AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮಿರ್ ಖಾನ್ ರಾಷ್ಟ್ರಪ್ರೇಮ ಮೆಚ್ಚಲೇಬೇಕು; ಪಾಕಿಸ್ತಾನದ ವಿಚಾರ ಬಂದಿದ್ದಕ್ಕೆ ಬಿಸ್ನೆಸ್ ಬಿಟ್ಟ ಹೀರೋ

ಆಮೀರ್ ಖಾನ್ ಅವರ "ದಂಗಲ್" ಚಿತ್ರದ ಪಾಕಿಸ್ತಾನ ಬಿಡುಗಡೆಯಲ್ಲಿ ಭಾರತದ ರಾಷ್ಟ್ರಗೀತೆ ಮತ್ತು ಧ್ವಜವನ್ನು ತೆಗೆದುಹಾಕಲು ಪಾಕಿಸ್ತಾನದ ಸೆನ್ಸಾರ್ ಬೋರ್ಡ್ ಆಗ್ರಹಿಸಿತ್ತು. ಆದರೆ ಆಮೀರ್ ಖಾನ್ ಅವರು ನಿರಾಕರಿಸಿದರು. ಅವರು ವ್ಯಾಪಾರದ ನಷ್ಟವನ್ನು ಒಪ್ಪಿಕೊಂಡರೂ, ರಾಷ್ಟ್ರೀಯ ಭಾವನೆಗೆ ತಮ್ಮ ಬದ್ಧತೆಯನ್ನು ಪ್ರದರ್ಶಿಸಿದರು. 

ಆಮಿರ್ ಖಾನ್ ರಾಷ್ಟ್ರಪ್ರೇಮ ಮೆಚ್ಚಲೇಬೇಕು; ಪಾಕಿಸ್ತಾನದ ವಿಚಾರ ಬಂದಿದ್ದಕ್ಕೆ ಬಿಸ್ನೆಸ್ ಬಿಟ್ಟ ಹೀರೋ
Aamir
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 21, 2025 | 12:30 PM

Share

ಆಮಿರ್ ಖಾನ್ ಅವರು ಹಲವು ವರ್ಷಗಳಿಂದ ದೇಶದಲ್ಲಿ ಇದ್ದಾರೆ. ಅವರು ಈ ಮೊದಲು ತಮ್ಮ ಹೇಳಿಕೆಗಳಿಂದ ಸಾಕಷ್ಟು ಟೀಕೆಗೆ ಒಳಗಾಗಿದ್ದೂ ಇದೆ. ಈಗ ಅವರ ರಾಷ್ಟ್ರ ಪ್ರೇಮ ತೋರಿಸುವಂತಹ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಆಮಿರ್ ಖಾನ್ ಅವರು ಈ ಬಗ್ಗೆ ವಿವರಿಸಿದ್ದಾರೆ. ಅಷ್ಟಕ್ಕೂ ಏನದು ವಿಚಾರ? ಆ ಘಟನೆ ಬಗ್ಗೆ ಇಲ್ಲಿದೆ ಮಾಹಿತಿ.

ಆಮಿರ್ ಖಾನ್ ಅವರು ‘ದಂಗಲ್’ ಹೆಸರಿನ ಸಿನಿಮಾ ಮಾಡಿದ್ದರು. ಈ ಚಿತ್ರವನ್ನು ಅವರೇ ನಿರ್ಮಾಣ ಕೂಡ ಮಾಡಿದ್ದರು. ಈ ಸಿನಿಮಾ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆಯಿತು. ಈ ಸಿನಿಮಾದ ಬಿಸ್ನೆಸ್ 2 ಸಾವಿರ ಕೋಟಿ ರೂಪಾಯಿಗೂ ಅಧಿಕ. ಚಿತ್ರದ ಬಜೆಟ್ ಕೇವಲ 70 ಕೋಟಿ ರೂಪಾಯಿ ಅಂದರೆ ನೀವು ನಂಬಲೇಬೇಕು. ಆಮಿರ್ ಖಾನ್ ಅವರು ‘ದಂಗಲ್’ ಸಿನಿಮಾ ವಿಚಾರದಲ್ಲಿ ಆದ ಒಂದು ಘಟನೆ ವಿವರಿಸಿದ್ದರು.

‘ದಂಗಲ್’ ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿ ಗೀತಾ ಫೋಗಟ್ (ಫಾತಿಮಾ ಸನಾ ಶೇಖ್) ಕುಸ್ತಿ ಗೆಲ್ಲುತ್ತಾಳೆ. ಈ ವೇಳೆ ಭಾರತದ ರಾಷ್ಟ್ರಗೀತೆ ಪ್ರಸಾರ ಆಗುತ್ತದೆ. ಭಾರತದ ಧ್ವಜ ಮೇಲಕ್ಕೆ ಹಾರುತ್ತದೆ. ಈ ಸಿನಿಮಾ ಒಟಿಟಿಯಲ್ಲಿ ಬಿಡುಗಡೆ ಕಾಣುವಾಗ ಪಾಕಿಸ್ತಾನದ ಸೆನ್ಸಾರ್ ಬೋರ್ಡ್​ನವರು ಕಿರಿಕ್ ಮಾಡಿದರಂತೆ.

View this post on Instagram

A post shared by vcast777 (@vcast_7773)

‘ನನಗೆ ಡಿಸ್ನಿ ಅವರು ಕರೆ ಮಾಡಿ ನಿಮ್ಮ ಸಿನಿಮಾ ಪಾಕಿಸ್ತಾನದಲ್ಲಿ ಪ್ರಸಾರ ಕಾಣಲು ಸೆನ್ಸಾರ್​ನವರು ಸಮಸ್ಯೆ ಮಾಡುತ್ತಿದ್ದಾರೆ ಎಂದರು. ಅವರು ಕ್ಲೈಮ್ಯಾಕ್ಸ್​ನಲ್ಲಿ ಬರೋ ಭಾರತದ ರಾಷ್ಟ್ರಗೀತೆ ತೆಗೆಯಬೇಕು ಮತ್ತು ಭಾರತದ ಬಾವುಟ ತೋರಿಸಬಾರದು ಎನ್ನುತ್ತಿದ್ದಾರೆ ಎಂದರು. ನಾನು ಮರುಕ್ಷಣವೇ ಬೇಡ ಎಂದೆ. ಇದರಲ್ಲಿ ಯೋಚಿಸುವ ವಿಚಾರವೇ ಇಲ್ಲ’ ಎಂದಿದ್ದರು ಆಮಿರ್ ಖಾನ್.

ಇದನ್ನೂ ಓದಿ: ‘ಆ ರೀತಿ ಮಾಡೋದು ತಪ್ಪು’; ದೀಪಿಕಾಗೆ ಟಾಂಗ್ ಕೊಟ್ಟರಾ ಆಮಿರ್ ಖಾನ್?

‘ನಮ್ಮ ಸಿನಿಮಾ ಪಾಕಿಸ್ತಾನದಲ್ಲಿ ಪ್ರಸಾರ ಕಾಣೋದು ಬೇಡ ಎಂದೆ. ಇದರಲ್ಲಿ ಯೋಚಿಸುವ ವಿಚಾರವೇ ಇಲ್ಲ. ಬಿಸ್ನೆಸ್ ಮೇಲೆ ಪ್ರಭಾವ ಬೀರುತ್ತದೆ, ಲಾಸ್ ಆಗುತ್ತದೆ ಎಂದರು. ನಮ್ಮ ರಾಷ್ಟ್ರಗೀತೆ ತೆಗೆಯಬೇಕು, ಧ್ವಜವನ್ನು ತೆಗೆಯಬೇಕು ಎಂಬತಹ ಬಿಸ್ನೆಸ್ ನನಗೆ ಬೇಡವೇ ಬೇಡ’ ಎಂದಿದ್ದರು ಆಮಿರ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ