AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಲಿನ ಸುಳಿಯಿಂದ ಹೊರಬರಲು ಹಳೆ ಸಿನಿಮಾ ಮೊರೆ ಹೋದ ಆಮಿರ್ ಖಾನ್

Aamir Khan: ಆಮಿರ್ ಖಾನ್ ರ ಸಿನಿಮಾ ಒಂದು ಸೂಪರ್ ಹಿಟ್ ಆದಿ ಆರೇಳು ವರ್ಷಗಳೇ ಆಗಿವೆ. ಸೋಲಿನ ಸುಳಿಯಿಂದ ಹೊರ ಬರಲು ತಮ್ಮದೇ ಹಳೆ ಸಿನಿಮಾದ ಮೊರೆ ಹೋಗಿದ್ದಾರೆ ಆಮಿರ್ ಖಾನ್.

ಸೋಲಿನ ಸುಳಿಯಿಂದ ಹೊರಬರಲು ಹಳೆ ಸಿನಿಮಾ ಮೊರೆ ಹೋದ ಆಮಿರ್ ಖಾನ್
ಆಮಿರ್ ಖಾನ್
ಮಂಜುನಾಥ ಸಿ.
|

Updated on: Jan 21, 2024 | 3:41 PM

Share

ಬಾಲಿವುಡ್​ನ (Bollywood) ಸ್ಟಾರ್ ನಟ ಆಮಿರ್ ಖಾನ್ (Aamir Khan) ಸೋಲಿನ ಸುಳಿಗೆ ಸಿಲುಕಿದ್ದಾರೆ. 2016ರಲ್ಲಿ ನಟಿಸಿದ್ದ ‘ದಂಗಲ್’ ಸಿನಿಮಾ ಬ್ಲಾಕ್ ಬಸ್ಟರ್ ಆಗಿತ್ತು. ಬಾಕ್ಸ್ ಆಫೀಸ್​ನಲ್ಲಿ ಹಲವು ದಾಖಲೆಗಳನ್ನು ಬರೆದಿತ್ತು. ಅದಾದ ಬಳಿಕ ಯಾವುದೇ ಸಿನಿಮಾ ಆಮಿರ್ ಖಾನ್​ಗೆ ದೊಡ್ಡ ಗೆಲುವು ತಂದುಕೊಟ್ಟಿಲ್ಲ. ಭಾರಿ ನಿರೀಕ್ಷೆ ಇಟ್ಟು ಮಾಡಿದ್ದ ‘ಲಾಲ್ ಸಿಂಗ್ ಚಡ್ಡಾ’ ಹೀನಾಯ ಸೋಲು ಕಂಡಿತು. ಇದೀಗ ಈ ಸೋಲಿನ ಸುಳಿಯಿಂದ ಹೊರಗೆ ಬರಲು ಆಮಿರ್ ಖಾನ್ ಯತ್ನಿಸುತ್ತಿದ್ದು ತಮ್ಮದೇ ಹಳೆ ಸಿನಿಮಾದ ಮೊರೆ ಹೋಗಿದ್ದಾರೆ.

ಆಮಿರ್ ಖಾನ್ ನಟನೆಯ ‘ತಾರೆ ಜಮೀನ್ ಪರ್’ ಸಿನಿಮಾವನ್ನು ಚಿತ್ರಪ್ರೇಮಿಗಳು ಮರೆಯುವಂತಿಲ್ಲ. ಇದೀಗ ಆಮಿರ್ ಖಾನ್ ಅದೇ ಮಾದರಿಯ ‘ಸಿತಾರೆ ಜಮೀನ್ ಪರ್’ ಹೆಸರಿನ ಸಿನಿಮಾದಲ್ಲಿ ನಟಿಸಲು ಮುಂದಾಗಿದ್ದಾರೆ. ಸಿನಿಮಾದ ಕತೆ ಕೇಳಿದ್ದು ಎಲ್ಲವೂ ಬಹುತೇಕ ಫೈನಲ್ ಆಗಿದ್ದು ಪ್ರೀ ಪ್ರೊಡಕ್ಷನ್ ಕಾರ್ಯ ಈಗಾಗಲೇ ಆರಂಭವಾಗಿದ್ದು. ಫೆಬ್ರವರಿ ತಿಂಗಳಿನಿಂದ ಚಿತ್ರೀಕರಣ ಪ್ರಾರಂಭ ಆಗಲಿದೆ.

ಇದನ್ನೂ ಓದಿ: ಮಗಳ ಮದುವೆಯಲ್ಲಿ ಮಾಜಿ ಪತ್ನಿ ಕಿರಣ್​ ರಾವ್​ಗೆ ಕಿಸ್​ ಮಾಡಿದ ಆಮಿರ್ ಖಾನ್​; ವಿಡಿಯೋ ವೈರಲ್​

ಫೆಬ್ರವರಿ 2ರಿಂದ ‘ಸಿತಾರೆ ಜಮೀನ್ ಪರ್’ ಸಿನಿಮಾದ ಚಿತ್ರೀಕರಣ ಆರಂಭವಾಗಲಿದ್ದು ಸಿನಿಮಾಕ್ಕಾಗಿ 80 ದಿನಗಳನ್ನು ಆಮಿರ್ ಖಾನ್ ಮೀಸಲಿಟ್ಟಿದ್ದಾರಂತೆ. ಆಮಿರ್ ಖಾನ್​ರ ಇತ್ತೀಚೆಗಿನ ಕೆಲ ವರ್ಷಗಳಲ್ಲಿ ಅತ್ಯಂತ ಬೇಗ ಬಿಡುಗಡೆ ಆಗಲಿರುವ ಸಿನಿಮಾ ಇದಾಗಿರಲಿದೆ ಎನ್ನಲಾಗುತ್ತಿದೆ. ಈ ಸಿನಿಮಾ ಸಹ ‘ತಾರೇ ಜಮೀನ್ ಪರ್’ ರೀತಿ ಮಕ್ಕಳ ಮಾನಸಿಕ ಆರೋಗ್ಯದ ಕುರಿತಾದ ಕತೆಯನ್ನು ಒಳಗೊಂಡಿರಲಿದೆ.

ಆಮಿರ್ ಖಾನ್ ಮತ್ತೊಂದು ಸಿನಿಮಾ ಸಹ ಒಪ್ಪಿಕೊಂಡಿದ್ದಾರೆ. ಇದು ಪೀರಿಯಡ್ ಸಿನಿಮಾ ಆಗಿದ್ದು, ಸಿನಿಮಾದ ಹೆಸರು ‘ಲಾಹೋರ್ 1947’. ಹೆಸರೇ ಹೇಳುತ್ತಿರುವಂತೆ 1947ರ ಆಸು-ಪಾಸಿನ ಕತೆಯನ್ನು ಈ ಸಿನಿಮಾ ಒಳಗೊಂಡಿದ್ದು, ಆಕ್ಷನ್ ಜೊತೆಗೆ ಭಾವುಕ ಅಂಶಗಳನ್ನು ಒಳಗೊಂಡ ಸಿನಿಮಾ ಇದಾಗಿರಲಿದೆ. ಈ ಸಿನಿಮಾದ ಇನ್ನೊಂದು ವಿಶೇಷವೆಂದರೆ ಈ ಸಿನಿಮಾದಲ್ಲಿ ಸನ್ನಿ ಡಿಯೋಲ್ ಸಹ ಮುಖ್ಯ ಪಾತ್ರದಲ್ಲಿ ನಟಿಸಲಿದ್ದಾರೆ. ಇದೇ ಮೊದಲ ಬಾರಿಗೆ ಆಮಿರ್ ಖಾನ್ ಹಾಗೂ ಸನ್ನಿ ಡಿಯೋಲ್ ಒಟ್ಟಿಗೆ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ