AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲಾಲ್ ಸಿಂಗ್ ಚಡ್ಡಾ’ ಬಳಿಕ ಬ್ರೇಕ್ ತೆಗೆದುಕೊಂಡಿದ್ದ ಆಮಿರ್​ ಖಾನ್​ಗೆ ಈಗ ಮತ್ತೆ ಸಿನಿಮಾ ಮಾಡುವ ಬಯಕೆ

ನಟ ಆಮಿರ್​ ಖಾನ್​ ಅವರು ನಟನೆಯಿಂದ ಸ್ವಲ್ಪ ಸಮಯ ಬ್ರೇಕ್ ತೆಗೆದುಕೊಂಡಿದ್ದರು. ಒಂದು ವರ್ಷದ ಗ್ಯಾಪ್ ನಂತರ ಅವರು ಮತ್ತೆ ನಟನೆಗೆ ಮರಳಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಈ ಬಾರಿ ಅವರು ಮತ್ತೆ ಬಯೋಪಿಕ್ ಮೊರೆ ಹೋಗುತ್ತಾರೆ ಎಂದು ಕೂಡ ಹೇಳಲಾಗುತ್ತಿದೆ. ಒಟ್ಟಾರೆ ಈ ಸುದ್ದಿ ಕೇಳಿ ಅಭಿಮಾನಿಗಳಲ್ಲಿ ಕೌತುಕ ಮೂಡಿದೆ.

‘ಲಾಲ್ ಸಿಂಗ್ ಚಡ್ಡಾ’ ಬಳಿಕ ಬ್ರೇಕ್ ತೆಗೆದುಕೊಂಡಿದ್ದ ಆಮಿರ್​ ಖಾನ್​ಗೆ ಈಗ ಮತ್ತೆ ಸಿನಿಮಾ ಮಾಡುವ ಬಯಕೆ
ಆಮಿರ್ ಖಾನ್​
TV9 Web
| Edited By: |

Updated on: Aug 29, 2023 | 5:10 PM

Share

ಬಾಲಿವುಡ್​ನ ‘ಮಿಸ್ಟರ್ ಪರ್ಫೆಕ್ಷನಿಸ್ಟ್’ ಆಮಿರ್ ಖಾನ್ (Aamir Khan) ಅವರ ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ಫ್ಲಾಪ್ ಆದ ನಂತರ ಅವರು ನಟನೆಯಿಂದ ಬ್ರೇಕ್ ತೆಗೆದುಕೊಂಡಿದ್ದರು. 2018ರಲ್ಲಿ ತೆರೆಕಂಡ ‘ಥಗ್ಸ್ ಆಫ್ ಹಿಂದುಸ್ಥಾನ್’ ಸಿನಿಮಾ 300 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿತ್ತು. ಆದರೆ, ಈ ಚಿತ್ರ ಕೇವಲ 150 ಕೋಟಿ ರೂಪಾಯಿ ಕಲೆಕ್ಷನ್​ ಮಾಡಲು ಸಾಧ್ಯವಾಗಿತ್ತು. ಇನ್ನು, ಕಳೆದ ವರ್ಷ ಆಮಿರ್ ಖಾನ್-ಕರೀನಾ ಕಪೂರ್ ಒಟ್ಟಿಗೆ ನಟಿಸಿದ್ದ ‘ಲಾಲ್ ಸಿಂಗ್ ಚಡ್ಡಾ’ (Laal Singh Chaddha) ಬಿಡುಗಡೆಯಾಗಿತ್ತು. ಇಂಗ್ಲಿಷ್​ನ ‘ಫಾರೆಸ್ಟ್ ಗಂಪ್’ ಸಿನಿಮಾದ ಹಿಂದಿ ರಿಮೇಕ್ ಆಗಿರುವ ಈ ಚಿತ್ರ ಕೂಡ ಬಾಕ್ಸ್ ಆಫೀಸ್​ನಲ್ಲಿ ಸದ್ದು ಮಾಡಲು ಸೋತಿತ್ತು. ಆ ಬಳಿಕ ನಟನೆಯಿಂದಲೇ ಬ್ರೇಕ್​ ಪಡೆದುಕೊಂಡಿದ್ದ ಆಮಿರ್ ಖಾನ್​ ಅವರು ಈಗ ಮತ್ತೆ ಸಿನಿಮಾ (Aamir Khan New Movie) ಮಾಡಲು ಉತ್ಸಾಹ ತೋರಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

‘ಲಾಲ್ ಸಿಂಗ್ ಚಡ್ಡಾ’ ಸಿನಿಮಾ 180 ಕೋಟಿ ರೂಪಾಯಿ ಬಜೆಟ್​ನಲ್ಲಿ ನಿರ್ಮಾಣಗೊಂಡಿತ್ತು. ಆದರೆ ಈ ಚಿತ್ರಕ್ಕೆ ಬಾಕ್ಸ್​ ಆಫೀಸ್​ನಲ್ಲಿ ಸಂಗ್ರಹ ಆಗಿದ್ದು 129 ಕೋಟಿ ರೂಪಾಯಿ ಮಾತ್ರ. ಹೀಗೆ ಪದೇ ಪದೇ ಸೋಲು ಕಂಡಿದ್ದರಿಂದ ಆಮಿರ್​ ಖಾನ್ ಅವರು ನಟನೆಯಿಂದ ಅಂತರ ಕಾಯ್ದುಕೊಂಡಿದ್ದರು. ಕುಟುಂಬದವರ ಜೊತೆ ಹೆಚ್ಚು ಕಾಲ ಕಳೆಯಬೇಕು ಎಂದು ಅವರು ತೀರ್ಮಾನಿಸಿದ್ದರು. ಹಾಗಾಗಿ ಹೊಸ ಸಿನಿಮಾ ಒಪ್ಪಿಕೊಳ್ಳುವಲ್ಲಿ ಅವರು ಅವಸರ ತೋರಿಸಿರಲಿಲ್ಲ. ಅದರ ನಡುವೆ ನೇಪಾಳಕ್ಕೂ ತೆರಳಿ ಧ್ಯಾನ ಶಿಬಿರದಲ್ಲಿ ಪಾಲ್ಗೊಂಡಿದ್ದರು. ಈಗ ಆಮಿರ್​ ಖಾನ್​ ಅವರು ಸಿನಿಮಾದ ವಿಚಾರಕ್ಕಾಗಿ ಮತ್ತೆ ಸುದ್ದಿಯಲ್ಲಿದ್ದಾರೆ.

ಇದನ್ನೂ ಓದಿ: ಲಾಲ್ ಸಿಂಗ್ ಚಡ್ಡಾ; ನೋಡಿ ಓವರ್ ಆಕ್ಟಿಂಗ್ ಎಂದಿದ್ದ ರಾಜಮೌಳಿ, ಆಮಿರ್ ಖಾನ್ ಪ್ರತಿಕ್ರಿಯೆ ಏನಿತ್ತು?

ಆಮಿರ್​ ಖಾನ್​ ನಟಿಸಲಿರುವ ಹೊಸ ಚಿತ್ರವು ಶೀಘ್ರದಲ್ಲೇ ಸೆಟ್ಟೇರಿಲಿದೆ ಎಂಬ ಸುದ್ದಿ ಕೇಳಿಬಂದಿದೆ. ಆ ಸಿನಿಮಾ ಮುಂದಿನ ವರ್ಷವೇ ತೆರೆಕಾಣಲಿದೆ ಎಂದು ಕೂಡ ಹೇಳಲಾಗುತ್ತಿದೆ. 2024ರ ಕ್ರಿಸ್​ಮಸ್​ ಹಬ್ಬದ ಸಮಯದಲ್ಲಿ ಆ ಚಿತ್ರ ತೆರೆ ಮೇಲೆ ಬರಲಿದೆ. ಸದ್ಯ ಪ್ರೀ-ಪ್ರೊಡಕ್ಷನ್ ಹಂತದಲ್ಲಿ ಕೆಲಸಗಳು ನಡೆಯುತ್ತಿವೆ. ಆದರೆ ಈ ಬಗ್ಗೆ ಆಮಿರ್ ಖಾನ್​ ಕಡೆಯಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಇದನ್ನೂ ಓದಿ: ಬಯೋಪಿಕ್​ ಮಾಡಲು ತಯಾರಿ ನಡೆಸುತ್ತಿರುವ ಆಮಿರ್​ ಖಾನ್​-ರಾಜ್​ಕುಮಾರ್​ ಹಿರಾನಿ? ಕೇಳಿಬರ್ತಿದೆ ಹೊಸ ಸುದ್ದಿ

2022ರ ನವೆಂಬರ್​ನಲ್ಲಿ ಆಮಿರ್​ ಖಾನ್​ ಅವರು ನಟನೆಯಿಂದ ಬ್ರೇಕ್ ತೆಗೆದುಕೊಳ್ಳುವುದಾಗಿ ಹೇಳಿದ್ದರು. ಆ ಸಂದರ್ಭದಲ್ಲಿ ಮಾತನಾಡಿದ್ದ ಅವರು, ‘ನಾನು 35 ವರ್ಷಗಳಿಂದ ಚಿತ್ರರಂಗದಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿದ್ದೇನೆ. ಇದರಿಂದ ನನ್ನ ಕುಟುಂಬಕ್ಕೆ ಸಾಕಷ್ಟು ಸಮಯ ನೀಡಲು ಸಾಧ್ಯವಾಗಲಿಲ್ಲ. ಹಾಗಾಗಿ ಈಗ ನಟನೆಯಿಂದ ಸ್ವಲ್ಪ ಸಮಯ ಬ್ರೇಕ್ ತೆಗೆದುಕೊಳ್ಳಲಿದ್ದೇನೆ. ಮೊದಲ ಬಾರಿಗೆ ನಟನೆಯಿಂದ ಒಂದು ಅಥವಾ ಒಂದೂವರೆ ವರ್ಷ ದೂರವಿರುತ್ತಿದ್ದೇನೆ. ಆದರೆ ನಟನೆಯ ಬದಲು ನಿರ್ಮಾಪಕನಾಗಿ ಸಕ್ರಿಯನಾಗಿರುತ್ತೇನೆ’ ಎಂದಿದ್ದರು.

ಇದನ್ನೂ ಓದಿ: ಒಂದಾಗುತ್ತಿದೆ 3 ಇಡಿಯಟ್ಸ್, ಪಿಕೆ ಜೋಡಿ, ಈ ಬಾರಿ ಗೆದ್ದಾರೆಯೇ ಆಮಿರ್ ಖಾನ್?

ಪಬ್ಲಿಕ್ ಪ್ರಾಸಿಕ್ಯೂಟರ್ ಅಜ್ವಲ್ ನಿಕಮ್ ಅವರ ಬಯೋಪಿಕ್ ಮಾಡಲು ದಿನೇಶ್ ವಿಜನ್ ಅವರೊಂದಿಗೆ ಆಮಿರ್​ ಖಾನ್​ ಮಾತುಕತೆ ನಡೆಸುತ್ತಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಈ ಸಿನಿಮಾದ ಕಥೆಯ ಕುರಿತು ಹಲವು ಬಾರಿ ಚರ್ಚೆಗಳು ನಡೆದಿದ್ದು, ಹಲವು ನಿರ್ಮಾಪಕರು ಹಣ ಹೂಡಲಿದ್ದಾರೆ ಎಂದೂ ಹೇಳಲಾಗಿದೆ. ಸದ್ಯದಲ್ಲೇ ನಟರ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಈ ಸಿನಿಮಾ 2024ರಲ್ಲಿ ಸೆಟ್ಟೇರಲಿದೆ ಎನ್ನಲಾಗಿದೆ. ಈ ಚಿತ್ರದಲ್ಲಿ ಆಮಿರ್​ ಖಾನ್ ಅವರೇ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳತ್ತಾರಾ ಅಥವಾ ಬೇರೆ ಯಾರಾದರೂ ನಟಿಸುತ್ತಾರಾ ಎಂಬುದು ಕಾದು ನೋಡಬೇಕು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಅರ್ಚಕನಿಗೆ ಗಂಭೀರ ಗಾಯ
ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಅರ್ಚಕನಿಗೆ ಗಂಭೀರ ಗಾಯ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!