‘ನನಗೆ ಪಾರ್ಟ್ನರ್ ಬೇಕು, ಒಂಟಿ ಬದುಕು ನನ್ನಿಂದ ಅಸಾಧ್ಯ’; ಆಮಿರ್ ಖಾನ್

ಆಮಿರ್ ಖಾನ್ ಪ್ರತಿಭಾವಂತ ನಟ. ಅವರನ್ನು ಪರ್ಫೆಕ್ಷನಿಸ್ಟ್ ಎಂದು ಕರೆಯಲಾಗುತ್ತದೆ. ನಟಿ ರಿಯಾ ಚಕ್ರವರ್ತಿ ತಮ್ಮ ಪಾಡ್‌ಕಾಸ್ಟ್ ‘ಅಧ್ಯಾಯ 2ರಲ್ಲಿ ಆಮಿರ್ ಖಾನ್ ಅವರು ಮಾತನಾಡಿದ್ದಾರೆ. ಈ ವೇಳೆ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

‘ನನಗೆ ಪಾರ್ಟ್ನರ್ ಬೇಕು, ಒಂಟಿ ಬದುಕು ನನ್ನಿಂದ ಅಸಾಧ್ಯ’; ಆಮಿರ್ ಖಾನ್
ಆಮಿರ್ ಖಾನ್-ರಿಯಾ
Follow us
|

Updated on: Aug 26, 2024 | 2:19 PM

ಆಮಿರ್ ಖಾನ್ ಅವರು ಆಗಿದ್ದ ಎರಡೂ ಮದುವೆ ವಿಚ್ಛೇದನದಲ್ಲಿ ಕೊನೆಯಾಗಿದೆ. ಮೊದಲು ಅವರು ರೀನಾ ದತ್ತ ಅವರನ್ನು ವಿವಾಹ ಆಗಿದ್ದರು. ಇವರ ಜೊತೆಗಿನ ವಿಚ್ಛೇದನದ ಬಳಿಕ ಕಿರಣ್ ರಾವ್ ಜೊತೆ ವಿವಾಹ ಆದರು. ಅದೂ ಕೂಡ ಕೊನೆ ಆಗಿದೆ. ಈಗ ಅವರು ಮೂರನೇ ಮದುವೆ ಬಗ್ಗೆ ಆಲೋಚನೆ ಮಾಡುತ್ತಿದ್ದಾರಾ? ಹೀಗೊಂದು ಪ್ರಶ್ನೆ ಎದುರಾಗಿದೆ. ಇದಕ್ಕೆ ಸ್ವತಃ ಆಮಿರ್ ಖಾನ್ ಅವರು ಉತ್ತರಿಸಿದ್ದಾರೆ. ‘ನನಗೆ ಪಾರ್ಟ್ನರ್ ಬೇಕು’ ಎಂದಿರುವ ಅವರು ಮೂರನೇ ಮದುವೆ ಅಸಾಧ್ಯ ಎಂದು ಹೇಳಿದ್ದಾರೆ.

ರಿಯಾ ಚಕ್ರವರ್ತಿ ಜೊತೆಗಿನ ಸಂದರ್ಶನದಲ್ಲಿ ಆಮಿರ್ ಖಾನ್ ಅವರು ಮಾತನಾಡಿದ್ದಾರೆ. ಮದುವೆ ಆಗಬೇಕೇ ಅಥವಾ ಬೇಡವೇ ಎನ್ನುವ ಬಗ್ಗೆ ರಿಯಾ ಅವರು ಪ್ರಶ್ನೆ ಮಾಡಿದ್ದಾರೆ. ‘ನಾನು ಎರಡು ಬಾರಿ ಸಂಸಾರದಲ್ಲಿ ಸೋತವನು. ಹೀಗಾಗಿ, ವಿವಾಹದ ಕುರಿತು ನನಗೆ ಯಾವುದೇ ಸಲಹೆ ಕೇಳಬಾರದು. ನಾನು ಒಂಟಿಯಾಗಿ ಬದುಕೋಕೆ ಇಷ್ಟಪಡಲ್ಲ. ನನಗೆ ಪಾರ್ಟ್ನರ್ ಬೇಕೆ ಬೇಕು. ನಾನು ಒಂಟಿ ಜೀವಿ ಅಲ್ಲ. ನಾನು ನನ್ನ ಮಾಜಿ ಪತ್ನಿಯರ ಜೊತೆ ಒಳ್ಳೆಯ ನಂಟು ಹೊಂದಿದ್ದೇನೆ. ನಾವು ಒಂದು ಕುಟುಂಬದಂತೆ ಇದ್ದೇವೆ. ಜೀವನವನ್ನು ಯಾರೂ ಊಹಿಸೋಕೆ ಸಾಧ್ಯವಿಲ್ಲ. ನಾವು ಹೇಗೆ ನಂಬೋದು?’ ಎಂದಿದ್ದಾರೆ ಅವರು.

‘ಮೂರನೇ ಮದುವೆ ಆಗುತ್ತೀರಾ’ ಎಂದು ಆಮಿರ್ ಖಾನ್​ಗೆ ಕೇಳಲಾಗಿದೆ. ‘ನನಗೆ ಈಗ 59 ವರ್ಷ. ನಾನು ಮತ್ತೆ ಹೇಗೆ ಮದುವೆ ಆಗಲಿ? ಕಷ್ಟ ಆಗುತ್ತದೆ. ನಾನು ಸಾಕಷ್ಟು ರಿಲೇಶನ್​ಶಿಪ್​ಗಳನ್ನು ಈಗ ಹೊಂದಿದ್ದೇನೆ. ನಾನು ಕುಟುಂಬದ ಜೊತೆ, ಮಕ್ಕಳ ಜೊತೆ ಮತ್ತೆ ಕನೆಕ್ಟ್ ಆಗಿದ್ದೇನೆ. ನಾನು ಯಾರ ಜೊತೆ ಕ್ಲೋಸ್ ಇದ್ದೇನೋ ಅವರ ಜೊತೆ ಇರೋದು ನನಗೆ ಖುಷಿ ಕೊಡುತ್ತದೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ಬಾಲಿವುಡ್ ತೊರೆಯುತ್ತಾರಾ ಆಮಿರ್ ಖಾನ್? ಕಣ್ಣೀರು ಹಾಕಿದ ನಟ

‘ಲಾಲ್​ ಸಿಂಗ್ ಛಡ್ಡಾ’ ಬಳಿಕ ಆಮಿರ್ ಖಾನ್ ಅವರು ಬ್ರೇಕ್ ಪಡೆದಿದ್ದಾರೆ. ಆಮಿರ್ ಖಾನ್ ಅವರು ಸದ್ಯ ‘ಸಿತಾರೇ ಜಮೀನ್ ಪರ್’ ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
Daily Devotional: ಎಕ್ಕದ ಗಣಪತಿಯ ಮಹತ್ವ ತಿಳಿಯಿರಿ
Daily Devotional: ಎಕ್ಕದ ಗಣಪತಿಯ ಮಹತ್ವ ತಿಳಿಯಿರಿ