AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರರಂಗದಲ್ಲಿ ಸಂಭಾವನೆ ವಿಚಾರದಲ್ಲೇಕೆ ಇಷ್ಟೊಂದು ತಾರತಮ್ಯ? ಆಮಿರ್ ಖಾನ್ ನೀಡಿದ್ದರು ಸ್ಪಷ್ಟನೆ

ಆಮಿರ್ ಖಾನ್ ಅವರು ಸಂದರ್ಶನ ಒಂದಕ್ಕೆ ತೆರಳಿದ್ದರು. ಇದರಲ್ಲಿ ಆಮಿರ್ ಖಾನ್​ಗೆ ನೇರ ಪ್ರಶ್ನೆ ಒಂದು ಎದುರಾಗಿತ್ತು. ‘ಬಾಲಿವುಡ್ ನಟರಿಗೆ ನೀಡಿದಷ್ಟು ಸಂಭಾವನೆ ನಟಿಯರಿಗೆ ಏಕೆ ಕೊಡುವುದಿಲ್ಲ’ ಎಂದು ಕೇಳಲಾಯಿತು. ಇದಕ್ಕೆ ಆಮಿರ್ ಖಾನ್ ಅವರು ಸ್ಪಷ್ಟ ಉತ್ತರ ನೀಡಿದರು.

ಚಿತ್ರರಂಗದಲ್ಲಿ ಸಂಭಾವನೆ ವಿಚಾರದಲ್ಲೇಕೆ ಇಷ್ಟೊಂದು ತಾರತಮ್ಯ? ಆಮಿರ್ ಖಾನ್ ನೀಡಿದ್ದರು ಸ್ಪಷ್ಟನೆ
ಆಮಿರ್ ಖಾನ್-ಕರೀನಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Aug 31, 2024 | 7:47 AM

Share

ಹೀರೋ ಹಾಗೂ ಹೀರೋಯಿನ್​ಗಳ ಮಧ್ಯೆ ಸಂಭಾವನೆ ವಿಚಾರಕ್ಕೆ ತಾರತಮ್ಯ ಇದೆ ಎಂಬ ವಿಚಾರದ ಬಗ್ಗೆ ಮೊದಲಿನಿಂದಲೂ ಚರ್ಚೆ ನಡೆಯುತ್ತಲೇ ಇದೆ. ಹೀರೋಗಳಿಗೆ ಕೊಟ್ಟಷ್ಟು ಸಂಭಾವನೆ ಹೀರೋಯಿನ್​ಗೆ ಕೊಡುವುದಿಲ್ಲ ಎನ್ನುವ ಮಾತು ಮೊದಲಿನಿಂದಲೂ ಇದೆ. ಇದು ಸತ್ಯ ಕೂಡ ಹೌದು. ಆದರೆ, ಹೀಗೇಕೆ ಎನ್ನುವ ಪ್ರಶ್ನೆಗೆ ಆಮಿರ್ ಖಾನ್ ಅವರು ಈ ಮೊದಲು ಉತ್ತರ ನೀಡಿದ್ದರು. ಅವರ ಮಾತನ್ನು ಅನೇಕರು ಒಪ್ಪಿದ್ದರು. ಈಗ ಆ ವಿಡಿಯೋ ಮತ್ತೆ ವೈರಲ್ ಆಗಿದೆ. ಸ

ಆಮಿರ್ ಖಾನ್ ಅವರು ಸಂದರ್ಶನ ಒಂದಕ್ಕೆ ತೆರಳಿದ್ದರು. ಇದರಲ್ಲಿ ಆಮಿರ್ ಖಾನ್​ಗೆ ನೇರ ಪ್ರಶ್ನೆ ಒಂದು ಎದುರಾಗಿತ್ತು. ‘ಬಾಲಿವುಡ್ ನಟರಿಗೆ ನೀಡಿದಷ್ಟು ಸಂಭಾವನೆ ನಟಿಯರಿಗೆ ಏಕೆ ಕೊಡುವುದಿಲ್ಲ’ ಎಂದು ಕೇಳಲಾಯಿತು. ರಾಣಿ ಮುಖರ್ಜಿ ಹಾಗೂ ಕರೀನಾ ಕಪೂರ್ ಕೂಡ ಆಮಿರ್ ಜೊತೆ ಇದ್ದರು. ಅವರು ಈ ವಿಚಾರವನ್ನು ಒಪ್ಪಿ ಬೆಂಬಲ ನೀಡಿದರು. ಇದಕ್ಕೆ ಆಮಿರ್ ಖಾನ್ ಅವರು ಸ್ಪಷ್ಟ ಉತ್ತರ ನೀಡಿದರು.

‘ಹೀರೋಯಿನ್​ಗಳು ಹಾರ್ಡ್​ವರ್ಕ್ ಮಾಡುತ್ತಾರೆ ನಿಜ. ಅದೇ ರೀತಿ ಕ್ಯಾಮೆರಾಮೆನ್​, ಲೈಟ್​ಬಾಯ್ ಎಲ್ಲರೂ ಶ್ರಮ ಹಾಕುತ್ತಾರೆ. ಅವರಿಗೆ ಏಕೆ ಕಡಿಮೆ ಸಂಭಾವನೆ ಕೊಡುತ್ತಾರೆ? ಇಲ್ಲಿ ಪುರುಷ-ಮಹಿಳೆ ಅನ್ನೋದು ಬರೋದಿಲ್ಲ. ಹಾಕಿದಷ್ಟು ಹಣವನ್ನು ಯಾರು ತರುತ್ತಾರೆ ಅನ್ನೋದು ಮಾತ್ರ ಮುಖ್ಯವಾಗುತ್ತದೆ. ನನಗೆ 10 ರೂಪಾಯಿ ನೀಡುತ್ತಾರೆ ಎಂದರೆ ನಾನು ಅದನ್ನು ತರುತ್ತೇನೆ ಎಂಬ ನಂಬಿಕೆ. ರಾಣಿ ಅವರು ನನಗಿಂತ ಹೆಚ್ಚಿನ ಜನರನ್ನು ಥಿಯೇಟರ್​​ಗೆ ಕರೆತರುತ್ತಾರೆ ಎಂದರೆ ನನಗಿಂತ ಅವರಿಗೆ ಹೆಚ್ಚಿನ ಸಂಭಾವನೆ ನೀಡಬೇಕು. ಇಲ್ಲಿ ಪುರುಷ ಮಹಿಳೆ ಅನ್ನೋದು ಬರೋದಿಲ್ಲ’ ಎಂದಿದ್ದರು ಅವರು.

ಆಮಿರ್ ಖಾನ್ ಅವರು ಹೇಳಿದ ಮಾತನ್ನು ಅನೇಕರು ಒಪ್ಪಿಕೊಂಡಿದ್ದಾರೆ. ಮಹಿಳಾ ಪ್ರಧಾನ ಸಿನಿಮಾಗಳು ರಿಲೀಸ್ ಆಗಿ ದೊಡ್ಡ ಮಟ್ಟದ ಗಳಿಕೆ ಮಾಡಿದ ಉದಾಹರಣೆ ತುಂಬಾನೇ ಕಡಿಮೆ. ಆದರೆ, ಸ್ಟಾರ್ ಹೀರೋಗಳ ಸಿನಿಮಾಗಳಾದರೆ ಹೆಚ್ಚು ಗಳಿಕೆ ಮಾಡುತ್ತವೆ. ಹೀಗಾಗಿ, ಹೀರೋಗಿಂತ ಹೀರೋಯಿನ್​ಗೆ ಹೆಚ್ಚಿನ ಹಣ ನೀಡುತ್ತಾರೆ ಎನ್ನಲಾಗಿದೆ.

ಇದನ್ನೂ ಓದಿ: ‘ನನಗೆ ಪಾರ್ಟ್ನರ್ ಬೇಕು, ಒಂಟಿ ಬದುಕು ನನ್ನಿಂದ ಅಸಾಧ್ಯ’; ಆಮಿರ್ ಖಾನ್

ಆಮಿರ್ ಖಾನ್ ಅವರು ‘ಲಾಲ್ ಸಿಂಗ್ ಛಡ್ಡಾ’ ಬಳಿಕ ಒಂದು ಬ್ರೇಕ್ ಪಡೆದಿದ್ದರು. ಈಗ ಅವರು ಮತ್ತೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ‘ಸಿತಾರೆ ಜಮೀನ್​ ಪರ್’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಈ ವರ್ಷ ಡಿಸೆಂಬರ್​ನಲ್ಲಿ ಸಿನಿಮಾ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ