: Jan 15, 2022 | 3:27 PM

Share

ಸೆಲೆಬ್ರಿಟಿ ವಲಯದಲ್ಲಿ ವಿಚ್ಛೇದನ (Divorce) ಎಂಬುದನ್ನು ಒಂದು ಸಾಮಾನ್ಯ ಸಂಗತಿಯಾಗಿ ನೋಡುತ್ತಾರೆ. ಡಿವೋರ್ಸ್​ ಪಡೆದ ನಂತರ ಗೆಳೆಯರಾಗಿ ನಾವು ಮುಂದುವರಿಯುತ್ತಿದ್ದೇವೆ ಎಂದು ಹೇಳಿಕೊಳ್ಳುವ ಸೆಲೆಬ್ರಿಟಿಗಳೇ ಜಾಸ್ತಿ. ಅಚ್ಚರಿಯ ವಿಚಾರ ಎಂದರೆ, ಗಂಡ-ಹೆಂಡತಿಯಾಗಿ ಜೀವನ ನಡೆಸುತ್ತಿದ್ದ ಸೆಲೆಬ್ರಿಟಿಗಳು ವಿಚ್ಛೇದನದ ನಂತರ ಗೆಳೆಯರಾಗಿಯೇ ಮುಂದುವರಿಯುತ್ತಾರೆ. ಇದಕ್ಕೆ ಹೊಸ ಉದಾಹರಣೆ ಬಾಲಿವುಡ್​ ನಟ ಆಮಿರ್​ ಖಾನ್​ (Aamir Kjan) ಹಾಗೂ ಅವರ ಮಾಜಿ ಪತ್ನಿ ಕಿರಣ್​ ರಾವ್ (Kiran Rao)​. ಕಳೆದ ವರ್ಷ ಈ ದಂಪತಿ ವಿಚ್ಛೇದನ ಘೋಷಣೆ ಮಾಡಿದ್ದರು. ಮೂರನೇ ಮದುವೆ ಆಗುವ ಉದ್ದೇಶದಿಂದ ಆಮಿರ್​ ಅವರು ಈ ವಿಚ್ಛೇದನ ಪಡೆದಿದ್ದಾರೆ ಎನ್ನುವ ಸುದ್ದಿ ಜೋರಾಗಿತ್ತು. ಇದಕ್ಕೆ ಆಮಿರ್​ ತಲೆಕೆಡಿಸಿಕೊಂಡಿಲ್ಲ. ಈಗ ಸಿನಿಮಾ ಒಂದಕ್ಕಾಗಿ ಈ ದಂಪತಿ ಮತ್ತೆ ಒಂದಾಗಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಅಕ್ಷರಶಃ ಅಚ್ಚರಿ ಹೊರಹಾಕಿದ್ದಾರೆ.

ದಶಕಗಳ ಹಿಂದೆ ‘ಧೋಬಿ ಘಾಟ್​’ ಹೆಸರಿನ ಸಿನಿಮಾ ನಿರ್ದೇಶನ ಮಾಡಿದ್ದರು ಕಿರಣ್​ ರಾವ್​. ಈ ಚಿತ್ರದ ಬಳಿಕ ಮತ್ತೆ ನಿರ್ದೇಶನ ಮಾಡುವ ಕೆಲಸಕ್ಕೆ ಅವರು ಮುಂದಾಗಿಲ್ಲ. ಬದಲಿಗೆ ನಿರ್ಮಾಣದಲ್ಲಿ ಬ್ಯುಸಿ ಆದರು. ಈಗ ಅವರು ಮತ್ತೆ ನಿರ್ದೇಶನಕ್ಕೆ ಮರಳಿದ್ದಾರೆ. ಬಾಲಿವುಡ್​ ಹಂಗಾಮ ವರದಿ ಮಾಡಿದ ಪ್ರಕಾರ ಕಳೆದ ವಾರ ಈ ಸಿನಿಮಾದ ಶೂಟಿಂಗ್ ಪುಣೆಯಲ್ಲಿ ಆರಂಭಗೊಂಡಿದೆ.

ಹಾಗಾದರೆ, ಈ ಚಿತ್ರಕ್ಕೆ ಆಮಿರ್​ ಖಾನ್​ ಹೀರೋನಾ? ಅಲ್ಲ, ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕಾಮಿಡಿ ಕಥಾ ಹಂದರ ಹೊಂದಿರುವ ಈ ಚಿತ್ರದ ಸಂಪೂರ್ಣ ನಿರ್ಮಾಣ ಜವಾಬ್ದಾರಿಯನ್ನು ಆಮಿರ್​ ಖಾನ್​ ಹೊತ್ತುಕೊಂಡಿದ್ದಾರಂತೆ. ಈ ವಿಚಾರ ಕೇಳಿ ಅಭಿಮಾನಿಗಳಿಗೆ ಅಚ್ಚರಿ ಆಗಿದೆ.

ಜನವರಿ 20ರವರೆಗೆ ಪುಣೆಯ ಸಮೀಪ ಶೂಟಿಂಗ್​ ನಡೆಯಲಿದೆ. ಆ ಬಳಿಕ ಮಹಾರಾಷ್ಟ್ರದ ನಾನಾ ಕಡೆಗಳಲ್ಲಿ ಚಿತ್ರೀಕರಣ​ ನಡೆಸಲು ಚಿತ್ರತಂಡ ನಿರ್ಧರಿಸಿದೆ. ಏಪ್ರಿಲ್​ ವೇಳೆಗೆ ಚಿತ್ರದ ಶೂಟಿಂಗ್​ ಪೂರ್ಣಗೊಳಿಸುವ ನಿರ್ಧಾರವನ್ನು ಸಿನಿಮಾ ತಂಡ ಹೊಂದಿದೆ.

ಆಮಿರ್ ಖಾನ್​ ನಟನೆಯ ‘ಲಾಲ್​ ಸಿಂಗ್ ಛಡ್ಡಾ’ ಚಿತ್ರವನ್ನು ಆಮಿರ್​ ಖಾನ್​ ಹಾಗೂ ಕಿರಣ್​ ರಾವ್​ ಒಟ್ಟಾಗಿ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರ ಏಪ್ರಿಲ್​ 14ರಂದು ‘ಕೆಜಿಎಫ್​ ಚಾಪ್ಟರ್​ 2’ ಎದುರು ತೆರೆಗೆ ಬರುತ್ತಿದೆ. ಕೊವಿಡ್​ ಪರಿಸ್ಥಿತಿ ನಿಯಂತ್ರಣಕ್ಕೆ ಬರದಿದ್ದರೆ ಮತ್ತೆ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಡುತ್ತದೆ.

ಇದನ್ನೂ ಓದಿ: ಮಗಳ ಪಾತ್ರ ಮಾಡಿದ್ದ ನಟಿ ಜತೆ ಆಮಿರ್​ ಖಾನ್​ ಶಾದಿ? ವೈರಲ್​ ಫೋಟೋದ ಅಸಲಿಯತ್ತು ಇಲ್ಲಿದೆ

Aamir Khan: ಆಮಿರ್​​ ಖಾನ್​-ಕಿರಣ್​ ರಾವ್​ ವಿಚ್ಛೇದನ; 15 ವರ್ಷದ ದಾಂಪತ್ಯ ಜೀವನ ಅಂತ್ಯ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ