AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿತಾರೆ ಜಮೀನ್ ಪರ್’ ಸಿನಿಮಾ ಕಲೆಕ್ಷನ್ ಗಣನೀಯ ಏರಿಕೆ; 2ನೇ ದಿನ ಸಖತ್ ಕಮಾಯಿ

ಕರ್ನಾಟಕದಲ್ಲಿಯೂ ‘ಸಿತಾರೆ ಜಮೀನ್ ಪರ್’ ಸಿನಿಮಾ ಭರ್ಜರಿಯಾಗಿ ಪ್ರದರ್ಶನ ಕಾಣುತ್ತಿದೆ. ಆಮಿರ್ ಖಾನ್ ನಟನೆ, ನಿರ್ಮಾಣದ ಈ ಚಿತ್ರಕ್ಕೆ ದಿನದಿಂದ ದಿನಕ್ಕೆ ಕಲೆಕ್ಷನ್​ ಹೆಚ್ಚುತ್ತಿದೆ. 2 ದಿನಕ್ಕೆ ಚಿತ್ರದ ಕಲೆಕ್ಷನ್ 30 ಕೋಟಿ ರೂಪಾಯಿ ಮೀರಿದೆ. 3ನೇ ದಿನ ಕೂಡ ಎಲ್ಲ ಕಡೆಗಳಲ್ಲಿ ಉತ್ತಮವಾಗಿ ಪ್ರದರ್ಶನ ಆಗುತ್ತಿದೆ.

‘ಸಿತಾರೆ ಜಮೀನ್ ಪರ್’ ಸಿನಿಮಾ ಕಲೆಕ್ಷನ್ ಗಣನೀಯ ಏರಿಕೆ; 2ನೇ ದಿನ ಸಖತ್ ಕಮಾಯಿ
Sitaare Zameen Par
ಮದನ್​ ಕುಮಾರ್​
|

Updated on: Jun 22, 2025 | 3:01 PM

Share

ಆಮಿರ್ ಖಾನ್ (Aamir Khan) ನಟಿಸಿರುವ ‘ಸಿತಾರೆ ಜಮೀನ್ ಪರ್’ ಸಿನಿಮಾ ಮೊದಲ ದಿನ ಸಾಧಾರಣ ಓಪನಿಂಗ್ ಪಡೆದುಕೊಂಡಿತ್ತು. ಹಾಗಾದರೆ ಈ ಸಿನಿಮಾದ ಭವಿಷ್ಯ ಕಷ್ಟವಿದೆ ಎಂದು ಕೆಲವರು ಊಹಿಸಿದ್ದರು. ಆದರೆ ಆ ರೀತಿ ಆಗಿಲ್ಲ. 2ನೇ ಸಿನಿಮಾದ ಗಳಿಕೆ ಹೆಚ್ಚಾಗಿದೆ. ಅದಕ್ಕೆ ಕಾರಣಗಳು ಕೂಡ ಇವೆ. ‘ಸಿತಾರೆ ಜಮೀನ್ ಪರ್’ (Sitaare Zameen Par) ಸಿನಿಮಾ ಎರಡೇ ದಿನಕ್ಕೆ 30 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಇದರಿಂದ ಆಮಿರ್ ಖಾನ್ ಅವರ ಮುಖದಲ್ಲಿ ನಗು ಅರಳಿದೆ. ಸಿನಿಮಾದ ಬಾಕ್ಸ್ ಆಫೀಸ್ ಗಳಿಕೆಯಲ್ಲಿ (Box Office Collection) ಏರಿಕೆ ಕಾಣುತ್ತಿದೆ.

ಇದು ರಿಮೇಕ್ ಸಿನಿಮಾ. ಸ್ಪ್ಯಾನಿಶ್ ಭಾಷೆಯ ‘ಚಾಂಪಿಯನ್ಸ್’ ಸಿನಿಮಾವನ್ನು ‘ಸಿತಾರೆ ಜಮೀನ್ ಪರ್’ ಎಂದು ಹಿಂದಿಯಲ್ಲಿ ರಿಮೇಕ್ ಮಾಡಲಾಗಿದೆ. ರಿಮೇಕ್ ಸಿನಿಮಾ ಎಂಬ ಕಾರಣಕ್ಕೆ ಆರಂಭದಲ್ಲಿ ಪ್ರೇಕ್ಷಕರು ಹೆಚ್ಚು ಆಸಕ್ತಿ ತೋರಿಸಲಿಲ್ಲ. ಆದರೆ ಎಲ್ಲ ಕಡೆಗಳಿಂದ ಉತ್ತಮ ವಿಮರ್ಶೆ ಕೇಳಿಬರುತ್ತಿರುವುದರಿಂದ ಸಿನಿಮಾ ಬಗ್ಗೆ ಪ್ರೇಕ್ಷಕರಿಗೆ ಆಸಕ್ತಿ ಹೆಚ್ಚಿದೆ. ಹಾಗಾಗಿ ಶನಿವಾರ (ಜೂನ್ 21) ಹೆಚ್ಚಿನ ಪ್ರೇಕ್ಷಕರು ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿದ್ದಾರೆ.

ಶನಿವಾರ ವೀಕೆಂಡ್ ರಜೆ ಇರುವುದು ಕೂಡ ‘ಸಿತಾರೆ ಜಮೀನ್ ಪರ್’ ಸಿನಿಮಾದ ಕಲೆಕ್ಷನ್ ಹೆಚ್ಚಲು ಕಾರಣ ಆಗಿದೆ. ಮೊದಲ ದಿನ (ಜೂನ್ 20) ಈ ಸಿನಿಮಾ 10.70 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. 2ನೇ ದಿನ (ಜೂನ್ 21) ಕಲೆಕ್ಷನ್ ಬಹುತೇಕ ಡಬಲ್ ಆಗಿದೆ. ಅಂದರೆ 19.90 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. 2 ದಿನಕ್ಕೆ ಚಿತ್ರದ ಒಟ್ಟು ಕಲೆಕ್ಷನ್ 30.60 ಕೋಟಿ ರೂಪಾಯಿ.

ಇದನ್ನೂ ಓದಿ
Image
ಆಮಿರ್ ಖಾನ್-ರಣ್​ಬೀರ್ ಕಪೂರ್ ಜಗಳ, ಮಧ್ಯಸ್ಥಿಕೆ ವಹಿಸಿದ ರೋಹಿತ್ ಶರ್ಮಾ
Image
ಹೊಸ ಪ್ರಾಜೆಕ್ಟ್​ಗಾಗಿ ಒಂದಾದ ಆಮಿರ್-ರಣಬೀರ್; ವಿಚಾರ ರಿವೀಲ್ ಮಾಡಿದ ಆಲಿಯಾ
Image
59ನೇ ವಯಸ್ಸಲ್ಲಿ ಬೆಂಗಳೂರು ಹುಡುಗಿ ಮೇಲೆ ಆಮಿರ್​​​ಗೆ ಲವ್? ಯಾರು ಈ ಗೌರಿ?
Image
ಆಮಿರ್ ಖಾನ್ ಈ ರೀತಿ ವೇಷ ಹಾಕಿದ್ದು ದುಡ್ಡಿಗಾಗಿ; ಅಸಲಿ ವಿಚಾರ ರಿವೀಲ್

ಇದನ್ನೂ ಓದಿ: Sitaare Zameen Par Review: ನಗಿಸಿ, ಅಳಿಸಿ ಮನರಂಜನೆ ನೀಡುವ ‘ಸಿತಾರೆ ಜಮೀನ್ ಪರ್’

ಆರ್​.ಎಸ್​. ಪ್ರಸನ್ನ ಅವರು ‘ಸಿತಾರೆ ಜಮೀನ್ ಪರ್’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಆಮಿರ್ ಖಾನ್ ಮತ್ತು ಜೆನಿಲಿಯಾ ದೇಶಮುಖ್ ಅವರು ಈ ಚಿತ್ರದಲ್ಲಿ ಜೋಡಿಯಾಗಿ ನಟಿಸಿದ್ದಾರೆ. ಹೊಸ ಕಲಾವಿದರಿಗೆ ಆಮಿರ್ ಖಾನ್ ಅವರು ಈ ಸಿನಿಮಾದಲ್ಲಿ ಅವಕಾಶ ನೀಡಿದ್ದಾರೆ. ಸ್ವತಃ ಆಮಿರ್ ಖಾನ್ ಅವರೇ ಈ ಸಿನಿಮಾವನ್ನು ನಿರ್ಮಿಸಿದ್ದಾರೆ.

‘ಸಿತಾರೆ ಜಮೀನ್ ಪರ್’ ಸಿನಿಮಾದ ಕಲೆಕ್ಷನ್ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಭಾನುವಾರ (ಜೂನ್ 22) ಬಹುತೇಕ ಕಡೆಗಳಲ್ಲಿ ಹೌಸ್​ಫುಲ್ ಆಗಿದೆ. ಹಾಗಾಗಿ ಭಾನುವಾರ 25 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್ ಆಗುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ಕೂಡ ಈ ಸಿನಿಮಾ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!