AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಂತ ತಮ್ಮನನ್ನೇ ಬೆಳೆಸಲಿಲ್ಲ ಆಮಿರ್​ ಖಾನ್​; ನಟನೆ ಬರಲ್ಲ ಅಂತ ಬೈಯಿಸಿಕೊಂಡಿದ್ದ ಫೈಸಲ್​ ಖಾನ್​​ ಬಿಚ್ಚಿಟ್ಟ ರಹಸ್ಯ

ಕೆಲವೇ ತಿಂಗಳ ಹಿಂದೆ ಕಿರಣ್​ ರಾವ್​ಗೆ ವಿಚ್ಛೇದನ ನೀಡುವ ಮೂಲಕ ಆಮಿರ್​ ಖಾನ್​ ಹೆಚ್ಚು ಸುದ್ದಿ ಆಗಿದ್ದರು. ಈಗ ಅವರ ಕುರಿತು ಸಹೋದರ ಫೈಸಲ್​ ಖಾನ್​ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸ್ವಂತ ತಮ್ಮನನ್ನೇ ಬೆಳೆಸಲಿಲ್ಲ ಆಮಿರ್​ ಖಾನ್​; ನಟನೆ ಬರಲ್ಲ ಅಂತ ಬೈಯಿಸಿಕೊಂಡಿದ್ದ ಫೈಸಲ್​ ಖಾನ್​​ ಬಿಚ್ಚಿಟ್ಟ ರಹಸ್ಯ
ಆಮಿರ್​ ಖಾನ್​, ಫೈಸಲ್​ ಖಾನ್​
TV9 Web
| Edited By: |

Updated on: Sep 07, 2021 | 9:58 AM

Share

ಬಾಲಿವುಡ್​ ನಟ ಆಮಿರ್​ ಖಾನ್​ ಅವರು ಅನೇಕರ ಪಾಲಿಗೆ ಗಾಡ್​ ಫಾದರ್​ ಆಗಿದ್ದಾರೆ. ಹಲವು ಕಲಾವಿದರು ಮತ್ತು ತಂತ್ರಜ್ಞರಿಗೆ ಅವಕಾಶ ನೀಡಿದ್ದಾರೆ. ಆದರೆ ಸ್ವಂತ ತಮ್ಮನ ವೃತ್ತಿಜೀವನವನ್ನೇ ತುಳಿದುಹಾಕಿದರು ಎಂಬುದು ಕಟುಸತ್ಯ. ಹಾಗಂತ ಇದು ಗಾಸಿಪ್​ ಅಲ್ಲ. ಸ್ವತಃ ಅವರ ತಮ್ಮ ಫೈಸಲ್​ ಖಾನ್​ ಅವರು ಈ ಬಗ್ಗೆ ಬಾಯಿಬಿಟ್ಟಿದ್ದಾರೆ. ಮಾಧ್ಯಮದ ಮುಂದೆ ಅವರು ಎಲ್ಲವನ್ನೂ ಹೇಳಿಕೊಂಡಿದ್ದಾರೆ. ಆಮಿರ್​ ಖಾನ್ ಹೇಳಿದ ಒಂದೇ ಒಂದು ಮಾತಿನಿಂದ ತಮ್ಮ ಸಿನಿಮಾ ಕನಸು ಭಗ್ನವಾಯಿತು ಎಂದು ಫೈಸಲ್​ ಖಾನ್​ ಅವರು ಬೇಸರ ತೋಡಿಕೊಂಡಿದ್ದಾರೆ.

ಅನೇಕರಿಗೆ ತಿಳಿದಿರದ ವಿಚಾರ ಏನೆಂದರೆ, ಆಮಿರ್​ ಖಾನ್​ ​ತಮ್ಮ ಫೈಸಲ್​ ಖಾನ್​ ಅವರು ಕೂಡ ಚಿತ್ರರಂಗದಲ್ಲಿ ನಟನಾಗಬೇಕು ಎಂಬ ಆಸೆ ಇಟ್ಟುಕೊಂಡಿದ್ದರು. ಕೆಲವು ಸಿನಿಮಾಗಳಲ್ಲಿ ಅವರಿಗೆ ಅವಕಾಶ ಕೂಡ ಸಿಕ್ಕಿತ್ತು. 2000ನೇ ಇಸವಿಯಲ್ಲಿ ಬಂದ ‘ಮೇಲಾ’ ಸಿನಿಮಾದಲ್ಲಿ ಆಮಿರ್​ ಖಾನ್ ಜೊತೆ ಅವರು ಹೀರೋ ಆಗಿ ನಟಿಸಿದ್ದರು. ಆದರೆ ಆ ಸಿನಿಮಾ ಫ್ಲಾಪ್​ ಆಯಿತು.

‘ಆ ಸಿನಿಮಾ ಸೋತ ಬಳಿಕ ಆಮಿರ್​ ಖಾನ್​ ನನಗೆ ಕರೆ ಮಾಡಿ ಮಾತನಾಡಿದರು. ನೀನು ಒಳ್ಳೆಯ ನಟ ಅಲ್ಲ. ಹೊಟ್ಟೆಪಾಡಿಗೆ ಸಿನಿಮಾ ಬದಲಿಗೆ ಬೇರೆ ಏನಾದರೂ ಕೆಲಸ ಮಾಡು ಅಂತ ಹೇಳಿದರು. ಆ ಸಿನಿಮಾದ ಸೋಲನ್ನು ನನ್ನ ತಲೆಗೆ ಕಟ್ಟಿದರು. ಆ ಸೋಲಿಗೆ ಬೇರೆ ಬೇರೆ ಕಾರಣಗಳು ಕೂಡ ಇದ್ದವು. ಅವರ ಬಳಿ ನಾನು ಏನು ಸಹಾಯ ಕೇಳಲು ಸಾಧ್ಯ?’ ಎಂದು ಅಸಮಾಧಾನದ ಮಾತುಗಳನ್ನು ಫೈಸಲ್​ ಖಾನ್​ ಹೇಳಿದ್ದಾರೆ.

‘ಮೇಲಾ’ ಸೋತ ಬಳಿಕವೂ ಫೈಸಲ್​ ಅವರು ಆಗೊಂದು ಈಗೊಂದು ಸಿನಿಮಾದಲ್ಲಿ ನಟಿಸಿದರು. ಈಗ ಅವರು ‘ಫ್ಯಾಕ್ಟರಿ’ ಚಿತ್ರದ ಮೂಲಕ ಮತ್ತೆ ಪ್ರೇಕ್ಷಕರ ಎದುರು ಬಂದಿದ್ದಾರೆ. ಸ್ವಂತ ತಮ್ಮನೇ ಮಾಡಿರುವ ಈ ಆರೋಪಗಳಿಗೆ ಆಮಿರ್​ ಖಾನ್​ ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬ ಕೌತುಕ ಈಗ ಸಿನಿಪ್ರಿಯರ ಮನದಲ್ಲಿ ಮೂಡಿದೆ. ಸದ್ಯ ಅವರು ‘ಲಾಲ್​ ಸಿಂಗ್ ಚೆಡ್ಡಾ’ ಸಿನಿಮಾದ ಕೊನೇ ಹಂತದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಸಿನಿಮಾದಲ್ಲಿ ಅವರಿಗೆ ಜೋಡಿಯಾಗಿ ಕರೀನಾ ಕಪೂರ್​ ಖಾನ್​ ನಟಿಸಿದ್ದಾರೆ. ಇದು ಹಾಲಿವುಡ್​ನ ‘ಫಾರೆಸ್ಟ್​ ಗಂಪ್​’ ಚಿತ್ರದ ಹಿಂದಿ ರಿಮೇಕ್​. ಈ ಸಿನಿಮಾದಲ್ಲಿ ಆಮೀರ್​ ಖಾನ್​ಗೆ ಬೇರೆ ಬೇರೆ ಗೆಟಪ್​ಗಳಿವೆ.

ಇದನ್ನೂ ಓದಿ:

ಜಮ್ಮು-ಕಾಶ್ಮೀರದ ಮೇಲೆ ಕಣ್ಣಿಟ್ಟ ಆಮಿರ್​ ಖಾನ್​; ಗವರ್ನರ್​ ಭೇಟಿ ಬಳಿಕ ಹೊರಬಿತ್ತು ಸುದ್ದಿ

‘ಅಜ್ಜನಾಗುವ ವಯಸ್ಸಿನಲ್ಲಿ ಆಮಿರ್​ ಖಾನ್​ಗೆ 3ನೇ ಹೆಂಡತಿ ಚಿಂತೆ’: ಬಿಜೆಪಿ ಸಂಸದ ಸುಧೀರ್​ ಗುಪ್ತಾ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ