AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿತಾರೆ ಜಮೀನ್ ಪರ್’ ಟ್ರೇಲರ್: ಈ ಬಾರಿಯಾದ್ರೂ ಗೆಲ್ತಾರಾ ಆಮಿರ್ ಖಾನ್?

‘ಸಿತಾರೆ ಜಮೀನ್ ಪರ್’ ಸಿನಿಮಾದಲ್ಲಿ ಆಮಿರ್ ಖಾನ್ ಮತ್ತು ಜೆನಿಲಿಯಾ ದೇಶಮುಖ್ ನಟಿಸಿದ್ದಾರೆ. ಜೊತೆಗೆ ಅನೇಕ ಹೊಸ ಕಲಾವಿದರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಇಂದು (ಮೇ 13) ‘ಸಿತಾರೆ ಜಮೀನ್ ಪರ್’ ಚಿತ್ರದ ಟ್ರೇಲರ್ ರಿಲೀಸ್ ಮಾಡಲಾಗಿದೆ. ಟ್ರೇಲರ್ ಮೂಲಕ ಸಿನಿಮಾದ ಕಥೆ ಏನು ಎಂಬ ಸುಳಿವು ಸಿಕ್ಕಿದೆ.

‘ಸಿತಾರೆ ಜಮೀನ್ ಪರ್’ ಟ್ರೇಲರ್: ಈ ಬಾರಿಯಾದ್ರೂ ಗೆಲ್ತಾರಾ ಆಮಿರ್ ಖಾನ್?
Sitaare Zameen Par
ಮದನ್​ ಕುಮಾರ್​
|

Updated on: May 13, 2025 | 9:25 PM

Share

ಬಹುನಿರೀಕ್ಷಿತ ‘ಸಿತಾರೆ ಜಮೀನ್ ಪರ್’ (Sitaare Zameen Par) ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದೆ. ಆಮಿರ್ ಖಾನ್ ಅವರು ಈ ಸಿನಿಮಾದಲ್ಲಿ ಬಾಸ್ಕೆಟ್ ಬಾಲ್ ಕೋಚ್ ಪಾತ್ರ ಮಾಡಿದ್ದಾರೆ. ಅಂಗವಿಕಲರ ತಂಡಕ್ಕೆ ಬಾಸ್ಕೆಟ್ ಬಾಲ್ ಕಲಿಸಿಕೊಡುವ ಕಹಾನಿ ಈ ಸಿನಿಮಾದಲ್ಲಿ ಇದೆ. ಟ್ರೇಲರ್ ಮೂಲಕ ಕಥೆಯ ಎಳೆ ಏನೆಂಬುದು ಗೊತ್ತಾಗಿದೆ. ‘ಸಿತಾರೆ ಜಮೀನ್ ಪರ್’ ಟ್ರೇಲರ್ (Sitaare Zameen Par Trailer) ನೋಡಿದ ಎಲ್ಲರೂ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಈ ಸಿನಿಮಾದ ಮೂಲಕವಾದರೂ ಆಮಿರ್ ಖಾನ್ (Aamir Khan) ಅವರು ಗೆಲುವಿನ ಟ್ರ್ಯಾಕ್​ಗೆ ಮರಳಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.

ಒಂದು ಕಾಲದಲ್ಲಿ ಆಮಿರ್ ಖಾನ್ ಅವರು ‘ಘಜಿನಿ’, ‘3 ಈಡಿಯಟ್ಸ್’, ‘ಪಿಕೆ’, ‘ದಂಗಲ್’ ಮುಂತಾದ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದರು. ಆದರೆ ಅವರಿಗೆ ಇತ್ತೀಚಿನ ವರ್ಷಗಳಲ್ಲಿ ನಿರೀಕ್ಷಿತ ಯಶಸ್ಸು ಸಿಕ್ಕಿರಲಿಲ್ಲ. ‘ಥಗ್ಸ್ ಆಫ್ ಹಿಂದುಸ್ತಾನ್’, ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾಗಳು ಹೀನಾಯವಾಗಿ ಸೋತವು. ಆ ಬಳಿಕ ಅವರು ದೀರ್ಘ ಬ್ರೇಕ್ ಪಡೆದುಕೊಂಡಿದ್ದರು.

ಆಮಿರ್ ಖಾನ್ ಅವರು ಬಹಳ ಕಾಳಜಿಯಿಂದ ಆಯ್ಕೆ ಮಾಡಿಕೊಂಡ ಸಿನಿಮಾ ‘ಸಿತಾರೆ ಜಮೀನ್ ಪರ್’. ಈ ಸಿನಿಮಾದ ಮೇಲೆ ಅವರಿಗೆ ತುಂಬಾ ಭರವಸೆ ಇದೆ. 2007ರಲ್ಲಿ ಬಂದ ‘ತಾರೆ ಜಮೀನ್ ಪರ್’ ಚಿತ್ರದಲ್ಲಿ ವಿಶೇಷ ಮಕ್ಕಳ ಬಗ್ಗೆ ಹೇಳಲಾಗಿತ್ತು. ಈಗ ಅದೇ ಥೀಮ್​ನಲ್ಲಿ ‘ಸಿತಾರೆ ಜಮೀನ್ ಪರ್’ ಸಿನಿಮಾ ಮಾಡಲಾಗಿದೆ. ಟ್ರೇಲರ್​ಗೆ ರಿತೇಶ್ ದೇಶಮುಖ್ ಮುಂತಾದ ಸೆಲೆಬ್ರಿಟಿಗಳು ಕೂಡ ಮೆಚ್ಚುಗೆ ಸೂಚಿಸಿದ್ದಾರೆ.

‘ಸಿತಾರೆ ಜಮೀನ್ ಪರ್’ ಚಿತ್ರದಲ್ಲಿ ಆಮಿರ್ ಖಾನ್ ಅವರಿಗೆ ಜೆನಿಲಿಯಾ ದೇಶಮುಖ್ ಜೋಡಿ ಆಗಿದ್ದಾರೆ. ಅಲ್ಲದೇ 10ಕ್ಕೂ ಅಧಿಕ ಹೊಸ ಕಲಾವಿದರಿಗೆ ಪ್ರಮುಖ ಪಾತ್ರದಲ್ಲಿ ನಟಿಸುವ ಅವಕಾಶ ನೀಡಲಾಗಿದೆ. ಕಾಮಿಡಿ ಮತ್ತು ಎಮೋಷನಲ್ ಶೈಲಿಯಲ್ಲಿ ಸಿನಿಮಾ ಮೂಡಿಬಂದಿದೆ ಎಂಬುದು ಟ್ರೇಲರ್​ ನೋಡಿದರೆ ತಿಳಿಯುತ್ತದೆ. ಜೂನ್ 20ರಂದು ‘ಸಿತಾರೆ ಜಮೀನ್ ಪರ್’ ಬಿಡುಗಡೆ ಆಗಲಿದೆ.

ಇದನ್ನೂ ಓದಿ: ಶಾರುಖ್ ಖಾನ್ ರೀತಿಯೇ ಮನೆ ಬಿಡಲು ನಿರ್ಧರಿಸಿದ ಆಮಿರ್ ಖಾನ್; ಕಾರಣ ಏನು?

ಇತ್ತೀಚೆಗೆ ಬಾಲಿವುಡ್​ನ ಹಲವು ಸಿನಿಮಾಗಳು ಸೋತಿವೆ. ಅದಕ್ಕೆ ಕಾರಣ ಏನಿರಬಹುದು ಎಂಬುದನ್ನು ಆಮಿರ್ ಖಾನ್ ಆಲೋಚಿಸಿದ್ದಾರೆ. ಎಲ್ಲ ರೀತಿಯ ಲೆಕ್ಕಾಚಾರ ಹಾಕಿಕೊಂಡು ಅವರು ‘ಸಿತಾರೆ ಜಮೀನ್ ಪರ್’ ಸಿನಿಮಾ ಮಾಡಿದ್ದಾರೆ. ಹಾಗಾಗಿ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ