AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ವಿವಾಹ ಆಗ್ತಾರಾ ಆಮಿರ್ ಖಾನ್; ನಟನ ಉತ್ತರ ಸಖತ್ ಫನ್ನಿ

Aamir Khan Birthday: ಆಮಿರ್ ಖಾನ್ ಅವರಿಗೆ ಬೆಂಗಳೂರಿನ ಯುವತಿಯೊಂದಿಗೆ ಸಂಬಂಧ ಇದೆ ಎಂಬ ವದಂತಿಗಳು ಹಬ್ಬಿದ್ದವು. ಮೂರನೇ ಮದುವೆ ವದಂತಿಗಳಿಗೆ ಈ ಮೊದಲು ಸ್ಪಷ್ಟನೆ ನೀಡಿದ್ದರು. ಮತ್ತೆ ಮದುವೆಯಾಗುವುದು ಕಷ್ಟ ಎಂದಿರೋ ಅವರು, ತಮ್ಮ ಮಕ್ಕಳು ಮತ್ತು ಕುಟುಂಬದೊಂದಿಗೆ ಸಂತೋಷವಾಗಿ ಇರೋದಾಗಿ ಹೇಳಿಕೊಂಡಿದ್ದಾರೆ.

ಮತ್ತೆ ವಿವಾಹ ಆಗ್ತಾರಾ ಆಮಿರ್ ಖಾನ್; ನಟನ ಉತ್ತರ ಸಖತ್ ಫನ್ನಿ
ಆಮಿರ್ ಖಾನ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Mar 14, 2025 | 6:00 AM

Share

ನಟ ಆಮಿರ್ ಖಾನ್ ಅವರಿಗೆ ಇಂದು (ಮಾರ್ಚ್ 14) ಜನ್ಮದಿನ. ಅವರಿಗೆ ಅಭಿಮಾನಿಗಳು ಶುಭಾಶಯ ಕೋರುತ್ತಾ ಇದ್ದಾರೆ. ಫ್ಯಾನ್ಸ್ ಕಡೆಯಿಂದ ಅವರಿಗೆ ವಿಶೇಷ್ ವಿಶ್ ಬರುತ್ತಿದೆ. ಬರ್ತ್​ಡೇ ಪ್ರಯುಕ್ತ ಅವರ ನಟನೆಯ ಮುಂದಿನ ಸಿನಿಮಾ ‘ಸಿತಾರೇ ಜಮೀನ್​ಪರ್’ ಚಿತ್ರದ ಕಡೆಯಿಂದ ಅಪ್​ಡೇಟ್ ಸಿಗುತ್ತದೆಯೇ ಎನ್ನುವ ಕುತೂಹಲ ಮೂಡಿದೆ. ಆಮಿರ್ ಖಾನ್ ಅವರು ಮೂರನೇ ವಿವಾಹ ಆಗುತ್ತಾರೆ ಎಂದು ಹೇಳಲಾಗಿತ್ತು. ಈ ಮೊದಲೇ ಈ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದರು.

ಆಮಿರ್ ಖಾನ್ ಅವರ ಸಂಬಂಧ ಹೆಚ್ಚು ವರ್ಷಗಳ ಕಾಲ ಉಳಿದಿಲ್ಲ. ಮೊದಲು ಅವರು ರೀನಾ ದತ್ತ ಅವರನ್ನು ವಿವಾಹ ಆದರು. 1986ರಲ್ಲಿ ಆರಂಭ ಆದ ಈ ಸಂಬಂಧ 2002ರಲ್ಲಿ ಕೊನೆ ಆಯಿತು. ಆ ಬಳಿಕ ಕಿರಣ್ ರಾವ್ ಅವರನ್ನು ವಿವಾಹ ಆದರು. 2005ರಲ್ಲಿ ನಡೆದ ಮದುವೆ 2021ರಲ್ಲಿ ಕೊನೆ ಆಯಿತು. ಈಗ ಆಮಿರ್ ಖಾನ್ ಅವರು ಸಿಂಗಲ್ ಆಗಿದ್ದಾರೆ. ಅವರಿಗೆ ಮತ್ತೆ ವಿವಾಹ ಆಗುವ ಆಲೋಚನೆಯೂ ಇಲ್ಲ.

ಈ ಮೊದಲು ಸಂದರ್ಶನ ಒಂದರಲ್ಲಿ ಈ ಬಗ್ಗೆ ಅವರು ಮಾತನಾಡಿದ್ದರು. ‘ನನಗೆ ಈಗ 59 ವರ್ಷ. ಈಗ ಮದುವೆ ಆಗೋದು ಹೇಗೆ? ಅದು ಕಷ್ಟ ಎನಿಸುತ್ತಿದೆ. ನನ್ನ ಜೀವನದಲ್ಲಿ ಸಾಕಷ್ಟು ಸಂಬಂಧಗಳು ಇವೆ. ನಾನು ಕುಟುಂಬದ ಜೊತೆ, ಮಕ್ಕಳ ಜೊತೆ ಮತ್ತೆ ಕನೆಕ್ಟ್ ಆಗಿದ್ದೇನೆ. ನನಗೆ ಆಪ್ತ ಆಗಿರುವವರ ಜೊತೆ ಇರೋದು ನನಗೆ ಖುಷಿ ಕೊಟ್ಟಿದೆ. ನಾನು ಒಳ್ಳೆಯ ವ್ಯಕ್ತಿ ಆಗಲು ಪ್ರಯತ್ನಿಸುತ್ತಿದ್ದೇನೆ’ ಎಂದು ಅವರು ಹೇಳಿದ್ದರು.

ಇದನ್ನೂ ಓದಿ
Image
ಮಜಾ ಟಾಕೀಸ್​ನಲ್ಲಿ ಸ್ಯಾಂಡಲ್​ವುಡ್ ಬ್ಯೂಟಿಗಳು; ಕುರಿನ ಕಾಲೆಳೆದ ಮಾನ್ವಿತಾ
Image
ಬೇಸರದಲ್ಲಿರೋ ಸೋನು ನಿಗಮ್ ಬೆಂಬಲಕ್ಕೆ ನಿಂತ ಸಂಗೀತಾ ಶೃಂಗೇರಿ
Image
ಯಶ್​ ಬಗ್ಗೆ ಗುಣಗಾನ ಮಾಡಿದ ಹಾಲಿವುಡ್ ತಂತ್ರಜ್ಞ; ಕನ್ನಡ ಚಿತ್ರರಂಗದ ಹೆಮ್ಮೆ
Image
‘ಇದು ಸಿಂಹದ ಮರಿ’; ‘ಅಪ್ಪು’ 100ನೇ ದಿನದ ಸೆಲೆಬ್ರೇಷನ್​ನಲ್ಲಿ ರಜನಿ ಮಾತು

ಇದನ್ನೂ ಓದಿ: ಆಮಿರ್ ಖಾನ್-ರಣ್​ಬೀರ್ ಕಪೂರ್ ಜಗಳ, ಮಧ್ಯಸ್ಥಿಕೆ ವಹಿಸಿದ ರೋಹಿತ್ ಶರ್ಮಾ

ಆಮಿರ್ ಖಾನ್ ಅವರು ಬೆಂಗಳೂರಿನ ಯುವತಿಯ ಜೊತೆ ಸುತ್ತಾಟ ಮಾಡುತ್ತಿದ್ದಾರೆ ಎಂಬ ಸುದ್ದಿ ಈ ಮೊದಲು ಹರಿದಾಡಿತ್ತು. ಆದರೆ, ಈ ಬಗ್ಗೆ ಅವರ ಕಡೆಯಿಂದ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ. ಇದರಲ್ಲಿ ಯಾವುದೇ ಸತ್ಯ ಇಲ್ಲ ಎಂದು ಹೇಳಲಾಗುತ್ತಿದೆ. ಹಾಗೆ ಇವರು ಸುತ್ತಾಟ ನಡೆಸುತ್ತಾ ಇದ್ದಿದ್ದರೆ ಒಮ್ಮೆಯಾದರೂ ಅವರು ಕ್ಯಾಮೆರಾ ಕಣ್ಣಿಗೆ ಕಾಣಿಸಿಕೊಳ್ಳಬೇಕಿತ್ತು ಎಂಬುದು ಅನೇಕರ ಅಭಿಪ್ರಾಯ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ