‘ನನ್ನ ಅಕ್ಕ ಪಠಾಣ್ ಸಿನಿಮಾದಲ್ಲಿ ನಟಿಸಿದ್ದರು’; ಅಚ್ಚರಿಯ ವಿಚಾರ ಹೊರ ಹಾಕಿದ ಆಮಿರ್ ಖಾನ್

ನೆಟ್​ಫ್ಲಿಕ್ಸ್​ನಲ್ಲಿ ಕಪಿಲ್ ಶರ್ಮಾ ಅವರು ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶೋ’ ನಡೆಸಿಕೊಡುತ್ತಿದ್ದಾರೆ. ಈ ಶೋಗೆ ಆಮಿರ್ ಖಾನ್ ಅವರು ಅತಿಥಿ ಆಗಿ ಬಂದಿದ್ದಾರೆ. ಈ ವೇಳೆ ಅವರು ತಮ್ಮ ಸಹೋದರಿಯ ಬಗ್ಗೆ ಮಾಹಿತಿ ನೀಡಿದ್ದಾರೆ. ‘ಪಠಾಣ್’ ಸಿನಿಮಾದಲ್ಲಿ ಅವರು ಮಾಡಿದ ಪಾತ್ರ ಯಾವುದು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

‘ನನ್ನ ಅಕ್ಕ ಪಠಾಣ್ ಸಿನಿಮಾದಲ್ಲಿ ನಟಿಸಿದ್ದರು’; ಅಚ್ಚರಿಯ ವಿಚಾರ ಹೊರ ಹಾಕಿದ ಆಮಿರ್ ಖಾನ್
ಆಮಿರ್-ನಿಖತ್
Follow us
| Updated By: ರಾಜೇಶ್ ದುಗ್ಗುಮನೆ

Updated on:May 01, 2024 | 7:41 AM

ನಟ ಆಮಿರ್ ಖಾನ್ (Aamir Khan) ಅವರು ಇತ್ತೀಚೆಗೆ ನಟನೆಯಿಂದ ದೂರವೇ ಇದ್ದಾರೆ. ‘ಲಾಲ್ ಸಿಂಗ್ ಚಡ್ಡಾ’ ಬಳಿಕ ಅವರು ಯಾವುದೇ ಸಿನಿಮಾಗಳಲ್ಲಿ ನಟಿಸಿಲ್ಲ. ಬದಲಿಗೆ ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಂಡಿದ್ದಾರೆ. ವಿಶೇಷ ಎಂದರೆ ಈ ಸಂದರ್ಭದಲ್ಲಿ ಅವರ ಅಕ್ಕ ನಿಖತ್ ಖಾನ್ ಹೆಗ್ಡೆ ಅವರು ಸಿನಿಮಾದಲ್ಲಿ ನಟಿಸಿದ್ದರು. ಈ ವಿಚಾರವನ್ನು ಕಪಿಲ್ ಶರ್ಮಾ ಶೋನಲ್ಲಿ ಆಮಿರ್ ಖಾನ್ ಅವರು ಉಲ್ಲೇಖ ಮಾಡಿದ್ದಾರೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ನೆಟ್​ಫ್ಲಿಕ್ಸ್​ನಲ್ಲಿ ಕಪಿಲ್ ಶರ್ಮಾ ಅವರು ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶೋ’ ನಡೆಸಿಕೊಡುತ್ತಿದ್ದಾರೆ. ಈ ಶೋಗೆ ಆಮಿರ್ ಖಾನ್ ಅವರು ಅತಿಥಿ ಆಗಿ ಬಂದಿದ್ದಾರೆ. ಈ ವೇಳೆ ಅವರು ತಮ್ಮ ಸಹೋದರಿಯ ಬಗ್ಗೆ ಮಾಹಿತಿ ನೀಡಿದ್ದಾರೆ. ‘ನನ್ನ ಅಕ್ಕ ನಿಖತ್ ಅವರು ಪಠಾಣ್​ ಸಿನಿಮಾದಲ್ಲಿ ನಟಿಸಿದ್ದಾರೆ. ಇಂದಿನಿಂದ ನೀವು ಪಠಾಣ್ ಎಂದು ಶಾರುಖ್​ಗೆ ಒಂದು ದಾರ ಕಟ್ಟುತ್ತಾರೆ. ಅದು ನನ್ನ ಸಹೋದರಿ’ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ ಆಮಿರ್. ಈ ವೇಳೆ ಅಲ್ಲಿ ನಿಖತ್ ಕೂಡ ಇದ್ದರು. ಅವರು ಖುಷಿಯಿಂದ ಎದ್ದು ಕೈಮುಗಿದರು. ಇದನ್ನೂ ಓದಿ: ಕಾಂಗ್ರೆಸ್ ವಿರುದ್ಧವೇ ದೂರು ದಾಖಲಿಸಿದ ನಟ ಆಮಿರ್ ಖಾನ್: ಆಗಿದ್ದೇನು?

‘ಪಠಾಣ್’ ಸಿನಿಮಾ 2023ರ ಜನವರಿ 25ರಂದು ರಿಲೀಸ್ ಆಯಿತು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 1000 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಶಾರುಖ್ ಖಾನ್ ಜೊತೆ ದೀಪಿಕಾ ಪಡುಕೋಣೆ, ಜಾನ್ ಅಬ್ರಹಾಂ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಶಾರುಖ್ ಖಾನ್ ಅವರ ಮೇಲೆ ತೀವ್ರ ದಾಳಿ ನಡೆದು ಒಂದು ಪ್ರದೇಶಕ್ಕೆ ಬರುತ್ತಾರೆ. ಈ ಪ್ರದೇಶದಲ್ಲಿ ಅವರಿಗೆ ಚಿಕಿತ್ಸೆ ಸಿಗುತ್ತದೆ. ಆ ಸ್ಥಳದಲ್ಲೇ ಶಾರುಖ್ ಖಾನ್​ಗೆ ಪಠಾಣ್ ಎನ್ನುವ ಟೈಟಲ್ ಸಿಗುತ್ತದೆ.

ಸದ್ಯ ಆಮಿರ್ ಖಾನ್ ಅವರು ‘ಸಿತಾರೆ ಜಮೀನ್​ಪರ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಜೆನಿಲಿಯಾ ಡಿಸೋಜಾ ನಾಯಕಿ. ಒಂದು ಸಿಂಡ್ರೋಮ್ ಬಗ್ಗೆ ಈ ಸಿನಿಮಾ ಇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:03 am, Mon, 29 April 24

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು