AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರಿಗೂ ಹೇಳದೆ ಚಿತ್ರರಂಗವನ್ನೇ ತೊರೆದು ಬಿಟ್ಟಿದ್ದರು ಆಮಿರ್ ಖಾನ್

Aamr Khan: ಭಾರತೀಯ ಚಿತ್ರರಂಗಕ್ಕೆ ಹಲವು ಅತ್ಯುತ್ತಮ ಸಿನಮಾಗಳನ್ನು ನೀಡಿರುವ ನಟ, ನಿರ್ಮಾಪಕ ಆಮಿರ್ ಖಾನ್ ಸಿನಿಮಾಗಳಿಂದ ನಿವೃತ್ತರಾಗುವ ಯೋಚನೆ ಮಾಡಿದ್ದರಂತೆ. ಆದರೆ ಆ ನಿರ್ಣಯ ಬದಲಾಗಿದ್ದು ಹೇಗೆ?

ಯಾರಿಗೂ ಹೇಳದೆ ಚಿತ್ರರಂಗವನ್ನೇ ತೊರೆದು ಬಿಟ್ಟಿದ್ದರು ಆಮಿರ್ ಖಾನ್
ಆಮಿರ್ ಖಾನ್
ಮಂಜುನಾಥ ಸಿ.
|

Updated on: Aug 03, 2024 | 5:15 PM

Share

ಭಾರತದ ಪ್ರತಿಭಾವಂತ ನಟರ ಸಾಲಿನಲ್ಲಿ ಆಮಿರ್ ಖಾನ್ ಹೆಸರು ಟಾಪ್ 10 ಅಲ್ಲಿ ಇದ್ದೇ ಇರುತ್ತದೆ. ಬಾಲಿವುಡ್​ ಪ್ರಭಾವಿ ಮೂರು ಖಾನ್​ಗಳಲ್ಲಿ ಒಬ್ಬರಾಗಿರುವ ಆಮಿರ್ ಖಾನ್​ಗೆ ಸಲ್ಮಾನ್, ಶಾರುಖ್ ರೀತಿಯಲ್ಲಿಯೇ ದೊಡ್ಡ ಅಭಿಮಾನಿ ಬಳಗವಿದೆ. ಸಲ್ಮಾನ್ ಹಾಗೂ ಶಾರುಖ್ ಖಾನ್​ಗೆ ಹೋಲಿಸಿದರೆ ಭಿನ್ನ ಸಿನಿಮಾಗಳಲ್ಲಿ ನಟಿಸುತ್ತಾ ಬಂದಿರುವ ಆಮಿರ್ ಖಾನ್, ಕಮರ್ಶಿಯಲ್, ಜನಪ್ರಿಯ ಮಾದರಿಯ ಹಿಂದೆ ಹೋಗದೆ ಜನಕ್ಕೆ, ಸಮಾಜಕ್ಕೆ ಬೇಕಾದ ಸಿನಿಮಾಗಳಲ್ಲಿ ನಟಿಸುತ್ತಾ ಬರುತ್ತಿದ್ದಾರೆ. ಆದರೆ ಆಮಿರ್ ಖಾನ್, ಸಿನಿಮಾದಿಂದಲೇ ನಿವೃತ್ತಿ ತೆಗೆದುಕೊಂಡು ಬಿಟ್ಟಿದ್ದರಂತೆ. ಈ ಬಗ್ಗೆ ಅವರೇ ಹೇಳಿಕೊಂಡಿದ್ದಾರೆ.

ಆಮಿರ್ ಖಾನ್ ನಟನೆಯ ‘ಲಾಲ್ ಸಿಂಗ್ ಛಡ್ಡ’ ಸಿನಿಮಾ 2022 ರಲ್ಲಿ ಬಿಡುಗಡೆ ಆಗಿತ್ತು. ‘ಫಾರೆಸ್ಟ್ ಗಂಫ್’ ಸಿನಿಮಾದ ರೀಮೇಕ್ ಆದ ಈ ಸಿನಿಮಾ ಅಟ್ಟರ್ ಫ್ಲಾಪ್ ಆಗಿತ್ತು. ಆದರೆ ಈ ಸಿನಿಮಾದ ಬಿಡುಗಡೆಗೆ ಮುಂಚೆಯೇ ಆಮಿರ್ ಖಾನ್, ಸಿನಿಮಾ ರಂಗದಿಂದ ವಿದಾಯ ಹೇಳುವ ನಿರ್ಣಯ ಮಾಡಿಬಿಟ್ಟಿದ್ದರಂತೆ. ಆದರೆ ಅದನ್ನು ಘೋಷಣೆ ಮಾಡುವುದು ಬೇಡ ಎಂದುಕೊಂಡಿದ್ದರಂತೆ. ಘೋಷಣೆ ಮಾಡಿದರೆ ಸಿನಿಮಾದ ಪ್ರಚಾರಕ್ಕಾಗಿ ಮಾಡುತ್ತಿರುವ ಗಿಮಿಕ್ ಎಂದುಕೊಳ್ಳುತ್ತಾರೆ, ಹೇಗೋ ನನ್ನ ಸಿನಿಮಾಗಳು ಮೂರು ವರ್ಷ, ನಾಲ್ಕು ವರ್ಷಕ್ಕೆ ಒಮ್ಮೆ ಬರುತ್ತವೆ ಹಾಗಾಗಿ ಜನರಿಗೆ ಗೊತ್ತು ಸಹ ಆಗುವುದಿಲ್ಲ ಮೌನವಾಗಿಯೇ ನಿವೃತ್ತಿ ಪಡೆದುಕೊಳ್ಳೋಣ ಎಂದುಕೊಂಡಿದ್ದರಂತೆ.

ಇದನ್ನೂ ಓದಿ:22 ವರ್ಷದ ಹಿಂದೆ ಡಿವೋರ್ಸ್​ ನೀಡಿದ ಮೊದಲ ಪತ್ನಿ ಜತೆ ಈಗ ಆಮಿರ್ ಖಾನ್ ಪಾರ್ಟಿ

ಸಿನಿಮಾದಲ್ಲಿ ನಟಿಸುವುದು ಹಾಗೂ ನಿರ್ಮಿಸುವುದು ಎರಡರಿಂದಲೂ ನಿವೃತ್ತರಾಗುವ ಬಗ್ಗೆ ಆಮಿರ್ ಖಾನ್ ನಿಶ್ಚಯ ಮಾಡಿದ್ದರಂತೆ. ಆಮಿರ್ ಖಾನ್ ತನ್ನ ಪುತ್ರನಿಗೆ ಆಮಿರ್ ಖಾನ್ ಪ್ರೊಡಕ್ಷನ್ ನೋಡಿಕೋ ಎಂದು ಜವಾಬ್ದಾರಿಯನ್ನೂ ವಹಿಸಿಬಿಟ್ಟಿದ್ದರಂತೆ. ಈ ವಿಷಯವನ್ನು ಕುಟುಂಬದವರ ಬಳಿ ಮಾತ್ರವೇ ಹೇಳಿಕೊಂಡಿದ್ದರಂತೆ. ಆದರೆ ಮಕ್ಕಳಿಬ್ಬರೂ ‘ನೀವು ಮಾಡುತ್ತಿರುವುದು ತಪ್ಪು, ನೀವು ಅತಿಯಾಗಿ ಯೋಚನೆ ಮಾಡುತ್ತಿದ್ದೀರ ಎಂದು ಬೈದರಂತೆ. ಇನ್ನು ಮಾಜಿ ಪತ್ನಿ, ಆತ್ಮೀಯ ಗೆಳತಿ ಕಿರಣ್ ರಾವ್, ‘ನಿಮ್ಮನ್ನು ನೋಡಿದಾಗಲೆಲ್ಲ ನಿಮ್ಮ ಸಿನಿಮಾಗಳು ಕಣ್ಣ ಮುಂದೆ ಬರುತ್ತವೆ, ಅಲ್ಲದೆ ನಿಮ್ಮೊಳಗೆ ಇನ್ನೂ ಸಾಕಷ್ಟು ಸಿನಿಮಾ ಉಳಿದುಕೊಂಡಿದೆ ದಯವಿಟ್ಟು ನಿವೃತ್ತಿ ಬೇಡ’ ಎಂದು ಹೇಳಿ ಕಣ್ಣೀರು ಹಾಕಿದರಂತೆ.

ಕೊನೆಗೆ ಆಮಿರ್ ಖಾನ್ ಕುಟುಂಬದವರ ಆಪ್ತ ಮಾತುಗಳನ್ನು ಗಮನಕ್ಕೆ ತೆಗೆದುಕೊಂಡು ನಿರ್ಣಯವನ್ನು ಬದಲು ಮಾಡಿದರಂತೆ. ‘ಲಾಲ್ ಸಿಂಗ್ ಛಡ್ಡಾ’ ಸಿನಿಮಾದ ಹೀನಾಯ ಸೋಲಿನ ಬಳಿಕ ಆಮಿರ್ ಖಾನ್ ತಮ್ಮ ನಿರ್ಮಾಣ ಸಂಸ್ಥೆಯ ಮೂಲಕ ‘ಲಾಪತಾ ಲೇಡೀಸ್’ ಸಿನಿಮಾ ನಿರ್ಮಾಣ ಮಾಡಿದರು. ಸಿನಿಮಾವನ್ನು ಮಾಜಿ ಪತ್ನಿ ಕಿರಣ್ ರಾವ್ ನಿರ್ದೇಶನ ಮಾಡಿದರು. ಸಿನಿಮಾಕ್ಕೆ ಭರ್ಜರಿ ಪ್ರತಿಕ್ರಿಯೆ ಜನರಿಂದ ದೊರಕಿತು. ಸದ್ಯಕ್ಕೆ ‘ಸಿತಾರೆ ಜಮೀನ್ ಪರ್’ ಹೆಸರಿನ ಸಿನಿಮಾವನ್ನು ನಿರ್ದೇಶನ ಮಾಡುವ ಜೊತೆಗೆ ನಟನೆ ಸಹ ಮಾಡುತ್ತಿದ್ದಾರೆ. ಈ ಸಿನಿಮಾದ ನಿರ್ಮಾಣವೂ ಅವರದ್ದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ