Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮಿರ್​ ಖಾನ್​ ಮಗ ಜುನೈದ್​ ಖಾನ್​ಗೆ ಶ್ರೀದೇವಿಯ 2ನೇ ಮಗಳು ಖುಷಿ ಕಪೂರ್​ ಜೋಡಿ

ಬಾಲಿವುಡ್​ನಲ್ಲಿ ನೆಪೋಟಿಸಂ ಬಗ್ಗೆ ಆಗಾಗ ಟೀಕೆ ಕೇಳಿಬರುತ್ತದೆ. ಹಾಗಿದ್ದರೂ ಕೂಡ ಸ್ಟಾರ್​ ಕಲಾವಿದರ ಮಕ್ಕಳಿಗೆ ಸುಲಭವಾಗಿಯೇ ಅವಕಾಶ ಸಿಗುತ್ತಿದೆ. ಆಮಿರ್​ ಖಾನ್​ ಮಗ ಜುನೈದ್​ ಖಾನ್​ ಅವರಿಗೆ ಈಗಾಗಲೇ 3 ಸಿನಿಮಾಗಳ ಚಾನ್ಸ್​ ಸಿಕ್ಕಿದೆ. ಮೊದಲ ಸಿನಿಮಾದ ಬಿಡುಗಡೆಗೂ ಮುನ್ನವೇ ಅವರಿಗೆ ಹಲವು ಅವಕಾಶಗಳು ಹರಿದುಬರುತ್ತಿವೆ.

ಆಮಿರ್​ ಖಾನ್​ ಮಗ ಜುನೈದ್​ ಖಾನ್​ಗೆ ಶ್ರೀದೇವಿಯ 2ನೇ ಮಗಳು ಖುಷಿ ಕಪೂರ್​ ಜೋಡಿ
ಜುನೈದ್​ ಖಾನ್​, ಆಮಿರ್​ ಖಾನ್​, ಖುಷಿ ಕಪೂರ್​
Follow us
ಮದನ್​ ಕುಮಾರ್​
|

Updated on: May 03, 2024 | 10:01 PM

ಹಿಂದಿ ಚಿತ್ರರಂಗದಲ್ಲಿ ಈಗ ಹೊಸ ತಲೆಮಾರಿನ ಕಲಾವಿದರು ಎಂಟ್ರಿ ನೀಡುತ್ತಿದ್ದಾರೆ. ಬಾಲಿವುಡ್​ (Bollywood) ಸೆಲೆಬ್ರಿಟಿಗಳ ಮಕ್ಕಳು ಮಿಂಚಲು ಸಜ್ಜಾಗಿದ್ದಾರೆ. ಆಮಿರ್​ ಖಾನ್ ಅವರ ಪುತ್ರ ಜುನೈದ್​ ಖಾನ್​ (Junaid Khan) ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಅವರ ಮೊದಲ ಸಿನಿಮಾ ಇನ್ನೂ ತೆರೆಕಾಣುವುದು ಬಾಕಿ ಇದೆ. ಅಷ್ಟರಲ್ಲಾಗಲೇ ಮೂರನೇ ಸಿನಿಮಾ ಒಪ್ಪಿಕೊಂಡಿರುವ ಬಗ್ಗೆ ವರದಿ ಆಗಿದೆ. ಈ ಸಿನಿಮಾದಲ್ಲಿ ಅವರು ಶ್ರೀದೇವಿಯ 2ನೇ ಮಗಳು ಖುಷಿ ಕಪೂರ್​ (Khushi Kapoor) ಜೊತೆ ನಟಿಸುತ್ತಾರೆ ಎಂದು ಸುದ್ದಿ ಆಗಿದೆ.

ಜುನೈದ್​ ಖಾನ್​ ಅವರು ಹಲವು ವರ್ಷಗಳ ಕಾಲ ರಂಗಭೂಮಿಯಲ್ಲಿ ಪಳಗಿದ್ದಾರೆ. ಈಗ ಅವರು ಬಾಲಿವುಡ್​ಗೆ ಕಾಲಿಡುತ್ತಿದ್ದಾರೆ. ಅವರ ಮೊದಲ ಸಿನಿಮಾಗೆ ಯಶ್​ ರಾಜ್​ ಫಿಲ್ಮ್ಸ್​ ಬಂಡವಾಳ ಹೂಡಿದೆ. 2ನೇ ಸಿನಿಮಾದಲ್ಲಿ ಜುನೈದ್​ ಖಾನ್​ ಅವರು ಸಾಯಿ ಪಲ್ಲವಿ ಜೊತೆ ನಟಿಸುತ್ತಿದ್ದಾರೆ. ಆ ಸಿನಿಮಾದ ಟೈಟಲ್​ ಇನ್ನೂ ಬಹಿರಂಗ ಆಗಿಲ್ಲ. ಅಷ್ಟರಲ್ಲಾಗಲೇ ಮೂರನೇ ಸಿನಿಮಾದ ಬಗ್ಗೆ ಎಗ್ಸೈಟಿಂಗ್​ ಸುದ್ದಿ ಕೇಳಿಬಂದಿದೆ.

ಮೂರನೇ ಸಿನಿಮಾದಲ್ಲಿ ಜುನೈದ್​ ಖಾನ್​ ಅವರು ರಿಮೇಕ್​ ಪ್ರಯತ್ನ ಮಾಡಲಿದ್ದಾರೆ ಎನ್ನಲಾಗಿದೆ. ತಮಿಳಿನ ಸೂಪರ್​ ಹಿಟ್​ ಸಿನಿಮಾ ‘ಲವ್​ ಟುಡೇ’ ಹಿಂದಿಗೆ ರಿಮೇಕ್​ ಆಗಲಿದ್ದು, ಆ ಚಿತ್ರದಲ್ಲಿ ಜುನೈದ್​ ಖಾನ್​ ಮತ್ತು ಖುಷಿ ಕಪೂರ್​ ಅವರು ಒಟ್ಟಿಗೆ ನಟಿಸುವ ಸಾಧ್ಯತೆ ದಟ್ಟವಾಗಿದೆ. ಅದ್ವೈತ್​ ಚಂದನ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಲಿದ್ದಾರೆ. ಶೀಘ್ರದಲ್ಲೇ ಇದರ ಶೂಟಿಂಗ್​ ಆರಂಭ ಆಗಲಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿಳ ‘ನನ್ನ ಮಕ್ಕಳೇ ನನ್ನ ಮಾತು ಕೇಳಲ್ಲ’: ಆಮಿರ್​ ಖಾನ್​ ಹೀಗೆ ಹೇಳಿದ್ದು ಯಾಕೆ?

ಶ್ರೀದೇವಿ ಅವರ ಮೊದಲ ಮಗಳು ಜಾನ್ವಿ ಕಪೂರ್​ ಈಗಾಗಲೇ ಸ್ಟಾರ್​ ಆಗಿ ಮಿಂಚುತ್ತಿದ್ದಾರೆ. 2ನೇ ಮಗಳು ಖುಷಿ ಕಪೂರ್​ ಅವರು ‘ದಿ ಆರ್ಚೀಸ್​’ ಸಿನಿಮಾದಲ್ಲಿ ನಟಿಸುವ ಮೂಲಕ ಖಾತೆ ತೆರೆದಿದ್ದಾರೆ. ಆ ಸಿನಿಮಾ ನೇರವಾಗಿ ಒಟಿಟಿಯಲ್ಲಿ ಬಿಡುಗಡೆ ಆಯಿತು. ಅವರ ಮುಂದಿನ ಪ್ರಾಜೆಕ್ಟ್​ಗಳ ಬಗ್ಗೆ ಗಾಸಿಪ್​ ಕೇಳಿಬರುತ್ತಿದೆ. ಜುನೈದ್​ ಖಾನ್​ ಮತ್ತು ಖುಷಿ ಕಪೂರ್​ ಜೋಡಿಯಾದರೆ ಅಭಿಮಾನಿಗಳಿಗೆ ಖುಷಿ ಆಗಲಿದೆ. ಹಿಂದಿ ಚಿತ್ರರಂಗಲ್ಲಿ ನೆಪೋಟಿಸಂ ಕುರಿತು ಆಗಾಗ ಟೀಕೆ ಕೇಳಿಬರುತ್ತದೆ. ಆದರೂ ಸಹ ಬಾಲಿವುಡ್​ನ ಸ್ಟಾರ್​ ಕಲಾವಿದರ ಮಕ್ಕಳಿಗೆ ಸುಲಭವಾಗಿ ಅವಕಾಶ ಸಿಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!