AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಥೆ ಕದ್ದ ಆಮಿರ್ ಖಾನ್? ‘ಸಿತಾರೆ ಜಮೀನ್ ಪರ್’ ಸಿನಿಮಾ ಮೇಲೆ ಬಂತು ಆರೋಪ

‘ಸಿತಾರೆ ಜಮೀನ್ ಪರ್’ ಸಿನಿಮಾದ ಪ್ರತಿ ಫ್ರೇಮ್ ಕೂಡ ಕಾಪಿ ಎಂದು ಆರೋಪ ಮಾಡಲಾಗಿದೆ. ಅದಕ್ಕೆ ಸಾಕ್ಷಿ ಎಂಬಂತೆ ಸೋಶಿಯಲ್ ಮೀಡಿಯಾದಲ್ಲಿ ಒಂದು ವಿಡಿಯೋ ವೈರಲ್ ಆಗಿದೆ. ಆದರೆ ಇದು ಕಾಪಿ ಅಲ್ಲ, ರಿಮೇಕ್ ಎಂದು ಆಮಿರ್ ಖಾನ್ ಫ್ಯಾನ್ಸ್ ವಾದ ಮಾಡುತ್ತಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಕಥೆ ಕದ್ದ ಆಮಿರ್ ಖಾನ್? ‘ಸಿತಾರೆ ಜಮೀನ್ ಪರ್’ ಸಿನಿಮಾ ಮೇಲೆ ಬಂತು ಆರೋಪ
Aamir Khan
ಮದನ್​ ಕುಮಾರ್​
|

Updated on: May 14, 2025 | 8:39 PM

Share

ಬಾಲಿವುಡ್ ನಟ ಆಮಿರ್ ಖಾನ್ ಅವರು ‘ಸಿತಾರೆ ಜಮೀನ್ ಪರ್’ (Sitaare Zameen Par) ಸಿನಿಮಾ ಮೂಲಕ ಕಮ್​ಬ್ಯಾಕ್ ಮಾಡುತ್ತಿದ್ದಾರೆ. ಈ ಸಿನಿಮಾ ಜೂನ್ 20ರಂದು ಬಿಡುಗಡೆ ಆಗುತ್ತಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ರಿಲೀಸ್ ಆಯಿತು. ಆಮಿರ್ ಖಾನ್ (Aamir Khan) ಅವರ ಅಭಿಮಾನಿಗಳಿಗೆ ಟ್ರೇಲರ್ ಇಷ್ಟ ಆಗಿದೆ. ಸಿನಿಮಾ ನೋಡಲು ಫ್ಯಾನ್ಸ್ ಉತ್ಸುಕರಾಗಿದ್ದಾರೆ. ಆದರೆ ಈ ಸಿನಿಮಾ ಬಗ್ಗೆ ಈಗೊಂದು ಆರೋಪ ಕೇಳಿಬಂದಿದೆ. ಇದು ಸ್ಪ್ಯಾನಿಶ್ ಭಾಷೆಯ ‘ಚಾಂಪಿಯನ್ಸ್’ (Champions) ಸಿನಿಮಾದ ಕಾಪಿ ಎಂಬುದನ್ನು ನೆಟ್ಟಿಗರು ಪತ್ತೆ ಹಚ್ಚಿದ್ದಾರೆ. ಆ ಕಾರಣದಿಂದ ಆಮಿರ್ ಖಾನ್ ಅವರನ್ನು ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಲಾಗುತ್ತಿದೆ.

‘ಸಿತಾರೆ ಜಮೀನ್ ಪರ್’ ಸಿನಿಮಾದಲ್ಲಿ ವಿಶೇಷವಾದ ಕಥೆ ಇದೆ. ಅಂಗವಿಕಲರಿಗೆ ಬಾಸ್ಕೆಟ್ ಬಾಲ್ ಕಲಿಸಿಕೊಡುವ ಕೋಚ್ ಪಾತ್ರದಲ್ಲಿ ಆಮಿರ್ ಖಾನ್ ಅವರು ನಟಿಸಿದ್ದಾರೆ. ಆದರೆ ಇದು ಒರಿಜಿನಲ್ ಕಥೆ ಅಲ್ಲ ಎಂಬುದು ಈಗ ಗೊತ್ತಾಗಿದೆ. ಈ ಸಿನಿಮಾದ ವಿಕಿಪೀಡಿಯಾ ಪುಟದಲ್ಲಿ ಕೂಡ ಈ ಬಗ್ಗೆ ಮಾಹಿತಿ ಇದೆ. ಇದು ಸ್ಪ್ಯಾನಿಶ್ ಭಾಷೆಯ ‘ಚಾಂಪಿಯನ್ಸ್’ ಸಿನಿಮಾದ ರಿಮೇಕ್ ಎಂಬುದನ್ನು ಬರೆಯಲಾಗಿದೆ.

ಇದನ್ನೂ ಓದಿ
Image
ಆಮಿರ್ ಖಾನ್-ರಣ್​ಬೀರ್ ಕಪೂರ್ ಜಗಳ, ಮಧ್ಯಸ್ಥಿಕೆ ವಹಿಸಿದ ರೋಹಿತ್ ಶರ್ಮಾ
Image
ಹೊಸ ಪ್ರಾಜೆಕ್ಟ್​ಗಾಗಿ ಒಂದಾದ ಆಮಿರ್-ರಣಬೀರ್; ವಿಚಾರ ರಿವೀಲ್ ಮಾಡಿದ ಆಲಿಯಾ
Image
59ನೇ ವಯಸ್ಸಲ್ಲಿ ಬೆಂಗಳೂರು ಹುಡುಗಿ ಮೇಲೆ ಆಮಿರ್​​​ಗೆ ಲವ್? ಯಾರು ಈ ಗೌರಿ?
Image
ಆಮಿರ್ ಖಾನ್ ಈ ರೀತಿ ವೇಷ ಹಾಕಿದ್ದು ದುಡ್ಡಿಗಾಗಿ; ಅಸಲಿ ವಿಚಾರ ರಿವೀಲ್

ಇದು ರಿಮೇಕ್ ಸಿನಿಮಾ ಎಂಬುದನ್ನು ಚಿತ್ರತಂಡದವರು ಮೊದಲೇ ಹೇಳಿಕೊಂಡಿಲ್ಲ. ಆ ಕಾರಣದಿಂದಲೇ ಟ್ರೋಲ್ ಮಾಡಲಾಗುತ್ತಿದೆ. ಟ್ರೇಲರ್ ನೋಡಿದ ಬಳಿಕ ಪ್ರತಿ ಫ್ರೇಮ್ ಕೂಡ ಕಾಪಿ ಮಾಡಲಾಗಿದೆ ಎಂಬುದು ತಿಳಿಯುತ್ತಿದೆ. ಆಮಿರ್ ಖಾನ್ ಅವರು ಈ ಮೊದಲು ‘ಫಾರೆಸ್ಟ್ ಗಂಪ್’ ಸಿನಿಮಾವನ್ನು ಹಿಂದಿಯಲ್ಲಿ ರಿಮೇಕ್ ಮಾಡಿ ಸೋಲು ಕಂಡಿದ್ದರು. ಈಗ ‘ಚಾಂಪಿಯನ್ಸ್’ ರಿಮೇಕ್ ಮಾಡಿ ಟ್ರೋಲ್ ಆಗುತ್ತಿದ್ದಾರೆ.

ಆಮಿರ್ ಖಾನ್ ಅವರ ಅಪ್ಪಟ ಅಭಿಮಾನಿಗಳು ಇದನ್ನೆಲ್ಲ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ರಿಮೇಕ್ ಆಗಿರುವುದರಿಂದ ಪ್ರತಿ ಫ್ರೇಮ್ ಕೂಡ ಅದೇ ರೀತಿ ಇರುತ್ತದೆ. ಅದರಲ್ಲಿ ತಪ್ಪೇನೂ ಇಲ್ಲ. ಅಷ್ಟಕ್ಕೂ ‘ಚಾಂಪಿಯನ್ಸ್’ ಸಿನಿಮಾವನ್ನು ಭಾರತದಲ್ಲಿ ಹೆಚ್ಚು ಜನ ನೋಡಿಲ್ಲ. ಅಂಥವರಿಗಾಗಿ ರಿಮೇಕ್ ಮಾಡಲಾಗಿದೆ ಎಂದು ಆಮಿರ್ ಖಾನ್ ಫ್ಯಾನ್ಸ್ ವಕಾಲತ್ತು ವಹಿಸುತ್ತಿದ್ದಾರೆ.

ಇದನ್ನೂ ಓದಿ: ‘ಸಿತಾರೆ ಜಮೀನ್ ಪರ್’ ಟ್ರೇಲರ್: ಈ ಬಾರಿಯಾದ್ರೂ ಗೆಲ್ತಾರಾ ಆಮಿರ್ ಖಾನ್?

‘ಸಿತಾರೆ ಜಮೀನ್ ಪರ್’ ಸಿನಿಮಾದಲ್ಲಿ ಆಮಿರ್ ಖಾನ್ ಜೊತೆ ಜೆನಿಲಿಯಾ ದೇಶಮುಖ್ ಅವರು ಅಭಿನಯಿಸಿದ್ದಾರೆ. ಅನೇಕ ಹೊಸ ಕಲಾವಿದರಿಗೆ ಅವಕಾಶ ನೀಡಲಾಗಿದೆ. ಟ್ರೇಲರ್ ನೋಡಿ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ