AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಧ್ವಜ ತೆಗೆಯಬೇಕು: ಆಮಿರ್ ಖಾನ್​ಗೆ ಸೂಚನೆ ನೀಡಿದ್ದ ಪಾಕಿಸ್ತಾನ; ನಟ ಮಾಡಿದ್ದೇನು?

ಪಾಕಿಸ್ತಾನದಲ್ಲೂ ನಟ ಆಮಿರ್ ಖಾನ್ ಅವರಿಗೆ ಅಭಿಮಾನಿಗಳು ಇದ್ದಾರೆ. ಆದರೆ ‘ದಂಗಲ್’ ಸಿನಿಮಾವನ್ನು ಪಾಕಿಸ್ತಾನದಲ್ಲಿ ಬಿಡುಗಡೆ ಮಾಡಲು ಆಮಿರ್ ಖಾನ್ ಒಪ್ಪಲಿಲ್ಲ. ಅದಕ್ಕೆ ಕಾರಣ ಕೂಡ ಇದೆ. ‘ಸಿತಾರೆ ಜಮೀನ್ ಪರ್’ ಸಿನಿಮಾದ ಬಿಡುಗಡೆ ಹೊಸ್ತಿಲಲ್ಲಿ ಆಮಿರ್ ಖಾನ್ ಅವರು ಆ ಘಟನೆಯನ್ನು ನೆನಪಿಸಿಕೊಂಡಿದ್ದಾರೆ.

ಭಾರತದ ಧ್ವಜ ತೆಗೆಯಬೇಕು: ಆಮಿರ್ ಖಾನ್​ಗೆ ಸೂಚನೆ ನೀಡಿದ್ದ ಪಾಕಿಸ್ತಾನ; ನಟ ಮಾಡಿದ್ದೇನು?
Aamir Khan
ಮದನ್​ ಕುಮಾರ್​
|

Updated on: Jun 15, 2025 | 2:07 PM

Share

ಆಮಿರ್ ಖಾನ್ ನಟನೆಯ ‘ದಂಗಲ್’ ಸಿನಿಮಾ (Dangal) ವಿಶ್ವಾದ್ಯಂತ ಅಂದಾಜು 2 ಸಾವಿರ ಕೋಟಿ ರೂಪಾಯಿ ಗಳಿಸಿತ್ತು. 2016ರಲ್ಲಿ ಬಿಡುಗಡೆ ಆದ ಆ ಚಿತ್ರಕ್ಕೆ ವಿವಿಧ ದೇಶಗಳಲ್ಲಿ ಪ್ರಶಂಸೆ ಸಿಕ್ಕಿತು. ವಿಶೇಷವಾಗಿ ಚೀನಾದ ಜನರು ಆ ಸಿನಿಮಾವನ್ನು ಸಖತ್ ಇಷ್ಟಪಟ್ಟರು. ಆದರೆ ಪಾಕಿಸ್ತಾನದಲ್ಲಿ ‘ದಂಗಲ್’ ಸಿನಿಮಾ ಬಿಡುಗಡೆ ಆಗಲೇ ಇಲ್ಲ. ಅದಕ್ಕೆ ಕಾರಣ ಏನು ಎಂಬುದನ್ನು ಈಗ ಆಮಿರ್ ಖಾನ್ (Aamir Khan) ಅವರು ವಿವರಿಸಿದ್ದಾರೆ. ‘ದಂಗಲ್’ ಸಿನಿಮಾದಲ್ಲಿ ಇದ್ದ ಭಾರತದ ರಾಷ್ಟ್ರ ಧ್ವಜ ಮತ್ತು ರಾಷ್ಟ್ರ ಗೀತೆಯನ್ನು ತೆಗೆಯಬೇಕು ಎಂದು ಪಾಕಿಸ್ತಾನದ (Pakistan) ಸೆನ್ಸಾರ್ ಮಂಡಲಿ ಸೂಚಿಸಿತ್ತು. ಆದರೆ ಅದಕ್ಕೆ ಆಮಿರ್ ಖಾನ್ ಒಪ್ಪಿಕೊಳ್ಳಲಿಲ್ಲ.

‘ಆಪ್​ ಕಿ ಅದಾಲತ್’ ಕಾರ್ಯಕ್ರಮದಲ್ಲಿ ಆಮಿರ್ ಖಾನ್ ಅವರು ಈ ವಿಷಯವನ್ನು ಹಂಚಿಕೊಂಡಿದ್ದಾರೆ. ‘ದಂಗಲ್ ಸಿನಿಮಾ ಬಿಡುಗಡೆ ಆದಾಗ ಡಿಸ್ನಿಯವರು ಕೂಡ ನಿರ್ಮಾಣದಲ್ಲಿ ಪಾಲುದಾರಿಕೆ ಹೊಂದಿದ್ದರು. ಅವರೇ ಸಿನಿಮಾ ಬಿಡುಗಡೆ ಮಾಡಿದರು. ಪಾಕಿಸ್ತಾನದಲ್ಲಿ ಬಿಡುಗಡೆ ಮಾಡಲು ಕೆಲವು ನಿರ್ಬಂಧ ಇದೆ ಎಂದು ತಿಳಿಸಿದರು’ ಎಂದು ಆ ಘಟನೆಯನ್ನು ಆಮಿರ್ ಖಾನ್ ನೆನಪಿಸಿಕೊಂಡಿದ್ದಾರೆ.

‘ಗೀತಾ ಪೋಗತ್ ಕುಸ್ತಿ ಗೆದ್ದಾಗ ನಮ್ಮ ರಾಷ್ಟ್ರ ಧ್ವಜ ಮೇಲಕ್ಕೆ ಹಾರುತ್ತದೆ ಹಾಗೂ ನಮ್ಮ ರಾಷ್ಟ್ರ ಗೀತೆ ಕೇಳಿಸುತ್ತದೆ. ಆ ಎರಡನ್ನೂ ನೀವು ತೆಗೆದುಹಾಕಬೇಕು, ಇಲ್ಲದಿದ್ದರೆ ಸಿನಿಮಾಗೆ ಸೆನ್ಸಾರ್ ಪ್ರಮಾಣ ಪತ್ರ ನೀಡುವುದಿಲ್ಲ ಅಂತ ಪಾಕಿಸ್ತಾನದವರು ನಮಗೆ ಹೇಳಿದ್ದರು. ಹಾಗಾದರೆ ಪಾಕಿಸ್ತಾನದಲ್ಲಿ ನಮ್ಮ ಸಿನಿಮಾ ಬಿಡುಗಡೆ ಮಾಡುವುದು ಬೇಡ ಅಂದು ನಾನು ಕೂಡಲೇ ತಿಳಿಸಿದೆ’ ಎಂದಿದ್ದಾರೆ ಆಮಿರ್ ಖಾನ್.

ಇದನ್ನೂ ಓದಿ
Image
ಆಮಿರ್ ಖಾನ್-ರಣ್​ಬೀರ್ ಕಪೂರ್ ಜಗಳ, ಮಧ್ಯಸ್ಥಿಕೆ ವಹಿಸಿದ ರೋಹಿತ್ ಶರ್ಮಾ
Image
ಹೊಸ ಪ್ರಾಜೆಕ್ಟ್​ಗಾಗಿ ಒಂದಾದ ಆಮಿರ್-ರಣಬೀರ್; ವಿಚಾರ ರಿವೀಲ್ ಮಾಡಿದ ಆಲಿಯಾ
Image
59ನೇ ವಯಸ್ಸಲ್ಲಿ ಬೆಂಗಳೂರು ಹುಡುಗಿ ಮೇಲೆ ಆಮಿರ್​​​ಗೆ ಲವ್? ಯಾರು ಈ ಗೌರಿ?
Image
ಆಮಿರ್ ಖಾನ್ ಈ ರೀತಿ ವೇಷ ಹಾಕಿದ್ದು ದುಡ್ಡಿಗಾಗಿ; ಅಸಲಿ ವಿಚಾರ ರಿವೀಲ್

‘ಪಾಕಿಸ್ತಾನದಲ್ಲಿ ರಿಲೀಸ್ ಮಾಡದೇ ಇದ್ದರೆ ಬಿಸ್ನೆಸ್​ಗೆ ತೊಂದರೆ ಆಗುತ್ತದೆ ಮತ್ತು ನಷ್ಟ ಆಗುತ್ತದೆ ಎಂದು ಡಿಸ್ನಿಯವರು ಹೇಳಿದರು. ಯಾರು ನಮ್ಮ ರಾಷ್ಟ್ರ ಧ್ವಜ ಮತ್ತು ರಾಷ್ಟ್ರ ಗೀತೆಯನ್ನು ತೆಗೆದುಹಾಕಿ ಎನ್ನುತ್ತಾರೋ ಅವರ ಜೊತೆ ನಾನು ಬಿಸ್ನೆಸ್ ಮಾಡಲ್ಲ ಅಂತ ನೇರವಾಗಿ ಹೇಳಿದೆ’ ಎಂದಿದ್ದಾರೆ ಆಮಿರ್ ಖಾನ್.

ಇದನ್ನೂ ಓದಿ: 23 ವರ್ಷ ಕಿರಿಯ ನಟಿ ಜೊತೆ ರೊಮ್ಯಾನ್ಸ್; ಆಮಿರ್ ಖಾನ್ ಸಮರ್ಥನೆ ಏನು?

ಪಾಕಿಸ್ತಾನದಲ್ಲಿ ದಂಗಲ್ ಬಿಡುಗಡೆ ಆಗದಿದ್ದರೂ ಕೂಡ ವಿಶ್ವಾದ್ಯಂತ ಆ ಚಿತ್ರಕ್ಕೆ ಉತ್ತಮ ಕಲೆಕ್ಷನ್ ಆಯಿತು. 2 ಸಾವಿರಕ್ಕೂ ಅಧಿಕ ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು. ನೈಜ ಘಟನೆ ಆಧರಿಸಿ ತಯಾರಾದ ಆ ಸಿನಿಮಾದಲ್ಲಿ ಆಮಿರ್ ಖಾನ್ ಅವರ ನಟನೆಗೆ ಎಲ್ಲರಿಂದ ಮೆಚ್ಚುಗೆ ಸಿಕ್ಕಿತು. ಆದರೆ ಆ ಬಳಿಕ ಆಮಿರ್ ಖಾನ್ ನಟಿಸಿದ ‘ಥಗ್ಸ್ ಆಫ್ ಹಿಂದುಸ್ತಾನ್’ ಮತ್ತು ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾಗಳು ಗೆಲ್ಲಲಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು