AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಗಿಯಿತು ಮಗಳ ಮದುವೆ ಸಂಭ್ರಮ; ಮಗನ ಚಿತ್ರಕ್ಕಾಗಿ ಜಪಾನ್​ಗೆ ತೆರಳಲಿದ್ದಾರೆ ಆಮಿರ್ ಖಾನ್?

ಆಮಿರ್ ಖಾನ್ ಹಾಗೂ ಜುನೈದ್ ಖಾನ್ ಅವರು ಇರಾ ಖಾನ್ ಮದುವೆಯಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಇರಾ ಖಾನ್ ಮದುವೆ ಸಂಭ್ರಮದಲ್ಲಿ ಭಾಗಿ ಆಗಿದ್ದರು. ಈಗ ಮಗನಿಗಾಗಿ ಆಮಿರ್ ಖಾನ್ ಜಪಾನ್ ತೆರಳೋಕೆ ರೆಡಿ ಆಗಿದ್ದಾರೆ.

ಮುಗಿಯಿತು ಮಗಳ ಮದುವೆ ಸಂಭ್ರಮ; ಮಗನ ಚಿತ್ರಕ್ಕಾಗಿ ಜಪಾನ್​ಗೆ ತೆರಳಲಿದ್ದಾರೆ ಆಮಿರ್ ಖಾನ್?
ಆಮಿರ್-ಜುನೈದ್
ರಾಜೇಶ್ ದುಗ್ಗುಮನೆ
|

Updated on: Feb 01, 2024 | 7:31 AM

Share

ಆಮಿರ್ ಖಾನ್ (Aamir Khan) ಅವರು ಮಗಳು ಇರಾ ಖಾನ್ ಹಾಗೂ ಫಿಟ್ನೆಸ್​ ಟ್ರೇನರ್ ನೂಪುರ್ ಶಿಖಾರೆ ಮದುವೆ ಸಂಭ್ರಮದಲ್ಲಿ ಬ್ಯುಸಿ ಆಗಿದ್ದರು. ಅದ್ದೂರಿಯಾಗಿ ನಡೆದ ಈ ಮದುವೆಯಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ನಾನಾ ಕಡೆಗಳಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಿತು. ಈಗ ಮತ್ತೆ ಸಿನಿಮಾ ಕೆಲಸಗಳಲ್ಲಿ ಆಮಿರ್ ಖಾನ್ ಬ್ಯುಸಿ ಆಗುತ್ತಿದ್ದಾರೆ. ನಟನೆಯ ಜೊತೆ ನಿರ್ಮಾಣದಲ್ಲೂ ಬ್ಯುಸಿ ಇದ್ದಾರೆ. ಈಗ ಅವರು ಮಗ ಜುನೈದ್ ಖಾನ್​ಗಾಗಿ ಜಪಾನ್​ಗೆ ತೆರಳುತ್ತಿದ್ದಾರೆ ಎಂದು ವರದಿ ಆಗಿದೆ.

ಜುನೈದ್ ಖಾನ್ ಅವರು ಚಿತ್ರರಂಗಕ್ಕೆ ಕಾಲಿಡೋಕೆ ರೆಡಿ ಆಗಿದ್ದಾರೆ. ಆದಿತ್ಯ ಚೋಪ್ರಾ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸಿದ್ದಾರ್ಥ್ ಪಿ. ಮಲ್ಹೋತ್ರ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇದರ ಜೊತೆಗೆ ಆಮಿರ್ ಖಾನ್ ನಿರ್ಮಾಣ ಮಾಡುತ್ತಿರುವ ಸಿನಿಮಾದಲ್ಲೂ ಜುನೈದ್ ನಟಿಸುತ್ತಿದ್ದಾರೆ. ಇದು ಅವರ ಎರಡನೇ ಸಿನಿಮಾ. ಈ ಚಿತ್ರದ ಶೂಟಿಂಗ್​ ಜಪಾನ್​ನಲ್ಲಿ ನಡೆಯುತ್ತಿದೆ. ಈ ಚಿತ್ರಕ್ಕಾಗಿ ಆಮಿರ್ ಖಾನ್ ಅವರು ಅಲ್ಲಿಗೆ ತೆರಳಲಿದ್ದಾರೆ ಎನ್ನಲಾಗಿದೆ.

ಇತ್ತೀಚೆಗೆ ಮುಂಬೈನಲ್ಲಿ ಈ ಚಿತ್ರದ ಶೂಟಿಂಗ್ ನಡೆದಿತ್ತು. ಈ ವೇಳೆ ಆಮಿರ್ ಖಾನ್ ಅವರು ನಿರಂತರವಾಗಿ ಸಂಪರ್ಕದಲ್ಲಿ ಇದ್ದರು. ಈಗ ನಿರ್ಮಾಣ ಸಂಸ್ಥೆ ಜಪಾನ್​ಗೆ ಪ್ರಯಾಣ ಬೆಳೆಸಿದೆ. ಅಲ್ಲಿ ಭರದಿಂದ ಶೂಟಿಂಗ್ ನಡೆಯುತ್ತಿದೆ. ಈವರೆಗೆ ಸಿನಿಮಾಗಳಲ್ಲಿ ತೋರಿಸದೇ ಇರುವ ಜಾಗವನ್ನು ತೋರಿಸಲು ಆಮಿರ್ ಖಾನ್ ತಂಡ ಮುಂದಾಗಿದೆ. ಶೂಟಿಂಗ್ ಯಾವ ರೀತಿಯಲ್ಲಿ ಸಾಗುತ್ತಿದೆ ಎಂಬುದನ್ನು ನೋಡಲು ಅವರು ಮುಂದಾಗಿದ್ದಾರೆ.

ಹೊಸ ರೀತಿಯ ದೃಶ್ಯ ವೈಭವ ನೀಡುವ ಆಲೋಚನೆ ಈ ತಂಡಕ್ಕೆ ಇದೆ. ಆಮಿರ್ ಖಾನ್ ಅವರು ಈ ಕಾರಣದಿಂದಲೇ ಜಪಾನ್​ಗೆ ತೆರಳುತ್ತಿದ್ದಾರೆ. ಅಲ್ಲಿ ಹೋಗಿ ಸಿನಿಮಾ ಕೆಲಸ ವೀಕ್ಷಿಸುವ ಆಲೋಚನೆ ಅವರಿಗೆ ಇದೆ. ಇಷ್ಟು ದಿನ ಮಗಳ ಮದುವೆ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದರು. ಈಗ ಅವರು ಮತ್ತೆ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ಆಮಿರ್ ಖಾನ್ ಮಗಳ ಮದುವೆಗೆ ಪ್ರಮುಖ ವ್ಯಕ್ತಿಯೇ ಗೈರು; ಮೂಡಿತು ಅನುಮಾನ

ಆಮಿರ್ ಖಾನ್ ಹಾಗೂ ಜುನೈದ್ ಖಾನ್ ಅವರು ಮದುವೆಯಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ