
ಬಾಲಿವುಡ್ನ ಖ್ಯಾತ ನಟ ಆಮಿರ್ ಖಾನ್ (Aamir Khan) ಜುಲೈ 5ರಂದು ಗೌರಿ ಸ್ಪ್ರ್ಯಾಟ್ (Gauri Spratt) ಅವರೊಂದಿಗೆ ಮೂರನೇ ವಿವಾಹವಾದ ಬೆನ್ನಲ್ಲೇ ಅವರ ಸುತ್ತಲಿನ ವಿವಾದಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಆರಂಭದಲ್ಲಿ ಬಜರಂಗದಳದ ಪ್ರತಿಭಟನೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿದ್ದ ತೀವ್ರ ಆಕ್ರೋಶಗಳು ಈಗ ಕೊಲೆ ಬೆದರಿಕೆಯ ಹಂತಕ್ಕೆ ಬಂದು ತಲುಪಿವೆ. ಅಯೋಧ್ಯೆಯ ತಪಸ್ವಿ ಛಾವಣಿಯ ಪೀಠಾಧೀಶರಾದ ಜಗದ್ಗುರು ಪರಮಹಂಸ ಆಚಾರ್ಯ (Jagadguru Paramhans Acharya) ಅವರು ಆಮಿರ್ ಖಾನ್ ಅವರನ್ನು ಕೊಲ್ಲುವವರಿಗೆ ಬರೋಬ್ಬರಿ 5 ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮಹಾರಾಷ್ಟ್ರದ ಬಿಜೆಪಿ ಸಚಿವ ನಿತೇಶ್ ರಾಣೆ ಅವರು ಇತ್ತೀಚೆಗೆ ಆಮಿರ್ ಖಾನ್ ಅವರನ್ನು ‘ಲವ್ ಜಿಹಾದ್ನ ಬ್ರ್ಯಾಂಡ್ ಅಂಬಾಸಿಡರ್’ ಎಂದು ಕರೆದಿದ್ದರು. ಸಚಿವರ ಈ ಹೇಳಿಕೆಯನ್ನು ಬೆಂಬಲಿಸಿ ಮಾತನಾಡಿರುವ ಅಯೋಧ್ಯೆಯ ಧಾರ್ಮಿಕ ಮುಖಂಡ ಜಗದ್ಗುರು ಪರಮಹಂಸ ಆಚಾರ್ಯ ಅವರು ಆಮಿರ್ ಖಾನ್ ವಿರುದ್ಧ ಕಿಡಿಕಾರಿದ್ದಾರೆ. ಆಮಿರ್ ಖಾನ್ ಅವರನ್ನು ಹತ್ಯೆ ಮಾಡುವಂತೆ ಬಹಿರಂಗ ಕರೆ ನೀಡಿದ್ದಾರೆ.
‘ಆಮಿರ್ ಖಾನ್ ಮೂರು ಬಾರಿ ಮದುವೆಯಾಗಿದ್ದು, ಅವರ ಮೂರೂ ಪತ್ನಿಯರು ಹಿಂದೂ ಮಹಿಳೆಯರಾಗಿದ್ದಾರೆ. ಹೀಗಾಗಿ ನಿತೇಶ್ ರಾಣೆ ಅವರ ಹೇಳಿಕೆ ಕೇವಲ ಆರೋಪವಲ್ಲ, ಅದು ವಾಸ್ತವ. ಇಂತಹ ವ್ಯಕ್ತಿಗಳು ಸಮಾಜದಲ್ಲಿ ವೈಷಮ್ಯ ಮೂಡಿಸುತ್ತಿದ್ದಾರೆ. ಭಗವಾನ್ ರಾಮ ಹುಟ್ಟಿದ ಪವಿತ್ರ ಅಯೋಧ್ಯೆ ಧಾಮದಿಂದ ನಾನು ಘೋಷಿಸುತ್ತಿದ್ದೇನೆ. ಯಾರು ಆಮಿರ್ ಖಾನ್ನನ್ನು ಕೊಲ್ಲುತ್ತಾರೋ ಅವರಿಗೆ 5 ಕೋಟಿ ರೂಪಾಯಿ ಬಹುಮಾನ ನೀಡಲಾಗುವುದು ಮತ್ತು ಅವರ ಮೇಲಾಗುವ ಎಲ್ಲಾ ಕಾನೂನು ಹೋರಾಟದ ವೆಚ್ಚವನ್ನು ನಾನೇ ಭರಿಸುತ್ತೇನೆ’ ಎಂದು ಪರಮಹಂಸ ಆಚಾರ್ಯ ಅವರು ಹೇಳಿದ್ದಾರೆ.
Ayodhya, Uttar Pradesh: On Maharashtra Minister Nitesh Rane calling actor Aamir Khan the ‘brand ambassador of love jihad,’ Jagadguru Paramhans Acharya, Peethadheeshwar of Tapasvi Chhawani, says, “Given that Aamir Khan has married three times, and all three marriages were to Hindu… pic.twitter.com/HXUKFU5bme
— IANS (@ians_india) July 14, 2026
ತಮ್ಮ ಮದುವೆಯ ಸುತ್ತ ಎದ್ದಿರುವ ‘ಲವ್ ಜಿಹಾದ್’ ಆರೋಪಗಳಿಗೆ ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ ಪ್ರತಿಕ್ರಿಯಿಸಿದ ಆಮಿರ್ ಖಾನ್, ‘ನನ್ನ ಯಾವುದೇ ಪತ್ನಿಯರು ಧರ್ಮ ಬದಲಾಯಿಸಿಲ್ಲ. ನಾವೆಲ್ಲರೂ ಸಿವಿಲ್ ಕಾನೂನಿನ ಅಡಿಯಲ್ಲಿ ಮದುವೆಯಾಗಿದ್ದೇವೆ. ಮೊದಲ ಪತ್ನಿ ರೀನಾ ಮತ್ತು ಎರಡನೇ ಪತ್ನಿ ಕಿರಣ್ ಅವರು ಮತಾಂತರ ಆಗಿಲ್ಲ. ಇತ್ತೀಚೆಗೆ ನಾನು ಮದುವೆಯಾದ ಗೌರಿ ಸ್ಪ್ರ್ಯಾಟ್ ಕೂಡ ಹಿಂದೂ ಅಲ್ಲ. ಅವರು ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದವರು’ ಎಂದು ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ: ಸರಳವಾಗಿ ನಡೆದ ಆಮಿರ್ ಖಾನ್ ಮೂರನೇ ಮದುವೆ, ಅತಿಥಿಗಳು ಯಾರ್ಯಾರು?
ಆಮಿರ್ ಖಾನ್ ಅವರು ಈ ಮೊದಲು ರೀನಾ ದತ್ತಾ (1986-2002) ಮತ್ತು ಕಿರಣ್ ರಾವ್ (2005-2021) ಅವರೊಂದಿಗೆ ವಿವಾಹವಾಗಿದ್ದು, ಬಳಿಕ ವಿಚ್ಛೇದನ ಪಡೆದಿದ್ದರು. ಇದೀಗ ಜುಲೈ 5ರಂದು ಬೆಂಗಳೂರು ಮೂಲದ ಬ್ಯೂಟಿ ಮತ್ತು ವೆಲ್ನೆಸ್ ಉದ್ಯಮಿ ಗೌರಿ ಸ್ಪ್ರ್ಯಾಟ್ ಅವರನ್ನು ವಿವಾಹವಾಗಿದ್ದಾರೆ. ಈ ಮದುವೆಯ ಬಳಿಕ ಲವ್ ಜಿಹಾದ್ ಆರೋಪ ಹೆಚ್ಚಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 8:04 pm, Wed, 15 July 26