AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಮಕ್ಕಳೇ ನನ್ನ ಮಾತು ಕೇಳಲ್ಲ’: ಆಮಿರ್​ ಖಾನ್​ ಹೀಗೆ ಹೇಳಿದ್ದು ಯಾಕೆ?

ಆಮಿರ್​ ಖಾನ್​ ಅವರು ‘ಪಿಕೆ’ ಸಿನಿಮಾದ ಒಂದು ದೃಶ್ಯದಲ್ಲಿ ಪೂರ್ತಿ ಬೆತ್ತಲಾಗಿ, ಕೇವಲ ರೇಡಿಯೋ ಅಡ್ಡ ಹಿಡಿದುಕೊಂಡು ನಟಿಸಿದ್ದರು. ಆ ದೃಶ್ಯದ ಬಗ್ಗೆಯೂ ‘ದಿ ಗ್ರೇಟ್​ ಇಂಡಿಯನ್​ ಕಪಿಲ್​ ಶೋ’ ಕಾರ್ಯಕ್ರಮದಲ್ಲಿ ಪ್ರಶ್ನೆ ಕೇಳಲಾಗಿದೆ. ಆ ಎಲ್ಲ ಪ್ರಶ್ನೆಗಳಿಗೆ ಅವರು ನಗು ನಗುತ್ತಲೇ ಉತ್ತರಿಸಿದ್ದಾರೆ. ಕಪಿಲ್​ ಶರ್ಮಾ ಸಾರಥ್ಯದ ಈ ಶೋ ಶೀಘ್ರದಲ್ಲೇ ಪ್ರಸಾರ ಆಗಲಿದ್ದು, ಪ್ರೋಮೋ ಭಾರಿ ವೈರಲ್​ ಆಗಿದೆ.

‘ನನ್ನ ಮಕ್ಕಳೇ ನನ್ನ ಮಾತು ಕೇಳಲ್ಲ’: ಆಮಿರ್​ ಖಾನ್​ ಹೀಗೆ ಹೇಳಿದ್ದು ಯಾಕೆ?
ಆಮಿರ್​ ಖಾನ್​
ಮದನ್​ ಕುಮಾರ್​
|

Updated on: Apr 24, 2024 | 5:35 PM

Share

ನಟ ಆಮಿರ್​ ಖಾನ್​ ಅವರು ‘ದಿ ಗ್ರೇಟ್​ ಇಂಡಿಯನ್​ ಕಪಿಲ್​ ಶೋ’ (The Great Indian Kapil Show) ಸಂಚಿಕೆಯಲ್ಲಿ ಪಾಲ್ಗೊಂಡಿದ್ದಾರೆ. ಇದರ ಹೊಸ ಪ್ರೋಮೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಆಮಿರ್​ ಖಾನ್​ (Aamir Khan) ಅವರಂಥ ಸ್ಟಾರ್​ ನಟ ಈ ಕಾರ್ಯಕ್ರಮಕ್ಕೆ ಬಂದಿರುವುದರಿಂದ ಜನರಲ್ಲಿ ನಿರೀಕ್ಷೆ ಹೆಚ್ಚಾಗಿದೆ. ವೀಕೆಂಡ್​ನಲ್ಲಿ ಹೊಸ ಸಂಚಿಕೆ ಪ್ರಸಾರ ಆಗಲಿದೆ. ಕಪಿಲ್​ ಶರ್ಮಾ (Kapil Sharma) ಅವರು ನಡೆಸಿಕೊಡುವ ಈ ಕಾಮಿಡಿ ಶೋನಲ್ಲಿ ಆಮಿರ್​ ಖಾನ್​ ಅವರು ಕೆಲವು ಅಚ್ಚರಿಯ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ತಮ್ಮ ಮಕ್ಕಳು ಮಾತು ಕೇಳುವುದಿಲ್ಲ ಎಂದು ಅವರು ಹೇಳಿದ್ದಾರೆ.

ಅಂದಹಾಗೆ, ಆಮಿರ್​ ಖಾನ್​ ಅವರು ಹೀಗೆ ಹೇಳಿದ್ದು ತುಂಬ ಗಂಭೀರವಾಗಿ ಏನಲ್ಲ. ‘ದಿ ಗ್ರೇಟ್​ ಇಂಡಿಯನ್​ ಕಪಿಲ್​ ಶೋ’ ಕಾರ್ಯಕ್ರಮಕ್ಕೆ ಯಾವ ಬಟ್ಟೆ ಧರಿಸಿ ಬರಬೇಕು ಎಂಬ ಚರ್ಚೆ ಅವರ ಮನೆಯಲ್ಲಿ ನಡೆದಿತ್ತು. ಶಾರ್ಟ್ಸ್​​ ಧರಿಸಬೇಕು ಎಂಬುದು ಆಮಿರ್​ ಖಾನ್​ ನಿರ್ಧಾರ ಆಗಿತ್ತು. ಆದರೆ ಅವರ ಮಕ್ಕಳು ಅದಕ್ಕೆ ಅನುಮತಿ ನೀಡಿಲ್ಲ. ಬದಲಿಗೆ ಜೇನ್ಸ್​ ಪ್ಯಾಂಟ್​ ಧರಿಸುವಂತೆ ಮಕ್ಕಳು ತಾಕೀತು ಮಾಡಿದ್ದಾರೆ. ಆ ಕಾರಣದಿಂದ ‘ನನ್ನ ಮಕ್ಕಳು ನನ್ನ ಮಾತು ಕೇಳುವುದಿಲ್ಲ’ ಎಂದು ಆಮಿರ್​ ಖಾನ್​ ಹೇಳಿದ್ದಾರೆ.

ಇದನ್ನೂ ಓದಿ: ಭಿಕ್ಷೆ ಬೇಡುವ ವ್ಯಕ್ತಿಗೆ ಆಮಿರ್​ ಖಾನ್​ ಸಿನಿಮಾದಲ್ಲಿ ಅವಕಾಶ; ನಂತರ ಬದಲಾಯ್ತು ಬದುಕು

ನೆಟ್​ಫ್ಲಿಕ್ಸ್​ ಮೂಲಕ ‘ದಿ ಗ್ರೇಟ್​ ಇಂಡಿಯನ್​ ಕಪಿಲ್ ಶೋ’ ಪ್ರಸಾರ ಆಗಲಿದೆ. ಆಮಿರ್​ ಖಾನ್​ ಭಾಗವಹಿಸಿರುವ ಈ ಹೊಸ ಎಪಿಸೋಡ್​ ಏಪ್ರಿಲ್​ 27ರಂದು ರಾತ್ರಿ 8 ಗಂಟೆಗೆ ವೀಕ್ಷಣೆಗೆ ಲಭ್ಯವಾಗಲಿದೆ. ಈ ಸಂಚಿಕೆಯಲ್ಲಿ ಆಮಿರ್​ ಖಾನ್​ ಅವರು ತುಂಬ ಎಂಜಾಯ್​ ಮಾಡಿದ್ದಾರೆ. ತಮ್ಮ ಕಾರ್ಯಕ್ರಮಕ್ಕೆ ಆಮಿರ್​ ಖಾನ್​ ಬರಬೇಕು ಎಂಬುದು ಕಪಿಲ್​ ಶರ್ಮಾ ಅವರ ಬಹುದಿನಗಳ ಆಸೆ ಆಗಿತ್ತು. ಅದು ಈಗ ಈಡೇರಿದೆ.

View this post on Instagram

A post shared by Netflix India (@netflix_in)

ಆಮಿರ್​ ಖಾನ್​ ಅವರು ಯಾವುದೇ ಪ್ರಶಸ್ತಿ ಪ್ರದಾನ ಸಮಾರಂಭಗಳಿಗೆ ಹೋಗುವುದಿಲ್ಲ. ಆ ಬಗ್ಗೆ ‘ದಿ ಗ್ರೇಟ್​ ಇಂಡಿಯನ್​ ಕಪಿಲ್ ಶೋ’ನಲ್ಲಿ ಕೇಳಲಾಗಿದೆ. ಅದಕ್ಕೆ ಉತ್ತರಿಸಿರುವ ಅವರು, ‘ಸಮಯ ತುಂಬ ಅಮೂಲ್ಯವಾದದ್ದು. ಅದನ್ನು ಬುದ್ಧಿವಂತಿಕೆಯಿಂದ ಉಪಯೋಗಿಸಬೇಕು’ ಹೇಳಿದ್ದಾರೆ. ಈ ಸಂಚಿಕೆ ನೋಡಲು ಫ್ಯಾನ್ಸ್​ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು!
ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು!
ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್
ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್
ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸಪ್ಪ ಗರಂ: ವಿಡಿಯೋ ವೈರಲ್​​
ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸಪ್ಪ ಗರಂ: ವಿಡಿಯೋ ವೈರಲ್​​