AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮಿರ್ ಖಾನ್ ಮಗಳ ಮದುವೆಗೆ ಪ್ರಮುಖ ವ್ಯಕ್ತಿಯೇ ಗೈರು; ಮೂಡಿತು ಅನುಮಾನ

ಅಮಿರ್ ಖಾನ್ ಮಾಜಿ ಪತ್ನಿಯರಾದ ರೀನಾ ದತ್ತ ಹಾಗೂ ಕಿರಣ್ ರಾವ್ ಅವರು ಇರಾ ಖಾನ್ ಮದುವೆಯಲ್ಲಿ ಭಾಗಿ ಆಗಿದ್ದರು. ಮದುವೆಯಲ್ಲಿ ಇವರು ಹೈಲೈಟ್ ಆಗಿದ್ದಾರೆ. ಆದರೆ, ಫಾತಿಮಾ ಅವರು ಮದುವೆಗೆ ಬರದೇ ಇರುವುದನ್ನು ನೋಡಿ ಅಭಿಮಾನಿಗಳಲ್ಲಿ ಸಾಕಷ್ಟು ಗೊಂದಲ ಮೂಡಿದೆ.

ಆಮಿರ್ ಖಾನ್ ಮಗಳ ಮದುವೆಗೆ ಪ್ರಮುಖ ವ್ಯಕ್ತಿಯೇ ಗೈರು; ಮೂಡಿತು ಅನುಮಾನ
ಆಮಿರ್​ ಹಾಗೂ ಅವರ ಮಗಳು
Follow us
ರಾಜೇಶ್ ದುಗ್ಗುಮನೆ
|

Updated on:Jan 06, 2024 | 10:38 AM

ಆಮಿರ್ ಖಾನ್ (Aamir Khan) ಮಗಳು ಇರಾ ಖಾನ್ ಅವರು ಇತ್ತೀಚೆಗೆ ನೂಪುರ್ ಶಿಖಾರೆ ಜೊತೆ ಮದುವೆ ಆಗಿದ್ದಾರೆ. ಮುಂಬೈ ಹೋಟೆಲ್​ ಒಂದರಲ್ಲಿ ಖಾಸಗಿಯಾಗಿ ಈ ಮದುವೆ ಸಮಾರಂಭ ನಡೆದಿದೆ. ಉದ್ಯಮಿ ಮುಕೇಶ್ ಅಂಬಾನಿ, ನೀತಾ ಅಂಬಾನಿ ಆಗಮಿಸಿದ್ದರು. ಹಲವು ಸೆಲೆಬ್ರಿಟಿಗಳು ಮದುವೆಯಲ್ಲಿ ಭಾಗಿ ಆಗಿದ್ದರು.  ಮದುವೆಯ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿವಾಹ ಸಮಾರಂಭಕ್ಕೆ ಪ್ರಮುಖ ವ್ಯಕ್ತಿಯೊಬ್ಬರು ಮಿಸ್​ ಆಗಿದ್ದಾರೆ. ಅದುವೇ ಫಾತಿಮಾ ಸನಾ ಶೇಖ್.

ಅಮಿರ್ ಖಾನ್ ಮಾಜಿ ಪತ್ನಿಯರಾದ ರೀನಾ ದತ್ತ ಹಾಗೂ ಕಿರಣ್ ರಾವ್ ಅವರು ಇರಾ ಖಾನ್ ಮದುವೆಯಲ್ಲಿ ಭಾಗಿ ಆಗಿದ್ದರು. ಮದುವೆಯಲ್ಲಿ ಇವರು ಹೈಲೈಟ್ ಆಗಿದ್ದಾರೆ. ಆದರೆ, ಫಾತಿಮಾ ಅವರು ಮದುವೆಗೆ ಬರದೇ ಇರುವುದನ್ನು ನೋಡಿ ಅಭಿಮಾನಿಗಳಲ್ಲಿ ಸಾಕಷ್ಟು ಗೊಂದಲ ಮೂಡಿದೆ. ಇಬ್ಬರ ಮಧ್ಯೆ ಈಗ ಏನೂ ಇಲ್ಲವೇ ಎನ್ನುವ ಪ್ರಶ್ನೆ ಮೂಡಿದೆ.

ಆಮಿರ್ ಖಾನ್ ಹಾಗೂ ಫಾತಿಮಾ ಮಧ್ಯೆ ದೊಡ್ಡ ವಯಸ್ಸಿನ ಅಂತರ ಇದೆ. ಇಬ್ಬರೂ ‘ದಂಗಲ್’ ಸಿನಿಮಾದಲ್ಲಿ ಅಪ್ಪ-ಮಗಳ ಪಾತ್ರ ಮಾಡಿದ್ದರು. ಇವರಿಬ್ಬರೂ ಪ್ರೀತಿಸುತ್ತಿದ್ದಾರೆ ಎಂದು ಸುದ್ದಿ ಆಗಿತ್ತು. ಈ ಕಾರಣದಿಂದಲೇ ಕಿರಣ್ ರಾವ್​ ಅವರಿಗೆ ಆಮಿರ್ ವಿಚ್ಛೇದನ ನೀಡಿದರು ಎನ್ನುವ ಸುದ್ದಿಯೂ ಇದೆ. ಆದರೆ, ಫಾತಿಮಾ ಅವರು ಮದುವೆಗೆ ಬರದೇ ಇರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಮಗಳ ಮದುವೆಯಲ್ಲಿ ಮಾಜಿ ಪತ್ನಿ ಕಿರಣ್​ ರಾವ್​ಗೆ ಕಿಸ್​ ಮಾಡಿದ ಆಮಿರ್ ಖಾನ್​; ವಿಡಿಯೋ ವೈರಲ್​ 

ಇಂದು (ಜನವರಿ 6) ಉದಯಪುರದಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ವೇಳೆ ಕುಟುಂಬದವರು, ಆಪ್ತರು ಆಗಮಿಸಲಿದ್ದಾರೆ. ಜನವರಿ 8ರಂದು ಮುಂಬೈನಲ್ಲಿ ರಿಸೆಪ್ಷನ್ ಇದೆ. ಇದಕ್ಕೆ ಶಾರುಖ್ ಖಾನ್, ಸಲ್ಮಾನ್ ಖಾನ್, ಅಮಿತಾಭ್ ಬಚ್ಚನ್, ಕರೀನಾ ಕಪೂರ್ ಸೇರಿ ಅನೇಕ ಸೆಲೆಬ್ರಿಟಿಗಳು  ಆಗಮಿಸಲಿದ್ದಾರೆ.

ಇರಾ ಖಾನ್ ಹಾಗೂ ನೂಪುರ್ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ನೂಪುರ್  ಫಿಟ್ನೆಸ್ ಟ್ರೇನರ್ ಆಗಿದ್ದಾರೆ. ನೂಪುರ್ ಬಳಿ ಟ್ರೇನಿಂಗ್ ಪಡೆಯಲು ಇರಾ ಬಂದಿದ್ದರು. ಆಗ ಇಬ್ಬರ ಮಧ್ಯೆ ಪ್ರೀತಿ ಮೂಡಿದೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:30 am, Sat, 6 January 24

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್