AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ 21 ವರ್ಷ, ಆಕೆಗೆ 19: ಮೊದಲ ವಿಚ್ಛೇದನಕ್ಕೆ ಕಾರಣ ತಿಳಿಸಿದ ಆಮಿರ್ ಖಾನ್

1986ರಲ್ಲಿ ಆಮಿರ್ ಖಾನ್ ಹಾಗೂ ರೀನಾ ದತ್ತ ವಿವಾಹ ನೆರವೇರಿತ್ತು. ಆದರೆ 2002ರಲ್ಲಿ ಅವರಿಬ್ಬರ ವಿಚ್ಛೇದನ ಪಡೆದುಕೊಂಡರು. ಬಳಿಕ ಕಿರಣ್ ರಾವ್ ಅವರನ್ನು ಆಮಿರ್ ಖಾನ್ ಮದುವೆ ಆದರು. 2021ರಲ್ಲಿ ಕಿರಣ್ ರಾವ್ ಅವರಿಂದಲೂ ಆಮಿರ್ ಖಾನ್ ಬೇರಾದರು. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಆಮಿರ್ ಖಾನ್ ಕೆಲವು ವಿಷಯ ಹಂಚಿಕೊಂಡಿದ್ದಾರೆ.

ನನಗೆ 21 ವರ್ಷ, ಆಕೆಗೆ 19: ಮೊದಲ ವಿಚ್ಛೇದನಕ್ಕೆ ಕಾರಣ ತಿಳಿಸಿದ ಆಮಿರ್ ಖಾನ್
Aamir Khan, Reena Dutta
ಮದನ್​ ಕುಮಾರ್​
|

Updated on: Jun 01, 2025 | 12:46 PM

Share

ನಟ ಆಮಿರ್ ಖಾನ್ (Aamir Khan) ಅವರು ವೈಯಕ್ತಿಕ ಜೀವನದ ಕಾರಣಕ್ಕೆ ಸದಾ ಚರ್ಚೆಯಲ್ಲಿ ಇರುತ್ತಾರೆ. ಅವರ ಎರಡು ಮದುವೆಗಳು ವಿಚ್ಛೇದನದಲ್ಲಿ ಕೊನೆಯಾದವು. ಈಗ ಮೂರನೇ ಮದುವೆ ಬಗ್ಗೆ ಅವರು ಆಲೋಚನೆ ಮಾಡುತ್ತಿದ್ದಾರೆ. ಈ ಮೊದಲು ರಿನಾ ದತ್ತ (Reena Dutta) ಮತ್ತು ಕಿರಣ್ ರಾವ್ ಅವರಿಗೆ ಆಮಿರ್ ಖಾನ್ ವಿಚ್ಛೇದನ ನೀಡಿದ್ದರು. ಬೆಂಗಳೂರು ಮೂಲದ ಮಹಿಳೆ ಗೌರಿ ಜೊತೆ ಈಗ ಆಮಿರ್ ಖಾನ್ ರಿಲೀಷನ್​ಶಿಪ್​ನಲ್ಲಿ ಇದ್ದಾರೆ. ಅಷ್ಟಕ್ಕೂ ಅವರ ಮೊದಲ ಮದುವೆ ಮುರಿದು ಬಿದ್ದಿದ್ದಕ್ಕೆ ಕಾರಣ ಏನು ಎಂಬುದನ್ನು ಈಗ ಆಮಿರ್ ಖಾನ್ ವಿವರಿಸಿದ್ದಾರೆ.

ಆಮಿರ್ ಖಾನ್ ನಟನೆಯ ‘ಸಿತಾರೆ ಜಮೀನ್ ಪರ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಜೂನ್ 20ರಂದು ಈ ಸಿನಿಮಾ ತೆರೆಕಾಣಲಿದ್ದು, ಅದರ ಪ್ರಯುಕ್ತ ಮಾಧ್ಯಮಗಳಿಗೆ ಅವರು ಸಂದರ್ಶನ ನೀಡಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಆಮಿರ್ ಖಾನ್ ಅವರು ತಮ್ಮ ಖಾಸಗಿ ಜೀವನದ ಹಲವು ವಿಷಯಗಳನ್ನು ತೆರೆದಿಟ್ಟಿದ್ದಾರೆ.

1986ರಲ್ಲಿ ಆಮಿರ್ ಖಾನ್ ಮತ್ತು ರೀನಾ ದತ್ತ ಮದುವೆ ನೆರವೇರಿತ್ತು. 2002ರಲ್ಲಿ ಅವರು ವಿಚ್ಛೇದನ ಪಡೆದುಕೊಂಡರು. ಮದುವೆ ನಡೆದಾಗ ಇಬ್ಬರಿಗೂ ಚಿಕ್ಕ ವಯಸ್ಸು. ತಮ್ಮ ಸಂಸಾರದಲ್ಲಿ ಬಿರುಕು ಮೂಡಲು ಅದೇ ಕಾರಣ ಎಂದು ಆಮಿರ್ ಖಾನ್ ಹೇಳಿದ್ದಾರೆ.

‘ನಾನು ಮತ್ತು ರೀನಾ ತುಂಬಾ ಬೇಗ ಮದುವೆ ಆದೆವು. ನನಗೆ ಆಗ 21 ವರ್ಷ ವಯಸ್ಸು. ಆಕೆಗೆ 19 ವರ್ಷ. ನಮ್ಮಿಬ್ಬರಿಗೆ ಕೇವಲ 4 ತಿಂಗಳ ಪರಿಚಯ ಇತ್ತು. ಹೆಚ್ಚು ಸಮಯ ಒಟ್ಟಿಗೆ ಕಳೆದಿರಲಿಲ್ಲ. ಒಬ್ಬರನ್ನೊಬ್ಬರು ಹೆಚ್ಚು ಪ್ರೀತಿಸುತ್ತಿದ್ದೆವು. ಹಾಗಾಗಿ ಮದುವೆ ಆಗಲು ನಿರ್ಧರಿಸಿದೆವು. ಈಗ ಅದನ್ನು ನೆನಪಿಸಿಕೊಂಡರೆ, ಮದುವೆ ಬಗ್ಗೆ ನಿರ್ಧಾರ ಮಾಡುವಾಗ ನಾವು ತುಂಬ ಎಚ್ಚರಿಕೆಯಿಂದ ಇರಬೇಕು ಅನಿಸುತ್ತದೆ. ಆ ಸಂದರ್ಭದಲ್ಲಿ ಯೌವನದ ಹುಮ್ಮಸ್ಸಿನಲ್ಲಿ ಎಷ್ಟೋ ವಿಷಯಗಳನ್ನು ಅರ್ಥ ಮಾಡಿಕೊಳ್ಳಲು ಆಗಲಿಲ್ಲ’ ಎಂದು ಆಮಿರ್ ಖಾನ್ ಅವರು ಹೇಳಿದ್ದಾರೆ.

ಇದನ್ನೂ ಓದಿ: ಕಥೆ ಕದ್ದ ಆಮಿರ್ ಖಾನ್? ‘ಸಿತಾರೆ ಜಮೀನ್ ಪರ್’ ಸಿನಿಮಾ ಮೇಲೆ ಬಂತು ಆರೋಪ

ಹಾಗಂತ ಮಾಜಿ ಪತ್ನಿ ರೀನಾ ದತ್ತ ಬಗ್ಗೆ ಆಮಿರ್ ಖಾನ್ ಅವರಿಗೆ ಯಾವುದೇ ದೂರುಗಳಿಲ್ಲ. ‘ರೀನಾ ಜೊತೆ ನನ್ನ ಜೀವನ ತುಂಬ ಚೆನ್ನಾಗಿ ಕಳೆಯಿತು. ರೀನಾದು ಏನೂ ತಪ್ಪು ಇಲ್ಲ. ಅವಳು ತುಂಬ ಒಳ್ಳೆಯ ವ್ಯಕ್ತಿ. ನಾವು ಒಟ್ಟಿಗೆ ಬೆಳೆದೆವು. ಪರಸ್ಪರ ಗೌರವ ಇದೆ. ಆದರೆ ಯಾರೂ ಸಹ ಗಡಿಬಿಡಿಯಲ್ಲಿ ಮದುವೆ ಆಗಬಾರದು’ ಎಂದಿದ್ದಾರೆ ಆಮಿರ್ ಖಾನ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!