AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಪ್ರೇಯಸಿ ಪರಿಚಯ ಮಾಡಿಸಿದ ಆಮಿರ್ ಖಾನ್; 60ನೇ ವಯಸ್ಸಿನಲ್ಲಿ ಚಿಗುರಿದ ಪ್ರೇಮ

ನಟ ಆಮಿರ್ ಖಾನ್ ಅವರಿಗೆ 60 ವರ್ಷ ವಯಸ್ಸಾಗಿದೆ. ಈಗ ಅವರು ಹೊಸ ಪ್ರೇಯಸಿ ಬಗ್ಗೆ ಮೌನ ಮುರಿದಿದ್ದಾರೆ. ಕಳೆದ ಒಂದೂವರೆ ವರ್ಷದಿಂದ ಬೆಂಗಳೂರು ಮೂಲದ ಗೌರಿ ಎಂಬ ಮಹಿಳೆಯ ಜೊತೆ ಆಮಿರ್ ಖಾನ್ ವಾಸ ಮಾಡುತ್ತಿದ್ದಾರೆ. ಗೌರಿ ಅವರಿಗೆ 6 ವರ್ಷದ ಪುತ್ರ ಕೂಡ ಇದ್ದಾನೆ. ಈ ಎಲ್ಲ ವಿಷಯಗಳನ್ನು ಆಮಿರ್ ಖಾನ್ ಸ್ವತಃ ಬಹಿರಂಗಪಡಿಸಿದ್ದಾರೆ.

ಹೊಸ ಪ್ರೇಯಸಿ ಪರಿಚಯ ಮಾಡಿಸಿದ ಆಮಿರ್ ಖಾನ್; 60ನೇ ವಯಸ್ಸಿನಲ್ಲಿ ಚಿಗುರಿದ ಪ್ರೇಮ
Gauri, Aamir Khan
ಮದನ್​ ಕುಮಾರ್​
|

Updated on: Mar 13, 2025 | 9:18 PM

Share

ಇತ್ತೀಚಿನ ವರ್ಷಗಳಲ್ಲಿ ನಟ ಆಮಿರ್ ಖಾನ್ (Aamir Khan) ಅವರ ವೈಯಕ್ತಿಕ ಬದುಕಿನ ಬಗ್ಗೆ ಸಾಕಷ್ಟು ಚರ್ಚೆ ಆಗಿದೆ. ಈಗಾಗಲೇ ಅವರು ಇಬ್ಬರು ಪತ್ನಿಯರಿಗೆ ವಿಚ್ಛೇದನ ನೀಡಿದ್ದಾರೆ. ಈಗ ಅವರಿಗೆ ಮೂರನೇ ಬಾರಿಗೆ ಪ್ರೀತಿ ಚಿಗುರಿದೆ. ಹೌದು, 2ನೇ ಪತ್ನಿ ಕಿರಣ್ ರಾವ್​ಗೆ ಡಿವೋರ್ಸ್​ ನೀಡಿದ ಬಳಿಕ ಬೆಂಗಳೂರಿನ ಮಹಿಳೆಯ ಜೊತೆಗೆ ಆಮಿರ್ ಖಾನ್ ಅವರಿಗೆ ಲವ್ ಆಗಿದೆ. ಇದೇ ಮೊದಲ ಬಾರಿಗೆ ಅವರು ಈ ಬಗ್ಗೆ ಬಾಯಿ ಬಿಟ್ಟಿದ್ದಾರೆ. ಇಂದು (ಮಾರ್ಚ್​ 13) ಮುಂಬೈನಲ್ಲಿ ಸುದ್ದಿಗೋಷ್ಠಿ ನಡೆದಿದೆ. ಈ ವೇಳೆ ಅವರು ಪತ್ರಕರ್ತರ ಜೊತೆ ಮಾತನಾಡುವಾಗ ಪ್ರೇಯಸಿಯನ್ನು ಪರಿಚಯಿಸಿದ್ದಾರೆ. ಆಮಿರ್ ಖಾನ್ ಹೊಸ ಗರ್ಲ್​ಫ್ರೆಂಡ್​ (Aamir Khan Girlfriend) ಹೆಸರು ಗೌರಿ!

ಆಮಿರ್ ಖಾನ್ ಮತ್ತು ಗೌರಿ ಅವರು ಹಲವು ತಿಂಗಳಿಂದ ರಿಲೇಷನ್​ಶಿಪ್​ನಲ್ಲಿ ಇದ್ದಾರೆ ಎಂದು ಗಾಸಿಪ್ ಹಬ್ಬಿತ್ತು. ಅದೀಗ ನಿಜವಾಗಿದೆ. ಗೌರಿ ಅವರಿಗೆ 6 ವರ್ಷದ ಮಗ ಕೂಡ ಇದ್ದಾನೆ. ಆಮಿರ್ ಖಾನ್ ಅವರ ಇಡೀ ಕುಟುಂಬದವರು ಗೌರಿಯನ್ನು ಭೇಟಿ ಆಗಿದ್ದಾರಂತೆ. ಗೌರಿ ಮತ್ತು ಆಮಿರ್ ಖಾನ್ ಜೊತೆಯಾಗಿ ಇರುವುದು ಅವರ ಕುಟುಂಬದವರಿಗೆ ಸಂತಸ ತಂದಿದೆ ಎಂದು ಹೇಳಿದ್ದಾರೆ.

ಅಂದಹಾಗೆ, ಆಮಿರ್​ ಖಾನ್ ಹಾಗೂ ಗೌರಿ ಅವರ ಪರಿಚಯ ಬರೋಬ್ಬರಿ 25 ವರ್ಷಗಳಷ್ಟು ಹಳೆಯದು. ಆದರೆ ಕೆಲವು ವರ್ಷಗಳು ಅವರಿಬ್ಬರು ಸಂಪರ್ಕದಲ್ಲಿ ಇರಲಿಲ್ಲ. ಕಿರಣ್ ರಾವ್​ಗೆ ಡಿವೋರ್ಸ್ ನೀಡಿದ ನಂತರ ಗೌರಿ ಜೊತೆ ಆಮಿರ್ ಖಾನ್ ಅವರ ಆಪ್ತತೆ ಹೆಚ್ಚಿದೆ ಎನ್ನಲಾಗಿದೆ. ‘ನಾನು ಮತ್ತು ಗೌರಿ 25 ವರ್ಷಗಳ ಹಿಂದೆ ಪರಿಚಯ ಆಗಿದ್ದೆವು. ಈಗ ನಾವು ಬಾಳ ಸಂಗಾತಿಗಳು. ಈ ಬಗ್ಗೆ ನಾವು ಗಂಭೀರವಾಗಿ ಯೋಚಿಸಿದ್ದೇವೆ. ಕಳೆದ ಒಂದೂವರೆ ವರ್ಷದಿಂದ ಒಟ್ಟಿಗೆ ವಾಸ ಮಾಡುತ್ತಿದ್ದೇವೆ’ ಎಂದು ಆಮಿರ್ ಖಾನ್ ಅವರು ಹೇಳಿದ್ದಾರೆ.

ಇದನ್ನೂ ಓದಿ
Image
ಆಮಿರ್ ಖಾನ್-ರಣ್​ಬೀರ್ ಕಪೂರ್ ಜಗಳ, ಮಧ್ಯಸ್ಥಿಕೆ ವಹಿಸಿದ ರೋಹಿತ್ ಶರ್ಮಾ
Image
ಹೊಸ ಪ್ರಾಜೆಕ್ಟ್​ಗಾಗಿ ಒಂದಾದ ಆಮಿರ್-ರಣಬೀರ್; ವಿಚಾರ ರಿವೀಲ್ ಮಾಡಿದ ಆಲಿಯಾ
Image
59ನೇ ವಯಸ್ಸಲ್ಲಿ ಬೆಂಗಳೂರು ಹುಡುಗಿ ಮೇಲೆ ಆಮಿರ್​​​ಗೆ ಲವ್? ಯಾರು ಈ ಗೌರಿ?
Image
ಆಮಿರ್ ಖಾನ್ ಈ ರೀತಿ ವೇಷ ಹಾಕಿದ್ದು ದುಡ್ಡಿಗಾಗಿ; ಅಸಲಿ ವಿಚಾರ ರಿವೀಲ್

ಮಾರ್ಚ್​ 12ರಂದು ಆಮಿರ್ ಖಾನ್ ಮನೆಗೆ ಶಾರುಖ್ ಖಾನ್ ಮತ್ತು ಸಲ್ಮಾನ್ ಖಾನ್ ಬಂದಿದ್ದರು. ಅವರಿಗೆ ಕೂಡ ತಮ್ಮ ಪ್ರೇಯಸಿಯನ್ನು ಆಮಿರ್ ಖಾನ್ ಪರಿಚಯ ಮಾಡಿಕೊಟ್ಟಿದ್ದಾರೆ. ‘ಲಗಾನ್’ ಸಿನಿಮಾದಲ್ಲಿ ಆಮಿರ್ ಖಾನ್ ಅವರು ಭುವನ್ ಎಂಬ ಪಾತ್ರ ಮಾಡಿದ್ದರು. ಕಥಾನಾಯಕಿಯ ಹೆಸರು ಗೌರಿ ಆಗಿತ್ತು. ‘ಈಗ ಭುವನ್​ಗೆ ಗೌರಿ ಸಿಕ್ಕಿದ್ದಾಳೆ’ ಎಂದು ಆಮಿರ್ ಖಾನ್ ಹೇಳಿದ್ದಾರೆ.

ಇದನ್ನೂ ಓದಿ: ಆಮಿರ್ ಖಾನ್ 60ನೇ ವರ್ಷದ ಬರ್ತ್​ಡೇ ಪಾರ್ಟಿಗೆ ಬಂದ ಶಾರುಖ್, ಸಲ್ಮಾನ್

‘ಸಿನಿಮಾ ನಿರ್ಮಾಣದ ವಿಭಾಗದಲ್ಲಿ ಗೌರಿ ಕೆಲಸ ಮಾಡುತ್ತಾರೆ. ಅವರಿಗಾಗಿ ನಾನು ಪ್ರತಿ ದಿನ ಹಾಡು ಹೇಳುತ್ತೇನೆ. 60ನೇ ವಯಸ್ಸಿನಲ್ಲಿ ನನಗೆ ಮದುವೆ ಸರಿ ಎನಿಸುತ್ತೋ ಇಲ್ಲವೋ ಗೊತ್ತಿಲ್ಲ. ನನ್ನ ಮಕ್ಕಳಿಗೆ ಖುಷಿ ಆಗಿದೆ. ಮಾಜಿ ಪತ್ನಿಯರ ಜೊತೆ ಶ್ರೇಷ್ಠವಾದ ಬಾಂಧವ್ಯ ಹೊಂದಿದ್ದಕ್ಕೆ ನಾನು ಅದೃಷ್ಟವಂತ’ ಎಂದಿದ್ದಾರೆ ಆಮಿರ್ ಖಾನ್.

​ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ