ಆಮಿರ್ ಖಾನ್ ಜಿಮ್ ಮಾಡ್ತಾರೆ ಅನ್ನೋದೇ ಸುಳ್ಳು; ಫಿಟ್ನೆಸ್​ಗೆ ನಟ ಮಾಡೋದೇನು?

ಇತ್ತೀಚೆಗೆ ಆಮಿರ್ ಖಾನ್ ಅವರು ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶೋ’ಗೆ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ ಅವರು ಸಾಕಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ‘59ನೇ ವಯಸ್ಸಿನಲ್ಲೂ ಇಷ್ಟು ಯಂಗ್ ಆಗಿ ಕಾಣೋಕೆ ಕಾರಣ ಏನು’ ಎಂದು ಪ್ರಶ್ನಿಸಲಾಗಿದೆ

ಆಮಿರ್ ಖಾನ್ ಜಿಮ್ ಮಾಡ್ತಾರೆ ಅನ್ನೋದೇ ಸುಳ್ಳು; ಫಿಟ್ನೆಸ್​ಗೆ ನಟ ಮಾಡೋದೇನು?
ಆಮಿರ್ ಖಾನ್
Follow us
|

Updated on: Apr 30, 2024 | 2:19 PM

ಆಮಿರ್ ಖಾನ್​ಗೆ (Aamir Khan) ಈಗ 59 ವರ್ಷ. ಈಗಲೂ ಅವರು ಸಖತ್ ಯಂಗ್ ಆಗಿ ಕಾಣಿಸುತ್ತಾರೆ. ಆಮಿರ್ ಖಾನ್ ಅವರು ಇಷ್ಟು ಯಂಗ್ ಆಗಿ ಕಾಣೋಕೆ ಅವರು ಫಾಲೋ ಮಾಡೋ ಫುಡ್, ವರ್ಕೌಟ್ ಕಾರಣ ಎಂದು ಎಲ್ಲರೂ ನಂಬಿದ್ದರು. ಆದರೆ, ಅವರು ಇದನ್ನು ಸುಳ್ಳು ಎಂದಿದ್ದಾರೆ. ಅಚ್ಚರಿಯ ವಿಚಾರ ಎಂದರೆ ಸಿನಿಮಾ ಇದ್ದಾಗ ಮಾತ್ರ ಆಮಿರ್ ಖಾನ್ ಅವರು ವರ್ಕೌಟ್ ಮಾಡುತ್ತಾರೆ. ಉಳಿದ ಸಂದರ್ಭದಲ್ಲಿ ಈ ಬಗ್ಗೆ ಅವರು ತಲೆಕೆಡಿಸಿಕೊಳ್ಳುವುದಿಲ್ಲವಂತೆ.

ಇತ್ತೀಚೆಗೆ ಆಮಿರ್ ಖಾನ್ ಅವರು ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶೋ’ಗೆ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ ಅವರು ಸಾಕಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ‘59ನೇ ವಯಸ್ಸಿನಲ್ಲೂ ಇಷ್ಟು ಯಂಗ್ ಆಗಿ ಕಾಣೋಕೆ ಕಾರಣ ಏನು’ ಎಂದು ಪ್ರಶ್ನಿಸಲಾಗಿದೆ. ಇದಕ್ಕೆ ಅವರು ಉತ್ತರ ನೀಡಿದ್ದಾರೆ. ಅವರ ಉತ್ತರ ಅನೇಕರಿಗೆ ಅಚ್ಚರಿ ತಂದಿದೆ.

‘ಅಪ್ಪನ ಜೀನ್ ಚೆನ್ನಾಗಿತ್ತು. ನನಗೆ ಯಾವುದೇ ಕ್ರೆಡಿಟ್ ಬೇಡ. ನಾನು ವರ್ಕೌಟ್ ಮಾಡಲ್ಲ. ಮುಖಕ್ಕೆ ಯಾವುದೇ ಕ್ರೀಮ್ ಹಾಕಲ್ಲ. ನಾನು ನಟನಾದಮೇಲೆ ಶಾಂಪೂ ಬಗ್ಗೆ ಗೊತ್ತಾಗಿದ್ದು. ಅಲ್ಲಿಯವರೆಗೆ ತಲೆ ಕೂದಲಿಗೂ ಸೋಪ್ ಹಾಕುತ್ತಿದ್ದೆ. ನಾನು ಉತ್ತಮವಾಗಿ ಕಾಣಲಿ ಎಂದು ಏನನ್ನೂ ಮಾಡುವುದಿಲ್ಲ. ಸಿನಿಮಾ ಬಂದಾಗ ವರ್ಕೌಟ್ ಮಾಡುತ್ತೇನೆ. ನಾನು ಸಖತ್ ಲೇಜಿ’ ಎಂದಿದ್ದಾರೆ ಆಮಿರ್ ಖಾನ್.

ಇದನ್ನೂ ಓದಿ: ‘ನನ್ನ ಅಕ್ಕ ಪಠಾಣ್ ಸಿನಿಮಾದಲ್ಲಿ ನಟಿಸಿದ್ದರು’; ಅಚ್ಚರಿಯ ವಿಚಾರ ಹೊರ ಹಾಕಿದ ಆಮಿರ್ ಖಾನ್

‘3 ಈಡಿಯಟ್ಸ್’ ಮಾಡುವಾಗ ಆಮಿರ್ ಖಾನ್ ವಯಸ್ಸು 44. ಅವರು ಸಿನಿಮಾದಲ್ಲಿ 18 ವರ್ಷದ ಕಾಲೇಜು ಹುಡುಗನ ಪಾತ್ರ ಮಾಡಬೇಕಿತ್ತು. ಜನರು ತಮ್ಮನ್ನು ನೋಡಿ ನಗಬಹುದು ಎಂದು ಅವರು ಅಂದುಕೊಂಡಿದ್ದರು. ‘ನನಗೆ 3 ಈಡಿಯಟ್ಸ್ ಮಾಡುವ ಉದ್ದೇಶ ಇರಲಿಲ್ಲ. 44 ವರ್ಷದ ವ್ಯಕ್ತಿ 18 ವರ್ಷದ ಕಾಲೇಜು ಹುಡುನ ಪಾತ್ರ ಮಾಡುತ್ತಾನೆ ಎಂದಾಗ ಜನರು ನಗುತ್ತಾರೆ ಎಂದುಕೊಂಡಿದ್ದೆ. ಮೂವರು ಯಂಗ್ ಹೀರೋಗಳನ್ನು ತೆಗೆದುಕೊಳ್ಳುವಂತೆ ರಾಜ್​ಕುಮಾರ್ ಹಿರಾನಿಗೆ ಹೇಳಿದ್ದೆ. ಆದರೆ, ಕಥೆ ಕೇಳಿದ ಬಳಿಕ ಪಾತ್ರ ಮಾಡಬೇಕು ಎನಿಸಿತು’ ಎಂದಿದ್ದಾರೆ ಆಮಿರ್ ಖಾನ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ