AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aamir Khan Ad: ಮದುವೆ ಪದ್ದತಿ ಬದಲಾಯಿಸೋಣ ಎಂದ ಆಮಿರ್​ ಖಾನ್​ ವಿರುದ್ಧ ಸಿಡಿದೆದ್ದ ನೆಟ್ಟಿಗರು; ಇಲ್ಲಿದೆ ಕಾರಣ..

Aamir Khan New Advertisement: ಈ ಜಾಹೀರಾತಿನಲ್ಲಿ ಆಮಿರ್​ ಖಾನ್​ ಮತ್ತು ಕಿಯಾರಾ ಅಡ್ವಾಣಿ ನಟಿಸಿದ್ದಾರೆ. ಈಗತಾನೇ ಮದುವೆ ಆದ ದಂಪತಿಯ ಪಾತ್ರದಲ್ಲಿ ಅವರಿಬ್ಬರು ಕಾಣಿಸಿಕೊಂಡಿದ್ದಾರೆ. ಅದು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

Aamir Khan Ad: ಮದುವೆ ಪದ್ದತಿ ಬದಲಾಯಿಸೋಣ ಎಂದ ಆಮಿರ್​ ಖಾನ್​ ವಿರುದ್ಧ ಸಿಡಿದೆದ್ದ ನೆಟ್ಟಿಗರು; ಇಲ್ಲಿದೆ ಕಾರಣ..
ಕಿಯಾರಾ ಅಡ್ವಾಣಿ, ಆಮಿರ್ ಖಾನ್
TV9 Web
| Edited By: |

Updated on: Oct 13, 2022 | 10:02 AM

Share

ನಟ ಆಮಿರ್​ ಖಾನ್​ (Aamir Khan) ಅವರಿಗೆ ಚಿತ್ರರಂಗದಲ್ಲಿ ಹಿನ್ನಡೆ ಉಂಟಾಗಿದೆ. ಅವರು ಬಹಳ ನಿರೀಕ್ಷೆ ಇಟ್ಟುಕೊಂಡು ಮಾಡಿದ್ದ ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾ ಹೀನಾಯವಾಗಿ ಸೋತಿತು. ಅಲ್ಲದೇ ಅವರ ಕೊರಳಿಗೆ ಆಗಾಗ ವಿವಾದ ಸುತ್ತಿಕೊಳ್ಳುತ್ತಲೇ ಇದೆ. ಈಗ ಅವರು ನಟಿಸಿರುವ ಒಂದು ಜಾಹೀರಾತು (Aamir Khan Advertisement) ಸಖತ್​ ಕಾಂಟ್ರವರ್ಸಿ ಸೃಷ್ಟಿ ಮಾಡಿದೆ. ಮದುವೆಯ ಪದ್ದತಿಯನ್ನು ಬದಲಾಯಿಸೋಣ ಎಂಬ ಸಂದೇಶ ಈ ಜಾಹೀರಾತಿನಲ್ಲಿ ಇದೆ. ಅದನ್ನು ನೋಡಿದ ಕೆಲವರು ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೇ, ಆಮಿರ್ ಖಾನ್​ ಅವರು ಹಿಂದೂಗಳ (Hindu) ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಒಂದಷ್ಟು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಜಾಹೀರಾತಿನಲ್ಲಿ ಆಮಿರ್​ ಖಾನ್​ ಮತ್ತು ಕಿಯಾರಾ ಅಡ್ವಾಣಿ ನಟಿಸಿದ್ದಾರೆ. ಈಗತಾನೇ ಮದುವೆ ಆದ ದಂಪತಿಯ ಪಾತ್ರದಲ್ಲಿ ಅವರಿಬ್ಬರು ಕಾಣಿಸಿಕೊಂಡಿದ್ದಾರೆ. ಅದು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಮದುವೆ ಆದ ಬಳಿಕ ಗಂಡಿನ ಮನೆಗೆ ಹೆಣ್ಣು ಬರುವುದು ಸಂಪ್ರದಾಯ. ಗಂಡನ ಮನೆಯ ಹೊಸ್ತಿಲಿನಲ್ಲಿ ಇಟ್ಟಿರುವ ಅಕ್ಕಿಯ ಸೇರನ್ನು ಒದ್ದು ಆಕೆ ಎಂಟ್ರಿ ನೀಡುತ್ತಾಳೆ. ಆದರೆ ಈಗ ಆಮಿರ್​ ಖಾನ್​ ಅವರ ಈ ಜಾಹೀರಾತಿನಲ್ಲಿ ಅದನ್ನು ಉಲ್ಟಾ ತೋರಿಸಲಾಗಿದೆ.

ಇದನ್ನೂ ಓದಿ
Image
‘ಲಾಲ್ ಸಿಂಗ್ ಚಡ್ಡಾ’ದಿಂದ ಆಮಿರ್ ಖಾನ್​ಗೆ 100 ಕೋಟಿ ರೂಪಾಯಿ ನಷ್ಟ​? ಸೋಲಿನ ಹೊಣೆ ಹೊತ್ತ ನಟ
Image
ಆಮಿರ್ ಖಾನ್​ಗೆ ಬೆಂಬಲ ನೀಡಿದ್ದೇ ತಪ್ಪಾಯ್ತು; ಹೃತಿಕ್ ರೋಷನ್​ಗೆ ಎದುರಾಯ್ತು ಸಂಕಷ್ಟ
Image
Aamir Khan: ದೇಶದ ಜನರ ಕ್ಷಮೆ ಕೇಳಿದ ಆಮಿರ್ ಖಾನ್​; ‘ಲಾಲ್​ ಸಿಂಗ್ ಚಡ್ಡಾ’ ರಿಲೀಸ್​ ವೇಳೆ ಹೊಸ ಹೇಳಿಕೆ
Image
ಪ್ರೀತಿಸಿದ ಹುಡುಗಿ ರಿಜೆಕ್ಟ್​ ಮಾಡಿದ್ದಕ್ಕೆ ತಲೆ ಬೋಳಿಸಿಕೊಂಡಿದ್ದ ಆಮಿರ್ ಖಾನ್​; ಹಳೆ ಘಟನೆ ನೆನೆದ ನಟ

ಆಮಿರ್​ ಖಾನ್​ ಅವರು ಪತ್ನಿಯ ಕುಟುಂಬಕ್ಕೆ ಪ್ರವೇಶ ಮಾಡುತ್ತಾರೆ. ಹೆಣ್ಣಿನ ಮನೆಯ ಹೊಸ್ತಿಲಿನಲ್ಲಿ ಇಟ್ಟ ಅಕ್ಕಿಯ ಸೇರನ್ನು ಒದ್ದು ಅವರು ಒಳಗೆ ಬರುತ್ತಾರೆ. ಪತ್ನಿಯ ತಂದೆ-ತಾಯಿಯನ್ನು ನೋಡಿಕೊಳ್ಳುವ ಜವಾಬ್ದಾರಿ ಅವರು ವಹಿಸಿಕೊಳ್ಳಲು ಸಿದ್ಧರಿದ್ದಾರೆ ಎಂಬ ರೀತಿಯಲ್ಲಿ ತೋರಿಸಲಾಗಿದೆ. ಇದನ್ನು ನೋಡಿರುವ ಕೆಲವರು ಭಾರಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಮಧ್ಯಪ್ರದೇಶದ ಸಚಿವ ನರೋತ್ತಮ್​ ಮಿಶ್ರಾ ಅವರು ಈ ಬಗ್ಗೆ ತಕರಾರು ತೆಗೆದಿದ್ದಾರೆ. ‘ಆಮಿರ್​ ಖಾನ್​ ನಟಿಸಿರುವ ಖಾಸಗಿ ಬ್ಯಾಂಕ್​ನ ಜಾಹೀರಾತನ್ನು ನಾನು ನೋಡಿದ್ದೇನೆ. ಭಾರತೀಯ ಸಂಪ್ರದಾಯವನ್ನು ತಲೆಯಲ್ಲಿ ಇಟ್ಟುಕೊಂಡು ಜಾಹೀರಾತು ಮಾಡುವಂತೆ ನಾನು ಅವರಲ್ಲಿ ವಿನಂತಿಕೊಳ್ಳುತ್ತೇನೆ. ಈಗ ಅವರು ಮಾಡಿರುವ ಜಾಹೀರಾತು ಸರಿಯಿಲ್ಲ. ಯಾರ ಧಾರ್ಮಿಕ ಭಾವನೆಗೂ ಧಕ್ಕೆ ತರುವ ಅಧಿಕಾರ ಅವರಿಗೆ ಇಲ್ಲ’ ಎಂದು ನರೋತ್ತಮ್​ ಮಿಶ್ರಾ ಹೇಳಿದ್ದಾರೆ.

ಆಮಿರ್​ ಖಾನ್​ ಮಾಡುವ ಎಲ್ಲ ಕೆಲಸದಲ್ಲೂ ತಪ್ಪು ಕಂಡು ಹಿಡಿಯಲು ಒಂದಷ್ಟು ಮಂದಿ ಕಾದು ಕುಳಿತಿರುತ್ತಾರೆ. ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾದಲ್ಲಿ ಅವರು ಹೇಳಿದ ಕೆಲವು ಡೈಲಾಗ್​ಗಳ ಬಗ್ಗೆಯೂ ಆಕ್ಷೇಪ ವ್ಯಕ್ತವಾಗಿತ್ತು. ಹೀಗೆ ಆಮಿರ್​ ಖಾನ್​ ಅವರು ಪದೇಪದೇ ವಿವಾದಗಳಿಗೆ ಸಿಲುಕುವಂತಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು