AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aamir Khan Ad: ಮದುವೆ ಪದ್ದತಿ ಬದಲಾಯಿಸೋಣ ಎಂದ ಆಮಿರ್​ ಖಾನ್​ ವಿರುದ್ಧ ಸಿಡಿದೆದ್ದ ನೆಟ್ಟಿಗರು; ಇಲ್ಲಿದೆ ಕಾರಣ..

Aamir Khan New Advertisement: ಈ ಜಾಹೀರಾತಿನಲ್ಲಿ ಆಮಿರ್​ ಖಾನ್​ ಮತ್ತು ಕಿಯಾರಾ ಅಡ್ವಾಣಿ ನಟಿಸಿದ್ದಾರೆ. ಈಗತಾನೇ ಮದುವೆ ಆದ ದಂಪತಿಯ ಪಾತ್ರದಲ್ಲಿ ಅವರಿಬ್ಬರು ಕಾಣಿಸಿಕೊಂಡಿದ್ದಾರೆ. ಅದು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

Aamir Khan Ad: ಮದುವೆ ಪದ್ದತಿ ಬದಲಾಯಿಸೋಣ ಎಂದ ಆಮಿರ್​ ಖಾನ್​ ವಿರುದ್ಧ ಸಿಡಿದೆದ್ದ ನೆಟ್ಟಿಗರು; ಇಲ್ಲಿದೆ ಕಾರಣ..
ಕಿಯಾರಾ ಅಡ್ವಾಣಿ, ಆಮಿರ್ ಖಾನ್
TV9 Web
| Edited By: |

Updated on: Oct 13, 2022 | 10:02 AM

Share

ನಟ ಆಮಿರ್​ ಖಾನ್​ (Aamir Khan) ಅವರಿಗೆ ಚಿತ್ರರಂಗದಲ್ಲಿ ಹಿನ್ನಡೆ ಉಂಟಾಗಿದೆ. ಅವರು ಬಹಳ ನಿರೀಕ್ಷೆ ಇಟ್ಟುಕೊಂಡು ಮಾಡಿದ್ದ ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾ ಹೀನಾಯವಾಗಿ ಸೋತಿತು. ಅಲ್ಲದೇ ಅವರ ಕೊರಳಿಗೆ ಆಗಾಗ ವಿವಾದ ಸುತ್ತಿಕೊಳ್ಳುತ್ತಲೇ ಇದೆ. ಈಗ ಅವರು ನಟಿಸಿರುವ ಒಂದು ಜಾಹೀರಾತು (Aamir Khan Advertisement) ಸಖತ್​ ಕಾಂಟ್ರವರ್ಸಿ ಸೃಷ್ಟಿ ಮಾಡಿದೆ. ಮದುವೆಯ ಪದ್ದತಿಯನ್ನು ಬದಲಾಯಿಸೋಣ ಎಂಬ ಸಂದೇಶ ಈ ಜಾಹೀರಾತಿನಲ್ಲಿ ಇದೆ. ಅದನ್ನು ನೋಡಿದ ಕೆಲವರು ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೇ, ಆಮಿರ್ ಖಾನ್​ ಅವರು ಹಿಂದೂಗಳ (Hindu) ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಒಂದಷ್ಟು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಜಾಹೀರಾತಿನಲ್ಲಿ ಆಮಿರ್​ ಖಾನ್​ ಮತ್ತು ಕಿಯಾರಾ ಅಡ್ವಾಣಿ ನಟಿಸಿದ್ದಾರೆ. ಈಗತಾನೇ ಮದುವೆ ಆದ ದಂಪತಿಯ ಪಾತ್ರದಲ್ಲಿ ಅವರಿಬ್ಬರು ಕಾಣಿಸಿಕೊಂಡಿದ್ದಾರೆ. ಅದು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಮದುವೆ ಆದ ಬಳಿಕ ಗಂಡಿನ ಮನೆಗೆ ಹೆಣ್ಣು ಬರುವುದು ಸಂಪ್ರದಾಯ. ಗಂಡನ ಮನೆಯ ಹೊಸ್ತಿಲಿನಲ್ಲಿ ಇಟ್ಟಿರುವ ಅಕ್ಕಿಯ ಸೇರನ್ನು ಒದ್ದು ಆಕೆ ಎಂಟ್ರಿ ನೀಡುತ್ತಾಳೆ. ಆದರೆ ಈಗ ಆಮಿರ್​ ಖಾನ್​ ಅವರ ಈ ಜಾಹೀರಾತಿನಲ್ಲಿ ಅದನ್ನು ಉಲ್ಟಾ ತೋರಿಸಲಾಗಿದೆ.

ಇದನ್ನೂ ಓದಿ
Image
‘ಲಾಲ್ ಸಿಂಗ್ ಚಡ್ಡಾ’ದಿಂದ ಆಮಿರ್ ಖಾನ್​ಗೆ 100 ಕೋಟಿ ರೂಪಾಯಿ ನಷ್ಟ​? ಸೋಲಿನ ಹೊಣೆ ಹೊತ್ತ ನಟ
Image
ಆಮಿರ್ ಖಾನ್​ಗೆ ಬೆಂಬಲ ನೀಡಿದ್ದೇ ತಪ್ಪಾಯ್ತು; ಹೃತಿಕ್ ರೋಷನ್​ಗೆ ಎದುರಾಯ್ತು ಸಂಕಷ್ಟ
Image
Aamir Khan: ದೇಶದ ಜನರ ಕ್ಷಮೆ ಕೇಳಿದ ಆಮಿರ್ ಖಾನ್​; ‘ಲಾಲ್​ ಸಿಂಗ್ ಚಡ್ಡಾ’ ರಿಲೀಸ್​ ವೇಳೆ ಹೊಸ ಹೇಳಿಕೆ
Image
ಪ್ರೀತಿಸಿದ ಹುಡುಗಿ ರಿಜೆಕ್ಟ್​ ಮಾಡಿದ್ದಕ್ಕೆ ತಲೆ ಬೋಳಿಸಿಕೊಂಡಿದ್ದ ಆಮಿರ್ ಖಾನ್​; ಹಳೆ ಘಟನೆ ನೆನೆದ ನಟ

ಆಮಿರ್​ ಖಾನ್​ ಅವರು ಪತ್ನಿಯ ಕುಟುಂಬಕ್ಕೆ ಪ್ರವೇಶ ಮಾಡುತ್ತಾರೆ. ಹೆಣ್ಣಿನ ಮನೆಯ ಹೊಸ್ತಿಲಿನಲ್ಲಿ ಇಟ್ಟ ಅಕ್ಕಿಯ ಸೇರನ್ನು ಒದ್ದು ಅವರು ಒಳಗೆ ಬರುತ್ತಾರೆ. ಪತ್ನಿಯ ತಂದೆ-ತಾಯಿಯನ್ನು ನೋಡಿಕೊಳ್ಳುವ ಜವಾಬ್ದಾರಿ ಅವರು ವಹಿಸಿಕೊಳ್ಳಲು ಸಿದ್ಧರಿದ್ದಾರೆ ಎಂಬ ರೀತಿಯಲ್ಲಿ ತೋರಿಸಲಾಗಿದೆ. ಇದನ್ನು ನೋಡಿರುವ ಕೆಲವರು ಭಾರಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಮಧ್ಯಪ್ರದೇಶದ ಸಚಿವ ನರೋತ್ತಮ್​ ಮಿಶ್ರಾ ಅವರು ಈ ಬಗ್ಗೆ ತಕರಾರು ತೆಗೆದಿದ್ದಾರೆ. ‘ಆಮಿರ್​ ಖಾನ್​ ನಟಿಸಿರುವ ಖಾಸಗಿ ಬ್ಯಾಂಕ್​ನ ಜಾಹೀರಾತನ್ನು ನಾನು ನೋಡಿದ್ದೇನೆ. ಭಾರತೀಯ ಸಂಪ್ರದಾಯವನ್ನು ತಲೆಯಲ್ಲಿ ಇಟ್ಟುಕೊಂಡು ಜಾಹೀರಾತು ಮಾಡುವಂತೆ ನಾನು ಅವರಲ್ಲಿ ವಿನಂತಿಕೊಳ್ಳುತ್ತೇನೆ. ಈಗ ಅವರು ಮಾಡಿರುವ ಜಾಹೀರಾತು ಸರಿಯಿಲ್ಲ. ಯಾರ ಧಾರ್ಮಿಕ ಭಾವನೆಗೂ ಧಕ್ಕೆ ತರುವ ಅಧಿಕಾರ ಅವರಿಗೆ ಇಲ್ಲ’ ಎಂದು ನರೋತ್ತಮ್​ ಮಿಶ್ರಾ ಹೇಳಿದ್ದಾರೆ.

ಆಮಿರ್​ ಖಾನ್​ ಮಾಡುವ ಎಲ್ಲ ಕೆಲಸದಲ್ಲೂ ತಪ್ಪು ಕಂಡು ಹಿಡಿಯಲು ಒಂದಷ್ಟು ಮಂದಿ ಕಾದು ಕುಳಿತಿರುತ್ತಾರೆ. ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾದಲ್ಲಿ ಅವರು ಹೇಳಿದ ಕೆಲವು ಡೈಲಾಗ್​ಗಳ ಬಗ್ಗೆಯೂ ಆಕ್ಷೇಪ ವ್ಯಕ್ತವಾಗಿತ್ತು. ಹೀಗೆ ಆಮಿರ್​ ಖಾನ್​ ಅವರು ಪದೇಪದೇ ವಿವಾದಗಳಿಗೆ ಸಿಲುಕುವಂತಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್