AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

23 ವರ್ಷ ಕಿರಿಯ ನಟಿ ಜೊತೆ ರೊಮ್ಯಾನ್ಸ್; ಆಮಿರ್ ಖಾನ್ ಸಮರ್ಥನೆ ಏನು?

ನಟ ಆಮಿರ್ ಖಾನ್ ಅವರಿಗೆ ಈಗ 60 ವರ್ಷ ವಯಸ್ಸು. ಜೆನಿಲಿಯಾ ದೇಶಮುಖ್ ಅವರಿಗೆ 37 ವರ್ಷ ವಯಸ್ಸು. ‘ಸಿತಾರೆ ಜಮೀನ್ ಪರ್’ ಸಿನಿಮಾದಲ್ಲಿ ಅವರಿಬ್ಬರು ಜೋಡಿಯಾಗಿ ಅಭಿನಯಿಸಿದ್ದಾರೆ. ವಯಸ್ಸಿನ ಅಂತರದ ಬಗ್ಗೆ ಆಮಿರ್ ಖಾನ್ ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಆ ಬಗ್ಗೆ ಮಾಹಿತಿ ಇಲ್ಲಿದೆ..

23 ವರ್ಷ ಕಿರಿಯ ನಟಿ ಜೊತೆ ರೊಮ್ಯಾನ್ಸ್; ಆಮಿರ್ ಖಾನ್ ಸಮರ್ಥನೆ ಏನು?
Genelia D'souza, Aamir Khan
ಮದನ್​ ಕುಮಾರ್​
|

Updated on: Jun 09, 2025 | 5:44 PM

Share

ಯಾವ ರೀತಿಯ ಪಾತ್ರ ಕೊಟ್ಟರೂ ನಟ ಆಮಿರ್ ಖಾನ್ (Aamir Khan) ಅವರು ಜೀವ ತುಂಬುತ್ತಾರೆ. ಯಾವುದೇ ವಯಸ್ಸಿನ ಪಾತ್ರವಿದ್ದರೂ ಕೂಡ ಅದಕ್ಕೆ ತಕ್ಕಂತೆ ಅವರು ಬಾಡಿ ಟ್ರಾನ್ಸ್​ಫಾರ್ಮೇಷನ್ ಮಾಡಿಕೊಳ್ಳುತ್ತಾರೆ. ಈಗ ‘ಸಿತಾರೆ ಜಮೀನ್ ಪರ್’ (Sitaare Zameen Par) ಸಿನಿಮಾದಲ್ಲಿ ಅಂದಾಜು 40 ವರ್ಷ ವಯಸ್ಸಿನ ವ್ಯಕ್ತಿಯ ಪಾತ್ರದಲ್ಲಿ ಆಮಿರ್ ಖಾನ್ ನಟಿಸಿದ್ದಾರೆ. ನಿಜ ಜೀವನದಲ್ಲಿ ಆಮಿರ್ ಖಾನ್ ಅವರಿಗೆ 60 ವರ್ಷ ವಯಸ್ಸು! ‘ಸಿತಾರೆ ಜಮೀನ್ ಪರ್’ ಚಿತ್ರದಲ್ಲಿ ಅವರಿಗೆ ಜೋಡಿಯಾಗಿ ಜೆನಿಲಿಯಾ ದೇಶಮುಖ್ (Genelia D’Souza) ನಟಿಸಿದ್ದಾರೆ. ಜೆನಿಲಿಯಾ ಅವರಿಗೆ ಈಗ 37 ವರ್ಷ ವಯಸ್ಸು.

ಆಮಿರ್ ಖಾನ್ ಮತ್ತು ಜೆನಿಲಿಯಾ ನಡುವೆ ಬರೋಬ್ಬರಿ 23 ವರ್ಷಗಳ ವಯಸ್ಸಿನ ಅಂತರ ಇದೆ. ಹಾಗಿದ್ದರೂ ಕೂಡ ಅವರಿಬ್ಬರು ‘ಸಿತಾರೆ ಜಮೀನ್ ಪರ್’ ಸಿನಿಮಾದಲ್ಲಿ ಜೋಡಿಯಾಗಿ ನಟಿಸಿದ್ದಾರೆ. ಅಚ್ಚರಿ ಏನೆಂದರೆ, ಒಂದು ಕಾಲದಲ್ಲಿ ಜೆನಿಲಿಯಾ ಅವರು ಆಮಿರ್ ಖಾನ್ ಅಳಿಯ ಇಮ್ರಾನ್​ ಖಾನ್​ಗೆ ಜೋಡಿ ಆಗಿದ್ದರು! ಈ ಎಲ್ಲ ವಿಷಯಗಳ ಬಗ್ಗೆ ಆಮಿರ್ ಖಾನ್ ಮಾತನಾಡಿದ್ದಾರೆ.

ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಆಮಿರ್ ಖಾನ್ ಅವರು ನಟ-ನಟಿಯರ ವಯಸ್ಸಿನ ಅಂತರದ ಬಗ್ಗೆ ತಮ್ಮ ಅಭಿಪ್ರಾಯ ಏನು ಎಂಬುದನ್ನು ತಿಳಿಸಿದ್ದಾರೆ. ‘ತುಂಬ ಹಿಂದೆ ಇಮ್ರಾನ್ ಖಾನ್​ಗೆ ಜೆನಿಲಿಯಾ ಜೋಡಿ ಆಗಿದ್ದರು. ಆದರೆ ಈಗ ಇಮ್ರಾನ್ ನನ್ನ ವಯಸ್ಸಿನವನ ರೀತಿ ಕಾಣುತ್ತಿದ್ದಾನೆ. ಜೆನಿಲಿಯಾ ಮತ್ತು ನನ್ನ ವಯಸ್ಸಿನ ಅಂತರದ ವಿಷಯ ನನ್ನ ಮನಸ್ಸಿಗೂ ಬಂತು. ಆದರೆ ನಾವಿಬ್ಬರೂ ಈ ಸಿನಿಮಾದಲ್ಲಿ 40ರ ಆಸುಪಾಸಿನ ವಯಸ್ಸಿನ ವ್ಯಕ್ತಿಗಳ ಪಾತ್ರ ಮಾಡಿದ್ದೇವೆ. ಜೆನಿಲಿಯಾ ವಯಸ್ಸು ಅದಕ್ಕೆ ಸರಿಯಾಗಿದೆ’ ಎಂದು ಆಮಿರ್ ಖಾನ್ ಹೇಳಿದ್ದಾರೆ.

ಇದನ್ನೂ ಓದಿ
Image
ಆಮಿರ್ ಖಾನ್-ರಣ್​ಬೀರ್ ಕಪೂರ್ ಜಗಳ, ಮಧ್ಯಸ್ಥಿಕೆ ವಹಿಸಿದ ರೋಹಿತ್ ಶರ್ಮಾ
Image
ಹೊಸ ಪ್ರಾಜೆಕ್ಟ್​ಗಾಗಿ ಒಂದಾದ ಆಮಿರ್-ರಣಬೀರ್; ವಿಚಾರ ರಿವೀಲ್ ಮಾಡಿದ ಆಲಿಯಾ
Image
59ನೇ ವಯಸ್ಸಲ್ಲಿ ಬೆಂಗಳೂರು ಹುಡುಗಿ ಮೇಲೆ ಆಮಿರ್​​​ಗೆ ಲವ್? ಯಾರು ಈ ಗೌರಿ?
Image
ಆಮಿರ್ ಖಾನ್ ಈ ರೀತಿ ವೇಷ ಹಾಕಿದ್ದು ದುಡ್ಡಿಗಾಗಿ; ಅಸಲಿ ವಿಚಾರ ರಿವೀಲ್

‘ನನಗೆ ಈಗ 60 ವರ್ಷ ವಯಸ್ಸು. ಈಗ ವಿಎಫ್​ಎಕ್ಸ್ ತಂತ್ರಜ್ಞಾನ ಇದೆ. ಆದರೆ ಮೊದಲೆಲ್ಲ ನಾನು 18 ವರ್ಷದ ಯುವಕನ ಪಾತ್ರ ಮಾಡಿದರೆ ಪ್ರಾಸ್ತೆಟಿಕ್ಸ್ ಮೇಕಪ್ ಮಾಡಬೇಕಿತ್ತು. 1989ರಲ್ಲಿ ಅನಿಲ್ ಕಪೂರ್ ಅವರು 80 ವರ್ಷದ ವ್ಯಕ್ತಿಯ ಪಾತ್ರ ಮಾಡಿದ್ದರು. ಆಗ ಅವರು ಯುವಕನಾಗಿದ್ದರು. ಈಗ ವಿಎಫ್​ಎಕ್ಸ್​ನಿಂದ ನಟರಿಗೆ ವಯಸ್ಸಿನ ಮಿತಿ ಇಲ್ಲ’ ಎಂದಿದ್ದಾರೆ ಆಮಿರ್ ಖಾನ್.

ಇದನ್ನೂ ಓದಿ: ಕಥೆ ಕದ್ದ ಆಮಿರ್ ಖಾನ್? ‘ಸಿತಾರೆ ಜಮೀನ್ ಪರ್’ ಸಿನಿಮಾ ಮೇಲೆ ಬಂತು ಆರೋಪ

ಜೂನ್ 20ರಂದು ‘ಸಿತಾರೆ ಜಮೀನ್ ಪರ್’ ಸಿನಿಮಾ ಬಿಡುಗಡೆ ಆಗಲಿದೆ. ಇದು ‘ಚಾಂಪಿಯನ್ಸ್’ ಸಿನಿಮಾದ ರಿಮೇಕ್. ಅನೇಕ ಹೊಸ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ಇದು ಆಮಿರ್ ಖಾನ್ ಅವರು ಕಮ್​ಬ್ಯಾಕ್ ಸಿನಿಮಾ ಎಂಬುದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು