AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರದ ಮೇಲೆ ಕಣ್ಣಿಟ್ಟ ಆಮಿರ್​ ಖಾನ್​; ಗವರ್ನರ್​ ಭೇಟಿ ಬಳಿಕ ಹೊರಬಿತ್ತು ಸುದ್ದಿ

ಆಮಿರ್​ ಖಾನ್​ ನಟನೆಯ ಹೊಸ ಸಿನಿಮಾ ‘ಲಾಲ್​ ಸಿಂಗ್​ ಚಡ್ಡಾ’ ಶೂಟಿಂಗ್​ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ. ಚಿತ್ರೀಕರಣ ಪೂರ್ಣಗೊಂಡ ಬಳಿಕ ಅವರು ಅಲ್ಲಿಯೇ ಸುದ್ದಿಗೋಷ್ಠಿ ನಡೆಸಿದ್ದಾರೆ.

ಜಮ್ಮು-ಕಾಶ್ಮೀರದ ಮೇಲೆ ಕಣ್ಣಿಟ್ಟ ಆಮಿರ್​ ಖಾನ್​; ಗವರ್ನರ್​ ಭೇಟಿ ಬಳಿಕ ಹೊರಬಿತ್ತು ಸುದ್ದಿ
ಜಮ್ಮು-ಕಾಶ್ಮೀರದ ಮೇಲೆ ಕಣ್ಣಿಟ್ಟ ಆಮಿರ್​ ಖಾನ್​; ಗವರ್ನರ್​ ಭೇಟಿ ಬಳಿಕ ಹೊರಬಿತ್ತು ಸುದ್ದಿ
Follow us
TV9 Web
| Updated By: ಮದನ್​ ಕುಮಾರ್​

Updated on:Aug 02, 2021 | 1:07 PM

ನಟ ಆಮಿರ್​ ಖಾನ್ (Aamir Khan)​ ಅವರು ಹಲವು ಕಾರಣಗಳಿಗಾಗಿ ಇತ್ತೀಚೆಗೆ ಹೆಚ್ಚು ಸುದ್ದಿ ಆಗುತ್ತಿದ್ದಾರೆ. ಬಹುವರ್ಷಗಳಿಂದ ತಮ್ಮ ಜೊತೆ ದಾಂಪತ್ಯ ಜೀವನ ನಡೆಸುತ್ತಿದ್ದ ಕಿರಣ್​ ರಾವ್​ (Kiran Rao) ಅವರಿಗೆ ವಿಚ್ಛೇದನ ನೀಡಿದ ಬಳಿಕ ಆಮಿರ್​ ಖಾನ್​ ಅವರ ವೈಯಕ್ತಿಕ ಜೀವನದ ಬಗ್ಗೆ ಹೆಚ್ಚು ಚರ್ಚೆ ಆಗತೊಡಗಿತು. ಅದರ ಬೆನ್ನಲೇ ಅವರು ಹೊಸ ಸುದ್ದಿ ನೀಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ (Jammu Kashmir) ಮೇಲೆ ಈಗ ಆಮಿರ್​ ಖಾನ್​ ಕಣ್ಣು ಬಿದ್ದಿದೆ. ತಮ್ಮ ಸಿನಿಮಾಗಳಲ್ಲಿ ಜಮ್ಮು-ಕಾಶ್ಮೀರವನ್ನು ಇನ್ನಷ್ಟು ಚೆನ್ನಾಗಿ ತೋರಿಸುವ ಪ್ಲ್ಯಾನ್​ ಸಿದ್ಧವಾಗುತ್ತಿದೆ. ಈ ಬಗ್ಗೆ ಅಧಿಕೃತ ಮೂಲದಿಂದಲೇ ಸುದ್ದಿ ಹೊರಬಿದ್ದಿದೆ.

ಆಮಿರ್​ ಖಾನ್​ ಅವರ ಹೊಸ ಸಿನಿಮಾ ‘ಲಾಲ್​ ಸಿಂಗ್​ ಚಡ್ಡಾ’ ಶೂಟಿಂಗ್​ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ. ಚಿತ್ರೀಕರಣ ಪೂರ್ಣಗೊಂಡ ಬಳಿಕ ಅವರು ಅಲ್ಲಿಯೇ ಸುದ್ದಿಗೋಷ್ಠಿ ನಡೆಸಿದ್ದಾರೆ. ಬಳಿಕ ಜಮ್ಮು-ಕಾಶ್ಮೀರ ಗವರ್ನರ್​ ಮನೋಜ್​ ಸಿನ್ಹಾ ಅವರನ್ನು ಭೇಟಿ ಮಾಡಿ ಕೆಲವು ಮುಖ್ಯ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಈ ವೇಳೆ ಆಮಿರ್​ ಮಾಜಿ ಪತ್ನಿ ಕಿರಣ್​ ರಾವ್​ ಕೂಡ ಜೊತೆಗಿದ್ದರು.

ಈ ಕುರಿತು ಮನೋಜ್​ ಸಿನ್ಹಾ ಅವರು ಟ್ವೀಟ್​ ಮಾಡಿದ್ದಾರೆ. ‘ಕಿರಣ್​ ರಾವ್​ ಮತ್ತು ಆಮಿರ್​ ಖಾನ್​ ಅವರನ್ನು ಇಂದು ಭೇಟಿ ಮಾಡಿದೆ. ಜಮ್ಮು-ಕಾಶ್ಮೀರದ ಹೊಸ ಸಿನಿಮಾ ನೀತಿ ಬಗ್ಗೆ ಚರ್ಚೆ ಮಾಡಿದೆವು. ಶೀಘ್ರದಲ್ಲೇ ಅದರ ವಿವರವನ್ನು ಬಿಡುಗಡೆ ಮಾಡಲಿದ್ದೇವೆ. ಜಮ್ಮು-ಕಾಶ್ಮೀರದ ವೈಭವವನ್ನು ಬಾಲಿವುಡ್​ ಸಿನಿಮಾಗಳಲ್ಲಿ ತೋರಿಸುವುದು ಮತ್ತು ಈ ಪ್ರದೇಶವನ್ನು ನೆಚ್ಚಿನ ಶೂಟಿಂಗ್ ಸ್ಥಳವಾಗಿ ಮಾಡುವುದು ಹೇಗೆ ಎಂಬುದರ ಬಗ್ಗೆ ಚರ್ಚೆ ನಡೆಯಿತು’ ಎಂದು ಅವರು ಟ್ವಿಟರ್​ನಲ್ಲಿ ತಿಳಿಸಿದ್ದಾರೆ.

‘ಇಲ್ಲಿನ ಜನರು ತುಂಬಾ ಒಳ್ಳೆಯವರು. ಇಲ್ಲಿ ಕೆಲಸ ಮಾಡಿದ ಅನುಭವ ತುಂಬ ಚೆನ್ನಾಗಿತ್ತು. ಮೂಲ ಸೌಕರ್ಯಗಳು ಸಾಕಷ್ಟು ಮುಂದುವರಿದಿವೆ. ನಮ್ಮ ದೊಡ್ಡ ಚಿತ್ರತಂಡಕ್ಕೆ ಉಳಿದುಕೊಳ್ಳಲು ಯಾವುದೇ ತೊಂದರೆ ಆಗಲಿಲ್ಲ. ಚಿತ್ರೀಕರಣದ ಸ್ಥಳಕ್ಕೆ ತೆರಳಲು ಒಂದು ಗಂಟೆ ಸಮಯ ಬೇಕಾಗುತ್ತಿತ್ತು. ನಾನು ಮತ್ತು ನಾಗ ಚೈತನ್ಯ ಡ್ರೈವಿಂಗ್​ ಮಾಡುವಾಗ ಇಲ್ಲಿನ ಪ್ರಕೃತಿ ಸೌಂದರ್ಯವನ್ನು ಸವಿದೆವು’ ಎಂದು ಲಡಾಕ್​ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆಮಿರ್​ ಖಾನ್ ಹೇಳಿದರು.

ಇದನ್ನೂ ಓದಿ:

‘ಅಜ್ಜನಾಗುವ ವಯಸ್ಸಿನಲ್ಲಿ ಆಮಿರ್​ ಖಾನ್​ಗೆ 3ನೇ ಹೆಂಡತಿ ಚಿಂತೆ’: ಬಿಜೆಪಿ ಸಂಸದ ಸುಧೀರ್​ ಗುಪ್ತಾ

‘ನಾವು ಖುಷಿಯಾಗಿದ್ದೇವೆ, ನೀವು ಬೇಸರಗೊಳ್ಳಬೇಡಿ’; ವಿಡಿಯೋ ಮೂಲಕ ಫ್ಯಾನ್ಸ್​ಗೆ ಮನವಿ ಮಾಡಿದ ಆಮಿರ್​-ಕಿರಣ್​

Published On - 1:07 pm, Mon, 2 August 21

ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?