AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯ, ದೂಮಪಾನದ ವ್ಯಸನಿಯಾಗಿದ್ದ ಆಮಿರ್ ಖಾನ್; ಆ ಪ್ರೀತಿ ಎಲ್ಲವನ್ನೂ ಬದಲಿಸಿತು

ಆಮಿರ್ ಖಾನ್ ಅವರು ತಮ್ಮ ಹಿಂದಿನ ಆಲ್ಕೋಹಾಲ್ ಮತ್ತು ಧೂಮಪಾನದ ವ್ಯಸನಗಳನ್ನು ಬಹಿರಂಗಪಡಿಸಿದ್ದಾರೆ. ಇದು ಅವರ ಆರೋಗ್ಯ ಮತ್ತು ವೃತ್ತಿಜೀವನದ ಮೇಲೆ ಪರಿಣಾಮ ಬೀರಿತ್ತು. ಆದರೆ ಚಲನಚಿತ್ರದ ಮೇಲಿನ ಪ್ರೀತಿಯಿಂದ ವ್ಯಸನಗಳನ್ನು ಜಯಿಸಿದರು ಎಂದು ಹೇಳಿದ್ದಾರೆ. ಈ ಬಹಿರಂಗಪಡಿಸುವಿಕೆಯ ಮೂಲಕ ಅಭಿಮಾನಿಗಳು ಇಂತಹ ಕೆಟ್ಟ ಅಭ್ಯಾಸಗಳಿಂದ ದೂರವಿರಬೇಕು ಎಂಬುದು ಅವರ ಆಶಯ.

ಮದ್ಯ, ದೂಮಪಾನದ ವ್ಯಸನಿಯಾಗಿದ್ದ ಆಮಿರ್ ಖಾನ್; ಆ ಪ್ರೀತಿ ಎಲ್ಲವನ್ನೂ ಬದಲಿಸಿತು
ಆಮಿರ್ ಖಾನ್
ರಾಜೇಶ್ ದುಗ್ಗುಮನೆ
|

Updated on: Dec 25, 2024 | 3:03 PM

Share

ಸೆಲೆಬ್ರಿಟಿಗಳು ಹಲವು ವಿಚಾರಗಳನ್ನು ಮುಚ್ಚಿಡಲು ಬಯಸುತ್ತಾರೆ. ಯಾವುದೇ ಕೆಟ್ಟ ಹವ್ಯಾಸ ಇದ್ದರೂ ಅದನ್ನು ಅಡಗಿಸಿಡುವ ಪ್ರಯತ್ನ ಮಾಡುತ್ತಾರೆ. ಆದರೆ, ಆಮಿರ್ ಖಾನ್ ಅವರು ಇದಕ್ಕೆ ಭಿನ್ನ. ಅವರು ಓಪನ್ ಆಗಿ ತಮ್ಮ ಬಗ್ಗೆ ಮಾತನಾಡಿದ್ದಾರೆ. ತಮಗಿದ್ದ ಕೆಟ್ಟ ಹವ್ಯಾಸಗಳ ಕುರಿತು ಹೇಳಿಕೊಂಡಿದ್ದಾರೆ. ಈ ಕೆಟ್ಟ ಚಟಗಳಿಂದ ಅವರ ಜೀವನದ ಮೇಲೆ ಯಾವ ರೀತಿಯ ಪ್ರಭಾವ ಬೀರಿತು ಎಂಬುದನ್ನು ಅವರು ವಿವರಿಸಿದ್ದಾರೆ.

ಆಮಿರ್ ಖಾನ್ ಅವರು ಬಾಲಿವುಡ್​ನಲ್ಲಿ ಮಿಸ್ಟರ್ ಪರ್ಫೆಕ್ಟ್ ಎಂದೇ ಖ್ಯಾತಿ ಪಡೆದವರು. ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದಿದೆ. ನಟನೆ ಹಾಗೂ ನಿರ್ಮಾಣದ ಮೂಲಕ ಅವರು ಭೇಷ್ ಎನಿಸಿಕೊಂಡಿದ್ದಾರೆ. ಆದರೆ, ಅಸಲಿಗೆ ಅವರ ಜೀವನ ಹಾಗಿಲ್ಲ. ಅವರು ಸಾಕಷ್ಟು ಕೆಟ್ಟ ಚಟಗಳ ದಾಸನಾಗಿದ್ದರು. ಇದನ್ನು ಅವರು ಈಗ ರಿವೀಲ್ ಮಾಡಿದ್ದಾರೆ.

‘ನಾನು ಆಲ್ಕೊಹಾಲ್​ನ ದಾಸನಾಗಿದ್ದೆ. ರಾತ್ರಿಯಿಡೀ ಕುಡಿಯುತ್ತಲೇ ಇರುತ್ತಿದ್ದೆ. ನಾನು ಪೈಪ್​ನ ಸ್ಮೋಕ್ ಮಾಡುತ್ತಿದ್ದೆ. ನನ್ನ ಆರೋಗ್ಯದ ಬಗ್ಗೆ ಸ್ವಲ್ಪವೂ ಗಮನ ಹರಿಸುತ್ತಿರಲಿಲ್ಲ. ಈ ಅಭ್ಯಾಸಗಳು ನನ್ನ ಜೀವನ ಮತ್ತು ನನ್ನ ವೃತ್ತಿಜೀವನಕ್ಕೆ ಹಾನಿ ಎಂಬ ವಿಚಾರ ನನಗೆ ಚೆನ್ನಾಗಿ ತಿಳಿದಿತ್ತು. ಆದರೆ ನಾನು ಅವುಗಳನ್ನು ಕೊನೆಗೊಳಿಸಲು ಸಾಧ್ಯವಾಗಲಿಲ್ಲ. ಕ್ರಮೇಣ, ನಾನು ಹೆಚ್ಚು ಹೆಚ್ಚು ಸಿನಿಮಾವನ್ನು ಪ್ರೀತಿಸಲು ಪ್ರಾರಂಭಿಸಿದೆ ಮತ್ತು ಇದು ನನ್ನ ಜೀವನವನ್ನು ಬದಲಾಯಿಸಿತು. ನನ್ನ ವ್ಯಸನಗಳಿಗಿಂತ ನನ್ನ ಸಿನಿಮಾ ಮೇಲಿನ ಪ್ರೀತಿ ಮೇಲುಗೈ ಸಾಧಿಸಿತು. ಅಂತಿಮವಾಗಿ ನಾನು ಅವುಗಳನ್ನು ತ್ಯಜಿಸಿದೆ’ ಎಂದು ಆಮಿರ್ ಹೇಳಿದ್ದಾರೆ.

ಹಾಗಾದರೆ ಆಮಿರ್ ಖಾನ್ ಇದನ್ನು ಹೇಳಿದ್ದು ಏಕೆ? ಅದಕ್ಕೂ ಒಂದು ಕಾರಣ ಇದೆ. ಈ ರೀತಿಯ ಕೆಟ್ಟ ಅಭ್ಯಾಸಗಳಿಗೆ ಅಭಿಮಾನಿಗಳು ಒಳಗಾಗಬಾರದು ಎಂಬುದು ಅವರ ಉದ್ದೇಶ. ಈ ಕಾರಣದಿಂದಲೇ ಆಮಿರ್ ಖಾನ್ ಅವರು ಈ ವಿಚಾರ ರಿವೀಲ್ ಮಾಡಿದ್ದಾರೆ.

ಇದನ್ನೂ ಓದಿ: ‘ಆಮಿರ್ ಖಾನ್ ಮಾತು ಕೇಳಿ ನನಗೆ ಶಾಕ್ ಆಯಿತು’: ಉಪೇಂದ್ರ

ಆಮಿರ್ ಖಾನ್ ಅವರು ಸದ್ಯ ‘ಸಿತಾರೆ ಜಮೀನ್​ಪರ್​’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ‘ಥಗ್ಸ್ ಆಫ್ ಹಿಂದೂಸ್ತಾನ್’ ಬಳಿಕ ಆಮಿರ್ ಖಾನ್ ಒಪ್ಪಿಕೊಂಡ ಚಿತ್ರ ಇದಾಗಿದೆ. ಈ ಕಾರಣಕ್ಕೂ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಸತತ ಸೋಲಿನಿಂದ ಕಂಗೆಟ್ಟಿದ್ದ ಆಮಿರ್ ಖಾನ್ ಅವರು ನಟನೆಯಿಂದ ಬ್ರೇಕ್ ಪಡೆದಿದ್ದರು. ಈಗ ಅವರು ಕಂಬ್ಯಾಕ್ ಮಾಡುತ್ತಿದ್ದಾರೆ. ಇತ್ತೀಚೆಗೆ ಆಮಿರ್ ಖಾನ್ ಅವರು ನಿರ್ಮಾಣದ ಬಗ್ಗೆ ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ