AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

22 ವರ್ಷದ ಹಿಂದೆ ಡಿವೋರ್ಸ್​ ನೀಡಿದ ಮೊದಲ ಪತ್ನಿ ಜತೆ ಈಗ ಆಮಿರ್ ಖಾನ್ ಪಾರ್ಟಿ

ಆಮಿರ್​ ಖಾನ್​ ಮತ್ತು ರೀನಾ ದತ್ತ ಅವರು ಡಿವೋರ್ಸ್​ ಪಡೆದು ಬರೋಬ್ಬರಿ 22 ವರ್ಷಗಳು ಕಳೆದಿವೆ. ಹಾಗಿದ್ದರೂ ಕೂಡ ಅವರಿಬ್ಬರ ನಡುವೆ ಯಾವುದೇ ಮುನಿಸು ಇಲ್ಲ. ಮಕ್ಕಳ ಭವಿಷ್ಯಕ್ಕಾಗಿ ಅವರು ಕೈ ಜೋಡಿಸಿದ್ದಾರೆ. ಮೊದಲ ಮಗ ಜುನೈದ್​ ಖಾನ್​ ಸಲುವಾಗಿ ಆಮಿರ್​ ಖಾನ್​ ಹಾಗೂ ರೀನಾ ದತ್ತ ಅವರು ಪಾರ್ಟಿ ಮಾಡಲಿದ್ದಾರೆ. ಇದರಲ್ಲಿ ಆಪ್ತರು ಭಾಗವಹಿಸಲಿದ್ದಾರೆ.

22 ವರ್ಷದ ಹಿಂದೆ ಡಿವೋರ್ಸ್​ ನೀಡಿದ ಮೊದಲ ಪತ್ನಿ ಜತೆ ಈಗ ಆಮಿರ್ ಖಾನ್ ಪಾರ್ಟಿ
ಆಮಿರ್ ಖಾನ್​, ರೀನಾ ದತ್ತ
ಮದನ್​ ಕುಮಾರ್​
|

Updated on: Jul 27, 2024 | 10:34 PM

Share

ನಟ ಆಮಿರ್ ಖಾನ್​ ಅವರ ವೈಯಕ್ತಿಕ ಜೀವನದ ವಿಚಾರಗಳು ಎಲ್ಲರಿಗೂ ಅಚ್ಚರಿ ಮೂಡಿಸುತ್ತಿವೆ. ಮೊದಲ ಪತ್ನಿ ರೀನಾ ದತ್ತ ಹಾಗೂ ಎರಡನೇ ಪತ್ನಿ ಕಿರಣ್​ ರಾವ್​ ಅವರಿಗೆ ಆಮಿರ್ ಖಾನ್​ ಡಿವೋರ್ಸ್​ ನೀಡಿದ್ದರೂ ಕೂಡ ಮುನಿಸಿ ಮುಂದುವರಿಸಿಲ್ಲ. ಅನೇಕ ಸಂದರ್ಭಗಳಲ್ಲಿ ಅವರು ಮಾಜಿ ಪತ್ನಿಯರ ಜೊತೆ ಆಪ್ತವಾಗಿ ನಡೆದುಕೊಂಡಿದ್ದಾರೆ. ವಿಚ್ಛೇದನ ನೀಡಿದ್ದರೂ ಕೂಡ ಇಷ್ಟು ಕ್ಲೋಸ್​ ಆಗಿ ಕಾಣಿಸಿಕೊಳ್ಳುವ ಮಾಜಿ ದಂಪತಿಗಳು ನಿಜಕ್ಕೂ ಅಪರೂಪ. ಈಗ ಆಮಿರ್ ಖಾನ್​ ಅವರು ಮೊದಲ ಮಾಜಿ ಪತ್ನಿ ಜೊತೆ ಪಾರ್ಟಿ ಆಯೋಜನೆ ಮಾಡಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

ಆಮಿರ್​ ಖಾನ್​ ಮತ್ತು ರೀನಾ ದತ್ತ ಅವರು 1986ರಲ್ಲಿ ಮದುವೆ ಆಗಿದ್ದರು. 2002ರಲ್ಲಿ ವಿಚ್ಛೇದನ ಪಡೆದರು. ಈ ಜೋಡಿಗೆ ಜುನೈದ್​ ಖಾನ್​ ಹಾಗೂ ಇರಾ ಖಾನ್​ ಎಂಬಿಬ್ಬರು ಮಕ್ಕಳು ಇದ್ದಾರೆ. ಮಗಳು ಇರಾ ಖಾನ್​ಗೆ ಚಿತ್ರರಂಗದ ಬಗ್ಗೆ ಆಸಕ್ತಿ ಇಲ್ಲ. ಆದರೆ ಮಗ ಜುನೈದ್​ ಖಾನ್​ ನಟನೆಯಲ್ಲಿ ಆಸಕ್ತಿ ಹೊಂದಿದ್ದಾರೆ. ಅವರ ನಟಿಸಿದ ಮೊದಲ ಸಿನಿಮಾ ‘ಮಹಾರಾಜ್​’ ಒಟಿಟಿಯಲ್ಲಿ ಬಿಡುಗಡೆಯಾಗಿ ಗಮನ ಸೆಳೆದಿದೆ.

ವಿಚ್ಛೇದನ ಪಡೆದಿದ್ದರೂ ಕೂಡ ಮಕ್ಕಳ ಭವಿಷ್ಯಕ್ಕಾಗಿ ಮಾಜಿ ಪತ್ನಿಯರ ಜೊತೆ ಆಮಿರ್​ ಖಾನ್​ ಅವರು ಉತ್ತಮ ಒಡನಾಟವನ್ನು ಹೊಂದಿದ್ದಾರೆ. ಈಗ ಜುನೈದ್​ ಖಾನ್​ ಅವರನ್ನು ಹುರಿದುಂಬಿಸಲು ಆಮಿರ್ ಖಾನ್​ ನಿರ್ಧರಿಸಿದ್ದಾರೆ. ‘ಮಹಾರಾಜ್’ ಸಿನಿಮಾಗೆ ಜನರಿಂದ ಮೆಚ್ಚುಗೆ ಸಿಕ್ಕಿದೆ. ಹಾಗಾಗಿ ಆ ಖುಷಿಯನ್ನು ಸಂಭ್ರಮಿಸಿಲು ಆಮಿರ್​ ಖಾನ್​ ಮತ್ತು ರೀನಾ ದತ್ತ ಅವರು ಆಪ್ತರಿಗಾಗಿ ಪಾರ್ಟಿ ಆಯೋಜನೆ ಮಾಡಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಒಂದೇ ಸಿನಿಮಾದಲ್ಲಿ ಶಾರುಖ್​, ಆಮಿರ್​, ಸಲ್ಮಾನ್​; ‘ರಾಜಮೌಳಿ ನಿರ್ದೇಶನ ಮಾಡ್ಬೇಕು’ ಎಂದ ನೆಟ್ಟಿಗರು

ಜುನೈದ್​ ಖಾನ್​ ನಟನೆ ‘ಮಹಾರಾಜ್​’ ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿದೆ. ಆರಂಭದಲ್ಲಿ ಈ ಚಿತ್ರಕ್ಕೆ ವಿಘ್ನ ಎದುರಾಗಿತ್ತು. ಹಿಂದೂಪರ ಸಂಘಟನೆಗಳು ಈ ಚಿತ್ರಕ್ಕೆ ವಿರೋಧ ವ್ಯಕ್ತಪಡಿಸಿದ್ದವು. ಕೆಲವರು ಸಿನಿಮಾ ತಡೆಗೆ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ಅದರ ಪರಿಣಾಮವಾಗಿ ಚಿತ್ರದ ಬಿಡುಗಡೆ ದಿನಾಂಕ ಮುಂದೂಡಲ್ಪಟ್ಟಿತ್ತು. ಬಳಿಕ ನ್ಯಾಯಾಲಯದಿಂದ ಸಿನಿಮಾದ ಬಿಡುಗಡೆ ಅನುಮತಿ ಸಿಕ್ಕಿತು. ಒಟಿಟಿಯಲ್ಲಿ ‘ಮಹಾರಾಜ್​’ ಸಿನಿಮಾವನ್ನು ನೋಡಿದ ಪ್ರೇಕ್ಷಕರು ಪಾಸಿಟಿವ್​ ವಿಮರ್ಶೆ ನೀಡಿದ್ದಾರೆ. ಇದರಿಂದ ಚಿತ್ರತಂಡಕ್ಕೆ ಖುಷಿ ಆಗಿದೆ. ಹಲವು ಅವಕಾಶಗಳು ಜುನೈದ್​ ಖಾನ್​ ಅವರನ್ನು ಅರಸಿ ಬರುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ