AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aamir Khan: ದೇಶದ ಜನರ ಕ್ಷಮೆ ಕೇಳಿದ ಆಮಿರ್ ಖಾನ್​; ‘ಲಾಲ್​ ಸಿಂಗ್ ಚಡ್ಡಾ’ ರಿಲೀಸ್​ ವೇಳೆ ಹೊಸ ಹೇಳಿಕೆ

Laal Singh Chaddha: ‘ಯಾರ ಭಾವನೆಗಾದರೂ ನಾನು ಧಕ್ಕೆ ತಂದಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ. ಯಾರನ್ನೂ ನೋಯಿಸಲು ನಾನು ಬಯಸುವುದಿಲ್ಲ’ ಎಂದು ಆಮಿರ್​ ಖಾನ್​ ಹೇಳಿಕೆ ನೀಡಿದ್ದಾರೆ.

Aamir Khan: ದೇಶದ ಜನರ ಕ್ಷಮೆ ಕೇಳಿದ ಆಮಿರ್ ಖಾನ್​; ‘ಲಾಲ್​ ಸಿಂಗ್ ಚಡ್ಡಾ’ ರಿಲೀಸ್​ ವೇಳೆ ಹೊಸ ಹೇಳಿಕೆ
Aamir Khan
TV9 Web
| Updated By: ಮದನ್​ ಕುಮಾರ್​|

Updated on:Aug 10, 2022 | 1:37 PM

Share

ನಟ ಆಮಿರ್​ ಖಾನ್ (Aamir Khan)​ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಹಲವು ಬಗೆಯ ಮೀಮ್ಸ್​ ಹರಿದಾಡಿವೆ. ಅವರು ನಟಿಸಿರುವ ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾವನ್ನು ಬಹಿಷ್ಕಾರ ಮಾಡಬೇಕು ಎಂದು ಅನೇಕರು ಅಭಿಯಾನ ಮಾಡುತ್ತಿದ್ದಾರೆ. ಇದರ ಬಿಸಿ ಅವರಿಗೆ ತಟ್ಟಿದೆ. ಹಾಗಾಗಿ ‘ಲಾಲ್​ ಸಿಂಗ್​ ಚಡ್ಡಾ’ (Laal Singh Chaddha) ಸಿನಿಮಾದ ಬಿಡುಗಡೆ ಸಂದರ್ಭದಲ್ಲಿ ಆಮಿರ್​ ಖಾನ್​ ಅವರು ದೇಶದ ಜನತೆಯ ಕ್ಷಮೆ (Aamir Khan Apology) ಕೇಳಿದ್ದಾರೆ ಎಂದು ವರದಿ ಆಗಿದೆ. ‘ಯಾವುದೇ ರೀತಿಯಲ್ಲಿ ನಾನು ಯಾರ ಭಾವನೆಗಾದರೂ ಧಕ್ಕೆ ತಂದಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ. ಯಾರನ್ನೂ ನೋಯಿಸಲು ನಾನು ಬಯಸುವುದಿಲ್ಲ. ಯಾರಿಗಾದರೂ ನನ್ನ ಸಿನಿಮಾ ನೋಡಲು ಇಷ್ಟವಿಲ್ಲ ಎಂದಾದರೆ ಅವರ ಭಾವನೆಯನ್ನೂ ನಾನು ಗೌರವಿಸುತ್ತೇನೆ’ ಎಂದು ಆಮಿರ್​ ಖಾನ್​ ಹೇಳಿಕೆ ನೀಡಿದ್ದಾರೆ.

ಭಾರತದಲ್ಲಿ ಅಸಹಿಷ್ಣುತೆ ಹೆಚ್ಚಾಗಿದೆ ಎಂದು ಈ ಹಿಂದೆ ಆಮಿರ್​ ಖಾನ್​ ಹೇಳಿದ್ದನ್ನು ಜನರು ಈಗಲೂ ಮರೆತಿಲ್ಲ. ಹಾಗಾಗಿ ಅವರ ಸಿನಿಮಾಗಳನ್ನು ಬಹಿಷ್ಕಾರ ಮಾಡಲು ನಿರ್ಧರಿಸಿದ್ದಾರೆ. ‘ಲಾಲ್​ ಸಿಂಗ್ ಚಡ್ಡಾ’ ಸಿನಿಮಾದ ರಿಲೀಸ್​ ವೇಳೆ ಬ್ಯಾನ್​ ಬಿಸಿ ಹೆಚ್ಚಾಗಿದೆ. ದೇಶಾದ್ಯಂತ ಈ ಚಿತ್ರವನ್ನು ಬಹಿಷ್ಕಾರ ಮಾಡಬೇಕು ಎಂದು ನೆಟ್ಟಿಗರು ಅಭಿಯಾನ ಮಾಡುತ್ತಿದ್ದಾರೆ. ಇದರ ಬೆನ್ನಲ್ಲೇ ಆಮಿರ್​ ಖಾನ್​ ಕ್ಷಮೆ ಕೇಳಿದ್ದಾರೆ.

‘ಅನಗತ್ಯವಾಗಿ ನನ್ನ ಬಗ್ಗೆ ದ್ವೇಷ ಹಬ್ಬಿಸುತ್ತಿರುವುದರಿಂದ ನನಗೆ ಬೇಸರ ಆಗುತ್ತದೆ. ನಾನು ಭಾರತವನ್ನು ಇಷ್ಟಪಡುವ ವ್ಯಕ್ತಿ ಅಲ್ಲ ಎಂದು ಕೆಲವರು ನಂಬಿದ್ದಾರೆ. ಆದರೆ ಅದು ನಿಜವಲ್ಲ. ಜನರು ಹಾಗೆ ಅಂದುಕೊಂಡಿರುವುದು ದುರದೃಷ್ಟಕರ. ದಯವಿಟ್ಟು ನನ್ನ ಸಿನಿಮಾಗಳನ್ನು ನೋಡಿ. ಬಹಿಷ್ಕಾರ ಮಾಡಬೇಡಿ’ ಎಂದು ಆಮಿರ್​ ಖಾನ್ ಇತ್ತೀಚೆಗಷ್ಟೇ​ ಮನವಿ ಮಾಡಿಕೊಂಡಿದ್ದರು.

ಇದನ್ನೂ ಓದಿ
Image
‘ಕೆಜಿಎಫ್ 2’ ಎದುರು ಬರದೆ ನಾವು ಬದುಕಿದೆವು; ಆಮಿರ್ ಖಾನ್​ಗೂ ಭಯ ಹುಟ್ಟಿಸಿದ್ದ ಯಶ್ ಚಿತ್ರದ ಅಬ್ಬರ
Image
ಆಗಸ್ಟ್​ 11ಕ್ಕೆ ಆಮಿರ್​ ಖಾನ್​ ವರ್ಸಸ್​ ಅಕ್ಷಯ್​ ಕುಮಾರ್​; ಪ್ರೇಕ್ಷಕರ ಬೆಂಬಲ ಯಾರ ಸಿನಿಮಾಗೆ?
Image
ಹಾಲಿವುಡ್​ನ ಚಾಕೊಲೇಟ್​ ತಂದು ಬಾಲಿವುಡ್​ನಲ್ಲಿ ಗೋಲ್​ಗಪ್ಪ ಮಾಡಿದ ಆಮಿರ್​ ಖಾನ್​; ಸಖತ್​ ಟ್ರೋಲ್​
Image
ಆಮಿರ್​ ಖಾನ್​ರನ್ನು ‘ಟೈಟಾನಿಕ್’​ ನಿರ್ದೇಶಕನಿಗೆ ಹೋಲಿಸಿದ ಹಾಲಿವುಡ್​ ದಿಗ್ಗಜ; ಇಲ್ಲಿದೆ ಅಚ್ಚರಿ ವಿಚಾರ

‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾ ಆಗಸ್ಟ್​ 11ರಂದು ಬಿಡುಗಡೆ ಆಗುತ್ತಿದೆ. ಹಲವು ಕಾರಣದಿಂದ ಈ ಚಿತ್ರ ಚರ್ಚೆ ಹುಟ್ಟುಹಾಕಿದೆ. ಹಾಲಿವುಡ್​ನ ‘ಫಾರೆಸ್ಟ್​ ಗಂಪ್​’ ಚಿತ್ರದ ರಿಮೇಕ್​ ಆಗಿ ಈ ಸಿನಿಮಾ ಮೂಡಿಬಂದಿದೆ. ಟ್ರೇಲರ್​ ನೋಡಿದ ಅನೇಕರು ಟೀಕೆ ಮಾಡಿದ್ದಾರೆ. ‘ಪಿಕೆ’ ಚಿತ್ರದ ರೀತಿಯಲ್ಲೇ ಆಮಿರ್​ ಖಾನ್​ ಮತ್ತೆ ಕಾಣಿಸಿಕೊಂಡಿದ್ದಾರೆ ಎಂಬ ಕಮೆಂಟ್​ಗಳು ಬಂದಿವೆ. ಈ ಸಿನಿಮಾದಲ್ಲಿ ಅವರಿಗೆ ಜೋಡಿಯಾಗಿ ಕರೀನಾ ಕಪೂರ್​ ಖಾನ್​ ನಟಿಸಿದ್ದಾರೆ. ತೆಲುಗು ಸ್ಟಾರ್​ ನಟ ನಾಗ ಚೈತನ್ಯ ಅವರು ಈ ಚಿತ್ರದಲ್ಲೊಂದು ಅತಿಥಿ ಪಾತ್ರ ಮಾಡಿದ್ದಾರೆ.

Published On - 1:33 pm, Wed, 10 August 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ