AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನಗೆ ಪಾರ್ಟ್ನರ್ ಬೇಕು, ಒಂಟಿ ಬದುಕು ನನ್ನಿಂದ ಅಸಾಧ್ಯ’; ಆಮಿರ್ ಖಾನ್

ಆಮಿರ್ ಖಾನ್ ಪ್ರತಿಭಾವಂತ ನಟ. ಅವರನ್ನು ಪರ್ಫೆಕ್ಷನಿಸ್ಟ್ ಎಂದು ಕರೆಯಲಾಗುತ್ತದೆ. ನಟಿ ರಿಯಾ ಚಕ್ರವರ್ತಿ ತಮ್ಮ ಪಾಡ್‌ಕಾಸ್ಟ್ ‘ಅಧ್ಯಾಯ 2ರಲ್ಲಿ ಆಮಿರ್ ಖಾನ್ ಅವರು ಮಾತನಾಡಿದ್ದಾರೆ. ಈ ವೇಳೆ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

‘ನನಗೆ ಪಾರ್ಟ್ನರ್ ಬೇಕು, ಒಂಟಿ ಬದುಕು ನನ್ನಿಂದ ಅಸಾಧ್ಯ’; ಆಮಿರ್ ಖಾನ್
ಆಮಿರ್ ಖಾನ್-ರಿಯಾ
ರಾಜೇಶ್ ದುಗ್ಗುಮನೆ
|

Updated on: Aug 26, 2024 | 2:19 PM

Share

ಆಮಿರ್ ಖಾನ್ ಅವರು ಆಗಿದ್ದ ಎರಡೂ ಮದುವೆ ವಿಚ್ಛೇದನದಲ್ಲಿ ಕೊನೆಯಾಗಿದೆ. ಮೊದಲು ಅವರು ರೀನಾ ದತ್ತ ಅವರನ್ನು ವಿವಾಹ ಆಗಿದ್ದರು. ಇವರ ಜೊತೆಗಿನ ವಿಚ್ಛೇದನದ ಬಳಿಕ ಕಿರಣ್ ರಾವ್ ಜೊತೆ ವಿವಾಹ ಆದರು. ಅದೂ ಕೂಡ ಕೊನೆ ಆಗಿದೆ. ಈಗ ಅವರು ಮೂರನೇ ಮದುವೆ ಬಗ್ಗೆ ಆಲೋಚನೆ ಮಾಡುತ್ತಿದ್ದಾರಾ? ಹೀಗೊಂದು ಪ್ರಶ್ನೆ ಎದುರಾಗಿದೆ. ಇದಕ್ಕೆ ಸ್ವತಃ ಆಮಿರ್ ಖಾನ್ ಅವರು ಉತ್ತರಿಸಿದ್ದಾರೆ. ‘ನನಗೆ ಪಾರ್ಟ್ನರ್ ಬೇಕು’ ಎಂದಿರುವ ಅವರು ಮೂರನೇ ಮದುವೆ ಅಸಾಧ್ಯ ಎಂದು ಹೇಳಿದ್ದಾರೆ.

ರಿಯಾ ಚಕ್ರವರ್ತಿ ಜೊತೆಗಿನ ಸಂದರ್ಶನದಲ್ಲಿ ಆಮಿರ್ ಖಾನ್ ಅವರು ಮಾತನಾಡಿದ್ದಾರೆ. ಮದುವೆ ಆಗಬೇಕೇ ಅಥವಾ ಬೇಡವೇ ಎನ್ನುವ ಬಗ್ಗೆ ರಿಯಾ ಅವರು ಪ್ರಶ್ನೆ ಮಾಡಿದ್ದಾರೆ. ‘ನಾನು ಎರಡು ಬಾರಿ ಸಂಸಾರದಲ್ಲಿ ಸೋತವನು. ಹೀಗಾಗಿ, ವಿವಾಹದ ಕುರಿತು ನನಗೆ ಯಾವುದೇ ಸಲಹೆ ಕೇಳಬಾರದು. ನಾನು ಒಂಟಿಯಾಗಿ ಬದುಕೋಕೆ ಇಷ್ಟಪಡಲ್ಲ. ನನಗೆ ಪಾರ್ಟ್ನರ್ ಬೇಕೆ ಬೇಕು. ನಾನು ಒಂಟಿ ಜೀವಿ ಅಲ್ಲ. ನಾನು ನನ್ನ ಮಾಜಿ ಪತ್ನಿಯರ ಜೊತೆ ಒಳ್ಳೆಯ ನಂಟು ಹೊಂದಿದ್ದೇನೆ. ನಾವು ಒಂದು ಕುಟುಂಬದಂತೆ ಇದ್ದೇವೆ. ಜೀವನವನ್ನು ಯಾರೂ ಊಹಿಸೋಕೆ ಸಾಧ್ಯವಿಲ್ಲ. ನಾವು ಹೇಗೆ ನಂಬೋದು?’ ಎಂದಿದ್ದಾರೆ ಅವರು.

‘ಮೂರನೇ ಮದುವೆ ಆಗುತ್ತೀರಾ’ ಎಂದು ಆಮಿರ್ ಖಾನ್​ಗೆ ಕೇಳಲಾಗಿದೆ. ‘ನನಗೆ ಈಗ 59 ವರ್ಷ. ನಾನು ಮತ್ತೆ ಹೇಗೆ ಮದುವೆ ಆಗಲಿ? ಕಷ್ಟ ಆಗುತ್ತದೆ. ನಾನು ಸಾಕಷ್ಟು ರಿಲೇಶನ್​ಶಿಪ್​ಗಳನ್ನು ಈಗ ಹೊಂದಿದ್ದೇನೆ. ನಾನು ಕುಟುಂಬದ ಜೊತೆ, ಮಕ್ಕಳ ಜೊತೆ ಮತ್ತೆ ಕನೆಕ್ಟ್ ಆಗಿದ್ದೇನೆ. ನಾನು ಯಾರ ಜೊತೆ ಕ್ಲೋಸ್ ಇದ್ದೇನೋ ಅವರ ಜೊತೆ ಇರೋದು ನನಗೆ ಖುಷಿ ಕೊಡುತ್ತದೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ಬಾಲಿವುಡ್ ತೊರೆಯುತ್ತಾರಾ ಆಮಿರ್ ಖಾನ್? ಕಣ್ಣೀರು ಹಾಕಿದ ನಟ

‘ಲಾಲ್​ ಸಿಂಗ್ ಛಡ್ಡಾ’ ಬಳಿಕ ಆಮಿರ್ ಖಾನ್ ಅವರು ಬ್ರೇಕ್ ಪಡೆದಿದ್ದಾರೆ. ಆಮಿರ್ ಖಾನ್ ಅವರು ಸದ್ಯ ‘ಸಿತಾರೇ ಜಮೀನ್ ಪರ್’ ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನನ್ನ ತಂದೆ ಈಗ ಮೊದಲಿನಂತೆ ಇಲ್ಲ; ಅರ್ಜುನ್ ಸರ್ಜಾ ಬಗ್ಗೆ ಮಗಳು ಐಶ್ವರ್ಯಾ
ನನ್ನ ತಂದೆ ಈಗ ಮೊದಲಿನಂತೆ ಇಲ್ಲ; ಅರ್ಜುನ್ ಸರ್ಜಾ ಬಗ್ಗೆ ಮಗಳು ಐಶ್ವರ್ಯಾ
ವಿರೋಧ ಪಕ್ಷದ ನಾಯಕನಿಂದ ಇಂಥಾ ವರ್ತನೆ ನಿರೀಕ್ಷಿಸಿರಲಿಲ್ಲ ಎಂದ ಬಿಜೆಪಿ
ವಿರೋಧ ಪಕ್ಷದ ನಾಯಕನಿಂದ ಇಂಥಾ ವರ್ತನೆ ನಿರೀಕ್ಷಿಸಿರಲಿಲ್ಲ ಎಂದ ಬಿಜೆಪಿ
ಬಂಧನ ಭೀತಿ ಬೆನ್ನಲ್ಲೇ ಭೈರತಿ ಬಸವರಾಜ್​​​ ದುಬೈಗೆ ಪರಾರಿ
ಬಂಧನ ಭೀತಿ ಬೆನ್ನಲ್ಲೇ ಭೈರತಿ ಬಸವರಾಜ್​​​ ದುಬೈಗೆ ಪರಾರಿ
ಮೈಸೂರಿನಲ್ಲಿ ಪುಟ್ಟ ಬಾಲಕಿಯ ಬ್ಯಾಗಿನೊಳಗೆ ನಾಗರ ಹಾವು ಪ್ರತ್ಯಕ್ಷ!
ಮೈಸೂರಿನಲ್ಲಿ ಪುಟ್ಟ ಬಾಲಕಿಯ ಬ್ಯಾಗಿನೊಳಗೆ ನಾಗರ ಹಾವು ಪ್ರತ್ಯಕ್ಷ!
ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್
ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು
ಮುಸ್ಲಿಂ ಯುವಕನೊಂದಿಗೆ ಹೋದ ಮಗಳ ನೆನೆದು ಕಣ್ಣೀರಿಟ್ಟ ಹೆತ್ತ ಕರುಳು
ಮುಸ್ಲಿಂ ಯುವಕನೊಂದಿಗೆ ಹೋದ ಮಗಳ ನೆನೆದು ಕಣ್ಣೀರಿಟ್ಟ ಹೆತ್ತ ಕರುಳು
93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ
93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ