ನೆರೆ ಪೀಡಿತ ಅಸ್ಸಾಂಗೆ 25 ಲಕ್ಷ ರೂಪಾಯಿ ನೀಡಿದ ಆಮಿರ್ ಖಾನ್; ಧನ್ಯವಾದ ಹೇಳಿದ ಸಿಎಂ

ರಾಜ್ಯ ಸರ್ಕಾರ ಭರದಿಂದ ಕಾರ್ಯಾಚರಣೆ ನಡೆಸುತ್ತಿದೆ. ಈ ಕಾರ್ಯಕ್ಕೆ ಅನೇಕರು ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಆಮಿರ್ ಖಾನ್ ಕೂಡ ಸಹಾಯ ಹಸ್ತ ಚಾಚಿದ್ದಾರೆ.

ನೆರೆ ಪೀಡಿತ ಅಸ್ಸಾಂಗೆ 25 ಲಕ್ಷ ರೂಪಾಯಿ ನೀಡಿದ ಆಮಿರ್ ಖಾನ್; ಧನ್ಯವಾದ ಹೇಳಿದ ಸಿಎಂ
ಆಮಿರ್ ಖಾನ್
Follow us
| Updated By: ರಾಜೇಶ್ ದುಗ್ಗುಮನೆ

Updated on: Jun 28, 2022 | 10:21 PM

ನಟ ಆಮಿರ್ ಖಾನ್ (Aamir Khan) ನಟನೆಯ ಜತೆಗೆ ಸಾಮಾಜಿಕ ಕೆಲಸಗಳ ಮೂಲಕವೂ ಆಗಾಗ ಸುದ್ದಿ ಆಗುತ್ತಿರುತ್ತಾರೆ. ಈಗ ನೆರೆ ಪೀಡಿತ ಅಸ್ಸಾಂ ರಾಜ್ಯಕ್ಕೆ ಧನಸಹಾಯ ಮಾಡಿದ್ದಾರೆ. ತಮ್ಮ ದುಡಿಮೆಯ ಹಣದಿಂದ 25 ಲಕ್ಷ ರೂಪಾಯಿಯನ್ನು ಅವರು ಅಲ್ಲಿನ ರಾಜ್ಯ ಸರ್ಕಾರಕ್ಕೆ ನೀಡಿದ್ದಾರೆ. ಅವರ ಕಾರ್ಯಕ್ಕೆ ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ (Himanta Biswa Sarma) ಅವರು ಧನ್ಯವಾದ ಅರ್ಪಿಸಿದ್ದಾರೆ. ಆಮಿರ್ ಖಾನ್ ಅವರ ಕಾರ್ಯಕ್ಕೆ ಎಲ್ಲ ಕಡೆಗಳಿಂದ ಶ್ಲಾಘನೆ ವ್ಯಕ್ತವಾಗುತ್ತಿದೆ.

ಅಸ್ಸಾಂನಲ್ಲಿ ಭೀಕರ ಮಳೆಯಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣ ಆಗಿದೆ. ಈಗ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಆದರೂ ಪ್ರವಾಹದ ನೀರಿನಿಂದ ಮುಳುಗಡೆಯಾದ ಊರುಗಳಲ್ಲಿ ಸಿಲುಕಿಕೊಂಡಿರುವ ಜನರು ಇನ್ನೂ ಪರದಾಡುತ್ತಿದ್ದಾರೆ. ಈ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ 127 ದಾಟಿದೆ. ಅಸ್ಸಾಂ ರಾಜ್ಯಾದ್ಯಂತ 74,706 ಹೆಕ್ಟೇರ್‌ನಲ್ಲಿ ಪ್ರವಾಹದ ನೀರು ಹರಿದು ಬೆಳೆ ಹಾನಿಯಾಗಿದೆ. ರಾಜ್ಯದಾದ್ಯಂತ 564 ಪರಿಹಾರ ಶಿಬಿರಗಳಲ್ಲಿ 2,17,413 ಮಂದಿ ವಾಸ್ತವ್ಯ ಹೂಡಿದ್ದಾರೆ. ರಾಜ್ಯ ಸರ್ಕಾರ ಭರದಿಂದ ಕಾರ್ಯಾಚರಣೆ ನಡೆಸುತ್ತಿದೆ. ಈ ಕಾರ್ಯಕ್ಕೆ ಅನೇಕರು ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಆಮಿರ್ ಖಾನ್ ಕೂಡ ಸಹಾಯ ಹಸ್ತ ಚಾಚಿದ್ದಾರೆ.

ಇದನ್ನೂ ಓದಿ
Image
Aamir Khan: ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾ ಬಹಿಷ್ಕಾರಕ್ಕೆ ನೆಟ್ಟಿಗರ ಒತ್ತಾಯ; ಆಮಿರ್​ ಖಾನ್​ ಮಾಡಿದ ತಪ್ಪೇನು?
Image
ಆಮಿರ್​ ಖಾನ್​ರನ್ನು ‘ಟೈಟಾನಿಕ್’​ ನಿರ್ದೇಶಕನಿಗೆ ಹೋಲಿಸಿದ ಹಾಲಿವುಡ್​ ದಿಗ್ಗಜ; ಇಲ್ಲಿದೆ ಅಚ್ಚರಿ ವಿಚಾರ
Image
ಫ್ಯಾಮಿಲಿ ಜತೆ ಆಮಿರ್​ ಖಾನ್​ ಪುತ್ರಿ ಇರಾ ಖಾನ್​ ಬರ್ತ್​ಡೇ ಆಚರಣೆ; ಫೋಟೋ ನೋಡಿ ಫ್ಯಾನ್ಸ್​ ಹೇಳಿದ್ದೇನು?
Image
‘ಲಾಲ್​ ಸಿಂಗ್​ ಚಡ್ಡಾ’ ಚಿತ್ರಕ್ಕೆ ಆಮಿರ್​, ಕರೀನಾ, ನಾಗ ಚೈತನ್ಯ ಪಡೆದ ಸಂಭಾವನೆ ಎಷ್ಟು ಕೋಟಿ?

ಈ ಬಗ್ಗೆ ಬರೆದುಕೊಂಡಿರುವ ಹಿಮಂತ ಬಿಸ್ವ ಶರ್ಮಾ, ‘ಪ್ರವಾಹಕ್ಕೆ ತುತ್ತಾದ ನಮ್ಮ ರಾಜ್ಯದವರ ನೆರವಿಗೆ ಬಾಲಿವುಡ್ ನಟ ಆಮಿರ್ ಖಾನ್ ಆಗಮಿಸಿದ್ದಾರೆ. ಅವರು ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಲಕ್ಷ ರೂಪಾಯು ನೀಡಿದ್ದಾರೆ. ಅವರಿಗೆ ನನ್ನ ಕೃತಜ್ಞತೆ’ ಎಂದು ಟ್ವೀಟ್ ಮಾಡಿದ್ದಾರೆ.  ಆಮಿರ್ ಖಾನ್ ಮಾತ್ರವಲ್ಲದೆ, ಅರ್ಜುನ್ ಕಪೂರ್, ಗಾಯಕ ಸೋನು ನಿಗಮ್ ಹಾಗೂ ನಿರ್ಮಾಪಕ ಭೂಷಣ್ ಕುಮಾರ್ ಮೊದಲಾದವರು ತಮ್ಮ ಕೈಲಾದಷ್ಟು ಹಣವನ್ನು ನೀಡಿದ್ದಾರೆ.

ಆಮಿರ್ ಖಾನ್ ಅವರ ನಟನೆಯ ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಹಾಲಿವುಡ್​ನ ‘ಫಾರೆಸ್ಟ್ ಗಂಪ್’ ಚಿತ್ರದ ರಿಮೇಕ್ ಇದಾಗಿದೆ. ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾ ಆಗಸ್ಟ್​ 11ರಂದು ತೆರೆಗೆ ಬರಲಿದೆ. ಆಮಿರ್​ಗೆ ಜತೆಯಾಗಿ ಕರೀನಾ ಕಪೂರ್ ನಟಿಸಿದ್ದಾರೆ.

ಇದನ್ನೂ ಓದಿ: ಆಮಿರ್ ಖಾನ್ ಮಗಳಿ​ಗೆ ನಿರಂತರವಾಗಿ ಕಾಡುತ್ತಿದೆ ಈ ಸಮಸ್ಯೆ; ಹೊರ ಬರಲು ದಾರಿ ಕಾಣದೆ ಒದ್ದಾಡುತ್ತಿದ್ದಾರೆ ಇರಾ

Assam Flood: ಅಸ್ಸಾಂನಲ್ಲಿ ಪ್ರವಾಹದ ಮಟ್ಟ ಕೊಂಚ ಇಳಿಕೆ; 127 ಜನ ಸಾವು, ಸಂಕಷ್ಟದಲ್ಲಿ 22 ಲಕ್ಷ ಜನ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ