AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಂಡನಾಗಿ ನನ್ನಲ್ಲಿ ಏನು ಕೊರತೆ ಇತ್ತು?’: ಮಾಜಿ ಪತ್ನಿಯ ಪ್ರತಿಕ್ರಿಯೆ ಕೇಳಿದ ಆಮಿರ್​ ಖಾನ್​

ಡಿವೋರ್ಸ್​ ಪಡೆದ ಬಳಿಕ ಮುಖ ತಿರುಗಿಸಿಕೊಂಡು ಹೋಗುವವರೇ ಹೆಚ್ಚು. ಆದರೆ ಆಮಿರ್​ ಖಾನ್​ ಮತ್ತು ಕಿರಣ್​ ರಾವ್​ ಅವರು ಆ ರೀತಿ ಅಲ್ಲ. ವಿಚ್ಛೇದನ ಪಡೆದ ನಂತರವೂ ಅವರಿಬ್ಬರು ಪರಸ್ಪರ ಆಪ್ತವಾಗಿದ್ದಾರೆ. ಇತ್ತೀಚೆಗೆ ನಡೆದ ಒಂದು ಕಾರ್ಯಕ್ರಮದಲ್ಲಿ ಕೆಲವು ಇಂಟರೆಸ್ಟಿಂಗ್​ ವಿಚಾರಗಳನ್ನು ಈ ಮಾಜಿ ದಂಪತಿ ಹಂಚಿಕೊಂಡಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

‘ಗಂಡನಾಗಿ ನನ್ನಲ್ಲಿ ಏನು ಕೊರತೆ ಇತ್ತು?’: ಮಾಜಿ ಪತ್ನಿಯ ಪ್ರತಿಕ್ರಿಯೆ ಕೇಳಿದ ಆಮಿರ್​ ಖಾನ್​
ಆಮಿರ್​ ಖಾನ್​, ಕಿರಣ್ ರಾವ್​
ಮದನ್​ ಕುಮಾರ್​
|

Updated on: Feb 25, 2024 | 7:19 AM

Share

ಬಾಲಿವುಡ್​ನ ಖ್ಯಾತ ನಟ ಆಮಿರ್ ಖಾನ್​ (Aamir Khan) ಅವರು ಪತ್ನಿ ಕಿರಣ್​ ರಾವ್​ಗೆ ವಿಚ್ಛೇದನ ನೀಡಿದ್ದು ಯಾಕೆ ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಅಚ್ಚರಿ ಏನೆಂದರೆ, ಡಿವೋರ್ಸ್​ (Divorce) ಪಡೆದ ನಂತರವೂ ಆಮಿರ್​ ಖಾನ್​ ಮತ್ತು ಕಿರಣ್​ ರಾವ್​ ಅನ್ಯೋನ್ಯವಾಗಿಯೇ ಇದ್ದಾರೆ. ಒಟ್ಟಿಗೆ ಸೇರಿ ‘ಲಾಪತಾ ಲೇಡಿಸ್​’ ಸಿನಿಮಾದ ಪ್ರಚಾರ ಮಾಡುತ್ತಿದ್ದಾರೆ. ಈ ಸಿನಿಮಾಗೆ ಕಿರಣ್​ ರಾವ್ (Kiran Rao) ನಿರ್ದೇಶನ ಮಾಡಿದ್ದು, ಆಮಿರ್​ ಖಾನ್​ ನಿರ್ಮಾಣ ಮಾಡಿದ್ದಾರೆ. ಮಾರ್ಚ್​ 1ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಈ ನಡುವೆ ಆಮಿರ್​ ಖಾನ್​ ಅವರು ಒಂದು ಅಚ್ಚರಿಯ ವಿಚಾರ ತಿಳಿಸಿದ್ದಾರೆ. ವಿಚ್ಛೇದನ ನೀಡಿದ ಬಳಿಕ ಕಿರಣ್​ ರಾವ್​ ಅವರಿಂದ ಫೀಡ್​ಬ್ಯಾಕ್​ ಕೇಳಲಾಗಿತ್ತು. ‘ಗಂಡನಾಗಿ ನನ್ನಲ್ಲಿ ಏನು ಕೊರತೆ ಇತ್ತು’ ಎಂದು ಮಾಜಿ ಪತ್ನಿಗೆ ಆಮಿರ್​ ಖಾನ್​ ಪ್ರಶ್ನೆ ಮಾಡಿದ್ದರು.

‘ಎಬಿಪಿ ನೆಟ್​ವರ್ಕ್​’ನ ಕಾರ್ಯಕ್ರಮವೊಂದರಲ್ಲಿ ಆಮಿರ್​ ಖಾನ್​ ಮತ್ತು ಕಿರಣ್ ರಾವ್​ ಅವರು ಜೊತೆಯಾಗಿ ಪಾಲ್ಗೊಂಡಿದ್ದರು. ಈ ವೇಳೆ ಅವರು ತಮ್ಮ ವಿಚ್ಛೇದನದ ಬಗ್ಗೆಯೂ ಮಾತನಾಡಿದರು. ಅವರಿಬ್ಬರ ಮದುವೆ ನಡೆದಿದ್ದು 2005ರಲ್ಲಿ. 2021ರಲ್ಲಿ ಅವರು ಡಿವೋರ್ಸ್​ ಪಡೆದರು. ಈ ಜೋಡಿಗೆ ಆಜಾದ್ ಹೆಸರಿನ ಪುತ್ರ ಇದ್ದಾನೆ. ಆತನ ಜವಾಬ್ದಾರಿಯನ್ನು ಇಬ್ಬರೂ ವಹಿಸಿಕೊಂಡಿದ್ದಾರೆ.

ಇದನ್ನೂ ಓದಿ: ಪೋಷಕ ಪಾತ್ರಕ್ಕೆ ಆಡಿಷನ್​ ನೀಡಿದ ಆಮಿರ್​ ಖಾನ್​; ಅಚ್ಚರಿ ಸಂಗತಿ ಬಯಲು

‘ಒಂದು ಮಜವಾದ ವಿಚಾರ ಇದೆ. ಒಂದು ದಿನ ಸಂಜೆ ನಾವಿಬ್ಬರು ಕುಳಿತಿದ್ದಾಗ ಕಿರಣ್​ಗೆ ಒಂದು ಪ್ರಶ್ನೆ ಕೇಳಿದೆ. ಗಂಡನಾಗಿ ನನ್ನಲ್ಲಿ ನಿನಗೆ ಏನು ಕೊರತೆ ಕಾಣಿಸಿದೆ? ಜೀವನದಲ್ಲಿ ಮುಂದೆ ಸಾಗುತ್ತಿದ್ದೇನೆ. ನನ್ನನ್ನು ನಾನು ಸುಧಾರಿಸಿಕೊಳ್ಳಬೇಕು’ ಎಂದು ಕಿರಣ್​ ರಾವ್​ಗೆ ಆಮಿರ್​ ಖಾನ್​ ಹೇಳಿದ್ದರು. ಆ ಮಾತಿಗೆ ಕಿರಣ್​ ರಾವ್​ ಅವರು ಕೂಡಲೇ ಉತ್ತರ ನೀಡಿದ್ದರು. ‘ಓಕೆ.. ಬರೆದುಕೊಳ್ಳಿ ಅಂತ ಕಿರಣ್​ ನನಗೆ ಪಟ್ಟಿ ನೀಡಿದರು. ನೀವು ಬಹಳ ಮಾತನಾಡುತ್ತೀರಿ. ಬೇರೆಯವರಿಗೆ ಮಾತನಾಡಲು ನೀವು ಬಿಡುವುದಿಲ್ಲ. ನಿಮ್ಮದೇ ವಾದಕ್ಕೆ ಅಂಟಿಕೊಂಡಿರುತ್ತೀರಿ. ಈ ರೀತಿ 15-20 ವಿಷಯಗಳ ಪಟ್ಟಿ ನೀಡಿದರು’ ಎಂದು ಮಾಜಿ ಹೆಂಡತಿಯ ಫೀಡ್​ಬ್ಯಾಕ್​ ಬಗ್ಗೆ ಆಮಿರ್​ ಖಾನ್​ ಹೇಳಿದ್ದಾರೆ.

ಇದನ್ನೂ ಓದಿ: ಸಾಯಿ ಪಲ್ಲವಿ ಜೊತೆ ಆಮಿರ್​ ಖಾನ್​ ಮಗನ ಸುತ್ತಾಟ; ಫೋಟೋ ವೈರಲ್​

ಜೀವನದಲ್ಲಿ ಆಮಿರ್​ ಖಾನ್​ ಮತ್ತು ಕಿರಣ್​ ರಾವ್​ ಅವರು ತುಂಬ ಪ್ರಭುದ್ಧವಾಗಿ ಚಿಂತಿಸುತ್ತಾರೆ ಎಂಬುದು ಅಭಿಮಾನಿಗಳ ಅಭಿಪ್ರಾಯ. ಸದ್ಯಕ್ಕೆ ಆಮಿರ್​ ಖಾನ್​ ಸಿಂಗಲ್​ ಆಗಿ ಇದ್ದಾರೆ. ಮುಂದಿನ ದಿನಗಳಲ್ಲಿ ಅವರು ಯಾರನ್ನು ಮದುವೆ ಆಗಬಹುದು ಎಂಬ ಕೌತುಕ ಎಲ್ಲರಲ್ಲೂ ಇದೆ. ಸಿನಿಮಾ ವಿಚಾರಕ್ಕೆ ಬರುವುದಾದರೆ, ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾ ಸೋತ ಬಳಿಕ ಆಮಿರ್​ ಖಾನ್​ ಅವರು ಬ್ರೇಕ್​ ತೆಗೆದುಕೊಂಡರು. ಈಗ ಅವರು ‘ಸಿತಾರೆ ಜಮೀನ್​ ಪರ್​’ ಚಿತ್ರದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ‘ಲಪತಾ ಲೇಡೀಸ್​’ ಸಿನಿಮಾದ ಪ್ರಮೋಷನ್​ನಲ್ಲಿ ಬ್ಯುಸಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ