AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aamir Khan: ವಿರೋಧದ ನಡುವೆಯೂ ‘ಆಸ್ಕರ್​’ ಗಮನ ಸೆಳೆದ ‘ಲಾಲ್​ ಸಿಂಗ್​ ಚಡ್ಡಾ’; ಆಮಿರ್​ ಖಾನ್​ ಫ್ಯಾನ್ಸ್​ ಖುಷ್​

Oscar Awards | Laal Singh Chaddha: 1994ರಲ್ಲಿ ತೆರೆಕಂಡ ‘ಫಾರೆಸ್ಟ್​ ಗಂಪ್​’ ಚಿತ್ರ 6 ಆಸ್ಕರ್​ ಪ್ರಶಸ್ತಿಗಳನ್ನು ಪಡೆದುಕೊಂಡಿತ್ತು. ಅದೇ ಸಿನಿಮಾವನ್ನು ‘ಲಾಲ್​ ಸಿಂಗ್​ ಚಡ್ಡಾ’ ಶೀರ್ಷಿಕೆಯಲ್ಲಿ ಆಮಿರ್​ ಖಾನ್​ ಹಿಂದಿಗೆ ರಿಮೇಕ್​ ಮಾಡಿದ್ದಾರೆ.

Aamir Khan: ವಿರೋಧದ ನಡುವೆಯೂ ‘ಆಸ್ಕರ್​’ ಗಮನ ಸೆಳೆದ ‘ಲಾಲ್​ ಸಿಂಗ್​ ಚಡ್ಡಾ’; ಆಮಿರ್​ ಖಾನ್​ ಫ್ಯಾನ್ಸ್​ ಖುಷ್​
ಕರೀನಾ ಕಪೂರ್ ಖಾನ್, ಆಮಿರ್ ಖಾನ್
TV9 Web
| Edited By: |

Updated on:Aug 13, 2022 | 4:50 PM

Share

ನಟ ಆಮಿರ್​ ಖಾನ್​ (Aamir Khan) ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳಿದ್ದಾರೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಅವರು ಕಾಂಟ್ರವರ್ಸಿ ಕಾರಣದಿಂದ ಸುದ್ದಿ ಆಗುವುದು ಹೆಚ್ಚಿದೆ. ಒಂದು ಕಾಲದಲ್ಲಿ ‘ಲಗಾನ್​’, ‘ಮಂಗಲ್​ ಪಾಂಡೆ’, ‘ರಂಗ್​ ದೇ ಬಸಂತಿ’ ಮುಂತಾದ ದೇಶಭಕ್ತಿ ಸಿನಿಮಾ ಮಾಡಿದ ಅವರು ಈಗ ದೇಶವಿರೋಧಿ ಎಂಬ ರೀತಿಯಲ್ಲಿ ಬಿಂಬಿಸಲ್ಪಡುತ್ತಿದ್ದಾರೆ. ಅದೇ ಕಾರಣಕ್ಕಾಗಿ ಆಮಿರ್​ ಖಾನ್​ ನಟನೆಯ ‘ಲಾಲ್​ ಸಿಂಗ್​ ಚಡ್ಡಾ’ (Laal Singh Chaddha) ಸಿನಿಮಾಗೆ ಜನರಿಂದ ವಿರೋಧ ವ್ಯಕ್ತವಾಗಿದೆ. ಈ ಹಿಂದೆ ಅಸಹಿಷ್ಣತೆ ಕುರಿತು ಆಮಿರ್ ಖಾನ್​ ನೀಡಿದ್ದ ಹೇಳಿಕೆಯನ್ನೇ ಇಟ್ಟುಕೊಂಡು ಈಗಲೂ ಅವರ ಚಿತ್ರವನ್ನು ಬಹಿಷ್ಕರಿಸುವ ಟ್ರೆಂಡ್​ ಜಾರಿಯಲ್ಲಿದೆ. ‘ಲಾಲ್​ ಸಿಂಗ್​ ಚಡ್ಡಾ’ ಚಿತ್ರಕ್ಕೂ ಬಹಿಷ್ಕಾರದ ಬಿಸಿ ತಟ್ಟಿದೆ. ಇದರ ನಡುವೆಯೂ ಈ ಸಿನಿಮಾ ‘ಆಸ್ಕರ್​’ (Oscar) ಸಂಸ್ಥೆಯ ಗಮನ ಸೆಳೆದಿದೆ. ಇದರಿಂದ ಆಮಿರ್​ ಖಾನ್​ ಅಭಿಮಾನಿಗಳು ಖುಷಿ ಆಗಿದ್ದಾರೆ.

ಈಗಾಗಲೇ ತಿಳಿದಿರುವಂತೆ ಹಾಲಿವುಡ್​ನ ‘ಫಾರೆಸ್ಟ್​ ಗಂಪ್​’ ಸಿನಿಮಾದ ಹಿಂದಿ ರಿಮೇಕ್​ ಆಗಿ ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾ ಮೂಡಿಬಂದಿದೆ. ಇಂಗ್ಲಿಷ್​ನಲ್ಲಿ ಟಾಮ್​ ಹ್ಯಾಂಕ್ಸ್​ ಮಾಡಿದ ಪಾತ್ರವನ್ನು ಹಿಂದಿಯಲ್ಲಿ ಆಮಿರ್ ಖಾನ್​ ಮಾಡಿದ್ದಾರೆ. 1994ರಲ್ಲಿ ತೆರೆಕಂಡ ‘ಫಾರೆಸ್ಟ್​ ಗಂಪ್​’ ಚಿತ್ರ 6 ಆಸ್ಕರ್​ ಪ್ರಶಸ್ತಿಗಳನ್ನು ಪಡೆದುಕೊಂಡಿತ್ತು. 13 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿತ್ತು.

ಇದನ್ನೂ ಓದಿ
Image
Box Office Collection: ಆಮಿರ್​​ Vs ಅಕ್ಷಯ್​​; ಮೊದಲ ದಿನ ‘ಲಾಲ್​ ಸಿಂಗ್​ ಚಡ್ಡಾ’ ಗಳಿಕೆ 12 ಕೋಟಿ ರೂ., ‘ರಕ್ಷಾ ಬಂಧನ್’​ಗೆ 8.20 ಕೋಟಿ
Image
Laal Singh Chaddha Twitter review: ಲಾಲ್​ ಸಿಂಗ್ ಚಡ್ಡಾ ಟ್ವಿಟರ್​ ವಿಮರ್ಶೆ: ಅಮೀರ್ ಅಭಿನಯಕ್ಕೆ ಸಿನಿಪ್ರಿಯರು ಫಿದಾ
Image
Aamir Khan: ದೇಶದ ಜನರ ಕ್ಷಮೆ ಕೇಳಿದ ಆಮಿರ್ ಖಾನ್​; ‘ಲಾಲ್​ ಸಿಂಗ್ ಚಡ್ಡಾ’ ರಿಲೀಸ್​ ವೇಳೆ ಹೊಸ ಹೇಳಿಕೆ
Image
Aamir Khan: ‘ನನಗೆ ಭಾರತ ಇಷ್ಟವಿಲ್ಲ ಅನ್ನೋದು ಸುಳ್ಳು, ನನ್ನ ಸಿನಿಮಾ ಬಹಿಷ್ಕಾರ ಮಾಡಬೇಡಿ ಪ್ಲೀಸ್​’: ಆಮಿರ್​ ಖಾನ್​

‘ಫಾರೆಸ್ಟ್​ ಗಂಪ್​’ ಚಿತ್ರವನ್ನು ಹಿಂದಿಗೆ ರಿಮೇಕ್​ ಮಾಡಿರುವ ರೀತಿಗೆ ಆಸ್ಕರ್​ ಸಂಸ್ಥೆ (ಅಕಾಡೆಮಿ ಆಫ್​ ಮೋಷನ್​ ಪಿಕ್ಚರ್ಸ್​ ಆರ್ಟ್ಸ್​ ಆ್ಯಂಡ್​ ಸೈನ್ಸಸ್​) ಮನಸೋತಿದೆ. ಅದರ ಅಧಿಕೃತ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್​ ಮಾಡಲಾಗಿದೆ. ಎರಡೂ ಸಿನಿಮಾದ ಕೆಲವು ದೃಶ್ಯಗಳು ಹಂಚಿಕೊಳ್ಳಲಾಗಿದೆ.

‘ಲಾಲ್​ ಸಿಂಗ್​ ಚಡ್ಡಾ’ ಚಿತ್ರಕ್ಕೆ ಅದ್ವೈತ್​ ಚಂದನ್​ ನಿರ್ದೇಶನ ಮಾಡಿದ್ದಾರೆ. ಆಮಿರ್ ಖಾನ್​ಗೆ ಜೋಡಿಯಾಗಿ ಕರೀನಾ ಕಪೂರ್​ ಖಾನ್​ ನಟಿಸಿದ್ದಾರೆ. ನಾಗ ಚೈತನ್ಯ ಅವರು ಅತಿಥಿ ಪಾತ್ರ ಮಾಡಿದ್ದಾರೆ. ಆಗಸ್ಟ್​ 11ರಂದು ಬಿಡುಗಡೆಯಾದ ಈ ಚಿತ್ರ ಮೊದಲ ದಿನ 11.70 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿತು. ಎರಡನೇ ದಿನವಾದ ಶುಕ್ರವಾರ ಕೇವಲ 7.26 ಕೋಟಿ ರೂಪಾಯಿ ಆದಾಯ ಬಂದಿದೆ.

View this post on Instagram

A post shared by The Academy (@theacademy)

ಈ ಸಿನಿಮಾದಲ್ಲಿನ ಕೆಲವು ದೃಶ್ಯಗಳಿಗೆ ವಿರೋಧ ವ್ಯಕ್ತವಾಗುತ್ತಿದೆ. ಭಾರತೀಯ ಸೇನೆಗೆ ಅವಮಾನ ಮಾಡಲಾಗಿದೆ ಎಂದು ದೆಹಲಿ ಮೂಲದ ವಕೀಲರೊಬ್ಬರು ದೂರು ನೀಡಿದ್ದಾರೆ. ಈ ಕಾರಣದಿಂದ ಮುಂದಿನ ದಿನಗಳಲ್ಲಿ ‘ಲಾಲ್​ ಸಿಂ​ಗ್​ ಚಡ್ಡಾ’ ಚಿತ್ರದ ಬಾಕ್ಸ್​ ಆಫೀಸ್​ ಕಲೆಕ್ಷನ್​ ಇನ್ನಷ್ಟು ಕುಸಿಯುವ ಸಾಧ್ಯತೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:50 pm, Sat, 13 August 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?