AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್ 20ಕ್ಕೆ ‘ಸಿತಾರೆ ಜಮೀನ್ ಪರ್’ ಸಿನಿಮಾ ಬಿಡುಗಡೆ; ಈಗ ಬಂತು ಮೊದಲ ಪೋಸ್ಟರ್

‘ಸಿತಾರೆ ಜಮೀನ್ ಪರ’ ಚಿತ್ರಕ್ಕೆ ಆರ್.ಎಸ್​. ಪ್ರಸನ್ನ ಅವರು ಆ್ಯಕ್ಷನ್-ಕಟ್ ಹೇಳಿದ್ದಾರೆ. ಹೊಸ ಪೋಸ್ಟರ್ ಅನಾವರಣ ಮಾಡುವ ಮೂಲಕ ಈ ಸಿನಿಮಾದ ಬಿಡುಗಡೆ ದಿನಾಂಕವನ್ನು ರಿವೀಲ್ ಮಾಡಲಾಗಿದೆ. ಆಮಿರ್ ಖಾನ್ ಮುಖ್ಯಭೂಮಿಕೆ ನಿಭಾಯಿಸಿರುವ ‘ಸಿತಾರೆ ಜಮೀನ್ ಪರ್​’ ಸಿನಿಮಾ ಜೂನ್​ 20ಕ್ಕೆ ತೆರೆಕಾಣಲಿದೆ.

ಜೂನ್ 20ಕ್ಕೆ ‘ಸಿತಾರೆ ಜಮೀನ್ ಪರ್’ ಸಿನಿಮಾ ಬಿಡುಗಡೆ; ಈಗ ಬಂತು ಮೊದಲ ಪೋಸ್ಟರ್
Sitaare Zameen Par Poster
ಮದನ್​ ಕುಮಾರ್​
|

Updated on:May 05, 2025 | 3:20 PM

Share

2007ರಲ್ಲಿ ಆಮಿರ್ ಖಾನ್ (Aamir Khan) ನಿರ್ದೇಶನದ ‘ತಾರೆ ಜಮೀನ್ ಪರ್’ ಸಿನಿಮಾ ಬಿಡುಗಡೆಯಾಗಿ ಗಮನ ಸೆಳೆದಿತ್ತು. ಈಗ ಆ ಸಿನಿಮಾ ರೀತಿಯ ಮತ್ತೊಂದು ಕಾನ್ಸೆಪ್ಟ್ ಇಟ್ಟುಕೊಂಡು ‘ಸಿತಾರೆ ಜಮೀನ್ ಪರ’ ಸಿನಿಮಾ ಮಾಡಲಾಗಿದೆ. ಈ ಸಿನಿಮಾ ಘೋಷಣೆ ಆದಾಗಿನಿಂದ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿತ್ತು. ಈಗ ‘ಸಿತಾರೆ ಜಮೀನ್ ಪರ್’ (Sitaare Zameen Par) ಚಿತ್ರತಂಡದಿಂದ ಅಪ್​ಡೇಟ್ ನೀಡಲಾಗಿದೆ. ಈ ಸಿನಿಮಾದ ಮೊದಲ ಪೋಸ್ಟರ್ ಬಿಡುಗಡೆ ಆಗಿದೆ. ಅಲ್ಲದೇ, ಚಿತ್ರದ ರಿಲೀಸ್ ದಿನಾಂಕವನ್ನು ಕೂಡ ಘೋಷಿಸಲಾಗಿದೆ. ಜೂನ್ 20ರಂದು ‘ಸಿತಾರೆ ಜಮೀನ್ ಪರ್’ ಸಿನಿಮಾ ಬಿಡುಗಡೆ ಆಗಲಿದೆ.

‘ಸಿತಾರೆ ಜಮೀನ್ ಪರ್’ ಚಿತ್ರದ ಪೋಸ್ಟರ್​​ ಬಿಡುಗಡೆಯಿಂದ ಅಭಿಮಾನಿಗಳಲ್ಲಿ ಇರುವ ನಿರೀಕ್ಷೆ ಇನ್ನಷ್ಟು ಜಸ್ತಿ ಆಗಿದೆ. ಈ ಪೋಸ್ಟರ್​ನಲ್ಲಿ ಆಮಿರ್ ಖಾನ್ ಜೊತೆ ಸಾಕಷ್ಟು ಮಂದಿ ಹೊಸ ಕಲಾವಿದರು ಕಾಣಿಸಿಕೊಂಡಿದ್ದಾರೆ. ಆ ಮೂಲಕ ಅಭಿಮಾನಿಗಳಲ್ಲಿ ಕೌತುಕ ಹೆಚ್ಚಾಗಿದೆ. ಆಮಿರ್ ಖಾನ್ ನಿರ್ಮಾಣ ಸಂಸ್ಥೆ ಮೂಲಕ 10 ಹೊಸ ಕಲಾವಿದರಿಗೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ
Image
ಆಮಿರ್ ಖಾನ್-ರಣ್​ಬೀರ್ ಕಪೂರ್ ಜಗಳ, ಮಧ್ಯಸ್ಥಿಕೆ ವಹಿಸಿದ ರೋಹಿತ್ ಶರ್ಮಾ
Image
ಹೊಸ ಪ್ರಾಜೆಕ್ಟ್​ಗಾಗಿ ಒಂದಾದ ಆಮಿರ್-ರಣಬೀರ್; ವಿಚಾರ ರಿವೀಲ್ ಮಾಡಿದ ಆಲಿಯಾ
Image
59ನೇ ವಯಸ್ಸಲ್ಲಿ ಬೆಂಗಳೂರು ಹುಡುಗಿ ಮೇಲೆ ಆಮಿರ್​​​ಗೆ ಲವ್? ಯಾರು ಈ ಗೌರಿ?
Image
ಆಮಿರ್ ಖಾನ್ ಈ ರೀತಿ ವೇಷ ಹಾಕಿದ್ದು ದುಡ್ಡಿಗಾಗಿ; ಅಸಲಿ ವಿಚಾರ ರಿವೀಲ್

ಆರೋಶ್ ದತ್ತ, ಗೋಪಿ ಕೃಷ್ಣ ವರ್ಮಾ, ಸಮ್ವಿತ್ ದೇಸಾಯಿ, ವೇದಾಂತ್ ಶರ್ಮಾ, ಆಯುಶ್ ಬನ್ಸಾಲಿ, ಆಶಿಶ್ ಪೆಂಡ್ಸೆ, ರಿಶಿ ಶಹಾನಿ, ರಿಷಬ್ ಜೈನ್, ಮಮನ್ ಮಿಶ್ರಾ, ಸಿಮ್ರನ್ ಮಂಗೇಶ್ಕರ್​ ಅವರು ‘ಸಿತಾರೆ ಜಮೀನ್ ಪರ್’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಪೋಸ್ಟರ್ ನೋಡಿದವರಿಗೆ ಸಿನಿಮಾ ಮೇಲಿನ ನಿರೀಕ್ಷೆ ಜಾಸ್ತಿ ಆಗಿದೆ.

‘ಸಿತಾರೆ ಜಮೀನ್ ಪರ್’ ಸಿನಿಮಾ ಮೂಲಕ ಆಮಿರ್ ಖಾನ್ ಅವರು ಬೆಳ್ಳಿತೆರೆಗೆ ಕಮ್​ಬ್ಯಾಕ್ ಮಾಡುತ್ತಿದ್ದಾರೆ ಎಂಬುದು ವಿಶೇಷ. ಆ ಕಾರಣದಿಂದಲೂ ಆಮಿರ್ ಖಾನ್ ಅವರ ಅಭಿಮಾನಿಗಳು ಈ ಚಿತ್ರ ನೋಡಲು ಕಾತರರಾಗಿದ್ದಾರೆ. ಆಮಿರ್ ಖಾನ್ ಅವರಿಗೆ ಜೋಡಿಯಾಗಿ ಜೆನಿಲಿಯಾ ದೇಶಮುಖ್ ಅವರು ನಟಿಸಿದ್ದಾರೆ. ಈ ಬಾರಿ ಆಮಿರ್ ಖಾನ್ ಅವರು ಯಾವ ವಿಷಯವನ್ನು ಪ್ರೇಕ್ಷಕರಿಗೆ ತಿಳಿಸಲಿದ್ದಾರೆ ಎಂಬುದನ್ನು ತಿಳಿಯುವ ಕೌತುಕ ಹೆಚ್ಚಾಗಿದೆ.

ಇದನ್ನೂ ಓದಿ: ಮಾಜಿ ಪತ್ನಿಯರ ಜತೆ ಈದ್ ಆಚರಿಸಿದ ಆಮಿರ್ ಖಾನ್; ಕಿರಣ್ ರಾವ್, ರೀನಾ ದತ್ತ ಫೋಟೋ ವೈರಲ್

ಆರ್.ಎಸ್​. ಪ್ರಸನ್ನ ಅವರು ‘ಸಿತಾರೆ ಜಮೀನ್ ಪರ್’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಮೊದಲು ‘ಶುಭಮಂಗಲ್ ಸಾವಧಾನ್’ ಸಿನಿಮಾವನ್ನು ಅವರು ನಿರ್ದೇಶಿಸಿದ್ದರು. ಡಿಫರೆಂಟ್ ಕಥೆ ಇರುವ ಸಿನಿಮಾವನ್ನ ಅವರು ಮಾಡುತ್ತಾರೆ ಎಂಬ ಭರವಸೆ ಪ್ರೇಕ್ಷಕರಿಗೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:20 pm, Mon, 5 May 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್