AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಾರೂ ಮತಾಂತರವಾಗಿಲ್ಲ’: ಲವ್ ಜಿಹಾದ್ ಆರೋಪ ತಳ್ಳಿಹಾಕಿದ ಆಮೀರ್ ಖಾನ್

Aamir Khan movie: ಆಮಿರ್ ಅವರ ಮೂರನೇ ಮದುವೆ ಬಳಿಕ ಆಮಿರ್ ವಿರುದ್ಧ ಲವ್ ಜಿಹಾದ್ ಆರೋಪಗಳನ್ನು ಕೆಲವರು ಹೊರಿಸಿದ್ದರು. ಅನ್ಯ ಧರ್ಮೀಯರನ್ನು ಮದುವೆ ಆಗಿರುವುದಕ್ಕೆ ಆಮಿರ್ ವಿರುದ್ಧ ಫತ್ವಾ ಸಹ ಹೊರಡಿಸಲಾಗಿತ್ತು. ಇದೀಗ ನಟ ಆಮಿರ್ ಖಾನ್ ತಮ್ಮ ಮೇಲೆ ಹೊರಿಸಲಾದ ಲವ್ ಜಿಹಾದ್ ಆರೋಪಗಳನ್ನು ತಳ್ಳಿಹಾಕಿದ್ದು, ತಮ್ಮ ಕುಟುಂಬದಲ್ಲಿ ನಡೆದ ಅಂತರ್ಧರ್ಮೀಯ ವಿವಾಹಗಳಲ್ಲಿ ಯಾವುದೇ ರೀತಿಯ ಧಾರ್ಮಿಕ ಮತಾಂತರ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

‘ಯಾರೂ ಮತಾಂತರವಾಗಿಲ್ಲ’: ಲವ್ ಜಿಹಾದ್ ಆರೋಪ ತಳ್ಳಿಹಾಕಿದ ಆಮೀರ್ ಖಾನ್
Aamir Khan Wives
ಮಂಜುನಾಥ ಸಿ.
|

Updated on: Jul 15, 2026 | 1:32 PM

Share

ಬಾಲಿವುಡ್ ಸ್ಟಾರ್ ನಟ, ನಿರ್ಮಾಪಕ ಆಮೀರ್ ಖಾನ್ (Aamir Khan) ಇತ್ತೀಚೆಗಷ್ಟೆ ಮೂರನೇ ಬಾರಿ ಮದುವೆ ಆಗಿದ್ದಾರೆ. ಬೆಂಗಳೂರಿನ ನಿವಾಸಿ ಗೌರಿ ಸ್ಪ್ರಾಟ್ ಅವರು ಆಮಿರ ಖಾನ್ ಅವರ ಮೂರನೇ ಪತ್ನಿ. ಈ ಹಿಂದೆ ಅವರು ರೀನಾ ದತ್ತಾ ಮತ್ತು ಕಿರಣ್ ರಾವ್ ಅವರುಗಳನ್ನು ವಿವಾಹವಾಗಿದ್ದರು. ಆಮಿರ್ ಅವರ ಮೂರನೇ ಮದುವೆ ಬಳಿಕ ಆಮಿರ್ ವಿರುದ್ಧ ಲವ್ ಜಿಹಾದ್ ಆರೋಪಗಳನ್ನು ಕೆಲವರು ಹೊರಿಸಿದ್ದರು. ಅನ್ಯ ಧರ್ಮೀಯರನ್ನು ಮದುವೆ ಆಗಿರುವುದಕ್ಕೆ ಆಮಿರ್ ವಿರುದ್ಧ ಫತ್ವಾ ಸಹ ಹೊರಡಿಸಲಾಗಿತ್ತು. ಇದೀಗ ನಟ ಆಮಿರ್ ಖಾನ್ ತಮ್ಮ ಮೇಲೆ ಹೊರಿಸಲಾದ ಲವ್ ಜಿಹಾದ್ ಆರೋಪಗಳನ್ನು ತಳ್ಳಿಹಾಕಿದ್ದು, ತಮ್ಮ ಕುಟುಂಬದಲ್ಲಿ ನಡೆದ ಅಂತರ್ಧರ್ಮೀಯ ವಿವಾಹಗಳಲ್ಲಿ ಯಾವುದೇ ರೀತಿಯ ಧಾರ್ಮಿಕ ಮತಾಂತರ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಆಮಿರ್ ಖಾನ್, ‘ತಮ್ಮ ಕುಟುಂಬದ ಸದಸ್ಯರು ಸಿವಿಲ್ ಮ್ಯಾರೇಜ್ ಆಕ್ಟ್ ಮೂಲಕ ಹಿಂದೂಗಳು ಮತ್ತು ಕ್ರಿಶ್ಚಿಯನ್ನರನ್ನು ವಿವಾಹವಾಗಿದ್ದಾರೆ. ಈ ಮದುವೆಗಳಲ್ಲಿ ಧಾರ್ಮಿಕ ಮತಾಂತರ ಎಂದಿಗೂ ನಡೆದಿಲ್ಲ ಎಂದು ಆಮಿರ್ ಖಾನ್ ಹೇಳಿದ್ದಾರೆ. ‘ನಮ್ಮದು ಬಹಳ ಎಲ್ಲರನ್ನೂ ಒಳಗೊಳ್ಳುವಂತಹ ಕುಟುಂಬ. ನನ್ನ ಇಬ್ಬರು ಸಹೋದರಿಯರು ಹಿಂದೂಗಳನ್ನು ಮದುವೆಯಾಗಿದ್ದಾರೆ. ನನ್ನ ಮಗಳು ಕೂಡ ಒಬ್ಬ ಹಿಂದೂ ವ್ಯಕ್ತಿಯನ್ನು ಮದುವೆಯಾಗಿದ್ದಾಳೆ. ನನ್ನ ಸೋದರಸಂಬಂಧಿ ಮನ್ಸೂರ್ ಒಬ್ಬ ಕ್ರಿಶ್ಚಿಯನ್ ಮಹಿಳೆಯನ್ನು ಮದುವೆಯಾಗಿದ್ದಾರೆ’ ಎಂದಿದ್ದಾರೆ.

ಮುಂದೆ ಮಾತನಾಡಿ, ‘ಗೌರಿ, ಕಿರಣ್ ಅಥವಾ ರೀನಾ ಯಾರೂ ತಮ್ಮ ಧರ್ಮವನ್ನು ಬದಲಾಯಿಸಲಿಲ್ಲ, ಏಕೆಂದರೆ ನಾವು ಸಿವಿಲ್ ಮ್ಯಾರೇಜ್ (ನೊಂದಣಿ ಮದುವೆ) ಮಾಡಿಕೊಂಡಿದ್ದೆವು. ಈಗ ಮದುವೆ ಆಗಿರುವ ಗೌರಿ ಹಿಂದೂ ಕೂಡ ಅಲ್ಲ, ಅವರು ಕ್ರಿಶ್ಚಿಯನ್, ಅವರು ಸಹ ಧರ್ಮದ ಕಟ್ಟಳೆಗಳ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳುವವರಲ್ಲ. ಕಾಲ ಕಳೆಯುತ್ತಿದ್ದಂತೆ ಜೀವನವು ಹೆಚ್ಚು ಹಾಸ್ಯಾಸ್ಪದವಾಗುತ್ತಿದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಈ ಪ್ಯಾನ್ ಇಂಡಿಯಾ ಸ್ಟಾರ್ ನಟನಿಗೆ ಶಿವಣ್ಣನ ಆ ಸಿನಿಮಾ ಬಲು ಇಷ್ಟ

ಆಮೀರ್ ಮತ್ತು ಗೌರಿ ಸುಮಾರು 25 ವರ್ಷಗಳ ಹಿಂದೆ ಪರಿಚಯ ಆಗಿದ್ದರು. ಆದರೆ ಆಗ ಪರಸ್ಪರರು ತಮ್ಮ ತಮ್ಮ ಕೆಲಸ, ಕುಟುಂಬಗಳಲ್ಲಿ ತೊಡಗಿಕೊಂಡಿದ್ದರು. ಗೌರಿಗೆ ಮದುವೆ ಆಗಿ ವಿಚ್ಛೇದನ ಆಗಿತ್ತು, ಆಮಿರ್ ಸಹ ಎರಡು ಮದುವೆ ಆಗಿ ವಿಚ್ಛೇದನ ಮಾಡಿಕೊಂಡಿದ್ದರು. ಸುಮಾರು ಎರಡು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಆಮಿರ್ ಅವರ ಸೋದರ ಸಂಬಂಧಿ ನುಜಾತ್ ಖಾನ್ ಅವರ ಮೂಲಕ ಗೌರಿ ಮತ್ತೆ ಸಂಪರ್ಕಕ್ಕೆ ಬಂದರು. ಕಳೆದ ವರ್ಷ ಮಾರ್ಚ್‌ನಲ್ಲಿ ತಮ್ಮ 60ನೇ ಹುಟ್ಟುಹಬ್ಬದ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಟ ಗೌರಿಯನ್ನು ಸಾರ್ವಜನಿಕರಿಗೆ ಪರಿಚಯಿಸಿದ್ದರು. ಅವರ ಸ್ನೇಹವು ನಂತರ ಪ್ರೀತಿಗೆ ತಿರುಗಿತು. ಇಬ್ಬರೂ ಎರಡು ವರ್ಷಗಳಿಗೂ ಹೆಚ್ಚು ಕಾಲ ಡೇಟಿಂಗ್ ನಡೆಸಿದ ನಂತರ ಜುಲೈ 5 ರಂದು ವಿವಾಹವಾದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಯಾಣಿಕರಂತೆ ಬಂದು ಕಂಡಕ್ಟರ್ ಬ್ಯಾಗನ್ನೇ ಎಗಿರಿಸಿದ ಮಹಿಳೆ, ವಿಡಿಯೋ ವೈರಲ್
ಪ್ರಯಾಣಿಕರಂತೆ ಬಂದು ಕಂಡಕ್ಟರ್ ಬ್ಯಾಗನ್ನೇ ಎಗಿರಿಸಿದ ಮಹಿಳೆ, ವಿಡಿಯೋ ವೈರಲ್
ಯಶ್ ಒಬ್ಬ ಕವಿ, ಮುಂಚೆ ಕವಿತೆ ಬರೀತಿದ್ದ: ಯೋಗರಾಜ್ ಭಟ್
ಯಶ್ ಒಬ್ಬ ಕವಿ, ಮುಂಚೆ ಕವಿತೆ ಬರೀತಿದ್ದ: ಯೋಗರಾಜ್ ಭಟ್
‘ಮೈಸೂರು ದಸರಾದಲ್ಲಿ ಕಂಬಳ ಬೇಡ’: ಕಾರಣ ನೀಡಿದ ಶೆಲ್ವಪಿಳ್ಳೈ ಅಯ್ಯಂಗಾರ್!
‘ಮೈಸೂರು ದಸರಾದಲ್ಲಿ ಕಂಬಳ ಬೇಡ’: ಕಾರಣ ನೀಡಿದ ಶೆಲ್ವಪಿಳ್ಳೈ ಅಯ್ಯಂಗಾರ್!
ಸ್ಮಶಾನವಿಲ್ಲದೆ ನಡುರಸ್ತೆಯಲ್ಲೇ ಶವಸಂಸ್ಕಾರಕ್ಕೆ ಮುಂದಾದ ಗ್ರಾಮಸ್ಥರು!
ಸ್ಮಶಾನವಿಲ್ಲದೆ ನಡುರಸ್ತೆಯಲ್ಲೇ ಶವಸಂಸ್ಕಾರಕ್ಕೆ ಮುಂದಾದ ಗ್ರಾಮಸ್ಥರು!
ಮತ್ತೊಂದು ಮಹಾ ಅಭಿಯಾನಕ್ಕೆ ಬೆಂಗಳೂರು ಸಿದ್ಧ! ಆಗಸ್ಟ್​ 1ರಿಂದ ಕ್ಲೀನಿಂಗ್
ಮತ್ತೊಂದು ಮಹಾ ಅಭಿಯಾನಕ್ಕೆ ಬೆಂಗಳೂರು ಸಿದ್ಧ! ಆಗಸ್ಟ್​ 1ರಿಂದ ಕ್ಲೀನಿಂಗ್
ಫಿಫಾ ವಿಶ್ವಕಪ್ ಕ್ರೇಜ್: ರಾತ್ರಿ 3:30ರವರೆಗೆ ರೆಸ್ಟೋರೆಂಟ್​ಗಳು ಓಪನ್
ಫಿಫಾ ವಿಶ್ವಕಪ್ ಕ್ರೇಜ್: ರಾತ್ರಿ 3:30ರವರೆಗೆ ರೆಸ್ಟೋರೆಂಟ್​ಗಳು ಓಪನ್
ಕಲಬುರಗಿ ಸೆಂಟ್ರಲ್ ಜೈಲಿನಿಂದ ಸಜಾ ಕೈದಿಗಳು ಎಸ್ಕೇಪ್ ಆದ ದೃಶ್ಯ ಇಲ್ಲಿದೆ !
ಕಲಬುರಗಿ ಸೆಂಟ್ರಲ್ ಜೈಲಿನಿಂದ ಸಜಾ ಕೈದಿಗಳು ಎಸ್ಕೇಪ್ ಆದ ದೃಶ್ಯ ಇಲ್ಲಿದೆ !
ಇಂದು ಗಜಕೇಸರಿ ಮಹಾಯೋಗ, ಆಷಾಢ ಮಾಸ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಗಜಕೇಸರಿ ಮಹಾಯೋಗ, ಆಷಾಢ ಮಾಸ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕುಮಾರಸ್ವಾಮಿ ಲೇಔಟ್‌ನಲ್ಲಿ ಅಕ್ರಮ ವಾಹನ ನಿಲುಗಡೆ
ಕುಮಾರಸ್ವಾಮಿ ಲೇಔಟ್‌ನಲ್ಲಿ ಅಕ್ರಮ ವಾಹನ ನಿಲುಗಡೆ
ಮೋದಿ ಕೊಟ್ಟ ಬಿಹಾರದ ಠೇಕುವಾ ಸ್ವೀಟ್ ಸವಿದ ಸ್ಲೋವಾಕಿಯಾ ನಾಯಕ ಹೇಳಿದ್ದೇನು?
ಮೋದಿ ಕೊಟ್ಟ ಬಿಹಾರದ ಠೇಕುವಾ ಸ್ವೀಟ್ ಸವಿದ ಸ್ಲೋವಾಕಿಯಾ ನಾಯಕ ಹೇಳಿದ್ದೇನು?