AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮಿರ್ ಖಾನ್ ಮಗಳ ಮದುವೆಗೆ ಪ್ರಮುಖ ವ್ಯಕ್ತಿಯೇ ಗೈರು; ಮೂಡಿತು ಅನುಮಾನ

ಅಮಿರ್ ಖಾನ್ ಮಾಜಿ ಪತ್ನಿಯರಾದ ರೀನಾ ದತ್ತ ಹಾಗೂ ಕಿರಣ್ ರಾವ್ ಅವರು ಇರಾ ಖಾನ್ ಮದುವೆಯಲ್ಲಿ ಭಾಗಿ ಆಗಿದ್ದರು. ಮದುವೆಯಲ್ಲಿ ಇವರು ಹೈಲೈಟ್ ಆಗಿದ್ದಾರೆ. ಆದರೆ, ಫಾತಿಮಾ ಅವರು ಮದುವೆಗೆ ಬರದೇ ಇರುವುದನ್ನು ನೋಡಿ ಅಭಿಮಾನಿಗಳಲ್ಲಿ ಸಾಕಷ್ಟು ಗೊಂದಲ ಮೂಡಿದೆ.

ಆಮಿರ್ ಖಾನ್ ಮಗಳ ಮದುವೆಗೆ ಪ್ರಮುಖ ವ್ಯಕ್ತಿಯೇ ಗೈರು; ಮೂಡಿತು ಅನುಮಾನ
ಆಮಿರ್​ ಹಾಗೂ ಅವರ ಮಗಳು
ರಾಜೇಶ್ ದುಗ್ಗುಮನೆ
|

Updated on:Jan 06, 2024 | 10:38 AM

Share

ಆಮಿರ್ ಖಾನ್ (Aamir Khan) ಮಗಳು ಇರಾ ಖಾನ್ ಅವರು ಇತ್ತೀಚೆಗೆ ನೂಪುರ್ ಶಿಖಾರೆ ಜೊತೆ ಮದುವೆ ಆಗಿದ್ದಾರೆ. ಮುಂಬೈ ಹೋಟೆಲ್​ ಒಂದರಲ್ಲಿ ಖಾಸಗಿಯಾಗಿ ಈ ಮದುವೆ ಸಮಾರಂಭ ನಡೆದಿದೆ. ಉದ್ಯಮಿ ಮುಕೇಶ್ ಅಂಬಾನಿ, ನೀತಾ ಅಂಬಾನಿ ಆಗಮಿಸಿದ್ದರು. ಹಲವು ಸೆಲೆಬ್ರಿಟಿಗಳು ಮದುವೆಯಲ್ಲಿ ಭಾಗಿ ಆಗಿದ್ದರು.  ಮದುವೆಯ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿವಾಹ ಸಮಾರಂಭಕ್ಕೆ ಪ್ರಮುಖ ವ್ಯಕ್ತಿಯೊಬ್ಬರು ಮಿಸ್​ ಆಗಿದ್ದಾರೆ. ಅದುವೇ ಫಾತಿಮಾ ಸನಾ ಶೇಖ್.

ಅಮಿರ್ ಖಾನ್ ಮಾಜಿ ಪತ್ನಿಯರಾದ ರೀನಾ ದತ್ತ ಹಾಗೂ ಕಿರಣ್ ರಾವ್ ಅವರು ಇರಾ ಖಾನ್ ಮದುವೆಯಲ್ಲಿ ಭಾಗಿ ಆಗಿದ್ದರು. ಮದುವೆಯಲ್ಲಿ ಇವರು ಹೈಲೈಟ್ ಆಗಿದ್ದಾರೆ. ಆದರೆ, ಫಾತಿಮಾ ಅವರು ಮದುವೆಗೆ ಬರದೇ ಇರುವುದನ್ನು ನೋಡಿ ಅಭಿಮಾನಿಗಳಲ್ಲಿ ಸಾಕಷ್ಟು ಗೊಂದಲ ಮೂಡಿದೆ. ಇಬ್ಬರ ಮಧ್ಯೆ ಈಗ ಏನೂ ಇಲ್ಲವೇ ಎನ್ನುವ ಪ್ರಶ್ನೆ ಮೂಡಿದೆ.

ಆಮಿರ್ ಖಾನ್ ಹಾಗೂ ಫಾತಿಮಾ ಮಧ್ಯೆ ದೊಡ್ಡ ವಯಸ್ಸಿನ ಅಂತರ ಇದೆ. ಇಬ್ಬರೂ ‘ದಂಗಲ್’ ಸಿನಿಮಾದಲ್ಲಿ ಅಪ್ಪ-ಮಗಳ ಪಾತ್ರ ಮಾಡಿದ್ದರು. ಇವರಿಬ್ಬರೂ ಪ್ರೀತಿಸುತ್ತಿದ್ದಾರೆ ಎಂದು ಸುದ್ದಿ ಆಗಿತ್ತು. ಈ ಕಾರಣದಿಂದಲೇ ಕಿರಣ್ ರಾವ್​ ಅವರಿಗೆ ಆಮಿರ್ ವಿಚ್ಛೇದನ ನೀಡಿದರು ಎನ್ನುವ ಸುದ್ದಿಯೂ ಇದೆ. ಆದರೆ, ಫಾತಿಮಾ ಅವರು ಮದುವೆಗೆ ಬರದೇ ಇರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಮಗಳ ಮದುವೆಯಲ್ಲಿ ಮಾಜಿ ಪತ್ನಿ ಕಿರಣ್​ ರಾವ್​ಗೆ ಕಿಸ್​ ಮಾಡಿದ ಆಮಿರ್ ಖಾನ್​; ವಿಡಿಯೋ ವೈರಲ್​ 

ಇಂದು (ಜನವರಿ 6) ಉದಯಪುರದಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ವೇಳೆ ಕುಟುಂಬದವರು, ಆಪ್ತರು ಆಗಮಿಸಲಿದ್ದಾರೆ. ಜನವರಿ 8ರಂದು ಮುಂಬೈನಲ್ಲಿ ರಿಸೆಪ್ಷನ್ ಇದೆ. ಇದಕ್ಕೆ ಶಾರುಖ್ ಖಾನ್, ಸಲ್ಮಾನ್ ಖಾನ್, ಅಮಿತಾಭ್ ಬಚ್ಚನ್, ಕರೀನಾ ಕಪೂರ್ ಸೇರಿ ಅನೇಕ ಸೆಲೆಬ್ರಿಟಿಗಳು  ಆಗಮಿಸಲಿದ್ದಾರೆ.

ಇರಾ ಖಾನ್ ಹಾಗೂ ನೂಪುರ್ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ನೂಪುರ್  ಫಿಟ್ನೆಸ್ ಟ್ರೇನರ್ ಆಗಿದ್ದಾರೆ. ನೂಪುರ್ ಬಳಿ ಟ್ರೇನಿಂಗ್ ಪಡೆಯಲು ಇರಾ ಬಂದಿದ್ದರು. ಆಗ ಇಬ್ಬರ ಮಧ್ಯೆ ಪ್ರೀತಿ ಮೂಡಿದೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:30 am, Sat, 6 January 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು