AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aamir Khan: ಮತ್ತೆ ಸಿಗರೇಟ್​ ಚಟ ಹತ್ತಿಸಿಕೊಂಡ ಆಮಿರ್​ ಖಾನ್​; ಸಾಕ್ಷಿ ಸಮೇತ ಸಿಕ್ಕಿಬಿದ್ದ ನಟ

Laal Singh Chaddha | Aamir Khan: ಪುತ್ರ ಆಜಾದ್ ಖಾನ್​ ಸಲುವಾಗಿ ಆಮಿರ್​ ಖಾನ್​ ಅವರು ಸಿಗರೇಟ್​ ಚಟ ಬಿಟ್ಟಿದ್ದಾರೆ ಎಂಬುದನ್ನು ನಿಜ ಎಂದು ಅಭಿಮಾನಿಗಳು ನಂಬಿದ್ದರು. ಆದರೆ ಈಗ ವೈರಲ್​ ಆಗಿರುವ ಫೋಟೋದಿಂದ ಸತ್ಯ ಬಯಲಾಗಿದೆ.

Aamir Khan: ಮತ್ತೆ ಸಿಗರೇಟ್​ ಚಟ ಹತ್ತಿಸಿಕೊಂಡ ಆಮಿರ್​ ಖಾನ್​; ಸಾಕ್ಷಿ ಸಮೇತ ಸಿಕ್ಕಿಬಿದ್ದ ನಟ
ಆಮಿರ್ ಖಾನ್, ಕರೀನಾ ಕಪೂರ್ ಖಾನ್ ವೈರಲ್​ ಫೋಟೋ
TV9 Web
| Edited By: |

Updated on: Jul 28, 2022 | 2:20 PM

Share

ಬಾಲಿವುಡ್​ನ ಖ್ಯಾತ ನಟ ಆಮಿರ್​ ಖಾನ್ (Aamir Khan)​ ಅವರ ಸಂಪೂರ್ಣ ಗಮನ ಈಗ ‘ಲಾಲ್​ ಸಿಂಗ್​ ಚಡ್ಡಾ’ ಚಿತ್ರದ ಮೇಲಿದೆ. ಸಾಕಷ್ಟು ಸಮಯ ತೆಗೆದುಕೊಂಡು ಅವರು ಈ ಸಿನಿಮಾ ಮಾಡಿದ್ದಾರೆ. ಆಗಸ್ಟ್​ 11ರಂದು ವಿಶ್ವಾದ್ಯಂತ ಈ ಚಿತ್ರ ಬಿಡುಗಡೆ ಆಗಲಿದೆ. ಆ ಪ್ರಯುಕ್ತ ಅವರು ಈಗ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ‘ಲಾಲ್​ ಸಿಂಗ್​ ಚಡ್ಡಾ’ (Laal Singh Chaddha) ಚಿತ್ರದಲ್ಲಿ ಆಮಿರ್​ ಖಾನ್​ಗೆ ಜೋಡಿಯಾಗಿ ಕರೀನಾ ಕಪೂರ್​ ಖಾನ್​ ನಟಿಸಿದ್ದಾರೆ. ಇದರ ಪ್ರಚಾರದ ಸಲುವಾಗಿ ಜನಪ್ರಿಯ ‘ಕಾಫಿ ವಿತ್​ ಕರಣ್​ ಸೀಸನ್​ 7’ (Koffee With Karan 7) ಶೋಗೆ ಹಾಜರಿ ಹಾಕಿದ್ದಾರೆ. ಎಪಿಸೋಡ್​ ಶೂಟಿಂಗ್​ ಸಂದರ್ಭದ ಫೋಟೋ ವೈರಲ್​ ಆಗಿದೆ. ಇದರಲ್ಲಿ ಆಮಿರ್ ಖಾನ್​ ಅವರು ಸಿಗರೇಟ್​ ಸೇದುತ್ತಿರುವುದು ಕಂಡುಬಂದಿದೆ.

ಈ ಮೊದಲು ಆಮಿರ್​ ಖಾನ್​ ಸಿಕ್ಕಾಪಟ್ಟೆ ಸಿಗರೇಟ್​ ಸೇದುತ್ತಿದ್ದರು. ಅದಕ್ಕೆ ಕುಟುಂಬದವರಿಂದ ಭಾರಿ ವಿರೋಧ ವ್ಯಕ್ತವಾಗುತ್ತಿತ್ತು. ಧೂಮಪಾನದ ಸಹವಾಸ ಬಿಟ್ಟುಬಿಡುವಂತೆ ಮಕ್ಕಳಾದ ಇರಾ ಖಾನ್​ ಮತ್ತು ಜುನೈದ್​ ಖಾನ್​ ಅವರು ಒತ್ತಾಯ ಮಾಡಿದ್ದರು. ಹಾಗಿದ್ದರೂ ಸಂಪೂರ್ಣ ತ್ಯಜಿಸಲು ಆಮಿರ್​ ಖಾನ್​ಗೆ ಸಾಧ್ಯವಾಗಿರಲಿಲ್ಲ. ಆದರೆ ಪುತ್ರ ಆಜಾದ್​ ಖಾನ್​ ಜನಿಸಿದ ಬಳಿಕ ಅವರು ಸಿಗರೇಟ್​ ಬಿಟ್ಟಿದ್ದರು ಎಂದು ವರದಿ ಆಗಿತ್ತು.

ಪುತ್ರ ಆಜಾದ್ ಖಾನ್​ ಸಲುವಾಗಿ ಆಮಿರ್​ ಖಾನ್​ ಅವರು ಸಿಗರೇಟ್​ ಚಟ ಬಿಟ್ಟಿದ್ದಾರೆ ಎಂಬುದನ್ನು ನಿಜ ಎಂದೇ ಅಭಿಮಾನಿಗಳು ನಂಬಿದ್ದರು. ಆದರೆ ಈಗ ವೈರಲ್​ ಆಗಿರುವ ಈ ಫೋಟೋದಲ್ಲಿ ಅವರು ಪೈಪ್​ ಸೇದುತ್ತಿರುವುದು ಕಾಣಿಸಿದೆ. ‘ಒತ್ತಡದ ಕಾರಣದಿಂದ ಆಮಿರ್​ ಖಾನ್​ ಮತ್ತೆ ಸಿಗರೇಟ್​ ಸೇದಲು ಪ್ರಾರಂಭಿದ್ದಾರೆ..’ ಎಂದು ನೆಟ್ಟಿಗರೊಬ್ಬರು ಕಮೆಂಟ್​ ಮಾಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋ ವೈರಲ್​ ಆಗುತ್ತಿದೆ.

ಇದನ್ನೂ ಓದಿ
Image
‘ಕೆಜಿಎಫ್ 2’ ನೋಡಿ ಬದಲಾಗಿದೆ ಬಾಲಿವುಡ್ ಪ್ರೇಕ್ಷಕರ ಮನಸ್ಥಿತಿ? ಆಮಿರ್ ಖಾನ್​ಗೆ ಶುರುವಾಗಿದೆ ಭಯ
Image
ಆಗಸ್ಟ್​ 11ಕ್ಕೆ ಆಮಿರ್​ ಖಾನ್​ ವರ್ಸಸ್​ ಅಕ್ಷಯ್​ ಕುಮಾರ್​; ಪ್ರೇಕ್ಷಕರ ಬೆಂಬಲ ಯಾರ ಸಿನಿಮಾಗೆ?
Image
ಪ್ರೀತಿಸಿದ ಹುಡುಗಿ ರಿಜೆಕ್ಟ್​ ಮಾಡಿದ್ದಕ್ಕೆ ತಲೆ ಬೋಳಿಸಿಕೊಂಡಿದ್ದ ಆಮಿರ್ ಖಾನ್​; ಹಳೆ ಘಟನೆ ನೆನೆದ ನಟ
Image
ಫ್ಯಾಮಿಲಿ ಜತೆ ಆಮಿರ್​ ಖಾನ್​ ಪುತ್ರಿ ಇರಾ ಖಾನ್​ ಬರ್ತ್​ಡೇ ಆಚರಣೆ; ಫೋಟೋ ನೋಡಿ ಫ್ಯಾನ್ಸ್​ ಹೇಳಿದ್ದೇನು?

ಆಮಿರ್​ ಖಾನ್​ ಮತ್ತು ಕರೀನಾ ಕಪೂರ್​ ಖಾನ್​ ಅವರು ‘ಕಾಫಿ ವಿತ್​ ಕರಣ್​’ ಶೋಗೆ ಬರಬೇಕು ಎಂಬುದು ಕೊನೇ ಕ್ಷಣದಲ್ಲಿ ಆದ ನಿರ್ಧಾರ ಎಂದು ಹೇಳಲಾಗುತ್ತಿದೆ. ಯಾಕೆಂದರೆ, ಈ ಹಿಂದೆ ಕರಣ್​ ಜೋಹರ್​ ಹಂಚಿಕೊಂಡ ಲಾಂಚಿಂಗ್​ ಪ್ರೋಮೋದಲ್ಲಿ ಇವರಿಬ್ಬರು ಕಾಣಿಸಿಕೊಂಡಿರಲಿಲ್ಲ. ಆದರೆ ಈಗ ಇಬ್ಬರೂ ‘ಲಾಲ್​ ಸಿಂಗ್​ ಚಡ್ಡಾ’ ಚಿತ್ರದ ಪ್ರಮೋಷನ್​ ಸಲುವಾಗಿ ‘ಕಾಫಿ ವಿತ್​ ಕರಣ್​’ ಶೋಗೆ ಹಾಜರಿ ಹಾಕಿದ್ದಾರೆ. ಆ ಎಪಿಸೋಡ್​ ನೋಡಲು ಅಭಿಮಾನಿಗಳು ಕಾದಿದ್ದಾರೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್