AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಅಕ್ಕ ಪಠಾಣ್ ಸಿನಿಮಾದಲ್ಲಿ ನಟಿಸಿದ್ದರು’; ಅಚ್ಚರಿಯ ವಿಚಾರ ಹೊರ ಹಾಕಿದ ಆಮಿರ್ ಖಾನ್

ನೆಟ್​ಫ್ಲಿಕ್ಸ್​ನಲ್ಲಿ ಕಪಿಲ್ ಶರ್ಮಾ ಅವರು ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶೋ’ ನಡೆಸಿಕೊಡುತ್ತಿದ್ದಾರೆ. ಈ ಶೋಗೆ ಆಮಿರ್ ಖಾನ್ ಅವರು ಅತಿಥಿ ಆಗಿ ಬಂದಿದ್ದಾರೆ. ಈ ವೇಳೆ ಅವರು ತಮ್ಮ ಸಹೋದರಿಯ ಬಗ್ಗೆ ಮಾಹಿತಿ ನೀಡಿದ್ದಾರೆ. ‘ಪಠಾಣ್’ ಸಿನಿಮಾದಲ್ಲಿ ಅವರು ಮಾಡಿದ ಪಾತ್ರ ಯಾವುದು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

‘ನನ್ನ ಅಕ್ಕ ಪಠಾಣ್ ಸಿನಿಮಾದಲ್ಲಿ ನಟಿಸಿದ್ದರು’; ಅಚ್ಚರಿಯ ವಿಚಾರ ಹೊರ ಹಾಕಿದ ಆಮಿರ್ ಖಾನ್
ಆಮಿರ್-ನಿಖತ್
 ಶ್ರೀಲಕ್ಷ್ಮೀ ಎಚ್
| Edited By: |

Updated on:May 01, 2024 | 7:41 AM

Share

ನಟ ಆಮಿರ್ ಖಾನ್ (Aamir Khan) ಅವರು ಇತ್ತೀಚೆಗೆ ನಟನೆಯಿಂದ ದೂರವೇ ಇದ್ದಾರೆ. ‘ಲಾಲ್ ಸಿಂಗ್ ಚಡ್ಡಾ’ ಬಳಿಕ ಅವರು ಯಾವುದೇ ಸಿನಿಮಾಗಳಲ್ಲಿ ನಟಿಸಿಲ್ಲ. ಬದಲಿಗೆ ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಂಡಿದ್ದಾರೆ. ವಿಶೇಷ ಎಂದರೆ ಈ ಸಂದರ್ಭದಲ್ಲಿ ಅವರ ಅಕ್ಕ ನಿಖತ್ ಖಾನ್ ಹೆಗ್ಡೆ ಅವರು ಸಿನಿಮಾದಲ್ಲಿ ನಟಿಸಿದ್ದರು. ಈ ವಿಚಾರವನ್ನು ಕಪಿಲ್ ಶರ್ಮಾ ಶೋನಲ್ಲಿ ಆಮಿರ್ ಖಾನ್ ಅವರು ಉಲ್ಲೇಖ ಮಾಡಿದ್ದಾರೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ನೆಟ್​ಫ್ಲಿಕ್ಸ್​ನಲ್ಲಿ ಕಪಿಲ್ ಶರ್ಮಾ ಅವರು ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶೋ’ ನಡೆಸಿಕೊಡುತ್ತಿದ್ದಾರೆ. ಈ ಶೋಗೆ ಆಮಿರ್ ಖಾನ್ ಅವರು ಅತಿಥಿ ಆಗಿ ಬಂದಿದ್ದಾರೆ. ಈ ವೇಳೆ ಅವರು ತಮ್ಮ ಸಹೋದರಿಯ ಬಗ್ಗೆ ಮಾಹಿತಿ ನೀಡಿದ್ದಾರೆ. ‘ನನ್ನ ಅಕ್ಕ ನಿಖತ್ ಅವರು ಪಠಾಣ್​ ಸಿನಿಮಾದಲ್ಲಿ ನಟಿಸಿದ್ದಾರೆ. ಇಂದಿನಿಂದ ನೀವು ಪಠಾಣ್ ಎಂದು ಶಾರುಖ್​ಗೆ ಒಂದು ದಾರ ಕಟ್ಟುತ್ತಾರೆ. ಅದು ನನ್ನ ಸಹೋದರಿ’ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ ಆಮಿರ್. ಈ ವೇಳೆ ಅಲ್ಲಿ ನಿಖತ್ ಕೂಡ ಇದ್ದರು. ಅವರು ಖುಷಿಯಿಂದ ಎದ್ದು ಕೈಮುಗಿದರು. ಇದನ್ನೂ ಓದಿ: ಕಾಂಗ್ರೆಸ್ ವಿರುದ್ಧವೇ ದೂರು ದಾಖಲಿಸಿದ ನಟ ಆಮಿರ್ ಖಾನ್: ಆಗಿದ್ದೇನು?

‘ಪಠಾಣ್’ ಸಿನಿಮಾ 2023ರ ಜನವರಿ 25ರಂದು ರಿಲೀಸ್ ಆಯಿತು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 1000 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಶಾರುಖ್ ಖಾನ್ ಜೊತೆ ದೀಪಿಕಾ ಪಡುಕೋಣೆ, ಜಾನ್ ಅಬ್ರಹಾಂ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಶಾರುಖ್ ಖಾನ್ ಅವರ ಮೇಲೆ ತೀವ್ರ ದಾಳಿ ನಡೆದು ಒಂದು ಪ್ರದೇಶಕ್ಕೆ ಬರುತ್ತಾರೆ. ಈ ಪ್ರದೇಶದಲ್ಲಿ ಅವರಿಗೆ ಚಿಕಿತ್ಸೆ ಸಿಗುತ್ತದೆ. ಆ ಸ್ಥಳದಲ್ಲೇ ಶಾರುಖ್ ಖಾನ್​ಗೆ ಪಠಾಣ್ ಎನ್ನುವ ಟೈಟಲ್ ಸಿಗುತ್ತದೆ.

ಸದ್ಯ ಆಮಿರ್ ಖಾನ್ ಅವರು ‘ಸಿತಾರೆ ಜಮೀನ್​ಪರ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಜೆನಿಲಿಯಾ ಡಿಸೋಜಾ ನಾಯಕಿ. ಒಂದು ಸಿಂಡ್ರೋಮ್ ಬಗ್ಗೆ ಈ ಸಿನಿಮಾ ಇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:03 am, Mon, 29 April 24

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ