AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ದಿನ ಆಮಿರ್ ಖಾನ್ ಸಿನಿಮಾ ‘ಸಿತಾರೆ ಜಮೀನ್ ಪರ್’ ಗಳಿಸಿದ್ದು ಎಷ್ಟು?

ಆಮಿರ್ ಖಾನ್ ಅಭಿನಯದ ‘ಸಿತಾರೆ ಜಮೀನ್ ಪರ್’ ಸಿನಿಮಾಗೆ ಉತ್ತಮ ವಿಮರ್ಶೆ ಸಿಕ್ಕಿದೆ. ಹಾಗಿದ್ದರೂ ಕೂಡ ಮೊದಲ ದಿನ ಈ ಸಿನಿಮಾ ಸಾಧಾರಣ ಓಪನಿಂಗ್ ಪಡೆದುಕೊಂಡಿದೆ. ಸುಧಾಮೂರ್ತಿ, ಸಚಿನ್ ತೆಂಡುಲ್ಕರ್ ಮುಂತಾದವರು ನೋಡಿ ಮೆಚ್ಚಿಕೊಂಡಿರುವ ‘ಸಿತಾರೆ ಜಮೀನ್ ಪರ್’ ಚಿತ್ರದ ಕಲೆಕ್ಷನ್ ಬಗ್ಗೆ ಇಲ್ಲಿದೆ ವಿವರ..

ಮೊದಲ ದಿನ ಆಮಿರ್ ಖಾನ್ ಸಿನಿಮಾ ‘ಸಿತಾರೆ ಜಮೀನ್ ಪರ್’ ಗಳಿಸಿದ್ದು ಎಷ್ಟು?
Aamir Khan
ಮದನ್​ ಕುಮಾರ್​
|

Updated on: Jun 20, 2025 | 10:50 PM

Share

ಬಾಲಿವುಡ್ ನಟ ಆಮಿರ್ ಖಾನ್ (Aamir Khan) ಅವರು ಭಾರಿ ನಿರೀಕ್ಷೆ ಇಟ್ಟುಕೊಂಡು ಮಾಡಿರುವ ಸಿನಿಮಾ ‘ಸಿತಾರೆ ಜಮೀನ್ ಪರ್’. ಈ ಚಿತ್ರ ಜೂನ್ 20ರಂದು ಬಿಡುಗಡೆ ಆಗಿದೆ. ವಿವಿಧ ವೇದಿಕೆಗಳಲ್ಲಿ ಆಮಿರ್ ಖಾನ್ ಅವರು ‘ಸಿತಾರೆ ಜಮೀನ್ ಪರ್’ (Sitaare Zameen Par) ಸಿನಿಮಾದ ಪ್ರಮೋಷನ್ ಮಾಡಿದರು. ಹಲವು ಮಾಧ್ಯಮಗಳಿಗೆ ಅವರು ಸಂದರ್ಶನ ನೀಡಿದರು. ಹಾಗಿದ್ದರೂ ಕೂಡ ಸ್ಟಾರ್ ನಟನ ಸಿನಿಮಾಗೆ ಸಿಗಬೇಕಾದ ಓಪನಿಂಗ್ ಈ ಚಿತ್ರಕ್ಕೆ ಸಿಕ್ಕಿಲ್ಲ. ಹಾಗಾದರೆ ಈ ಸಿನಿಮಾ ಮೊದಲ ದಿನ ಬಾಕ್ಸ್ ಆಫೀಸ್​ನಲ್ಲಿ ಎಷ್ಟು ಕಲೆಕ್ಷನ್ (Sitaare Zameen Par Collection) ಮಾಡಿದೆ? ಮೊದಲ ದಿನದ ಎಲ್ಲ ಶೋಗಳು ಪೂರ್ಣಗೊಳ್ಳುವುದಕ್ಕೂ ಮುನ್ನವೇ ಅಂದಾಜು ಲೆಕ್ಕ ಸಿಕ್ಕಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಸ್ವತಃ ಆಮಿರ್ ಖಾನ್ ಅವರು ‘ಸಿತಾರೆ ಜಮೀನ್ ಪರ್’ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಅನೇಕ ಹೊಸ ಕಲಾವಿದರಿಗೆ ಅವರು ಅವಕಾಶ ನೀಡಿದ್ದಾರೆ. ಆಮಿರ್ ಖಾನ್ ಜೊತೆ ನಾಯಕಿಯಾಗಿ ಜೆನಿಲಿಯಾ ದೇಶಮುಖ್ ನಟಿಸಿದ್ದಾರೆ. ಆರ್​.ಎಸ್. ಪ್ರಸನ್ನ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಉತ್ತಮ ವಿಮರ್ಶೆ ಪಡೆದುಕೊಂಡಿರುವ ‘ಸಿತಾರೆ ಜಮೀನ್ ಪರ್’ ಸಿನಿಮಾ ಮೊದಲ ದಿನ ಕೇವಲ ಶೇಕಡ 17.73ರಷ್ಟು ಆಕ್ಯುಪೆನ್ಸಿ ಹೊಂದಿತ್ತು. ಹಾಗಾಗಿ ಕಲೆಕ್ಷನ್ ಕೂಡ ಸಾಧಾರಣ ಆಗಿದೆ.

ವರದಿಗಳ ಪ್ರಕಾರ, ‘ಸಿತಾರೆ ಜಮೀನ್ ಪರ್’ ಸಿನಿಮಾಗೆ ಮೊದಲ ದಿನ 10ರಿಂದ 13 ಕೋಟಿ ರೂಪಾಯಿ ಕಲೆಕ್ಷನ್ ಆಗಿರುವ ಸಾಧ್ಯತೆ ಇದೆ. ಆಮಿರ್ ಖಾನ್ ಅವರಂತಹ ಸ್ಟಾರ್ ಹೀರೋಗಳ ಸಿನಿಮಾಗೆ ಇದು ತುಂಬ ಸಣ್ಣ ಮೊತ್ತ. ಪಾಸಿಟಿವ್ ವಿಮರ್ಶೆ ಸಿಕ್ಕಿರುವುದರಿಂದ ಮುಂದಿನ ದಿನಗಳಲ್ಲಿ ಈ ಸಿನಿಮಾದ ಕಲೆಕ್ಷನ್​ನಲ್ಲಿ ಏರಿಕೆ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ
Image
ಆಮಿರ್ ಖಾನ್-ರಣ್​ಬೀರ್ ಕಪೂರ್ ಜಗಳ, ಮಧ್ಯಸ್ಥಿಕೆ ವಹಿಸಿದ ರೋಹಿತ್ ಶರ್ಮಾ
Image
ಹೊಸ ಪ್ರಾಜೆಕ್ಟ್​ಗಾಗಿ ಒಂದಾದ ಆಮಿರ್-ರಣಬೀರ್; ವಿಚಾರ ರಿವೀಲ್ ಮಾಡಿದ ಆಲಿಯಾ
Image
59ನೇ ವಯಸ್ಸಲ್ಲಿ ಬೆಂಗಳೂರು ಹುಡುಗಿ ಮೇಲೆ ಆಮಿರ್​​​ಗೆ ಲವ್? ಯಾರು ಈ ಗೌರಿ?
Image
ಆಮಿರ್ ಖಾನ್ ಈ ರೀತಿ ವೇಷ ಹಾಕಿದ್ದು ದುಡ್ಡಿಗಾಗಿ; ಅಸಲಿ ವಿಚಾರ ರಿವೀಲ್

ಶುಕ್ರವಾರ (ಜೂನ್ 20) ನಿಖರವಾಗಿ ಎಷ್ಟು ಕಲೆಕ್ಷನ್ ಆಗಿದೆ ಎಂಬುದರ ಲೆಕ್ಕ ಶನಿವಾರ (ಜೂನ್ 21) ಬೆಳಗ್ಗೆ ವೇಳೆಗೆ ಸಿಗಲಿದೆ. ಶನಿವಾರ ಮತ್ತು ಭಾನುವಾರ ವೀಕೆಂಡ್ ರಜೆ ಇರುವುದರಿಂದ ಸಿನಿಮಾಗೆ ಪ್ರೇಕ್ಷಕರ ಸಂಖ್ಯೆ ಹೆಚ್ಚಬಹುದು ಎಂಬ ನಿರೀಕ್ಷೆ ಇದೆ. ಫ್ಯಾಮಿಲಿ ಪ್ರೇಕ್ಷಕರು ಈ ಸಿನಿಮಾ ಕಡೆಗೆ ಒಲವು ತೋರಿಸಬಹುದು.

ಇದನ್ನೂ ಓದಿ: Sitaare Zameen Par Review: ನಗಿಸಿ, ಅಳಿಸಿ ಮನರಂಜನೆ ನೀಡುವ ‘ಸಿತಾರೆ ಜಮೀನ್ ಪರ್’

ಇದು ಆಮಿರ್ ಖಾನ್ ಅವರ ಕಮ್​ಬ್ಯಾಕ್ ಸಿನಿಮಾ. ಮೂರು ವರ್ಷದ ಗ್ಯಾಪ್ ಬಳಿಕ ಅವರು ದೊಡ್ಡ ಪರದೆ ಮೇಲೆ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಅವರು ಬಾಸ್ಕೆಟ್ ಬಾಲ್ ಕೋಚ್ ಆಗಿ ನಟಿಸಿದ್ದಾರೆ. ಈ ಚಿತ್ರವನ್ನು ನೋಡಿದ ಸಚಿನ್ ತೆಂಡುಲ್ಕರ್, ಸುಧಾಮೂರ್ತಿ ಮುಂತಾದವರು ಮೆಚ್ಚುಗೆ ಸೂಚಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!