ಮುಗಿಯಿತು ಮಗಳ ಮದುವೆ ಸಂಭ್ರಮ; ಮಗನ ಚಿತ್ರಕ್ಕಾಗಿ ಜಪಾನ್​ಗೆ ತೆರಳಲಿದ್ದಾರೆ ಆಮಿರ್ ಖಾನ್?

ಆಮಿರ್ ಖಾನ್ ಹಾಗೂ ಜುನೈದ್ ಖಾನ್ ಅವರು ಇರಾ ಖಾನ್ ಮದುವೆಯಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಇರಾ ಖಾನ್ ಮದುವೆ ಸಂಭ್ರಮದಲ್ಲಿ ಭಾಗಿ ಆಗಿದ್ದರು. ಈಗ ಮಗನಿಗಾಗಿ ಆಮಿರ್ ಖಾನ್ ಜಪಾನ್ ತೆರಳೋಕೆ ರೆಡಿ ಆಗಿದ್ದಾರೆ.

ಮುಗಿಯಿತು ಮಗಳ ಮದುವೆ ಸಂಭ್ರಮ; ಮಗನ ಚಿತ್ರಕ್ಕಾಗಿ ಜಪಾನ್​ಗೆ ತೆರಳಲಿದ್ದಾರೆ ಆಮಿರ್ ಖಾನ್?
ಆಮಿರ್-ಜುನೈದ್
Follow us
|

Updated on: Feb 01, 2024 | 7:31 AM

ಆಮಿರ್ ಖಾನ್ (Aamir Khan) ಅವರು ಮಗಳು ಇರಾ ಖಾನ್ ಹಾಗೂ ಫಿಟ್ನೆಸ್​ ಟ್ರೇನರ್ ನೂಪುರ್ ಶಿಖಾರೆ ಮದುವೆ ಸಂಭ್ರಮದಲ್ಲಿ ಬ್ಯುಸಿ ಆಗಿದ್ದರು. ಅದ್ದೂರಿಯಾಗಿ ನಡೆದ ಈ ಮದುವೆಯಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ನಾನಾ ಕಡೆಗಳಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಿತು. ಈಗ ಮತ್ತೆ ಸಿನಿಮಾ ಕೆಲಸಗಳಲ್ಲಿ ಆಮಿರ್ ಖಾನ್ ಬ್ಯುಸಿ ಆಗುತ್ತಿದ್ದಾರೆ. ನಟನೆಯ ಜೊತೆ ನಿರ್ಮಾಣದಲ್ಲೂ ಬ್ಯುಸಿ ಇದ್ದಾರೆ. ಈಗ ಅವರು ಮಗ ಜುನೈದ್ ಖಾನ್​ಗಾಗಿ ಜಪಾನ್​ಗೆ ತೆರಳುತ್ತಿದ್ದಾರೆ ಎಂದು ವರದಿ ಆಗಿದೆ.

ಜುನೈದ್ ಖಾನ್ ಅವರು ಚಿತ್ರರಂಗಕ್ಕೆ ಕಾಲಿಡೋಕೆ ರೆಡಿ ಆಗಿದ್ದಾರೆ. ಆದಿತ್ಯ ಚೋಪ್ರಾ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸಿದ್ದಾರ್ಥ್ ಪಿ. ಮಲ್ಹೋತ್ರ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇದರ ಜೊತೆಗೆ ಆಮಿರ್ ಖಾನ್ ನಿರ್ಮಾಣ ಮಾಡುತ್ತಿರುವ ಸಿನಿಮಾದಲ್ಲೂ ಜುನೈದ್ ನಟಿಸುತ್ತಿದ್ದಾರೆ. ಇದು ಅವರ ಎರಡನೇ ಸಿನಿಮಾ. ಈ ಚಿತ್ರದ ಶೂಟಿಂಗ್​ ಜಪಾನ್​ನಲ್ಲಿ ನಡೆಯುತ್ತಿದೆ. ಈ ಚಿತ್ರಕ್ಕಾಗಿ ಆಮಿರ್ ಖಾನ್ ಅವರು ಅಲ್ಲಿಗೆ ತೆರಳಲಿದ್ದಾರೆ ಎನ್ನಲಾಗಿದೆ.

ಇತ್ತೀಚೆಗೆ ಮುಂಬೈನಲ್ಲಿ ಈ ಚಿತ್ರದ ಶೂಟಿಂಗ್ ನಡೆದಿತ್ತು. ಈ ವೇಳೆ ಆಮಿರ್ ಖಾನ್ ಅವರು ನಿರಂತರವಾಗಿ ಸಂಪರ್ಕದಲ್ಲಿ ಇದ್ದರು. ಈಗ ನಿರ್ಮಾಣ ಸಂಸ್ಥೆ ಜಪಾನ್​ಗೆ ಪ್ರಯಾಣ ಬೆಳೆಸಿದೆ. ಅಲ್ಲಿ ಭರದಿಂದ ಶೂಟಿಂಗ್ ನಡೆಯುತ್ತಿದೆ. ಈವರೆಗೆ ಸಿನಿಮಾಗಳಲ್ಲಿ ತೋರಿಸದೇ ಇರುವ ಜಾಗವನ್ನು ತೋರಿಸಲು ಆಮಿರ್ ಖಾನ್ ತಂಡ ಮುಂದಾಗಿದೆ. ಶೂಟಿಂಗ್ ಯಾವ ರೀತಿಯಲ್ಲಿ ಸಾಗುತ್ತಿದೆ ಎಂಬುದನ್ನು ನೋಡಲು ಅವರು ಮುಂದಾಗಿದ್ದಾರೆ.

ಹೊಸ ರೀತಿಯ ದೃಶ್ಯ ವೈಭವ ನೀಡುವ ಆಲೋಚನೆ ಈ ತಂಡಕ್ಕೆ ಇದೆ. ಆಮಿರ್ ಖಾನ್ ಅವರು ಈ ಕಾರಣದಿಂದಲೇ ಜಪಾನ್​ಗೆ ತೆರಳುತ್ತಿದ್ದಾರೆ. ಅಲ್ಲಿ ಹೋಗಿ ಸಿನಿಮಾ ಕೆಲಸ ವೀಕ್ಷಿಸುವ ಆಲೋಚನೆ ಅವರಿಗೆ ಇದೆ. ಇಷ್ಟು ದಿನ ಮಗಳ ಮದುವೆ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದರು. ಈಗ ಅವರು ಮತ್ತೆ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ಆಮಿರ್ ಖಾನ್ ಮಗಳ ಮದುವೆಗೆ ಪ್ರಮುಖ ವ್ಯಕ್ತಿಯೇ ಗೈರು; ಮೂಡಿತು ಅನುಮಾನ

ಆಮಿರ್ ಖಾನ್ ಹಾಗೂ ಜುನೈದ್ ಖಾನ್ ಅವರು ಮದುವೆಯಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ