AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್ ರೀತಿಯ ಸಿನಿಮಾ ಮಾಡಿ ಎಂದು ಆಮಿರ್​ಗೆ ಕಿವಿಮಾತು; ನಟನ ಉತ್ತರ ಏನು?

ಶಾರುಖ್ ಖಾನ್ ಕೂಡ ಬ್ಯಾಕ್ ಟು ಬ್ಯಾಕ್ ಸೋಲು ಕಂಡರು. ‘ಪಠಾಣ್’, ‘ಜವಾನ್’ ಅಂಥ ಆ್ಯಕ್ಷನ್ ಸಿನಿಮಾ ಮಾಡಿ ಗಮನ ಸೆಳೆದರು. ಈ ಬಗ್ಗೆ ಆಮಿರ್​ಗೆ ಪ್ರಶ್ನೆ ಎದುರಾಗಿದೆ. ‘ಪಠಾಣ್​ ರೀತಿಯ ಸಿನಿಮಾ ಮಾಡಬೇಕು’ ಎಂದು ಅವರಿಗೆ ಕೇಳಲಾಗಿದೆ. ಇದಕ್ಕೆ ಆಮಿರ್ ತಮ್ಮದೇ ಸ್ಟೈಲ್​ನಲ್ಲಿ ಉತ್ತರ ನೀಡಿದ್ದಾರೆ.

ಶಾರುಖ್ ರೀತಿಯ ಸಿನಿಮಾ ಮಾಡಿ ಎಂದು ಆಮಿರ್​ಗೆ ಕಿವಿಮಾತು; ನಟನ ಉತ್ತರ ಏನು?
ಆಮಿರ್- ಶಾರುಖ್​ ಖಾನ್
ರಾಜೇಶ್ ದುಗ್ಗುಮನೆ
|

Updated on: Mar 09, 2024 | 2:39 PM

Share

ಆಮಿರ್ ಖಾನ್ (Aamir Khan) ಅವರು ‘ಲಾಲ್ ಸಿಂಗ್ ಚಡ್ಡಾ’ ಸೋಲಿನ ಬಳಿಕ ಬ್ರೇಕ್ ಪಡೆದಿದ್ದಾರೆ. ಅವರು ಸಿನಿಮಾ ನಿರ್ಮಾಣದತ್ತ ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ. ಆ್ಯಕ್ಷನ್ ಚಿತ್ರಗಳ ಜೊತೆ ಅವರು ಪ್ರಯೋಗಾತ್ಮಕ ಸಿನಿಮಾಗಳನ್ನು ಕೂಡ ಮಾಡಿದ್ದಾರೆ. ಅವರ ನಿರ್ಮಾಣದ ‘ಲಾಪತಾ ಲೇಡಿಸ್’ ಮೆಚ್ಚುಗೆ ಪಡೆದಿದೆ. ಈ ಸಿನಿಮಾ ಪ್ರಚಾರದಲ್ಲಿ ಅವರು ಬ್ಯುಸಿ ಆಗಿದ್ದಾರೆ. ಈ ವೇಳೆ ಅವರಿಗೆ ಆ್ಯಕ್ಷನ್ ಸಿನಿಮಾಗಳನ್ನು ಮಾಡುವಂತೆ ಕೋರಿದ್ದಾರೆ.

ಶಾರುಖ್ ಖಾನ್ ಕೂಡ ಬ್ಯಾಕ್ ಟು ಬ್ಯಾಕ್ ಸೋಲು ಕಂಡರು. ‘ಪಠಾಣ್’, ‘ಜವಾನ್’ ಅಂಥ ಆ್ಯಕ್ಷನ್ ಸಿನಿಮಾ ಮಾಡಿ ಗಮನ ಸೆಳೆದರು. ಈ ಬಗ್ಗೆ ಆಮಿರ್​ಗೆ ಪ್ರಶ್ನೆ ಎದುರಾಗಿದೆ. ‘ಪಠಾಣ್​ ರೀತಿಯ ಸಿನಿಮಾ ಮಾಡಬೇಕು’ ಎಂದು ಅವರಿಗೆ ಕೇಳಲಾಗಿದೆ. ಇದಕ್ಕೆ ಆಮಿರ್ ತಮ್ಮದೇ ಸ್ಟೈಲ್​ನಲ್ಲಿ ಉತ್ತರ ನೀಡಿದ್ದಾರೆ. ‘ಶಾರುಖ್ ಖಾನ್ ಅವರು ಪಠಾಣ್ ರೀತಿ ಒಳ್ಳೆಯ ಸಿನಿಮಾಗಳನ್ನು ಮಾಡುತ್ತಿದ್ದಾರೆ. ನಾನು ಲಾಪತಾ ಲೇಡಿಸ್ ರೀತಿಯ ಸಿನಿಮಾ ಮಾಡುತ್ತೇನೆ. ನೀವು ಇದನ್ನು ನೋಡಬೇಕು’ ಎಂದಿದ್ದಾರೆ ಆಮಿರ್.

‘ಲಾಪತಾ ಲೇಡಿಸ್’ ಸಿನಿಮಾ ಮಾರ್ಚ್ 1ರಂದು ಬಿಡುಗಡೆ ಆಯಿತು. ಕಿರಣ್ ರಾವ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಚಿತ್ರವನ್ನು ಆಮಿರ್ ಖಾನ್ ಅವರು ನಿರ್ಮಾಣ ಮಾಡಿದ್ದಾರೆ. ಈ ಚಿತ್ರದಲ್ಲಿ ಪ್ರತಿಭಾ ರತ್ನ, ಸ್ಪರ್ಶ್​ ಶ್ರೀವಾತ್ಸವ್, ನಿತಾಂಶಿ ಗೋಯಲ್ ಮೊದಲಾದವರು ಬಣ್ಣ ಹಚ್ಚಿದ್ದಾರೆ.

ಇದನ್ನೂ ಓದಿ: ಮುಂದಿನ ಹತ್ತು ವರ್ಷಗಳ ಯೋಜನೆ ತಿಳಿಸಿದ ಆಮಿರ್ ಖಾನ್

ಆಮಿರ್ ಖಾನ್, ಶಾರುಖ್ ಖಾನ್ ಹಾಗೂ ಸಲ್ಮಾನ್ ಖಾನ್ ಕಳೆದ ವಾರ ಒಟ್ಟಾಗಿ ಕಾಣಿಸಿಕೊಂಡಿದ್ದರು. ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ವಿವಾಹ ಪೂರ್ವ ಕಾರ್ಯಕ್ರಮದಲ್ಲಿ ಒಟ್ಟಾಗಿ ಡ್ಯಾನ್ಸ್ ಮಾಡಿದ್ದರು. ‘ಆಮಿರ್ ಖಾನ್ ಅವರು ಅನಂತ್ ಅಂಬಾನಿ ಮನೆಯ ಮದುವೆಯಲ್ಲಿ ಡ್ಯಾನ್ಸ್ ಮಾಡಿದರು. ಆದರೆ ತಮ್ಮದೇ ಮಗಳ ಮದುವೆಯಲ್ಲಿ ಅವರು ಹೆಜ್ಜೆ ಹಾಕಿಲ್ಲ’’ ಎಂದು ಅನೇಕರು ಹೇಳಿದ್ದರು. ಆದರೆ, ಮಗಳ ಜೊತೆ ಡ್ಯಾನ್ಸ್ ಮಾಡಿದ್ದಾಗಿ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ