AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aamir Khan Ad: ಮದುವೆ ಪದ್ದತಿ ಬದಲಾಯಿಸೋಣ ಎಂದ ಆಮಿರ್​ ಖಾನ್​ ವಿರುದ್ಧ ಸಿಡಿದೆದ್ದ ನೆಟ್ಟಿಗರು; ಇಲ್ಲಿದೆ ಕಾರಣ..

Aamir Khan New Advertisement: ಈ ಜಾಹೀರಾತಿನಲ್ಲಿ ಆಮಿರ್​ ಖಾನ್​ ಮತ್ತು ಕಿಯಾರಾ ಅಡ್ವಾಣಿ ನಟಿಸಿದ್ದಾರೆ. ಈಗತಾನೇ ಮದುವೆ ಆದ ದಂಪತಿಯ ಪಾತ್ರದಲ್ಲಿ ಅವರಿಬ್ಬರು ಕಾಣಿಸಿಕೊಂಡಿದ್ದಾರೆ. ಅದು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

Aamir Khan Ad: ಮದುವೆ ಪದ್ದತಿ ಬದಲಾಯಿಸೋಣ ಎಂದ ಆಮಿರ್​ ಖಾನ್​ ವಿರುದ್ಧ ಸಿಡಿದೆದ್ದ ನೆಟ್ಟಿಗರು; ಇಲ್ಲಿದೆ ಕಾರಣ..
ಕಿಯಾರಾ ಅಡ್ವಾಣಿ, ಆಮಿರ್ ಖಾನ್
TV9 Web
| Edited By: |

Updated on: Oct 13, 2022 | 10:02 AM

Share

ನಟ ಆಮಿರ್​ ಖಾನ್​ (Aamir Khan) ಅವರಿಗೆ ಚಿತ್ರರಂಗದಲ್ಲಿ ಹಿನ್ನಡೆ ಉಂಟಾಗಿದೆ. ಅವರು ಬಹಳ ನಿರೀಕ್ಷೆ ಇಟ್ಟುಕೊಂಡು ಮಾಡಿದ್ದ ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾ ಹೀನಾಯವಾಗಿ ಸೋತಿತು. ಅಲ್ಲದೇ ಅವರ ಕೊರಳಿಗೆ ಆಗಾಗ ವಿವಾದ ಸುತ್ತಿಕೊಳ್ಳುತ್ತಲೇ ಇದೆ. ಈಗ ಅವರು ನಟಿಸಿರುವ ಒಂದು ಜಾಹೀರಾತು (Aamir Khan Advertisement) ಸಖತ್​ ಕಾಂಟ್ರವರ್ಸಿ ಸೃಷ್ಟಿ ಮಾಡಿದೆ. ಮದುವೆಯ ಪದ್ದತಿಯನ್ನು ಬದಲಾಯಿಸೋಣ ಎಂಬ ಸಂದೇಶ ಈ ಜಾಹೀರಾತಿನಲ್ಲಿ ಇದೆ. ಅದನ್ನು ನೋಡಿದ ಕೆಲವರು ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೇ, ಆಮಿರ್ ಖಾನ್​ ಅವರು ಹಿಂದೂಗಳ (Hindu) ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಒಂದಷ್ಟು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಜಾಹೀರಾತಿನಲ್ಲಿ ಆಮಿರ್​ ಖಾನ್​ ಮತ್ತು ಕಿಯಾರಾ ಅಡ್ವಾಣಿ ನಟಿಸಿದ್ದಾರೆ. ಈಗತಾನೇ ಮದುವೆ ಆದ ದಂಪತಿಯ ಪಾತ್ರದಲ್ಲಿ ಅವರಿಬ್ಬರು ಕಾಣಿಸಿಕೊಂಡಿದ್ದಾರೆ. ಅದು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಮದುವೆ ಆದ ಬಳಿಕ ಗಂಡಿನ ಮನೆಗೆ ಹೆಣ್ಣು ಬರುವುದು ಸಂಪ್ರದಾಯ. ಗಂಡನ ಮನೆಯ ಹೊಸ್ತಿಲಿನಲ್ಲಿ ಇಟ್ಟಿರುವ ಅಕ್ಕಿಯ ಸೇರನ್ನು ಒದ್ದು ಆಕೆ ಎಂಟ್ರಿ ನೀಡುತ್ತಾಳೆ. ಆದರೆ ಈಗ ಆಮಿರ್​ ಖಾನ್​ ಅವರ ಈ ಜಾಹೀರಾತಿನಲ್ಲಿ ಅದನ್ನು ಉಲ್ಟಾ ತೋರಿಸಲಾಗಿದೆ.

ಇದನ್ನೂ ಓದಿ
Image
‘ಲಾಲ್ ಸಿಂಗ್ ಚಡ್ಡಾ’ದಿಂದ ಆಮಿರ್ ಖಾನ್​ಗೆ 100 ಕೋಟಿ ರೂಪಾಯಿ ನಷ್ಟ​? ಸೋಲಿನ ಹೊಣೆ ಹೊತ್ತ ನಟ
Image
ಆಮಿರ್ ಖಾನ್​ಗೆ ಬೆಂಬಲ ನೀಡಿದ್ದೇ ತಪ್ಪಾಯ್ತು; ಹೃತಿಕ್ ರೋಷನ್​ಗೆ ಎದುರಾಯ್ತು ಸಂಕಷ್ಟ
Image
Aamir Khan: ದೇಶದ ಜನರ ಕ್ಷಮೆ ಕೇಳಿದ ಆಮಿರ್ ಖಾನ್​; ‘ಲಾಲ್​ ಸಿಂಗ್ ಚಡ್ಡಾ’ ರಿಲೀಸ್​ ವೇಳೆ ಹೊಸ ಹೇಳಿಕೆ
Image
ಪ್ರೀತಿಸಿದ ಹುಡುಗಿ ರಿಜೆಕ್ಟ್​ ಮಾಡಿದ್ದಕ್ಕೆ ತಲೆ ಬೋಳಿಸಿಕೊಂಡಿದ್ದ ಆಮಿರ್ ಖಾನ್​; ಹಳೆ ಘಟನೆ ನೆನೆದ ನಟ

ಆಮಿರ್​ ಖಾನ್​ ಅವರು ಪತ್ನಿಯ ಕುಟುಂಬಕ್ಕೆ ಪ್ರವೇಶ ಮಾಡುತ್ತಾರೆ. ಹೆಣ್ಣಿನ ಮನೆಯ ಹೊಸ್ತಿಲಿನಲ್ಲಿ ಇಟ್ಟ ಅಕ್ಕಿಯ ಸೇರನ್ನು ಒದ್ದು ಅವರು ಒಳಗೆ ಬರುತ್ತಾರೆ. ಪತ್ನಿಯ ತಂದೆ-ತಾಯಿಯನ್ನು ನೋಡಿಕೊಳ್ಳುವ ಜವಾಬ್ದಾರಿ ಅವರು ವಹಿಸಿಕೊಳ್ಳಲು ಸಿದ್ಧರಿದ್ದಾರೆ ಎಂಬ ರೀತಿಯಲ್ಲಿ ತೋರಿಸಲಾಗಿದೆ. ಇದನ್ನು ನೋಡಿರುವ ಕೆಲವರು ಭಾರಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಮಧ್ಯಪ್ರದೇಶದ ಸಚಿವ ನರೋತ್ತಮ್​ ಮಿಶ್ರಾ ಅವರು ಈ ಬಗ್ಗೆ ತಕರಾರು ತೆಗೆದಿದ್ದಾರೆ. ‘ಆಮಿರ್​ ಖಾನ್​ ನಟಿಸಿರುವ ಖಾಸಗಿ ಬ್ಯಾಂಕ್​ನ ಜಾಹೀರಾತನ್ನು ನಾನು ನೋಡಿದ್ದೇನೆ. ಭಾರತೀಯ ಸಂಪ್ರದಾಯವನ್ನು ತಲೆಯಲ್ಲಿ ಇಟ್ಟುಕೊಂಡು ಜಾಹೀರಾತು ಮಾಡುವಂತೆ ನಾನು ಅವರಲ್ಲಿ ವಿನಂತಿಕೊಳ್ಳುತ್ತೇನೆ. ಈಗ ಅವರು ಮಾಡಿರುವ ಜಾಹೀರಾತು ಸರಿಯಿಲ್ಲ. ಯಾರ ಧಾರ್ಮಿಕ ಭಾವನೆಗೂ ಧಕ್ಕೆ ತರುವ ಅಧಿಕಾರ ಅವರಿಗೆ ಇಲ್ಲ’ ಎಂದು ನರೋತ್ತಮ್​ ಮಿಶ್ರಾ ಹೇಳಿದ್ದಾರೆ.

ಆಮಿರ್​ ಖಾನ್​ ಮಾಡುವ ಎಲ್ಲ ಕೆಲಸದಲ್ಲೂ ತಪ್ಪು ಕಂಡು ಹಿಡಿಯಲು ಒಂದಷ್ಟು ಮಂದಿ ಕಾದು ಕುಳಿತಿರುತ್ತಾರೆ. ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾದಲ್ಲಿ ಅವರು ಹೇಳಿದ ಕೆಲವು ಡೈಲಾಗ್​ಗಳ ಬಗ್ಗೆಯೂ ಆಕ್ಷೇಪ ವ್ಯಕ್ತವಾಗಿತ್ತು. ಹೀಗೆ ಆಮಿರ್​ ಖಾನ್​ ಅವರು ಪದೇಪದೇ ವಿವಾದಗಳಿಗೆ ಸಿಲುಕುವಂತಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ