AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಾಚಲ ಪ್ರದೇಶ ಪ್ರಕೃತಿ ವಿಕೋಪ: ಸಹಾಯ ಹಸ್ತ ಚಾಚಿದ ನಟ ಆಮಿರ್ ಖಾನ್

Aamir Khan: ನಟ ಆಮಿರ್ ಖಾನ್ ಸಿನಿಮಾಗಳ ಜೊತೆಗೆ ತಮ್ಮ ಸಾಮಾಜಿಕ ಕಾರ್ಯಗಳಿಂದಲೂ ಜನಪ್ರಿಯರು. ನೈಸರ್ಗಿಕ ವಿಕೋಪಕ್ಕೆ ತುತ್ತಾಗಿರುವ ಹಿಮಾಚಲ ಪ್ರದೇಶಕ್ಕೆ ನೆರವಿನ ಹಸ್ತವನ್ನು ಆಮಿರ್ ಚಾಚಿದ್ದಾರೆ.

ಹಿಮಾಚಲ ಪ್ರದೇಶ ಪ್ರಕೃತಿ ವಿಕೋಪ: ಸಹಾಯ ಹಸ್ತ ಚಾಚಿದ ನಟ ಆಮಿರ್ ಖಾನ್
ಆಮಿರ್ ಖಾನ್
ಮಂಜುನಾಥ ಸಿ.
|

Updated on: Sep 24, 2023 | 11:53 AM

Share

ನಟ ಆಮಿರ್ ಖಾನ್ (Aamir Khan) ಸದ್ಯಕ್ಕೆ ನಟನೆಯಿಂದ ಬ್ರೇಕ್ ಪಡೆದಿದ್ದಾರೆ. ಆಮಿರ್ ಖಾನ್ ನಟನೆಯ ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾ ಫ್ಲಾಪ್ ಆದ ಬಳಿಕ ಬೇರೆ ಯಾವುದೇ ಸಿನಿಮಾಗಳನ್ನು ಆಮಿರ್ ಖಾನ್ ಒಪ್ಪಿಕೊಂಡಿಲ್ಲ. ಸದ್ಯಕ್ಕೆ ಖಾಸಗಿ ಜೀವನದ ಬಗ್ಗೆ ಹೆಚ್ಚು ಗಮನವಹಿಸಿದ್ದಾರೆ. ಮಗಳ ಮದುವೆಗೆ ತಯಾರಿಯನ್ನೂ ಆರಂಭಿಸಿದ್ದಾರೆ. ಜೊತೆಗೆ ಕೆಲವು ಸಾಮಾಜಿಕ ಕಾರ್ಯಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ನಟ ಆಮಿರ್ ಖಾನ್ ಇದೀಗ ಹಿಮಾಚಲ ಪ್ರದೇಶದ ಜನರಿಗೆ ಸಹಾಯ ಹಸ್ತ ಚಾಚಿದ್ದಾರೆ. ಸತತ ಮಳೆ, ಪ್ರವಾಹ ಪರಿಸ್ಥಿತಿ, ಭೂಕುಸಿತಗಳಿಂದ ಹಿಮಾಚಲ ಪ್ರದೇಶ ತತ್ತರಿಸಿದ್ದು, ಕೋಟ್ಯಂತರ ಮೌಲ್ಯ ಆಸ್ತಿ, ಹಾಗೂ ಜೀವ ಹಾನಿಯೂ ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದೆ. ಹಿಮಾಚಲ ಪ್ರದೇಶದಲ್ಲಿ ನೈಸರ್ಗಿಕ ವಿಕೋಪಕ್ಕೆ ಈಡಾಗಿ ಸಮಸ್ಯೆಗೆ ಸಿಲುಕಿರುವ ಜನರ ಕಲ್ಯಾಣಕ್ಕಾಗಿ 25 ಲಕ್ಷ ರೂಪಾಯಿ ಹಣವನ್ನು ಆಮಿರ್ ಖಾನ್ ನೀಡಿದ್ದಾರೆ.

ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಪರಿಹಾರ ನಿಧಿಗೆ ನಟ ಆಮಿರ್ ಖಾನ್ 25 ಲಕ್ಷ ರೂಪಾಹಿ ಹಣವನ್ನು ದೇಣಿಗೆ ನೀಡಿದ್ದಾರೆ. ತನ್ನ ರಾಜ್ಯದ ಜನರ ಸಹಾಯಕ್ಕೆ ದೇಣಿಗೆ ನೀಡಿರುವ ಆಮಿರ್ ಖಾನ್​ರ ವಿಶಾಲ ಹೃದಯವನ್ನು ಹಿಮಾಚಲ ಪ್ರದೇಶ ಸಿಎಂ ಠಾಕೂರ್ ಸುಖವಿಂದರ್ ಸಿಂಗ್ ಸುಖು ಕೊಂಡಾಡಿದ್ದಾರೆ. ನೈಸರ್ಗಿಕ ವಿಕೋಪಕ್ಕೆ ತುತ್ತಾಗಿರುವ ರಾಜ್ಯಕ್ಕೆ ನೆರವಿನ ಹಸ್ತ ಚಾಚಿರುವ ಆಮಿರ್ ಖಾನ್​ಗೆ ಧನ್ಯವಾದ. ಸಿಎಂ ಪರಿಹಾರ ನಿಧಿಯ ಹಣವನ್ನು ವಿವೇಚನಾಯುಕ್ತವಾಗಿ ಬಳಸಿಕೊಳ್ಳಲಾಗುತ್ತದೆ, ಅದು ತೀರಾ ಅಗತ್ಯವಿರುವವರಿಗೆ ತಲುಪುತ್ತದೆ ಎಂದು ಖಚಿತಪಡಿಸಿಕೊಳ್ಳುತ್ತೇವೆ ಎಂದಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸತತ ಮಳೆಯಾಗುತ್ತಿದ್ದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಹಿಮಾಚಲ ಪ್ರದೇಶದ ರಾಜಧಾನಿ ಸೇರಿದಂತೆ ಹಲವು ನಗರಗಳಲ್ಲಿ, ಪಟ್ಟಣಗಳಲ್ಲಿ ಭೂಕುಸಿತ ಉಂಟಾಗಿದ್ದು ಕೋಟ್ಯಂತರ ಮೌಲ್ಯದ ಆಸ್ತಿ ಹಾನಿಯಾಗಿದೆ. ಭೂಕುಸಿತದಿಂದಾಗಿ ಹಲವರು ಜೀವ ಸಹ ಕಳೆದುಕೊಂಡಿದ್ದಾರೆ. ರಾಜ್ಯ ಸರ್ಕಾರವು ಪರಿಹಾರ ಕಾರ್ಯಗಳನ್ನು ತ್ವರಿತವಾಗಿ ಮಾಡುತ್ತಿದೆ. ವಿಷಮ ಸ್ಥಿತಿಯಲ್ಲಿರುವ ರಾಜ್ಯಕ್ಕೆ ಆಮಿರ್ ಖಾನ್ ಸಣ್ಣ ಸಹಾಯ ಮಾಡಿದ್ದಾರೆ.

ಇದನ್ನೂ ಓದಿ:ಲಾಲ್ ಸಿಂಗ್ ಚಡ್ಡಾ ನೋಡಿ ಓವರ್ ಆಕ್ಟಿಂಗ್ ಎಂದಿದ್ದ ರಾಜಮೌಳಿ, ಆಮಿರ್ ಖಾನ್ ಪ್ರತಿಕ್ರಿಯೆ ಏನಿತ್ತು?

ಸಿನಿಮಾ ವಿಷಯಕ್ಕೆ ಮರಳುವುದಾದರೆ ಆಮಿರ್ ಖಾನ್​, ಸದ್ಯಕ್ಕೆ ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ. ಅವರ ನಿರ್ಮಾಣ ಸಂಸ್ಥೆ ಕಡೆಯಿಂದ ಮಾಜಿ ಪತ್ನಿ ಕಿರಣ್ ರಾವ್, ‘ಲಾಪತಾ ಲೇಡೀಸ್’ ಹೆಸರಿನ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಆ ಸಿನಿಮಾ ಶೀಘ್ರವೇ ಬಿಡುಗಡೆ ಆಗಲಿದೆ. ಮಗಳು ಇರಾಳ ಹೊಸ ಸಿನಿಮಾಕ್ಕೂ ಆಮಿರ್ ಬಂಡವಾಳ ಹೂಡಿದ್ದಾರೆ ಎನ್ನಲಾಗುತ್ತಿದೆ.

ಇನ್ನು ಆಮಿರ್ ಖಾನ್ ಪುತ್ರಿ ಇರಾ ಇತ್ತೀಚೆಗಷ್ಟೆ ತಮ್ಮ ಬಾಯ್​ಫ್ರೆಂಡ್ ನೂಪುರ್ ಶಿಖ್ರೆ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಇಬ್ಬರೂ ಕಳೆದ ಕೆಲವು ವರ್ಷಗಳಿಂದಲೂ ಪ್ರೀತಿಯಲ್ಲಿದ್ದಾರೆ. ನೂಪುರ್ ದೈಹಿಕ ತರಬೇತಿದಾರರಾಗಿದ್ದಾರೆ. ಇಬ್ಬರೂ ಶೀಘ್ರವೇ ವಿವಾಹವಾಗಲಿದ್ದು, ವಿವಾಹದ ತಯಾರಿಯಲ್ಲಿ ಆಮಿರ್ ಖಾನ್ ಸಹ ತೊಡಗಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!