AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮಿರ್ ಖಾನ್ ರಾಷ್ಟ್ರಪ್ರೇಮ ಮೆಚ್ಚಲೇಬೇಕು; ಪಾಕಿಸ್ತಾನದ ವಿಚಾರ ಬಂದಿದ್ದಕ್ಕೆ ಬಿಸ್ನೆಸ್ ಬಿಟ್ಟ ಹೀರೋ

ಆಮೀರ್ ಖಾನ್ ಅವರ "ದಂಗಲ್" ಚಿತ್ರದ ಪಾಕಿಸ್ತಾನ ಬಿಡುಗಡೆಯಲ್ಲಿ ಭಾರತದ ರಾಷ್ಟ್ರಗೀತೆ ಮತ್ತು ಧ್ವಜವನ್ನು ತೆಗೆದುಹಾಕಲು ಪಾಕಿಸ್ತಾನದ ಸೆನ್ಸಾರ್ ಬೋರ್ಡ್ ಆಗ್ರಹಿಸಿತ್ತು. ಆದರೆ ಆಮೀರ್ ಖಾನ್ ಅವರು ನಿರಾಕರಿಸಿದರು. ಅವರು ವ್ಯಾಪಾರದ ನಷ್ಟವನ್ನು ಒಪ್ಪಿಕೊಂಡರೂ, ರಾಷ್ಟ್ರೀಯ ಭಾವನೆಗೆ ತಮ್ಮ ಬದ್ಧತೆಯನ್ನು ಪ್ರದರ್ಶಿಸಿದರು. 

ಆಮಿರ್ ಖಾನ್ ರಾಷ್ಟ್ರಪ್ರೇಮ ಮೆಚ್ಚಲೇಬೇಕು; ಪಾಕಿಸ್ತಾನದ ವಿಚಾರ ಬಂದಿದ್ದಕ್ಕೆ ಬಿಸ್ನೆಸ್ ಬಿಟ್ಟ ಹೀರೋ
Aamir
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 21, 2025 | 12:30 PM

Share

ಆಮಿರ್ ಖಾನ್ ಅವರು ಹಲವು ವರ್ಷಗಳಿಂದ ದೇಶದಲ್ಲಿ ಇದ್ದಾರೆ. ಅವರು ಈ ಮೊದಲು ತಮ್ಮ ಹೇಳಿಕೆಗಳಿಂದ ಸಾಕಷ್ಟು ಟೀಕೆಗೆ ಒಳಗಾಗಿದ್ದೂ ಇದೆ. ಈಗ ಅವರ ರಾಷ್ಟ್ರ ಪ್ರೇಮ ತೋರಿಸುವಂತಹ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಆಮಿರ್ ಖಾನ್ ಅವರು ಈ ಬಗ್ಗೆ ವಿವರಿಸಿದ್ದಾರೆ. ಅಷ್ಟಕ್ಕೂ ಏನದು ವಿಚಾರ? ಆ ಘಟನೆ ಬಗ್ಗೆ ಇಲ್ಲಿದೆ ಮಾಹಿತಿ.

ಆಮಿರ್ ಖಾನ್ ಅವರು ‘ದಂಗಲ್’ ಹೆಸರಿನ ಸಿನಿಮಾ ಮಾಡಿದ್ದರು. ಈ ಚಿತ್ರವನ್ನು ಅವರೇ ನಿರ್ಮಾಣ ಕೂಡ ಮಾಡಿದ್ದರು. ಈ ಸಿನಿಮಾ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆಯಿತು. ಈ ಸಿನಿಮಾದ ಬಿಸ್ನೆಸ್ 2 ಸಾವಿರ ಕೋಟಿ ರೂಪಾಯಿಗೂ ಅಧಿಕ. ಚಿತ್ರದ ಬಜೆಟ್ ಕೇವಲ 70 ಕೋಟಿ ರೂಪಾಯಿ ಅಂದರೆ ನೀವು ನಂಬಲೇಬೇಕು. ಆಮಿರ್ ಖಾನ್ ಅವರು ‘ದಂಗಲ್’ ಸಿನಿಮಾ ವಿಚಾರದಲ್ಲಿ ಆದ ಒಂದು ಘಟನೆ ವಿವರಿಸಿದ್ದರು.

‘ದಂಗಲ್’ ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿ ಗೀತಾ ಫೋಗಟ್ (ಫಾತಿಮಾ ಸನಾ ಶೇಖ್) ಕುಸ್ತಿ ಗೆಲ್ಲುತ್ತಾಳೆ. ಈ ವೇಳೆ ಭಾರತದ ರಾಷ್ಟ್ರಗೀತೆ ಪ್ರಸಾರ ಆಗುತ್ತದೆ. ಭಾರತದ ಧ್ವಜ ಮೇಲಕ್ಕೆ ಹಾರುತ್ತದೆ. ಈ ಸಿನಿಮಾ ಒಟಿಟಿಯಲ್ಲಿ ಬಿಡುಗಡೆ ಕಾಣುವಾಗ ಪಾಕಿಸ್ತಾನದ ಸೆನ್ಸಾರ್ ಬೋರ್ಡ್​ನವರು ಕಿರಿಕ್ ಮಾಡಿದರಂತೆ.

View this post on Instagram

A post shared by vcast777 (@vcast_7773)

‘ನನಗೆ ಡಿಸ್ನಿ ಅವರು ಕರೆ ಮಾಡಿ ನಿಮ್ಮ ಸಿನಿಮಾ ಪಾಕಿಸ್ತಾನದಲ್ಲಿ ಪ್ರಸಾರ ಕಾಣಲು ಸೆನ್ಸಾರ್​ನವರು ಸಮಸ್ಯೆ ಮಾಡುತ್ತಿದ್ದಾರೆ ಎಂದರು. ಅವರು ಕ್ಲೈಮ್ಯಾಕ್ಸ್​ನಲ್ಲಿ ಬರೋ ಭಾರತದ ರಾಷ್ಟ್ರಗೀತೆ ತೆಗೆಯಬೇಕು ಮತ್ತು ಭಾರತದ ಬಾವುಟ ತೋರಿಸಬಾರದು ಎನ್ನುತ್ತಿದ್ದಾರೆ ಎಂದರು. ನಾನು ಮರುಕ್ಷಣವೇ ಬೇಡ ಎಂದೆ. ಇದರಲ್ಲಿ ಯೋಚಿಸುವ ವಿಚಾರವೇ ಇಲ್ಲ’ ಎಂದಿದ್ದರು ಆಮಿರ್ ಖಾನ್.

ಇದನ್ನೂ ಓದಿ: ‘ಆ ರೀತಿ ಮಾಡೋದು ತಪ್ಪು’; ದೀಪಿಕಾಗೆ ಟಾಂಗ್ ಕೊಟ್ಟರಾ ಆಮಿರ್ ಖಾನ್?

‘ನಮ್ಮ ಸಿನಿಮಾ ಪಾಕಿಸ್ತಾನದಲ್ಲಿ ಪ್ರಸಾರ ಕಾಣೋದು ಬೇಡ ಎಂದೆ. ಇದರಲ್ಲಿ ಯೋಚಿಸುವ ವಿಚಾರವೇ ಇಲ್ಲ. ಬಿಸ್ನೆಸ್ ಮೇಲೆ ಪ್ರಭಾವ ಬೀರುತ್ತದೆ, ಲಾಸ್ ಆಗುತ್ತದೆ ಎಂದರು. ನಮ್ಮ ರಾಷ್ಟ್ರಗೀತೆ ತೆಗೆಯಬೇಕು, ಧ್ವಜವನ್ನು ತೆಗೆಯಬೇಕು ಎಂಬತಹ ಬಿಸ್ನೆಸ್ ನನಗೆ ಬೇಡವೇ ಬೇಡ’ ಎಂದಿದ್ದರು ಆಮಿರ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದೇವಾಲಯಗಳ ಮೇಲೆ ನಿಧಿಗಳ್ಳರ ಕಣ್ಣು
ದೇವಾಲಯಗಳ ಮೇಲೆ ನಿಧಿಗಳ್ಳರ ಕಣ್ಣು
ಡಿಕೆಶಿ ಬಳಿ ದೆಹಲಿಗೆ ಬನ್ನಿ ಎಂದಿದ್ದರೂ ರಾಹುಲ್ ಗಾಂಧಿ ಸಿಗೋದು ಅನುಮಾನ!
ಡಿಕೆಶಿ ಬಳಿ ದೆಹಲಿಗೆ ಬನ್ನಿ ಎಂದಿದ್ದರೂ ರಾಹುಲ್ ಗಾಂಧಿ ಸಿಗೋದು ಅನುಮಾನ!
ಗವಿ ಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು ಗೊತ್ತೇ?
ಗವಿ ಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು ಗೊತ್ತೇ?
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು
ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು