AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL Final ವೇಳೆ ರಿಲೀಸ್​ ಆಗತ್ತೆ ‘ಲಾಲ್​ ಸಿಂಗ್​ ಚಡ್ಡಾ’ ಟ್ರೇಲರ್​: ಇದು ಆಮಿರ್​ ಖಾನ್​ ಹೊಸ ಐಡಿಯಾ

Laal Singh Chaddha Trailer: ಸಿನಿಮಾ ಪ್ರಚಾರ ಮತ್ತು ಮಾರ್ಕೆಟಿಂಗ್​ ತಂತ್ರದಲ್ಲಿ ಇದನ್ನು ಹೊಸ ಐಡಿಯಾ ಎಂದು ಬಣ್ಣಿಸಲಾಗುತ್ತಿದೆ. ಈ ಬಗ್ಗೆ ‘ಲಾಲ್​ ಸಿಂಗ್​ ಚಡ್ಡಾ’ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.

IPL Final ವೇಳೆ ರಿಲೀಸ್​ ಆಗತ್ತೆ ‘ಲಾಲ್​ ಸಿಂಗ್​ ಚಡ್ಡಾ’ ಟ್ರೇಲರ್​: ಇದು ಆಮಿರ್​ ಖಾನ್​ ಹೊಸ ಐಡಿಯಾ
ಆಮಿರ್ ಖಾನ್, ಐಪಿಎಲ್
TV9 Web
| Edited By: |

Updated on:May 21, 2022 | 2:10 PM

Share

ಚಿತ್ರರಂಗದಲ್ಲಿ ನಟ ಆಮಿರ್​ ಖಾನ್ (Aamir Khan)​ ಅವರಿಗೆ ಹಲವು ವರ್ಷಗಳ ಅನುಭವ ಇದೆ. ಒಂದಿಕ್ಕಿಂತ ಒಂದು ಡಿಫರೆಂಟ್​ ಸಿನಿಮಾ ಮಾಡುವ ಮೂಲಕ ಅವರು ಗುರುತಿಸಿಕೊಂಡಿದ್ದಾರೆ. ಆ ಕಾರಣಕ್ಕಾಗಿ ಅವರನ್ನು ಅಭಿಮಾನಿಗಳು ಇಷ್ಟ ಪಡುತ್ತಾರೆ. ಸಿನಿಮಾ ಪ್ರಮೋಷನ್​ ವಿಚಾರದಲ್ಲಿಯೂ ಅವರು ಹೊಸ ಹೊಸ ಐಡಿಯಾಗಳನ್ನು ಹೊತ್ತು ತರುತ್ತಾರೆ. ಈಗ ಅವರು ‘ಲಾಲ್​ ಸಿಂಗ್​ ಚಡ್ಡಾ’ (Laal Singh Chaddha) ಸಿನಿಮಾದಲ್ಲಿ ನಟಿಸಿದ್ದಾರೆ. ಆಗಸ್ಟ್​ 11ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಈಗಾಗಲೇ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಟ್ರೇಲರ್​ ಬಿಡುಗಡೆ ಆಗಲಿದೆ. ಅದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಈಗೊಂದು ಎಗ್ಸೈಟಿಂಗ್​ ನ್ಯೂಸ್​ ಕೇಳಿಬಂದಿದೆ. ಈ ಬಾರಿ ಐಪಿಎಲ್​ ಫೈನಲ್​ ದಿನವೇ ‘ಲಾಲ್​ ಸಿಂಗ್​ ಚಡ್ಡಾ’ ಚಿತ್ರದ ಟ್ರೇಲರ್​ ರಿಲೀಸ್​ ಮಾಡಲಾಗುವುದು ಎಂದು ವರದಿ ಆಗಿದೆ. ಈ ಸುದ್ದಿ ಕೇಳಿ ಫ್ಯಾನ್ಸ್​ ಖುಷಿ ಆಗಿದ್ದಾರೆ. ಮೇ 29ರಂದು ಈ ಬಾರಿ ಐಪಿಎಲ್ ಕೊನೇ ಪಂದ್ಯ (IPL Final) ನಡೆಯಲಿದೆ. ಟಿವಿಯಲ್ಲಿ ಈ ಕೊನೇ ಮ್ಯಾಚ್​ ಪ್ರಚಾರ ಆಗುವಾಗ ಅದರ ಜೊತೆಗೆ ‘ಲಾಲ್​ ಸಿಂಗ್​ ಚಡ್ಡಾ’ ಚಿತ್ರದ ಟ್ರೇಲರ್​ ತೋರಿಸಲು ಪ್ಲ್ಯಾನ್​ ಮಾಡಲಾಗಿದೆ.

ಯಾವುದೇ ಚಿತ್ರದ ಟೀಸರ್​​, ಟ್ರೇಲರ್​ ಮುಂತಾದ್ದನ್ನು ಸಿನಿಮಾಗೆ ಸಂಬಂಧಿಸಿದ ಮನರಂಜನಾ ವಾಹಿನಿಯಲ್ಲಿ ಬಿಡುಗಡೆ ಮಾಡುವುದು ಸಹಜ. ಆದರೆ ಈ ಬಾರಿ ಆಮಿರ್​ ಖಾನ್​ ಅವರ ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾ ತಂಡ ಬೇರೆ ಮಾರ್ಗ ಹಿಡಿದಿದೆ. ಕ್ರೀಡೆಗೆ ಮೀಸಲಾಗಿರುವ ಹಾಗೂ ಪ್ರಸ್ತುತ ಐಪಿಎಲ್​ ಪ್ರಸಾರ ಮಾಡುತ್ತಿರುವ ‘ಸ್ಟಾರ್​ ಸ್ಪೋರ್ಟ್ಸ್​’ ವಾಹಿನಿ ಮೂಲಕ ಚಿತ್ರದ ಟ್ರೇಲರ್​ ಬಿಡುಗಡೆ ಮಾಡುವ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.

ಐಪಿಎಲ್​ ಫೈನಲ್​ ದಿನ ಹೆಚ್ಚು ಜನರು ಟಿವಿ ಮುಂದೆ ಕುಳಿತಿರುತ್ತಾರೆ. ಈ ಸಂದರ್ಭದಲ್ಲಿ ಮ್ಯಾಚ್​ ಮಧ್ಯೆ ಟ್ರೇಲರ್​ ಪ್ರಸಾರ ಮಾಡಿದರೆ ಹೆಚ್ಚು ಜನರನ್ನು ತಲುಪಬಹುದು ಎಂಬುದು ‘ಲಾಲ್​ ಸಿಂಗ್​ ಚಡ್ಡಾ’ ಬಳಗದ ಪ್ಲ್ಯಾನ್​. ಸಿನಿಮಾ ಪ್ರಚಾರ ಮತ್ತು ಮಾರ್ಕೆಟಿಂಗ್​ ತಂತ್ರದಲ್ಲಿ ಇದು ಹೊಸ ಐಡಿಯಾ ಎಂದು ಬಣ್ಣಿಸಲಾಗುತ್ತಿದೆ. ಆದರೆ ಈ ಸುದ್ದಿಯ ಬಗ್ಗೆ ಅಧಿಕೃತವಾಗಿ ಚಿತ್ರತಂಡದಿಂದ ಇನ್ನೂ ಯಾವುದೇ ಹೇಳಿಕೆ ನೀಡಿಲ್ಲ.

ಇದನ್ನೂ ಓದಿ
Image
ಫನ್ನಿ ಕಾರಣಕ್ಕೆ ಮತ್ತೆ ಒಂದಾದ ಕರೀನಾ ಕಪೂರ್​​-ಆಮಿರ್​ ಖಾನ್​; ವಿಡಿಯೋ ವೈರಲ್​
Image
‘ಲಾಲ್​ ಸಿಂಗ್​ ಚಡ್ಡಾ’ ಚಿತ್ರಕ್ಕೆ ಆಮಿರ್​, ಕರೀನಾ, ನಾಗ ಚೈತನ್ಯ ಪಡೆದ ಸಂಭಾವನೆ ಎಷ್ಟು ಕೋಟಿ?
Image
ನಟನೆಗೆ ವಿದಾಯ ಹೇಳಲು ಆಮಿರ್​ ಖಾನ್​ ನಿರ್ಧಾರ ಮಾಡಿದ್ದ ಸಂಗತಿ ಬಯಲು; ಮಾಜಿ ಪತ್ನಿ ಏನು ಹೇಳಿದ್ರು?
Image
‘ಡಿವೋರ್ಸ್​ ಆಗಿರಬಹುದು, ಆದ್ರೆ ಜೊತೆಗಿದ್ದೇವೆ’; ಇಬ್ಬರು ಮಾಜಿ ಪತ್ನಿಯರ ಬಗ್ಗೆ ಮಾತಾಡಿದ ಆಮಿರ್​ ಖಾನ್​

ಹಾಲಿವುಡ್​ನಲ್ಲಿ ಟಾಮ್​ ಹ್ಯಾಂಕ್ಸ್​ ನಟಿಸಿದ ‘ಫಾರೆಸ್ಟ್​ ಗಂಪ್​’ ಚಿತ್ರದ ಹಿಂದಿ ರಿಮೇಕ್​ ಆಗಿ ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾ ಮೂಡಿಬರುತ್ತಿದೆ. ಈ ಸಿನಿಮಾದಲ್ಲಿ ಆಮಿರ್​ ಖಾನ್​ಗೆ ಜೋಡಿಯಾಗಿ ಕರೀನಾ ಕಪೂರ್​ ಖಾನ್​ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ನಾಗ ಚೈತನ್ಯ ಕೂಡ ಅಭಿನಯಿಸಿದ್ದಾರೆ. ಅನೇಕ ಐತಿಹಾಸಿಕ ಘಟನೆಗಳಿಗೆ ಅನುಗುಣವಾಗಿ ಈ ಕಥೆ ಸಾಗುತ್ತದೆ. ಈ ಎಲ್ಲ ಕಾರಣಗಳಿಂದಾಗಿ ‘ಲಾಲ್​ ಸಿಂಗ್​ ಚಡ್ಡಾ’ ನಿರೀಕ್ಷೆ ಮೂಡಿಸಿದೆ.

ಕೆಲವೇ ದಿನಗಳ ಹಿಂದೆ ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾದಿಂದ ಎರಡು ಲಿರಿಕಲ್​ ವಿಡಿಯೋಗಳನ್ನು ಬಿಡುಗಡೆ ಮಾಡಲಾಗಿದೆ. ಅವುಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಈಗ ಟ್ರೇಲರ್​ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕೌತುಕ ಹೆಚ್ಚಾಗಿದೆ. ಈ ಸಿನಿಮಾದಲ್ಲಿ ಆಮಿರ್​ ಖಾನ್​ ಅವರು ಹತ್ತು ಹಲವು ಗೆಟಪ್​ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಟಿ ಕರೀನಾ ಕಪೂರ್​ ಖಾನ್​ ಅವರಿಗೂ ಈ ಚಿತ್ರದ ಮೇಲೆ ಹೆಚ್ಚು ನಿರೀಕ್ಷೆ ಇದೆ. ‘ಸೀಕ್ರೆಟ್​ ಸೂಪರ್​ ಸ್ಟಾರ್​’ ಸಿನಿಮಾ ನಿರ್ದೇಶಿಸಿ ಗಮನ ಸೆಳೆದಿದ್ದ ಅದ್ವೈತ್​ ಚಂದನ್​ ಅವರು ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:10 pm, Sat, 21 May 22

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ